Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಗುಡ್ ನ್ಯೂಸ್

02/06/2025 3:48 PM

ನಿಮ್ಮ ವಾಹನದ ‘RC’ ಕಳೆದು ಹೋಗಿದ್ಯಾ.? ಚಿಂತಿಸ್ಬೇಡಿ, ಜಸ್ಟ್ ಹೀಗೆ ಡೌನ್ಲೋಡ್ ಮಾಡಿ!

02/06/2025 3:33 PM

BIG NEWS : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ

02/06/2025 3:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿಯೇ ಪ್ರಪಥಮ ಬಾರಿಗೆ ಪವರ್ ಮ್ಯಾನ್ ಗಳಿಗೆ ಮಂಡ್ಯದಲ್ಲಿ ಸುರಕ್ಷಿತ ಸಾಮಗ್ರಿ ವಿತರಣೆ
KARNATAKA

ರಾಜ್ಯದಲ್ಲಿಯೇ ಪ್ರಪಥಮ ಬಾರಿಗೆ ಪವರ್ ಮ್ಯಾನ್ ಗಳಿಗೆ ಮಂಡ್ಯದಲ್ಲಿ ಸುರಕ್ಷಿತ ಸಾಮಗ್ರಿ ವಿತರಣೆ

By kannadanewsnow0902/05/2025 2:31 PM

ಮಂಡ್ಯ : ಶ್ರೀ ಚಾಮುಂಡೇಶ್ವರಿ ವಿದ್ಯುತ್ ಪ್ರಸರಣ ನಿಗಮ ಕಾರ್ಮಿಕರ ದಿನಾಚರಣೆ ಅಂಗವಾಗಿ ಇಡೀ ರಾಜ್ಯದಲ್ಲಿಯೇ ಪ್ರಪಥಮ ಬಾರಿಗೆ ಪವರ್ ಮ್ಯಾನ್ ಗಳಿಗೆ ಸುರಕ್ಷಿತ ಸಾಮಗ್ರಿ ವಿತರಣೆ ಮತ್ತು ಅಧಿಕಾರಿ ಹಾಗೂ ನೌಕರರಿಗೆ ಆರೋಗ್ಯ ವಿಮಾ ಯೋಜನೆಗೆ ಮದ್ದೂರು ಪಟ್ಟಣದ ನಿಗಮದ ವಿಭಾಗೀಯ ಕಚೇರಿಯಲ್ಲಿ ಗುರುವಾರ ವಿಧ್ಯುಕ್ತ ಚಾಲನೆ ನೀಡಲಾಯಿತು.

ಸೆಸ್ಕಾಂ ಅಧ್ಯಕ್ಷ, ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಹಾಗೂ ವ್ಯವಸ್ಥಾಪಕ ನಿರ್ದೇಶಕ ಮುನಿ ಗೋಪಾಲರಾಜು ಅವರುಗಳು ಮೈಸೂರಿನ ಸೆಸ್ಕ್ ಕಛೇರಿಯಲ್ಲಿ ಯೋಜನೆಗೆ ಚಾಲನೆ ನೀಡಿದ ಕಾರ್ಯಕ್ರಮವನ್ನು ವರ್ಚೂವೆಲ್ ಮೂಲಕ ವಿಕ್ಷೀಸಿದ ವಿಭಾಗೀಯ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಯೋಜನೆಯನ್ನು ಮುಕ್ತ ಕಂಠದಿಂದ ಸ್ವಾಗತಿಸಿ ಹರ್ಷ ವ್ಯಕ್ತಪಡಿಸಿದರು.

ಬಳಿಕ ವಿಭಾಗೀಯ ಕಚೇರಿಯಲ್ಲಿ ಸುಮಾರು 130 ಮಂದಿ ಪವರ್ ಮ್ಯಾನ್ ಗಳಿಗೆ ವಿಧ್ಯುತ್ ಅವಘಡ ರಕ್ಷಣಾ ಸಾಮಾಗ್ರಿ ಮತ್ತು 215 ಮಂದಿ ಅಧಿಕಾರಿಗಳು ಮತ್ತು ನೌಕರರಿಗೆ ಆರೋಗ್ಯ ವಿಮಾ ಕಾರ್ಡ್ ಗಳನ್ನು ವಿಭಾಗೀಯ ಕಚೇರಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಸ್.ರಮೇಶ್
ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ, ಎಇಇ ರಮೇಶ್ ಮಳೆ, ಗಾಳಿ ಸಂದರ್ಭದಲ್ಲಿ ವಿದ್ಯುತ್ ಸರಬರಾಜು ಸಮಸ್ಯೆ ಉಂಟಾದಾಗ ಪವರ್ ಮ್ಯಾನ್ ಗಳು ದುರಸ್ಥಿ ಕಾರ್ಯಕ್ಕೆ ತೆರಳುವಾಗ ಆದಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ನಿಗಮ ನೀಡಿರುವ ಸುರಕ್ಷಿತ ಸಾಮಗ್ರಿಗಳನ್ನು ಉಪಯೋಗಿಸಿಕೊಳ್ಳಬೇಕು ದುರಸ್ಥಿ ಕೆಲಸ ಮಾಡುವಾಗ ವಿದ್ಯುತ್ ಸಂಪರ್ಕ ಕಡಿತಗೊಂಡಿರುವುದೇ ಎನ್ನುವುದನ್ನು ಖಚಿತ ಪಡಿಸಿಕೊಂಡ ನಂತರವೇ ದುರಸ್ಥಿ ಕಾರ್ಯಕ್ಕೆ ಮುಂದಾಗಬೇಕೆಂದು ಕಿವಿಮಾತು ಹೇಳಿದರು.

ಇತ್ತಿಚಿನ ದಿನಗಳಲ್ಲಿ ವಿದ್ಯುತ್ ಅವಘಡಗಳಲ್ಲಿ ಪವರ್ ಮ್ಯಾನ್ ಗಳು ಮೃತ ಪಟ್ಟು ಮತ್ತು ಗಾಯಗೊಂಡಿರುವ ಅನೇಕ ಪ್ರಕರಣಗಳು ಜರುಗಿವೆ. ಇದರಿಂದ ತಮ್ಮ ಕುಟುಂಬಗಳು ಬೀದಿ ಪಾಲಾಗುವ ಸಾಧ್ಯತೆ ಇರುತ್ತದೆ. ಇದರಿಂದ ವಿದ್ಯುತ್ ದುರಸ್ಥಿ ಕಾರ್ಯದಲ್ಲಿ ಆದಷ್ಟು ಎಚ್ಚರಿಕೆ ವಹಿಸುವುದು ಸೂಕ್ತ ಎಂದು ರಮೇಶ್ ಹೇಳಿದರು.

ವಿದ್ಯುತ್ ಪ್ರಸರಣ ನಿಗಮದ ಕಾರ್ಯಕಾರಿ ಸಮಿತಿ ಸದಸ್ಯ ಮಹದೇವು ಮಾತನಾಡಿ, ವಿದ್ಯುತ್ ಸುರಕ್ಷಿತ ಸಾಮಗ್ರಿ ಮತ್ತು ನೌಕರರ ಆರೋಗ್ಯ ವಿಮಾ ಕಾರ್ಡ್ ಜಾರಿಗೆ ತರುವಂತೆ ನಿಗಮದ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಹಕ್ಕೋತ್ತಾಯಗಳನ್ನು ಮಂಡಿಸಲಾಗಿತ್ತು. ಆನಂತರ ನೌಕರರ ಸಂಘದ ಅಧ್ಯಕ್ಷ ಕೆ.ಬಲರಾಮ್ ಹಾಗೂ ಪ್ರಧಾನ ಕಾರ್ಯದರ್ಶಿ ಶಿವರಾಮ್ ನೇತ್ರತ್ವದಲ್ಲಿ ಸಂಘದ ನಿರ್ದೇಶಕ ನಿಯೋಗ ಚಾಮುಂಡೇಶ್ವರಿ ವಿದ್ಯುತ್ ಪ್ರಸರಣ ನಿಗಮದ ಅಧ್ಯಕ್ಷ ರಮೇಶ್ ಬಾಬು ಬಂಡಿಸಿದ್ದೇಗೌಡ, ವ್ಯವಸ್ಥಾಪಕ ನಿರ್ದೇಶಕ ಮುನಿ ಗೋಪಾಲರಾಜು ಅವರುಗಳನ್ನು ಭೇಟಿ ಮಾಡಿ ಯೋಜನೆಗಳ ಅನುಷ್ಠಾನಕ್ಕೆ ಒತ್ತಾಯಿಸಿ ಮನವಿ ಸಲ್ಲಿಸಲಾಗಿತ್ತು. ಮನವಿಗೆ ಸಕಾರಾತ್ಮಕ ಸ್ಪಂದಿಸಿರುವ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರು ಯೋಜನೆಯನ್ನು ತ್ವರಿತವಾಗಿ ಜಾರಿಗೆ ತಂದಿದ್ದಾರೆ. ಈ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಕಾರ್ಯಕಾರಿ ಸಮಿತಿ ಸದಸ್ಯ ಮಹದೇವು ಶ್ಲಾಘನೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ವಿಭಾಗೀಯ ಕಚೇರಿಯ ಕಾರ್ಯನಿರ್ವಾಹಕ ಎಂಜಿನಿಯರ್ ಕೆ.ಎನ್.ಶಿವಕುಮಾರ್, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಗಳಾದ ಆರ್.ಪ್ರದೀಪ್ ಕುಮಾರ್, ಎಸ್.ರಮೇಶ್, ಜೆ.ಮೋಹನ್, ಅನಿತಾ ಲೆಕ್ಕಾಧಿಕಾರಿ ಡಿ.ಸುನೀತಾ, ನೌಕರರ ಸಂಘದ ಪದಾಧಿಕಾರಿಗಳಾದ ಹೆಚ್.ಸಿ.ರಾಮಚಂದ್ರ, ಕೆ.ವಿ.ಸುರೇಶ್, ಚನ್ನೇಗೌಡ, ಸಿ.ಎಸ್.ಶ್ರೀಧರ್, ಸುಚಿತ್ ಕುಮಾರ್, ವೆಂಕಟೇಶ್, ಗಿರೀಶ್, ನಾಗರಾಜ್, ಪಿ.ವಾಸುದೇವು, ಎನ್.ಮಹದೇವಯ್ಯ, ಸೌಮ್ಯ, ಉಷಾ ಮತ್ತಿತರರು ಉಪಸ್ಥಿತರಿದ್ದರು.

ವರದಿ : ಗಿರೀಶ್ ರಾಜ್, ಮಂಡ್ಯ

ಡಿಸೆಂಬರ್ ಅಥವಾ ಜನವರಿಯಲ್ಲಿ ಬೆಂಗಳೂರು ಹಬ್ಬ, ಐಫಾ ಪ್ರಶಸ್ತಿ ಸಮಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಗುಡ್ ನ್ಯೂಸ್

02/06/2025 3:48 PM2 Mins Read

BIG NEWS : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ

02/06/2025 3:32 PM1 Min Read

ಜಮೀನಿಗೆ ಅರಣ್ಯ ರಸ್ತೆ ಬಳಸಲು ಇಂಧನ ಸಚಿವ ಕೆಜೆ ಜಾರ್ಜ್ ಪುತ್ರ ‘ರಾಣಾ ಜಾರ್ಜ್’ಗೆ ಹೈಕೋರ್ಟ್ ಅನುಮತಿ

02/06/2025 3:23 PM1 Min Read
Recent News

ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಗುಡ್ ನ್ಯೂಸ್

02/06/2025 3:48 PM

ನಿಮ್ಮ ವಾಹನದ ‘RC’ ಕಳೆದು ಹೋಗಿದ್ಯಾ.? ಚಿಂತಿಸ್ಬೇಡಿ, ಜಸ್ಟ್ ಹೀಗೆ ಡೌನ್ಲೋಡ್ ಮಾಡಿ!

02/06/2025 3:33 PM

BIG NEWS : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ

02/06/2025 3:32 PM

ಜಮೀನಿಗೆ ಅರಣ್ಯ ರಸ್ತೆ ಬಳಸಲು ಇಂಧನ ಸಚಿವ ಕೆಜೆ ಜಾರ್ಜ್ ಪುತ್ರ ‘ರಾಣಾ ಜಾರ್ಜ್’ಗೆ ಹೈಕೋರ್ಟ್ ಅನುಮತಿ

02/06/2025 3:23 PM
State News
KARNATAKA

ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಗುಡ್ ನ್ಯೂಸ್

By kannadanewsnow0902/06/2025 3:48 PM KARNATAKA 2 Mins Read

ಬೆಂಗಳೂರು: ಗೃಹ ಆರೋಗ್ಯ ಯೋಜನೆ ರಾಜ್ಯದಾದ್ಯಂತ ವಿಸ್ತರಣೆಯಾಗುತ್ತಿದ್ದು, ಯೋಜನೆಯಡಿ 14 ಅಸಾಂಕ್ರಾಮಿಕ ರೋಗಗಳ ತಪಾಸಣೆ ಕೈಗೆತ್ತಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್…

BIG NEWS : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ

02/06/2025 3:32 PM

ಜಮೀನಿಗೆ ಅರಣ್ಯ ರಸ್ತೆ ಬಳಸಲು ಇಂಧನ ಸಚಿವ ಕೆಜೆ ಜಾರ್ಜ್ ಪುತ್ರ ‘ರಾಣಾ ಜಾರ್ಜ್’ಗೆ ಹೈಕೋರ್ಟ್ ಅನುಮತಿ

02/06/2025 3:23 PM

BREAKING : ‘ಥಗ್ ಲೈಫ್’ ಸಿನೆಮಾ ಬ್ಯಾನ್ ಗೆ ರಾಜ್ಯ ಸರ್ಕಾರದಿಂದ ಸಂಪೂರ್ಣ ಬೆಂಬಲ : ಸಿಎಂ ಸಿದ್ದರಾಮಯ್ಯ

02/06/2025 3:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.