ಬೆಂಗಳೂರು: ರೌಡಿಗಳನ್ನು ರೌಡಿಗಳೆನ್ನಬೇಡಿ – ಇದು ಮಾಜಿ ರೌಡಿ ಶೀಟರ್ ಸಿಟಿ ರವಿ ಫಾರ್ಮಾನು! ರೌಡಿ ಮೋರ್ಚಾದ ತಯಾರಿ ನಡೆಸಿರುವ ಬಿಜೆಪಿ ಈಗ ರೌಡಿಗಳ ಪರವಾಗಿ ನಿರ್ಲಜ್ಜವಾಗಿ ಸಮರ್ಥನೆಗೆ ಇಳಿದಿದೆ, ತಾವೂ ರೌಡಿಗಳಾಗಿದ್ದೆವು ಎಂಬುದನ್ನೂ ಒಪ್ಪುತ್ತಿದ್ದಾರೆ! “ರೌಡಿಗಳಿಂದ, ರೌಡಿಗಳಿಗಾಗಿ, ರೌಡಿಗಳಿಗೋಸ್ಕರ” ಇದು ಬಿಜೆಪಿಯ ಹೊಸ ದ್ಯೇಯವಾಕ್ಯ ಎಂದು ಕರ್ನಾಟಕ ಕಾಂಗ್ರೆಸ್ ಹೇಳಿದೆ.

ಈ ಬಗ್ಗೆ ಸರಣಿ ಟ್ವಿಟ್ ಮಾಡಿದ್ದು, ಪ್ರಜಾಪ್ರಭುತ್ವ ಹಾಗೂ ಸಾಂವಿಧಾನಿಕ ಆಶಯಗಳನ್ನು ಮುಗಿಸಲೆಂದೇ ಬಿಜೆಪಿ ರೌಡಿ ಮೋರ್ಚಾ ಕಟ್ಟುತ್ತಿದೆ. ಸಾಂವಿಧಾನಿಕ ಆಶಯದ ಮಾದರಿಯಲ್ಲಿ ಪ್ರತಿಭಟಿಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಲು ಮುಂದಾಗಿದೆ ಬಿಜೆಪಿಯ ರೌಡಿ ಮೋರ್ಚಾ ಪಡೆ. ಇಂತಹ ಹಲ್ಲೆಗಳನ್ನು ಹೆಚ್ಚಿಸಲೆಂದೇ ರೌಡಿ ಮೋರ್ಚಾ ಕಟ್ಟುತ್ತಿದ್ದೀರಾ ಬಿಜೆಪಿ.? ಎಂದು ಪ್ರಶ್ನಿಸಿದೆ.

ಬಿಜೆಪಿ ರೌಡಿ ಮೋರ್ಚಾ ಸೇರಲು ಬೇಡಿಕೆ ಹೆಚ್ಚುತ್ತಿದೆ! ಒಬ್ಬರ ಮೇಲೆ ಒಬ್ಬರಂತೆ ಬಿಜೆಪಿ ನಾಯಕರು ರೌಡಿಗಳ ಸಮರ್ಥನೆಗೆ ಇಳಿದಿರುವಾಗ ರೌಡಿಗಳಿಗೂ ಬಿಜೆಪಿ ಮೇಲೆ ಪ್ರೇಮ ಉಕ್ಕಿ ಹರಿಯುತ್ತಿದೆ. ಬಿಜೆಪಿ, ರೌಡಿ ಮೋರ್ಚಾದ ಉದ್ಘಾಟನೆ ಯಾವಾಗ? ಉದ್ಘಾಟನೆಗೆ ಅಮಿತ್ ಶಾ ಬರುವರೇ, ಅಥವಾ ಬೊಮ್ಮಾಯಿಯವರೇ ಟೇಪ್ ಕಟ್ ಮಾಡುತ್ತಾರಾ?! ಎಂದು ಕೇಳಿದೆ.

Share.
Exit mobile version