Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಜಯ್ ಹಜಾರೆ ಟ್ರೋಫಿಯಲ್ಲಿ ದೆಹಲಿ ಪರ ‘ವಿರಾಟ್ ಕೊಹ್ಲಿ’ ಬ್ಯಾಟಿಂಗ್

02/12/2025 9:58 PM
Sanchar Saathi App

‘ಸಂಚಾರ್ ಸಾಥಿ ಅಪ್ಲಿಕೇಶನ್’ ಮೊದಲೇ ಸ್ಥಾಪಿಸಲು ‘ಆಪಲ್’ ನಕಾರ ; ವರದಿ

02/12/2025 9:30 PM

‘ದಿತ್ವಾ ಚಂಡಮಾರುತದಿಂದ ತತ್ತರಿಸಿದ ಜನರಿಗೆ ಸಹಾಯ ಹಸ್ತ ಚಾಚಿದ ಮೊದಲ ದೇಶ ಭಾರತ’ ; ಶ್ರೀಲಂಕಾ ಭಾವನಾತ್ಮಕ ಸಂದೇಶ!

02/12/2025 9:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಮ- ಸಮಾಜದ ಕನಸು ಸಾಕಾರಗೊಳ್ಳಲು ಎಲ್ಲರಿಗೂ ಸಮಾನ ಆದ್ಯತೆ ಅಗತ್ಯ; ಸಚಿವ ಶಿವರಾಜ್ ತಂಗಡಗಿ
KARNATAKA

ಸಮ- ಸಮಾಜದ ಕನಸು ಸಾಕಾರಗೊಳ್ಳಲು ಎಲ್ಲರಿಗೂ ಸಮಾನ ಆದ್ಯತೆ ಅಗತ್ಯ; ಸಚಿವ ಶಿವರಾಜ್ ತಂಗಡಗಿ

By kannadanewsnow0904/05/2025 3:17 PM

ಬೆಂಗಳೂರು: ಬಸವಾದಿ ಶರಣರು, ಬುದ್ಧ ಮತ್ತು ಅಂಬೇಡ್ಕರ್ ಅವರು ಹೇಳಿದ ಸಮ- ಸಮಾಜ ನಿರ್ಮಾಣಬಾಗಬೇಕಾದರೆ ಪ್ರತಿಯೊಂದು ಸಮುದಾಯಗಳಿಗೆ ಆದ್ಯತೆ ನೀಡಬೇಕು. ಆಗ ಮಾತ್ರ ಸಮ- ಸಮಾಜದ ಕನಸು ಸಾಕಾರಗೊಳ್ಳಲು ಸಾಧ್ಯ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ಅವರು ಅಭಿಪ್ರಾಯಪಟ್ಟರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ ಅವರ ಸಾನಿಧ್ಯದಲ್ಲಿ‌ ನಯನ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಭಗೀರಥ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಅಸಮಾನತೆ ಇರಬಾರದು. ಎಲ್ಲ ಸಮುದಾಯವರಿಗೂ ಸಮವಾಗಿ ಸವಲತ್ತುಗಳು ದೊರೆಯುವಂತೆ ಆಗಬೇಕು. ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ವಿಚಾರದಲ್ಲಿ ಬದ್ಧತೆಯನ್ನು ಇಟ್ಟುಕೊಂಡಿದೆ. ಸಮಾಜದ ಒಳಿತಿಗೆ, ಸಮಾಜದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಉಪ್ಪಾರ ನಿಗಮಕ್ಕೆ‌ ಪ್ರಸ್ತುತ ನಾನೇ ಅಧ್ಯಕ್ಷನಿದ್ದೇನೆ. ಎರಡು ತಿಂಗಳಲ್ಲಿ ಉಪ್ಪಾರ ಅಭಿವೃದ್ಧಿ ನಿಗಮಕ್ಕೆ ನೂತನ ಅಧ್ಯಕ್ಷರನ್ನು ನೇಮಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಉಪ್ಪಾರ ಅಭಿವೃದ್ಧಿ ನಿಗಮಕ್ಕೆ ರೂ.42 ಕೋಟಿ ಅನುದಾನ ನೀಡಲಾಗಿದೆ. ಇಷ್ಟು ಮೊತ್ತದ ಅನುದಾನವನ್ನು ಯಾವ ಸರ್ಕಾರ ನೀಡಿರಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಗಮಗಳಿಗೆ 1600 ಅನುದಾನ ಒದಗಿಸಿದ್ದಾರೆ ಎಂದರು.‌

*ಭಗೀರಥನ ಕಥೆ ಮಕ್ಕಳಿಗೆ ತೀರಾ ಅಗತ್ಯ:* ಇನ್ನು ನಿರಂತರ ಪ್ರಯತ್ನದ ಫಲವಾಗಿ ಏನನ್ನು ಬೇಕಾದರೂ ಪಡೆಯಬಹುದು, ಪ್ರಯತ್ನಕ್ಕೆ ಅಸಾಧ್ಯವಾದದ್ದು ಯಾವುದು ಇಲ್ಲ ಎಂಬ ಮಾತಿಗೆ ಭಗೀರಥ ಪ್ರತಿರೂಪದಂತಿದ್ದಾರೆ ಎಂದು ತಿಳಿಸಿದರು.

ಇಂದಿನ ಮಕ್ಕಳು ಮತ್ತು ಯುವ ಸಮುದಾಯಕ್ಕೆ ಭಗೀರಥರ ಕಥೆಗಳನ್ನು ತಿಳಿಸುವ ಅಗತ್ಯವಿದೆ. ನಾನು ಇತ್ತೀಚೆಗೆ ಪತ್ರಿಕೆಗಳನ್ನು ಓದುವ ವೇಳೆ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳು ಮನೆ ಬಿಟ್ಟು ಹೋಗುವುದು, ಇನ್ನಿತರೆ ಅನಾಹುತಗಳನ್ನು ಮಾಡಿಕೊಳ್ಳುವ ಸುದ್ದಿ ನಿಜಕ್ಕೂ ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದ ಸಚಿವರು, ಮಕ್ಕಳಿಗೆ ನಿರಂತರ ಪ್ರಯತ್ನ ಮಾಡುವ ಬಗ್ಗೆ ಭಗೀರಥ ಹಾಗೂ ಇನ್ನಿತರ ಆದರ್ಶವುಳ್ಳ ಮಹನೀಯರ ಕಥೆಗಳನ್ನು ಪೋಷಕರು ತಿಳಿಸಬೇಕಿದೆ ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕರಾದ ಡಾ.ಕೆ.ಎನ್.ರವೀಂದ್ರನಾಥ್, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷರಾದ ಯು.ವೆಂಕೋಬ, ಉಪ್ಪಾರ ಸಂಘದ ಬೆಂಗಳೂರು ಜಿಲ್ಲಾಧ್ಯಕ್ಷ ಎನ್.ಸುನೀಲ್ ಕುಮಾರ್, ಪ್ರಾಧ್ಯಪಕ ಡಾ.ಸಂಗಮೇಶ್ ಎಸ್.ಗಣಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ.ಗಾಯಿತ್ರಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ರಾಜ್ಯದ ಜನಸಂಖ್ಯೆ 15 ಕೋಟಿ?

ಕಾಂತರಾಜು ಅವರ ವರದಿ ಅವೈಜ್ಞಾನಿಕವಾಗಿದೆ ಎಂದು ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಪ್ರತಿಯೊಂದು ಸಮುದಾಯದವರು ನಮ್ಮವರು ರಾಜ್ಯದಲ್ಲಿ 50 ಲಕ್ಷ, ಅಲ್ಲ- ಅಲ್ಲ ಕೋಟಿಯಲ್ಲಿದೆ ಎಂದು ಹೇಳುತ್ತಿದ್ದಾರೆ. ಈ ಸಂಖ್ಯೆಯನ್ನು ಕೇಳಿದರೆ ರಾಜ್ಯದ ಜನಸಂಖ್ಯೆ ಅಂದಾಜು 15 ಕೋಟಿ ತಲುಪಲಿದೆ ಎಂದು ತೀಕ್ಷ್ಣವಾಗಿ ಹೇಳಿದರು.

ಈ ಲೆಕ್ಕವನ್ನು ನೋಡಿದರೆ ರಾಜ್ಯದಲ್ಲಿ ಏಳು ಕೋಟಿ ಜನಸಂಖ್ಯೆಯಲ್ಲ, 15 ಕೋಟಿ ಆಗುತ್ತದೆ ಎಂದರು.

Share. Facebook Twitter LinkedIn WhatsApp Email

Related Posts

ರಾಜ್ಯದ NHM ನೌಕರರಿಗೆ ಹೊಸ HR ಪಾಲಿಸಿ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದೇನು ಗೊತ್ತಾ?

02/12/2025 8:24 PM2 Mins Read

ಮಂಡ್ಯದ ಮದ್ದೂರು ಪಟ್ಟಣದ ಟಿ.ಬಿ ವೃತ್ತದಿಂದ ಕೊಲ್ಲಿ ವೃತ್ತದವರೆಗಿನ ರಸ್ತೆ ಅಗಲೀಕರಣ ಕಾಮಗಾರಿ: ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

02/12/2025 8:09 PM1 Min Read

BREAKING: ರಾಜ್ಯದ ಖಾಯಂ, ಗುತ್ತಿಗೆ, ಹೊರಗುತ್ತಿಗೆ ಮಹಿಳಾ ನೌಕರರಿಗೆ ವೇತನ ಸಹಿತ ಋತುಚಕ್ರ ರಜೆ: ಸರ್ಕಾರ ಅಧಿಕೃತ ಆದೇಶ

02/12/2025 7:51 PM1 Min Read
Recent News

ವಿಜಯ್ ಹಜಾರೆ ಟ್ರೋಫಿಯಲ್ಲಿ ದೆಹಲಿ ಪರ ‘ವಿರಾಟ್ ಕೊಹ್ಲಿ’ ಬ್ಯಾಟಿಂಗ್

02/12/2025 9:58 PM
Sanchar Saathi App

‘ಸಂಚಾರ್ ಸಾಥಿ ಅಪ್ಲಿಕೇಶನ್’ ಮೊದಲೇ ಸ್ಥಾಪಿಸಲು ‘ಆಪಲ್’ ನಕಾರ ; ವರದಿ

02/12/2025 9:30 PM

‘ದಿತ್ವಾ ಚಂಡಮಾರುತದಿಂದ ತತ್ತರಿಸಿದ ಜನರಿಗೆ ಸಹಾಯ ಹಸ್ತ ಚಾಚಿದ ಮೊದಲ ದೇಶ ಭಾರತ’ ; ಶ್ರೀಲಂಕಾ ಭಾವನಾತ್ಮಕ ಸಂದೇಶ!

02/12/2025 9:22 PM

ಕ್ರಿಮಿನಲ್ ಪ್ರಕರಣಗಳಲ್ಲಿ ಜಾಮೀನು ನೀಡಲು ಸಮಾನತೆ ಒಂದೇ ಆಧಾರವಲ್ಲ ; ಸುಪ್ರೀಂಕೋರ್ಟ್ ಮಹತ್ವದ ತೀರ್ಪು

02/12/2025 9:11 PM
State News
KARNATAKA

ರಾಜ್ಯದ NHM ನೌಕರರಿಗೆ ಹೊಸ HR ಪಾಲಿಸಿ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದೇನು ಗೊತ್ತಾ?

By kannadanewsnow0902/12/2025 8:24 PM KARNATAKA 2 Mins Read

ಶಿವಮೊಗ್ಗ: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನ( NHM) ಅಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯ…

ಮಂಡ್ಯದ ಮದ್ದೂರು ಪಟ್ಟಣದ ಟಿ.ಬಿ ವೃತ್ತದಿಂದ ಕೊಲ್ಲಿ ವೃತ್ತದವರೆಗಿನ ರಸ್ತೆ ಅಗಲೀಕರಣ ಕಾಮಗಾರಿ: ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

02/12/2025 8:09 PM

BREAKING: ರಾಜ್ಯದ ಖಾಯಂ, ಗುತ್ತಿಗೆ, ಹೊರಗುತ್ತಿಗೆ ಮಹಿಳಾ ನೌಕರರಿಗೆ ವೇತನ ಸಹಿತ ಋತುಚಕ್ರ ರಜೆ: ಸರ್ಕಾರ ಅಧಿಕೃತ ಆದೇಶ

02/12/2025 7:51 PM

ಸಾಗರ ತಾಲ್ಲೂಕು ಜನತೆ ಗಮನಕ್ಕೆ: ಡಿ.4ರಂದು ‘ಶಾಸಕ ಗೋಪಾಲಕೃಷ್ಣ ಬೇಳೂರು ಜನ ಸಂಪರ್ಕ ಸಭೆ’

02/12/2025 7:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.