ಬೆಂಗಳೂರು: 2023 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಟಿಕೆಟ್ ನಿರಾಕರಿಸಿದ್ದರಿಂದ ಬಿಜೆಪಿಯನ್ನು ತೊರೆದ ಲಿಂಗಾಯತ ಮುಖಂಡ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಮತ್ತೆ ಪಕ್ಷಕ್ಕೆ ಸೇರಿದ್ದಾರೆ.
ಇಂದು ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದಂತ ಅವರು, ಲೋಕಸಭಾ ಚುನಾವಣೆಗೆ ಮುನ್ನವೇ ಬಿಜೆಪಿ ಪಕ್ಷ ಸೇರ್ಪಡೆ ಕುರಿತಂತೆ ಮಹತ್ವದ ಮಾತುಕತೆ ನಡೆಸಿದರು. ಈ ಬಳಿಕ ಬಿಜೆಪಿ ಕಚೇರಿಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಅಮಿತ್ ಶಾ ಸಮ್ಮುಖದಲ್ಲಿ ಕೇಸರಿ ಶಾಲು ಧರಿಸಿ, ಬಿಜೆಪಿ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಗೊಂಡರು.
ಅಂದಹಾಗೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ 2023 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಿದ ನಂತರ ಬಿಜೆಪಿಯೊಂದಿಗೆ ಅಸಮಾಧಾನಗೊಂಡು ಕಾಂಗ್ರೆಸ್ ಪಕ್ಷವನ್ನು ಸೇರಿದ್ದರು. ಆ ಬಳಿಕ ಬಿಜೆಪಿಯ ವಿರುದ್ಧ ಪದೇ ಪದೇ ವಾಗ್ಧಾಳಿ ನಡೆಸುತ್ತಲೇ ಬಂದಿದ್ದರು. ಇಂತಹ ಜಗದೀಶ್ ಶೆಟ್ಟರ್ ಈಗ ಮತ್ತೆ ಕಾಂಗ್ರೆಸ್ ಪಕ್ಷ ತೊರೆದು, ಬಿಜೆಪಿ ಪಕ್ಷಕ್ಕೆ ಮರಳಿದ್ದಾರೆ.
VIDEO | Former Karnataka CM and Congress leader Jagadish Shettar joins BJP. pic.twitter.com/VNKLPVfu4o
— Press Trust of India (@PTI_News) January 25, 2024