Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾನೂನು ವಿವಿ ಪರೀಕ್ಷಾ ವಿಧಾನ ಬಗ್ಗೆ ವ್ಯಾಪಕ ಮೆಚ್ಚುಗೆ: ಕುಲಪತಿ ಪ್ರೊ.ಬಸವರಾಜು ಸಂತಸ

24/05/2025 8:56 PM

BREAKING: ರಾಜ್ಯದಲ್ಲಿಂದು ಐವರಿಗೆ ಕೊರೋನಾ ಪಾಸಿಟಿವ್: ಸೋಂಕಿತರ ಸಂಖ್ಯೆ 38ಕ್ಕೆ ಏರಿಕೆ, ಓರ್ವ ಸಾವು | Corona Case

24/05/2025 8:48 PM

ಕೊಡಗು : ಬಿರುಗಾಳಿ ಸಹಿತ ಭಾರಿ ಮಳೆಗೆ ಮರ ಬಿದ್ದು ಕೂಲಿ ಕಾರ್ಮಿಕ ಮಹಿಳೆ ಸಾವು

24/05/2025 8:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಎತ್ತಿನಹೊಳೆ ಕಾಮಗಾರಿಗೆ 500 ಎಕರೆ ನೀಡಲು ಅರಣ್ಯ ಇಲಾಖೆ ಒಪ್ಪಿಗೆ: ಡಿಸಿಎಂ ಡಿ.ಕೆ ಶಿವಕುಮಾರ್
KARNATAKA

ಎತ್ತಿನಹೊಳೆ ಕಾಮಗಾರಿಗೆ 500 ಎಕರೆ ನೀಡಲು ಅರಣ್ಯ ಇಲಾಖೆ ಒಪ್ಪಿಗೆ: ಡಿಸಿಎಂ ಡಿ.ಕೆ ಶಿವಕುಮಾರ್

By kannadanewsnow0913/06/2024 7:35 PM

ಬೆಂಗಳೂರು: “ಎತ್ತಿನಹೊಳೆ ಕಾಮಗಾರಿಗೆ ಅಡಚಣೆ ಉಂಟುಮಾಡಿರುವ 500 ಎಕರೆ ಜಾಗವನ್ನು ಹಸ್ತಾಂತರಿಸಲು ಅರಣ್ಯ ಇಲಾಖೆ ಒಪ್ಪಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ನೀರಾವರಿ ಸಚಿವರೂ ಆಗಿರುವ ಶಿವಕುಮಾರ್ ಅವರು ಈ ಯೋಜನೆ ಸಂಬಂಧ ವಿಕಾಸಸೌಧದಲ್ಲಿ ಮಂಗಳವಾರ ಕಂದಾಯ ಸಚಿವ ಕೃಷ್ಣ ಭೈರೇಗೌಡ, ಅರಣ್ಯ ಸಚಿವ ಈಶ್ವರ ಖಂಡ್ರೆ, ದೆಹಲಿಯಲ್ಲಿ ಕರ್ನಾಟಕ ಸರಕಾರದ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಹಾಗೂ ಸಂಬಂಧಪಟ್ಟ ಇಲಾಖೆಗಳ ಪ್ರಮುಖ ಅಧಿಕಾರಿಗಳ ಜತೆ ಸಭೆ ನಡೆಸಿದರು.

ಸಭೆ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಶಿವಕುಮಾರ್ ಅವರು “ಎತ್ತಿನಹೊಳೆ ಯೋಜನೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದ ಕೆಲಸ ತ್ವರಿತ ಗತಿಯಲ್ಲಿ ನಡೆಸಲು ಅರಣ್ಯ ಸಚಿವರಾದ ಈಶ್ವರ ಖಂಡ್ರೆ, ದೆಹಲಿ ಪ್ರತಿನಿಧಿ ಟಿ.ಬಿ ಜಯಚಂದ್ರ, ಕಂದಾಯ, ಅರಣ್ಯ, ನೀರಾವರಿ ಇಲಾಖೆ ಅಧಿಕಾರಿಗಳ ಜತೆ ಇಂದು ಚರ್ಚೆ ಮಾಡಿದ್ದೇವೆ.

ಈ ಯೋಜನೆಗೆ ಅಗತ್ಯವಿರುವ ಜಾಗವನ್ನು ಅರಣ್ಯ ಇಲಾಖೆ ನೀಡುತ್ತಿದ್ದು, ಇದಕ್ಕೆ ಪರ್ಯಾಯವಾಗಿ ಕಂದಾಯ ಇಲಾಖೆಯು ಅರಣ್ಯ ಇಲಾಖೆಗೆ 500 ಎಕರೆ ಜಾಗ ನೀಡಲಿದೆ. ಈ ಪ್ರಕ್ರಿಯೆಯನ್ನು ಕಾನೂನು ಚೌಕಟ್ಟಿನಲ್ಲಿ ಪೂರ್ಣಗೊಳಿಸುತ್ತೇವೆ.

ಈ ಯೋಜನೆಗಳ ಕಾಮಗಾರಿಗೆ ಎದುರಾಗಿರುವ ಸಮಸ್ಯೆಗಳನ್ನು ಅಧಿಕಾರಿಗಳು ಗುರುತಿಸಿದ್ದು, ಅವುಗಳಿಗೆ ಪರಿಹಾರ ಹುಡುಕಲು ಸಭೆಯಲ್ಲಿ ಚರ್ಚಿಸಿದ್ದೇವೆ.

260 ಕಿ.ಮೀ ಉದ್ಧದ 20 ಸ್ಥಳಗಳಲ್ಲಿ ಅರಣ್ಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳು ಇವೆ. ಈ ಯೋಜನೆಗೆ ಅರಣ್ಯ ಇಲಾಖೆ ಅನುಮತಿ ಅಗತ್ಯವಿದ್ದ ಕಾರಣ ನಮ್ಮ ಅರಣ್ಯ ಸಚಿವರು ಹಾಗೂ ಇಲಾಖೆ ಸಚಿವರ ಜತೆ ಚರ್ಚೆ ಮಾಡಿದ್ದೇವೆ. ಈ ವಿಚಾರವಾಗಿ ಕಂದಾಯ, ನೀರಾವರಿ ಹಾಗೂ ಅರಣ್ಯ ಇಲಾಖೆ ಸೇರಿ ಒಟ್ಟಾಗಿ ಜಂಟಿ ಸರ್ವೇ ಮಾಡುತ್ತಿದ್ದೇವೆ. ಅರಣ್ಯ ಇಲಾಖೆಗೆ ಬದಲಿ ಜಮೀನು ನೀಡಲು ಕಂದಾಯ ಇಲಾಖೆ ಒಪ್ಪಿದೆ. ಕೂಡಲೇ ಈ ಕಾಮಗಾರಿ ನಡೆಸಲು ಮನವಿ ಮಾಡಿದ್ದೇವೆ.

ಈ ಮಧ್ಯೆ ಕೆಲವು ಜಾಗದಲ್ಲಿ ರೈತರಿಗೆ 51 ಕೋಟಿ ನೀಡಬೇಕಾಗಿದೆ. ಈ ಪೈಕಿ 10 ಕೋಟಿ ಹಣ ನೀಡಲಾಗಿದ್ದು, 41 ಕೋಟಿ ಬಾಕಿ ಇದೆ. ಈ ಜಾಗದ ವಿಚಾರವಾಗಿ ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ನಡುವೆ ಗೊಂದಲವಿದೆ. ಹೀಗಾಗಿ ಈ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು.

ಇನ್ನು ದೊಡ್ಡಬಳ್ಳಾಪುರದ ಲಕ್ಕೇನಹಳ್ಳಿಯಲ್ಲಿ ಸಮತೋಲಿತ ಜಲಾನಯನ ಯೋಜನೆ ಬಾಕಿ ಇದ್ದು ಇದರ ಕಾಮಗಾರಿ ಆರಂಭಿಸಲು ತಯಾರಿ ಮಾಡಲಾಗಿದೆ. ಮುಂದಿನ ತಿಂಗಳ ಒಳಗಾಗಿ ನೀರನ್ನು ಹೊರತರಲು ನಿರ್ದೇಶನ ನೀಡಲಾಗಿದೆ. ಮೊದಲ ಹಂತದಲ್ಲಿ 48 ಕಿ.ಮೀ ನೀರು ಹರಿಸುವಂತೆ ಸೂಚನೆ ನೀಡಲಾಗಿದೆ. ಈ ಯೋಜನೆಯಿಂದ ಮತ್ತಷ್ಟು ಪ್ರಯೋಜನ ಪಡೆಯುವ ಉದ್ದೇಶದೊಂದಿಗೆ ಇದರ ಜತೆಗೆ ಸಮುದ್ರಕ್ಕೆ ಸೇರುತ್ತಿರುವ ನೀರನ್ನು ಹೇಗೆ ಎಲ್ಲೆಲ್ಲಿ ನಾವು ಹಿಡಿದಿಟ್ಟು ಬಳಸಿಕೊಳ್ಳಬಹುದು ಎಂಬುದರ ಬಗ್ಗೆ ಅಧ್ಯಯನ ನಡೆಸಲು ಉನ್ನತ ಮಟ್ಟದ ತಾಂತ್ರಿಕ ಸಮಿತಿ ರಚಿಸಲಿದ್ದೇವೆ.”

ಯಡಿಯೂರಪ್ಪ ಅವರ ಪ್ರಕರಣ ಮಾಹಿತಿ ಇಲ್ಲ

ಪೋಕ್ಸೋ ಪ್ರಕರಣದಡಿ ಮಾಜಿ ಸಿಎಂ ಯಡಿಯೂರಪ್ಪ ಅವರ ಬಂಧನಕ್ಕೆ ಕೋರ್ಟ್ ವಾರೆಂಟ್ ಜಾರಿ ಮಾಡಿರುವ ಬಗ್ಗೆ ಕೇಳಿದಾಗ, “ನಾನು ಸಭೆಯಲ್ಲಿದ್ದ ಕಾರಣ, ನನಗೆ ಹೆಚ್ಚಿನ ಮಾಹಿತಿ ಇಲ್ಲ. ಗೃಹ ಸಚಿವಾಲಯ ಈ ವಿಚಾರವನ್ನು ನಿಭಾಯಿಸಲಿದೆ” ಎಂದರು.

ದರ್ಶನ ಪ್ರಕರಣ ಮುಚ್ಚಿಹಾಕಲು ನನ್ನನ್ನು ಯಾರೂ ಸಂಪರ್ಕಿಸಿಲ್ಲ

ದರ್ಶನ್ ಪ್ರಕರಣದಲ್ಲಿ ಪೊಲೀಸ್ ಠಾಣೆಯನ್ನು ಶಾಮಿಯಾನ ಮೂಲಕ ಮುಚ್ಚಲಾಗಿದೆ. ಈ ಪ್ರಕರಣದಲ್ಲಿ ಸತ್ಯಾಂಶ ಮರೆಮಾಚುವ ಪ್ರಯತ್ನ ನಡೆಯುತ್ತಿದೆಯೇ ಎಂಬ ಪ್ರಶ್ನೆಗೆ, ”ನನ್ನ ಪ್ರಕರಣದ ಅನುಭವದಲ್ಲೇ ಹೇಳುವುದಾದರೆ, ಅಧಿಕಾರಿಗಳು ನನ್ನನ್ನು ನ್ಯಾಯಾಲಯಕ್ಕೆ ಕರೆದುಕೊಂಡು ಹೋಗುವಾಗ ಜನರಿಗೆ ಮರೆಮಾಚಿ ಕರೆದುಕೊಂಡು ಹೋಗುವರು. ಕೆಲವು ಬಾರಿ ಅಭಿಮಾನಿಗಳು ಅಡ್ಡಬರುವುದು, ಜೈಕಾರ ಕೂಗುವುದು ಅಥವಾ ಯಾರಾದರೂ ಕಲ್ಲು ಎಸೆಯಬಹುದು ಎಂಬ ಕಾರಣಕ್ಕೆ ಪೊಲೀಸ್ ಅಧಿಕಾರಿಗಳು ಆ ರೀತಿ ಮಾಡುತ್ತಾರೆ. ಈ ಪ್ರಕರಣದಲ್ಲಿ ಪೊಲೀಸರು ಇದೇ ರೀತಿ ಮುನ್ನಚ್ಚರಿಕೆ ಕ್ರಮ ತೆಗೆದುಕೊಂಡಿರಬಹುದು. ನನಗೆ ಮಾಹಿತಿ ಇಲ್ಲ” ಎಂದರು.

ಸಾರ್ವಜನಿಕರು ಹೋಗಿ ದೂರು ನೀಡಲು ಆಗುತ್ತಿಲ್ಲ ಎಂದು ಕೇಳಿದಾಗ, “ಈ ವಿಚಾರವಾಗಿ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಇದೆಲ್ಲವೂ ನನಗೆ ಹೊಸ ಮಾಹಿತಿ” ಎಂದರು.

ದರ್ಶನ ಪ್ರಕರಣ ಮುಚ್ಚಿಹಾಕಲು ನಿಮ್ಮ ಸಚಿವರು ಯಾರಾದರೂ ಒತ್ತಡ ಹಾಕಿದ್ದಾರಾ ಎಂಬ ಪ್ರಶ್ನೆಗೆ, “ಈ ವಿಚಾರವಾಗಿ ನನ್ನ ಬಳಿ ಯಾರೂ ಮಾತನಾಡಿಲ್ಲ. ನನಗೆ ಅಷ್ಟಾಗಿ ಸಂಪರ್ಕವಿಲ್ಲ. ಸಚಿವರ ಪ್ರಯತ್ನದ ಬಗ್ಗೆ ನಿಮ್ಮಿಂದ ಮಾಹಿತಿ ಬಂದಿದೆ. ಈ ಬಗ್ಗೆ ವಿಚಾರಿಸುತ್ತೇನೆ” ಎಂದರು.

ಈ ಪ್ರಕರಣ ರಾಜ್ಯ ಸರ್ಕಾರ ಮುಚ್ಚಿಹಾಕಲು ಪ್ರಯತ್ನಿಸಿದರೆ ನಾನು ಮಧ್ಯಪ್ರವೇಶಿಸಬೇಕಾಗುತ್ತದೆ ಎಂಬ ಕುಮಾರಸ್ವಾಮಿ ಅವರ ಎಚ್ಚರಿಕೆ ಬಗ್ಗೆ ಕೇಳಿದಾಗ, “ಈಗಲೂ ಅವರು ಮಧ್ಯಪ್ರವೇಶಿಸಲಿ. ಯಾರು ಬೇಕಾದರೂ ಮಧ್ಯಪ್ರವೇಶ ಮಾಡಲಿ” ಎಂದರು.

ಕನಿಷ್ಠ ಮೂಲಭೂತ ಸೌಕರ್ಯಗಳಿಲ್ಲದ ನರ್ಸಿಂಗ್ ಕಾಲೇಜುಗಳಿಗೆ ಬೀಗ ಜಡಿಯಿರಿ: ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್

ʻತರಬೇತಿ ರಹಿತʼ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್‌ ನ್ಯೂಸ್‌ : ʻವೇತನ ಶ್ರೇಣಿʼ ನಿಗಧಿಪಡಿಸಿ ರಾಜ್ಯ ಸರ್ಕಾರ ಆದೇಶ

Share. Facebook Twitter LinkedIn WhatsApp Email

Related Posts

ಕಾನೂನು ವಿವಿ ಪರೀಕ್ಷಾ ವಿಧಾನ ಬಗ್ಗೆ ವ್ಯಾಪಕ ಮೆಚ್ಚುಗೆ: ಕುಲಪತಿ ಪ್ರೊ.ಬಸವರಾಜು ಸಂತಸ

24/05/2025 8:56 PM1 Min Read

BREAKING: ರಾಜ್ಯದಲ್ಲಿಂದು ಐವರಿಗೆ ಕೊರೋನಾ ಪಾಸಿಟಿವ್: ಸೋಂಕಿತರ ಸಂಖ್ಯೆ 38ಕ್ಕೆ ಏರಿಕೆ, ಓರ್ವ ಸಾವು | Corona Case

24/05/2025 8:48 PM1 Min Read

ಕೊಡಗು : ಬಿರುಗಾಳಿ ಸಹಿತ ಭಾರಿ ಮಳೆಗೆ ಮರ ಬಿದ್ದು ಕೂಲಿ ಕಾರ್ಮಿಕ ಮಹಿಳೆ ಸಾವು

24/05/2025 8:46 PM1 Min Read
Recent News

ಕಾನೂನು ವಿವಿ ಪರೀಕ್ಷಾ ವಿಧಾನ ಬಗ್ಗೆ ವ್ಯಾಪಕ ಮೆಚ್ಚುಗೆ: ಕುಲಪತಿ ಪ್ರೊ.ಬಸವರಾಜು ಸಂತಸ

24/05/2025 8:56 PM

BREAKING: ರಾಜ್ಯದಲ್ಲಿಂದು ಐವರಿಗೆ ಕೊರೋನಾ ಪಾಸಿಟಿವ್: ಸೋಂಕಿತರ ಸಂಖ್ಯೆ 38ಕ್ಕೆ ಏರಿಕೆ, ಓರ್ವ ಸಾವು | Corona Case

24/05/2025 8:48 PM

ಕೊಡಗು : ಬಿರುಗಾಳಿ ಸಹಿತ ಭಾರಿ ಮಳೆಗೆ ಮರ ಬಿದ್ದು ಕೂಲಿ ಕಾರ್ಮಿಕ ಮಹಿಳೆ ಸಾವು

24/05/2025 8:46 PM

BREAKING : ರಾಜ್ಯದಲ್ಲಿ ಕೊರೋನಾ ಸೋಂಕಿಗೆ ಮೊದಲ ಬಲಿ : ಬೆಂಗಳೂರಿನಲ್ಲಿ ಓರ್ವ ವ್ಯಕ್ತಿ ಸಾವು!

24/05/2025 8:37 PM
State News
KARNATAKA

ಕಾನೂನು ವಿವಿ ಪರೀಕ್ಷಾ ವಿಧಾನ ಬಗ್ಗೆ ವ್ಯಾಪಕ ಮೆಚ್ಚುಗೆ: ಕುಲಪತಿ ಪ್ರೊ.ಬಸವರಾಜು ಸಂತಸ

By kannadanewsnow0924/05/2025 8:56 PM KARNATAKA 1 Min Read

ಉಡುಪಿ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯವು ಶಿಕ್ಷಣದಲ್ಲಿ ಸುಧಾರಣಾ ಕ್ರಮಗಳನ್ನು ಕೈಗೊಂಡಿದ್ದು, ಪರೀಕ್ಷಾ ವಿಧಾನದಲ್ಲೂ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು…

BREAKING: ರಾಜ್ಯದಲ್ಲಿಂದು ಐವರಿಗೆ ಕೊರೋನಾ ಪಾಸಿಟಿವ್: ಸೋಂಕಿತರ ಸಂಖ್ಯೆ 38ಕ್ಕೆ ಏರಿಕೆ, ಓರ್ವ ಸಾವು | Corona Case

24/05/2025 8:48 PM

ಕೊಡಗು : ಬಿರುಗಾಳಿ ಸಹಿತ ಭಾರಿ ಮಳೆಗೆ ಮರ ಬಿದ್ದು ಕೂಲಿ ಕಾರ್ಮಿಕ ಮಹಿಳೆ ಸಾವು

24/05/2025 8:46 PM

BREAKING : ರಾಜ್ಯದಲ್ಲಿ ಕೊರೋನಾ ಸೋಂಕಿಗೆ ಮೊದಲ ಬಲಿ : ಬೆಂಗಳೂರಿನಲ್ಲಿ ಓರ್ವ ವ್ಯಕ್ತಿ ಸಾವು!

24/05/2025 8:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.