Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : `ಧರ್ಮಸ್ಥಳ ಕೇಸ್’ ಕುರಿತು ‘SIT’ ಯಿಂದ ಸಹಾಯವಾಣಿ ಆರಂಭ : ಈ ಸಂಖ್ಯೆಗೆ ಕರೆ ಮಾಡಿ ಮಾಹಿತಿ ಹಂಚಿಕೊಳ್ಳಿ

01/08/2025 8:10 AM

BREAKING : ‘ಧರ್ಮಸ್ಥಳ ಕೇಸ್’ಗೆ ಬಿಗ್ ಟ್ವಿಸ್ಟ್ : ಡೆಬಿಟ್ ಕಾರ್ಡ್, ಪಾನ್ ಕಾರ್ಡ್ ರಹಸ್ಯ ಬಯಲು

01/08/2025 8:06 AM

BREAKING: 17,000 ಕೋಟಿ ಸಾಲ ವಂಚನೆ ಪ್ರಕರಣ: ಅನಿಲ್ ಅಂಬಾನಿಗೆ ED ಸಮನ್ಸ್ | Anil Ambani

01/08/2025 8:06 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಪ್ರಜ್ವಲ್ ಅಶ್ಲೀಲ ವೀಡಿಯೋ’ ಬಿಡುಗಡೆಗೆ ‘ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ’ಯೇ ಕಾರಣ- ರಮೇಶ್ ಬಾಬು
KARNATAKA

‘ಪ್ರಜ್ವಲ್ ಅಶ್ಲೀಲ ವೀಡಿಯೋ’ ಬಿಡುಗಡೆಗೆ ‘ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ’ಯೇ ಕಾರಣ- ರಮೇಶ್ ಬಾಬು

By kannadanewsnow0901/05/2024 2:58 PM

ಬೆಂಗಳೂರು: ಸುಖಾ ಸುಮ್ಮನೇ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರಿವರ ಮೇಲೆ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಕುರಿತಂತೆ ಆರೋಪ ಮಾಡುತ್ತಿದ್ದಾರೆ. ಆದ್ರೇ ಪ್ರಜ್ವಲ್ ಅಶ್ಲೀಲ ವೀಡಿಯೋ ಬಿಡುಗಡೆಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯೇ ಕಾರಣ ಎಂಬುದಾಗಿ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗ ಮುಖ್ಯಸ್ಥ ರಮೇಶ್ ಬಾಬು ಗಂಭೀರ ಆರೋಪ ಮಾಡಿದ್ದಾರೆ.

ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷರಾದ ರಮೇಶ್‌ ಬಾಬು ಅವರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದರು.

ಪೆನ್‌ ಡ್ರೈವ್‌ ವಿಚಾರ ಕುಮಾರಸ್ವಾಮಿ ಹಾಗೂ ಬಿಜೆಪಿಯ ಎಲ್ಲಾ ನಾಯಕರಿಗೆ ಮೊದಲೇ ತಿಳಿದಿತ್ತು. ಬಿಜೆಪಿ ನಾಯಕ, ವಕೀಲ ದೇವರಾಜೇಗೌಡ ಹಾಗೂ ಮಾಜಿ ಶಾಸಕ ಪ್ರೀತಂ ಗೌಡ ಕೂಡ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದರು. ಕುಮಾರಸ್ವಾಮಿ ಅವರು ಅನವಶ್ಯಕವಾಗಿ ತಮ್ಮ ಕುಟುಂಬದ ಒಳ ಜಗಳವನ್ನು ಕಾಂಗ್ರೆಸ್‌ ಪಕ್ಷ, ಡಿ.ಕೆ.ಶಿವಕುಮಾರ್ , ಸಿಎಂ ಸಿದ್ದರಾಮಯ್ಯ ಅವರ ಮೇಲೆ ಹಾಕುತ್ತಿದ್ದಾರೆ. ಉದ್ದೇಶಪೂರ್ವಕವಾಗಿ ಇವರ ಹೆಸರು ತರುವುದು ಬೇಡ. ತನಿಖೆಯ ಹಾದಿ ತಪ್ಪಿಸುವುದು ಬಿಟ್ಟು ತನಿಖೆ ಪೂರಕವಾಗಿ ನಡೆದುಕೊಳ್ಳಿ. ವಾಸ್ತವತೆಯ ಬಗ್ಗೆ ಮಾತನಾಡಿ ಎಂದು ಕೇಳಿದರು.

ಬಿಜೆಪಿಗೆ ಜೆಡಿಎಸ್‌ ಮೇಲೆ ಇರುವ ಕೋಪವನ್ನು ಈ ರೀತಿಯಾಗಿ ತೀರಿಸಿಕೊಳ್ಳುವ ಕೆಲಸ ನಡೆದಿದೆ. ಹುಣಸೂರಿನಿಂದ ಪ್ರಜ್ವಲ್‌ ಅವರು ಸ್ಪರ್ಧಿಸಬೇಕು ಎನ್ನುವ ಚರ್ಚೆ ಬಂದಾಗ ʼನಮ್ಮ ಪಕ್ಷದಲ್ಲಿ ಸೂಟ್‌ ಕೇಸ್‌ ಸಂಸ್ಕೃತಿ ಇದೆ ಅದು ಹೋಗುವ ತನಕ ಇದೆಲ್ಲಾ ನಿಲ್ಲುವುದಿಲ್ಲʼ ಎಂದಿದ್ದರು. ಈ ಕಾರಣಕ್ಕೆ ರೇವಣ್ಣ ಮತ್ತು ಕುಮಾರಸ್ವಾಮಿ ಕುಟುಂಬದ ನಡುವೆ ಅಸಮಾಧಾನ ಹೊತ್ತಿಕೊಂಡಿತು ಎಂದರು.

ಭವಾನಿ ರೇವಣ್ಣ ಅವರು ಸಹ ಕೆ.ಆರ್‌.ನಗರ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದಾಗ ಕುಮಾರಸ್ವಾಮಿ ಅವರು ಅವಕಾಶ ಕೊಡಲಿಲ್ಲ. ಮತ್ತೆ ಭವಾನಿ ರೇವಣ್ಣ ಅವರು ಹಾಸನದಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದಾಗ ಕುಮಾರಸ್ವಾಮಿ ಎಂಥೆಂತಾ ಮಾತುಗಳನ್ನು ಆಡಿದರು. ಆರ್‌. ಆರ್ ನಗರದಿಂದಲೂ ಪ್ರಜ್ವಲ್‌ ಸ್ಪರ್ಧೆ ಮಾಡುತ್ತೇನೆ ಎಂದಾಗಲೂ ಅಸಮಾಧಾನ ಹೆಚ್ಚಾಗಿತ್ತು. ಇದು ಕುಟುಂಬಗಳ ಮಧ್ಯದ ಪೈಪೋಟಿ ಎಂದರು.

ನಮ್ಮ ಕುಟುಂಬದಿಂದ ನಾನು ಮತ್ತು ರೇವಣ್ಣ ಇಬ್ಬರೇ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದರು. ಆವರೇ ಎರಡು ಕಡೆ ಸ್ಪರ್ಧೆ ಮಾಡಿ ನಂತರದ ಉಪಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಅವರನ್ನು ನಿಲ್ಲಿಸಿದರು. ಇಲ್ಲಿಂದ ಕುಟುಂಬದಲ್ಲಿ ಆಂತರಿಕ ಕಿತ್ತಾಟ ಹೆಚ್ಚಾಯಿತು. ಇದೆಲ್ಲಾ ಕಾರಣಕ್ಕೆ ದೇವೇಗೌಡರು ಹಾಸನವನ್ನು ಪ್ರಜ್ವಲ್‌ ಅವರಿಗೆ ಬಿಟ್ಟುಕೊಟ್ಟರು. ನಂತರದ ಬೆಳವಣಿಗೆಗಳು ಎಲ್ಲರಿಗೂ ತಿಳಿದೇ ಇದೆ ಎಂದು ತಿಳಿಸಿದರು.

ಮಂಗಳವಾರ ಮಾತನಾಡಿದ್ದ ಕುಮಾರಸ್ವಾಮಿ ಅವರು ಪೆನ್‌ ಡ್ರೈವ್‌ ಹಂಚಿಕೆ ಹಿಂದೆ ಡಿ.ಕೆ.ಶಿವಕುಮಾರ್‌ ಅವರು ಇದ್ದಾರೆ ಎನ್ನುವ ಹತಾಶೆಯ ಹೇಳಿಕೆ ಕೊಟ್ಟಿದ್ದಾರೆ. ಏಕೆಂದರೆ ಮಂಗಳವಾರ ಬೆಳಿಗ್ಗೆ ಅಮಿತ್‌ ಶಾ ಅವರು ಕುಮಾರಸ್ವಾಮಿ ಅವರಿಗೆ ದೂರವಾಣಿ ಕರೆ ಮಾಡಿ ಹಾಗು ಯಡಿಯೂರಪ್ಪ ಅವರ ಜೊತೆಗೂ ಮಾತನಾಡಿ ʼಈ ಘಟನೆಯಿಂದ ಬಿಜೆಪಿಗೆ ರಾಷ್ಟ್ರೀಯ ಮಟ್ಟದಲ್ಲಿ ಹಾನಿಯಾಗಿದೆ. ಈ ಪ್ರಕರಣವನ್ನು ನೀವೇಕೆ ಮೊದಲೇ ಸರಿ ಪಡಿಸಲಿಲ್ಲ ಎಂದು ಪ್ರಶ್ನಿಸಿದ್ದಾರೆ ಎಂದರು.

ಕುಮಾರಸ್ವಾಮಿ ಅವರು ಈ ಘಟನೆಯಿಂದ ವಿಚಲಿತ ಹಾಗೂ ಹತಾಶರಾಗಿದ್ದಾರೆ. ಇದರಿಂದ ಕಂಡಕಂಡವರ ಮೇಲೆ ಆರೋಪ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಆರೋಪ ಮಾಡಿದರು. ಆದರೆ ಸಿಎಂ ಅವರು ಪ್ರಕರಣ ಸಾರ್ವಜನಿಕ ಚರ್ಚೆಗೆ ಬಂದ ತಕ್ಷಣ ತನಿಖೆಗೆ ಆದೇಶ ಮಾಡಿದ್ದಾರೆ. ಇದನ್ನೂ ಪ್ರಶ್ನೆ ಮಾಡಿರುವ ಕುಮಾರಸ್ವಾಮಿ ಅವರು ಮೋದಿ ಅವರು ಸಹಾಯ ಮಾಡಿದರು ಎನ್ನುವ ದಾಟಿಯಲ್ಲಿ ಮಾತನಾಡಿದ್ದಾರೆ. ಇದೆಲ್ಲಾ ಕುಮಾರಸ್ವಾಮಿ ಅವರ ಕಟ್ಟುಕತೆ ಮತ್ತು ಕೆಳಮಟ್ಟದ ಹೇಳಿಕೆಗಳು. ಡಿ.ಕೆ.ಶಿವಕುಮಾರ್‌ ಹಂಚಿಕೆಯ ಹಿಂದೆ ಇದ್ದಾರೆ ಎಂದು ಹೇಳಿರುವುದು ಹತಾಶ ಮನೋಭಾವದ ಮುಂದುವರೆದ ಭಾಗ ಎಂದರು.

ಕುಮಾರಸ್ವಾಮಿ ಅವರು ಅನೇಕ ಪ್ರಶ್ನೆಗಳಿಗೆ ಉತ್ತರವನ್ನು ಕೊಟ್ಟಿಲ್ಲ. ಪ್ರೀತಂ ಗೌಡ, ದೇವರಾಜೇಗೌಡ ಭೇಟಿ ಮಾಡಿದ್ದರು ಎನ್ನುವ ಸವಾಲಿಗೆ ಉತ್ತರ ನೀಡಿಲ್ಲ. ಇದಕ್ಕೆ ಕುಮಾರಸ್ವಾಮಿ ಅವರು ಮಾತ್ರ ಉತ್ತರ ನೀಡಬೇಕಾಗಿಲ್ಲ. ವಿಜಯೇಂದ್ರ, ಆರ್‌. ಅಶೋಕ ಅವರು ಉತ್ತರಿಸಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಮುಖಂಡ ದೇವರಾಜೇಗೌಡರು ಕಳೆದ ಎರಡು- ಮೂರು ವರ್ಷಗಳಿಂದ ದೇವೇಗೌಡರ ಕುಟುಂಬದ ಅವ್ಯವಹಾರಗಳ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಹೋರಾಟ ಮಾಡುತ್ತಿದ್ದಾರೆ. ಪೆನ್‌ ಡ್ರೈವ್ ಪ್ರಕರಣದ ಬಗ್ಗೆ ಯಾವ ಮಾಹಿತಿಯನ್ನು ಬಿಡುಗಡೆ ಮಾಡಬಾರದು ಎಂದು ಈ ಮೊದಲೇ ಪ್ರಜ್ವಲ್‌ ರೇವಣ್ಣ ಸಂಧಾನ ಮಾಡಿದ್ದರು ಎಂದು ಗಂಭೀರ ಆರೋಪ ಮಾಡಿದರು.

2023 ಡಿಸೆಂಬರ್‌ 8 ರಂದು ದೇವರಾಜೇಗೌಡರು ಪ್ರಜ್ವಲ್‌ ರೇವಣ್ಣ ಅವರ ಸಿಡಿ ಇದೆ ಇದರ ಬಗ್ಗೆ ರಾಷ್ಟ್ರೀಯ ಬಿಜೆಪಿ ನಾಯಕರಿಗೆ ಪತ್ರ ಬರೆದಿದ್ದರು. ಹಾಸನದಲ್ಲಿ ಮಾಧ್ಯಮಗೋಷ್ಠಿ ನಡೆಸಿ ನನ್ನ ಬಳಿ ಸಿಡಿ ಇದೆ ಯಾವಾಗ ಬೇಕಾದರೂ ಅದನ್ನು ಬಿಡುಗಡೆ ಮಾಡುತ್ತೇನೆ ಎಂದು ಹೇಳಿದ್ದರು ಎಂದು ತಿಳಿಸಿದರು.

ಎಲ್ಲಾ ವಿಚಾರಗಳು ಗೊತ್ತಿದ್ದ ಬಿಜೆಪಿ ನಾಯಕರು ಏಕೆ ಈ ವಿಚಾರದಲ್ಲಿ ಮೌನವಾಗಿದ್ದಾರೆ. ಆರ್.ಆಶೋಕ್, ವಿಜಯೇಂದ್ರ ಅವರಿಗೂ ಈ ವಿಚಾರ ಗೊತ್ತಿತ್ತು. ಪ್ರೀತಂಗೌಡ ಅವರು ಜೆಡಿಎಸ್‌ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡುವುದಿಲ್ಲ ಎಂದಾಗ ಕುಮಾರಸ್ವಾಮಿ ಮನೆಗೆ ಕರೆಸಿಕೊಂಡು ಮಾತುಕತೆ ನಡೆಸುತ್ತಾರೆ. ಮಹಿಳೆಯರ ಜೀವದ ಪ್ರಶ್ನೆ ಇಲ್ಲಿದೆ. ಇದರಿಂದ ಸಾವಿರಾರು ಮಹಿಳೆಯರ ಘನತೆಗೆ ಪೆಟ್ಟಾಗಿದೆ. ಕುಮಾರಸ್ವಾಮಿ ಅವರೇ ಈ ಪ್ರಕರಣದ ಬಗ್ಗೆ ಪಶ್ಚಾತ್ತಾಪ ಪಡಬೇಕು. ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡುತ್ತೇನೆ ಎಂದ ಹಾಸನ ಜಿಲ್ಲಾಧಿಕಾರಿ ಮಾತಿಗೂ ಕುಮಾರಸ್ವಾಮಿ ಹತಾಶೆಯಿಂದ ಉತ್ತರಿಸುತ್ತಿದ್ದಾರೆ ಎಂದು ಕಿಡಿಕಾರಿದರು.

CBI raids: ಅಪ್ಲಿಕೇಶನ್ ಆಧಾರಿತ ಮೋಸದ ಹೂಡಿಕೆ: ದೇಶಾದ್ಯಂತ 30 ಸ್ಥಳಗಳ ಮೇಲೆ ‘CBI ದಾಳಿ’

ಬೆಂಗಳೂರು: ಸಹಪಾಠಿಯಿಂದ 35 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ 10ನೇ ತರಗತಿ ವಿದ್ಯಾರ್ಥಿ ಬಂಧನ

Share. Facebook Twitter LinkedIn WhatsApp Email

Related Posts

BREAKING : `ಧರ್ಮಸ್ಥಳ ಕೇಸ್’ ಕುರಿತು ‘SIT’ ಯಿಂದ ಸಹಾಯವಾಣಿ ಆರಂಭ : ಈ ಸಂಖ್ಯೆಗೆ ಕರೆ ಮಾಡಿ ಮಾಹಿತಿ ಹಂಚಿಕೊಳ್ಳಿ

01/08/2025 8:10 AM1 Min Read

BREAKING : ‘ಧರ್ಮಸ್ಥಳ ಕೇಸ್’ಗೆ ಬಿಗ್ ಟ್ವಿಸ್ಟ್ : ಡೆಬಿಟ್ ಕಾರ್ಡ್, ಪಾನ್ ಕಾರ್ಡ್ ರಹಸ್ಯ ಬಯಲು

01/08/2025 8:06 AM1 Min Read

GOOD NEWS : ಅರ್ಹ ಖಾಲಿ ನಿವೇಶನ ಹೊಂದಿದ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಪಕ್ಕ ಮನೆ ನಿರ್ಮಾಣಕ್ಕೆ ಸಿಗಲಿದೆ ಸಹಾಯಧನ.!

01/08/2025 8:04 AM1 Min Read
Recent News

BREAKING : `ಧರ್ಮಸ್ಥಳ ಕೇಸ್’ ಕುರಿತು ‘SIT’ ಯಿಂದ ಸಹಾಯವಾಣಿ ಆರಂಭ : ಈ ಸಂಖ್ಯೆಗೆ ಕರೆ ಮಾಡಿ ಮಾಹಿತಿ ಹಂಚಿಕೊಳ್ಳಿ

01/08/2025 8:10 AM

BREAKING : ‘ಧರ್ಮಸ್ಥಳ ಕೇಸ್’ಗೆ ಬಿಗ್ ಟ್ವಿಸ್ಟ್ : ಡೆಬಿಟ್ ಕಾರ್ಡ್, ಪಾನ್ ಕಾರ್ಡ್ ರಹಸ್ಯ ಬಯಲು

01/08/2025 8:06 AM

BREAKING: 17,000 ಕೋಟಿ ಸಾಲ ವಂಚನೆ ಪ್ರಕರಣ: ಅನಿಲ್ ಅಂಬಾನಿಗೆ ED ಸಮನ್ಸ್ | Anil Ambani

01/08/2025 8:06 AM

GOOD NEWS : ಅರ್ಹ ಖಾಲಿ ನಿವೇಶನ ಹೊಂದಿದ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಪಕ್ಕ ಮನೆ ನಿರ್ಮಾಣಕ್ಕೆ ಸಿಗಲಿದೆ ಸಹಾಯಧನ.!

01/08/2025 8:04 AM
State News
KARNATAKA

BREAKING : `ಧರ್ಮಸ್ಥಳ ಕೇಸ್’ ಕುರಿತು ‘SIT’ ಯಿಂದ ಸಹಾಯವಾಣಿ ಆರಂಭ : ಈ ಸಂಖ್ಯೆಗೆ ಕರೆ ಮಾಡಿ ಮಾಹಿತಿ ಹಂಚಿಕೊಳ್ಳಿ

By kannadanewsnow5701/08/2025 8:10 AM KARNATAKA 1 Min Read

ದಕ್ಷಿಣ ಕನ್ನಡ : ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ ಸಹಾಯವಾಣಿಯನ್ನು ತೆರೆದಿದ್ದು, ಈ ಕುರಿತು ಮಾಹಿತಿ ಇದ್ದರೆ…

BREAKING : ‘ಧರ್ಮಸ್ಥಳ ಕೇಸ್’ಗೆ ಬಿಗ್ ಟ್ವಿಸ್ಟ್ : ಡೆಬಿಟ್ ಕಾರ್ಡ್, ಪಾನ್ ಕಾರ್ಡ್ ರಹಸ್ಯ ಬಯಲು

01/08/2025 8:06 AM

GOOD NEWS : ಅರ್ಹ ಖಾಲಿ ನಿವೇಶನ ಹೊಂದಿದ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಪಕ್ಕ ಮನೆ ನಿರ್ಮಾಣಕ್ಕೆ ಸಿಗಲಿದೆ ಸಹಾಯಧನ.!

01/08/2025 8:04 AM

BREAKING: ಬೆಂಗಳೂರಿನಲ್ಲಿ 13 ವರ್ಷದ ಬಾಲಕನ ಕಿಡ್ನ್ಯಾಪ್ & ಮರ್ಡರ್ ಕೇಸ್ : ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್.!

01/08/2025 7:44 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.