Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG BREAKING: ಬೆಳಗಾವಿಯಲ್ಲಿ ರಾಜ್ಯೋತ್ಸವ ಮೆರವಣಿಗೆ ವೇಳೆ ಐವರಿಗೆ ಚಾಕು ಇರಿತ

01/11/2025 10:25 PM

ನಾಳೆ, ನಾಡಿದ್ದು ಸೊರಬದ ಕರ್ಜಿಕೊಪ್ಪದಲ್ಲಿ ಮಂಡ್ಲಿಮನೆ ಬಸವಣ್ಣ ದೇವರ ನೂತನ ವಿಗ್ರಹ ಪ್ರತಿಷ್ಠಾಪನೆ, ದೇವಾಲಯ ಲೋಕಾರ್ಪಣೆ

01/11/2025 10:15 PM

ಶುಗರ್,ಬಿಪಿ ಎಲ್ಲವೂ ಕಂಟ್ರೋಲ್.! ಈ ‘ಪುಡಿ’ ಒಂದೇ ಒಂದು ಚಮಚ ಸಾಕು!

01/11/2025 10:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗಾಜನೂರು ನೀರು ಶುದ್ಧೀಕರಣ ಘಟಕ ನಿರ್ಮಾಣಕ್ಕೆ,ಅರಣ್ಯ ಇಲಾಖೆ ಎನ್.ಓ.ಸಿ ಪಡೆಯಲು ಪ್ರಯತ್ನ : ಸಚಿವ ಭೈರತಿ ಸುರೇಶ್
KARNATAKA

ಗಾಜನೂರು ನೀರು ಶುದ್ಧೀಕರಣ ಘಟಕ ನಿರ್ಮಾಣಕ್ಕೆ,ಅರಣ್ಯ ಇಲಾಖೆ ಎನ್.ಓ.ಸಿ ಪಡೆಯಲು ಪ್ರಯತ್ನ : ಸಚಿವ ಭೈರತಿ ಸುರೇಶ್

By kannadanewsnow0513/12/2024 5:27 PM

ಬೆಳಗಾವಿ : ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡಲು ಗಾಜನೂರು ಬಳಿ ಹೊಸದಾಗಿ ನೀರು ಶುದ್ಧೀಕರಣ ಘಟಕ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಈ ಸ್ಥಳ ಅರಣ್ಯ ಪ್ರದೇಶದಲ್ಲಿ ಇರುವುದರಿಂದ ಶೀಘ್ರವೇ ಅರಣ್ಯ ಇಲಾಖೆಯಿಂದ ಎನ್.ಓ.ಸಿ ಪಡೆದು ಕಾಮಗಾರಿ ಪ್ರಾರಂಭಿಸಲು ಪ್ರಯತ್ನಿಸಲಾಗುತ್ತಿದೆ. ಒಂದು ವೇಳೆ ಎನ್.ಓ.ಸಿ ಲಭಿಸದಿದ್ದರೆ, ಸೂಕ್ತವಾದ ಬದಲಿ ಜಾಗವನ್ನು ಸಹ ಗುರುತಿಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಹೇಳಿದರು.

ಬೆಳಗಾವಿ ಸುವರ್ಣಸೌಧಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಶುಕ್ರವಾರ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಚನ್ನಬಸಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನಗೆ ಅವರು ಉತ್ತರಿಸಿದರು. ಶಿವಮೊಗ್ಗ ನಗರಕ್ಕೆ ನೀರು ಸರಬರಾಜು ಮಾಡುತ್ತಿರುವ ಕೃಷ್ಣ ರಾಜೇಂದ್ರ ನೀರು ಸರಬರಾಜು ಕೇಂದ್ರದಲ್ಲಿ 1976ರಲ್ಲಿ 13.62 ಎಂ.ಎಲ್.ಡಿ, 1996ರಲ್ಲಿ 13.38 ಎಂ.ಎಲ್.ಡಿ ಹಾಗೂ 2009 ರಲ್ಲಿ 57 ಎಂ.ಎಲ್.ಡಿ ಸೇರಿ ಒಟ್ಟು 84 ಎಂ.ಎಲ್.ಡಿ ಸಾಮರ್ಥ್ಯದ ನೀರು ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಲಾಗಿದೆ.

ಇದರಲ್ಲಿ 1976 ಮತ್ತು 1996ರಲ್ಲಿ ನಿರ್ಮಿಸಿರುವ ಶುದ್ಧೀಕರಣ ಘಟಕಗಳು ಶಿಥಿಲಾವಸ್ಥೆಯಲ್ಲಿವೆ. ಇವುಗಳ ಬದಲು ಹೊಸದಾಗಿ ಶುದ್ಧೀಕರಣ ಘಟಕ ನಿರ್ಮಿಸಲು ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸ್ಥಳಾವಕಾಶ ಇಲ್ಲದ ಕಾರಣ, ಗಾಜನೂರು ಅರಣ್ಯ ಪ್ರದೇಶದಲ್ಲಿ ಸ್ಥಳ ಗುರುತಿಸಲಾಗಿದೆ.ಈ ಸ್ಥಳದಿಂದ ಗುರುತ್ವಾಕರ್ಷಣೆ ಮೂಲಕ ಶಿವಮೊಗ್ಗ ನೀರು ಸರಬರಾಜು ಮಾಡಬಹುದು. ಈ ಸಂಬAಧ ಸರ್ವೆ ಕಾರ್ಯ ಹಾಗೂ ವಿಸ್ತೃತ ಯೋಜನಾ ವರದಿಯನ್ನು ಸಿದ್ದಪಡಿಸಲಾಗಿದೆ ಎಂದು ಸಚಿವ ಬಿ.ಎಸ್.ಸುರೇಶ ತಿಳಿಸಿದರು.

ಶಿವಮೊಗ್ಗ ನಗರದಲ್ಲಿ ಶೇ.74 ರಷ್ಟು ಒಳಚರಂಡಿ ವ್ಯವಸ್ಥೆ ಇದೆ. ರೂ.115 ಕೋಟಿ ವೆಚ್ಚದಲ್ಲಿ 3ನೇ ಹಂತದ ಸಮಗ್ರ ಒಳಚರಂಡಿ ಯೋಜನೆಯಡಿ, ಏರೇಟೆಡ್ ಲಗೂನ್ ತಂತ್ರಜ್ಞಾನ ಆಧರಿಸಿ 35.58 ಎಂ.ಎಲ್.ಡಿ ತ್ಯಾಜ್ಯ ನೀರು ಶುದ್ದೀಕರಣ ಘಟಕ, 03 ವೆಟ್‌ವೆಲ್, 262 ಕಿ.ಮೀ ಉದ್ದದ ಗ್ರಾಮಸಾರ ಕೊಳವೆ ಮಾರ್ಗವನ್ನು ನಿರ್ಮಿಸಲಾಗಿದೆ. ಅಮೃತ್ ಯೋಜನೆಯಡಿ ರೂ.58 ಕೋಟಿ ಹಾಗೂ ರೂ.7 ಕೋಟಿ ಹೆಚ್ಚುವರಿ ಅನುದಾನದಡಿ ಮಹಾನಗರ ವ್ಯಾಪ್ತಿಯ ವಿವಿಧ ಪ್ರದೇಶದಲ್ಲಿ ಗೃಹ ಸಂಪರ್ಕಿತ ಒಳಚರಂಡಿ ಕೊಳವೆ ಮಾರ್ಗ, ಹಳೆ ಕೊಳವೆ ಮಾರ್ಗಗಳ ಪುನರುಜ್ಜೀವನ, 4 ವೆಟ್‌ವಲ್, 6 ಪಂಪಿAಗ್ ಮೆಷನರಿ, ಡಿ.ಜಿ. ರೂಮ್, ಡಿ.ಜೆ.ಸೆಟ್ ಮತ್ತು ಟ್ರಾನ್ಸ್ ಫಾರ್ಮರ್ ಸಬ್ ಸ್ಟೇಷನ್, 11 ಕೆ.ವಿ. ಎಕ್ಸ್ ಪ್ರೆಸ್ ಫೀಡರ್ ವಿದ್ಯುತ್ ಲೈನ್, 5.13 ಎಂ.ಎಲ್.ಡಿ ಸಾಮರ್ಥ್ಯದ ತ್ಯಾಜ್ಯ ನೀರಿನ ಶುದ್ದೀಕರಣ ಘಟಕ ನಿರ್ಮಿಸಲಾಗಿದೆ.

ಈ ಎಲ್ಲಾ ಕಾಮಗಾರಿಗಳು ಸುಸ್ಥಿತಿಯಲ್ಲಿದ್ದು, ಶಿವಮೊಗ್ಗ ಮಹಾನಗರ ಪಾಲಿಕೆಗೆ ಹಸ್ತಾಂತರಿಸಲಾಗಿದೆ. ನಗರದಲ್ಲಿ ಹಾದುಹೋಗಿರುವ ತುಂಗಾ ನದಿಗೆ ಕೊಳಚೆ ನೀರು ಸೇರೆದಂತೆ ತಡೆಯಲು ಒಳಚರಂಡಿ ವ್ಯವಸ್ಥೆಯಲ್ಲಿನ ಮಿಸಿಂಗ್ ಲಿಂಕ್ಸ್ ಸ್ಥಳಗಳಲ್ಲಿಯೂ ರಾಷ್ಟಿçÃಯ ಹಸಿರು ನ್ಯಾಯಮಂಡಳಿಯ ರೂ.40 ಕೋಟಿ ಅನುದಾನದಲ್ಲಿ ಒಳಚರಂಡಿ ವ್ಯವಸ್ಥೆಯನ್ನು ನಿರ್ಮಿಸಿ, ತ್ಯಾಜ್ಯ ನೀರು ಸಂಸ್ಕರಣ ಘಟಕ ನಿರ್ಮಿಸುವುದಾಗಿ ಸಚಿವ ಬಿ.ಎಸ್.ಸುರೇಶ್ ಹೇಳಿದರು.

ಮಹಾನಗರಗಳಿಗೆ ರೂ.2000 ಕೋಟಿ ಅನುದಾನ

ಸರ್ಕಾರ ರಾಜ್ಯ ಹಣಕಾಸು ನಿಗಮದಿಂದ ಬೃಹತ್ ಬೆಂಗಳೂರು ಸೇರಿ ಇತರೆ 10 ಮಹಾನಗರ ಪಾಲಿಕೆಗಳಿಗೆ ಒಟ್ಟು ರೂ.2000 ಕೋಟಿ ಅನುದಾನ ನೀಡಿದೆ. ಇದರಲ್ಲಿ ಶಿವಮೊಗ್ಗ ನಗರಕ್ಕೆ ರೂ.140 ಕೋಟಿ ಅನುದಾನವನ್ನು ಒದಗಿಸಲಾಗಿದೆ ಎಂದು ಸಚಿವ ಬಿ.ಎಸ್.ಸುರೇಶ್ ಸದನದಲ್ಲಿ ಮಾಹಿತಿ ನೀಡಿದರು. ಶಾಸಕ ಚನ್ನಬಸಪ್ಪ ನವರು ರಾಜ್ಯ ಹಣಕಾಸು ನಿಗಮದಿಂದ ನೀಡಿದ ಅನುದಾನದಲ್ಲಿ ಶೇ.20 ರಷ್ಟು ಮಾತ್ರ ಕುಡಿಯುವ ನೀರಿನ ಕಾಮಗಾರಿಗಳಿಗೆ ಬಳಸಿಕೊಳ್ಳಲು ಅವಕಾಶವಿದೆ. ಈ ಮಿತಿಯನ್ನು ಸಡಿಲಗೊಳಿಸಿ ಹೆಚ್ಚಿನ ಅನುದಾನವನ್ನು ಕುಡಿಯುವ ನೀರಿನ ಕಾಮಗಾರಿಗಳಿಗೆ ಬಳಸಿಕೊಳ್ಳಲು ಸರ್ಕಾರ ಅನುಮತಿ ನೀಡುವಂತೆ ಕೋರಿದರು.

Share. Facebook Twitter LinkedIn WhatsApp Email

Related Posts

BIG BREAKING: ಬೆಳಗಾವಿಯಲ್ಲಿ ರಾಜ್ಯೋತ್ಸವ ಮೆರವಣಿಗೆ ವೇಳೆ ಐವರಿಗೆ ಚಾಕು ಇರಿತ

01/11/2025 10:25 PM1 Min Read

ನಾಳೆ, ನಾಡಿದ್ದು ಸೊರಬದ ಕರ್ಜಿಕೊಪ್ಪದಲ್ಲಿ ಮಂಡ್ಲಿಮನೆ ಬಸವಣ್ಣ ದೇವರ ನೂತನ ವಿಗ್ರಹ ಪ್ರತಿಷ್ಠಾಪನೆ, ದೇವಾಲಯ ಲೋಕಾರ್ಪಣೆ

01/11/2025 10:15 PM2 Mins Read

BREAKING: ಹೊನ್ನಾವರದ ಗೇರುಸೊಪ್ಪ ಬಳಿಯಲ್ಲಿ KSRTC ಬಸ್ ಪಲ್ಟಿ, ಓರ್ವ ಸಾವು, ಹಲವರಿಗೆ ಗಾಯ

01/11/2025 9:52 PM1 Min Read
Recent News

BIG BREAKING: ಬೆಳಗಾವಿಯಲ್ಲಿ ರಾಜ್ಯೋತ್ಸವ ಮೆರವಣಿಗೆ ವೇಳೆ ಐವರಿಗೆ ಚಾಕು ಇರಿತ

01/11/2025 10:25 PM

ನಾಳೆ, ನಾಡಿದ್ದು ಸೊರಬದ ಕರ್ಜಿಕೊಪ್ಪದಲ್ಲಿ ಮಂಡ್ಲಿಮನೆ ಬಸವಣ್ಣ ದೇವರ ನೂತನ ವಿಗ್ರಹ ಪ್ರತಿಷ್ಠಾಪನೆ, ದೇವಾಲಯ ಲೋಕಾರ್ಪಣೆ

01/11/2025 10:15 PM

ಶುಗರ್,ಬಿಪಿ ಎಲ್ಲವೂ ಕಂಟ್ರೋಲ್.! ಈ ‘ಪುಡಿ’ ಒಂದೇ ಒಂದು ಚಮಚ ಸಾಕು!

01/11/2025 10:15 PM

BREAKING: ಹೊನ್ನಾವರದ ಗೇರುಸೊಪ್ಪ ಬಳಿಯಲ್ಲಿ KSRTC ಬಸ್ ಪಲ್ಟಿ, ಓರ್ವ ಸಾವು, ಹಲವರಿಗೆ ಗಾಯ

01/11/2025 9:52 PM
State News
KARNATAKA

BIG BREAKING: ಬೆಳಗಾವಿಯಲ್ಲಿ ರಾಜ್ಯೋತ್ಸವ ಮೆರವಣಿಗೆ ವೇಳೆ ಐವರಿಗೆ ಚಾಕು ಇರಿತ

By kannadanewsnow0901/11/2025 10:25 PM KARNATAKA 1 Min Read

ಬೆಳಗಾವಿ: ಜಿಲ್ಲೆಯಲ್ಲಿ ಪುಂಡರು ಅಟ್ಟಹಾಸ ಮೆರೆದಿದ್ದಾರೆ. ರಾಜ್ಯೋತ್ಸವ ಮೆರವಣಿಗೆ ಸಂದರ್ಭದಲ್ಲಿ ಐವರಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾರೆ. ಬೆಳಗಾವಿಯಲ್ಲಿ ರಾಜ್ಯೋತ್ಸವ ಮೆರವಣಿಗೆ…

ನಾಳೆ, ನಾಡಿದ್ದು ಸೊರಬದ ಕರ್ಜಿಕೊಪ್ಪದಲ್ಲಿ ಮಂಡ್ಲಿಮನೆ ಬಸವಣ್ಣ ದೇವರ ನೂತನ ವಿಗ್ರಹ ಪ್ರತಿಷ್ಠಾಪನೆ, ದೇವಾಲಯ ಲೋಕಾರ್ಪಣೆ

01/11/2025 10:15 PM

BREAKING: ಹೊನ್ನಾವರದ ಗೇರುಸೊಪ್ಪ ಬಳಿಯಲ್ಲಿ KSRTC ಬಸ್ ಪಲ್ಟಿ, ಓರ್ವ ಸಾವು, ಹಲವರಿಗೆ ಗಾಯ

01/11/2025 9:52 PM

ಹಾವೇರಿ: ನ.3ರಂದು ‘ತುಳಜಾಭವಾನಿ ದೇವಿ’ಯ 26ನೇ ವರ್ಷದ ಜಾತ್ರಾ ಮಹೋತ್ಸವ

01/11/2025 9:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.