Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಪಾಕಿಸ್ತಾನದಲ್ಲಿ ಅವ್ಯವಸ್ಥೆ? ಬಲೂಚಿಸ್ತಾನದ ಮೂರನೇ ಒಂದು ಭಾಗವನ್ನು ವಶಪಡಿಸಿಕೊಂಡ BLA

09/05/2025 1:17 PM

ಚಿಕ್ಕಮ್ಮನ ಮದುವೆಗೆ ವೀಸಾ ವಿಸ್ತರಣೆ : ಪಾಕಿಸ್ತಾನದ ಮೂವರು ಮಕ್ಕಳು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್ | India -Pak war

09/05/2025 12:53 PM

BREAKING : ಜಮ್ಮು, ಉಧಂಪುರದಿಂದ ದೆಹಲಿಗೆ ವಿಶೇಷ ರೈಲು ಘೋಷಣೆ ಮಾಡಿದ ಭಾರತೀಯ ರೈಲ್ವೆ | India-Pak war

09/05/2025 12:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಬಿಜೆಪಿ ನಾಯಕ’ರಿಗೆ ಈ ಸವಾಲ್ ಹಾಕಿದ ‘ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು’
KARNATAKA

‘ಬಿಜೆಪಿ ನಾಯಕ’ರಿಗೆ ಈ ಸವಾಲ್ ಹಾಕಿದ ‘ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು’

By kannadanewsnow0927/03/2025 2:37 PM

ಬೆಂಗಳೂರು: ಬಿಜೆಪಿ ಮತ್ತು ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇದ್ದರೆ ಸಂವಿಧಾನ ಬದಲಾಯಿಸುವುದ್ದಿಲ್ಲ ಎಂಬ ಘೋಷಣೆಯನ್ನು ಅಂಬೇಡ್ಕರ್ ರವರ ಹೆಸರಿನಲ್ಲಿ ಪ್ರಮಾಣ ಮಾಡಿ ಹೇಳಲು ಕಾಂಗ್ರೆಸ್ ಪಕ್ಷವು ಒತ್ತಾಯಿಸುತ್ತದೆ ಎಂಬುದಾಗಿ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಸವಾಲ್ ಹಾಕಿದ್ದಾರೆ.

ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಸಂಘ ಪರಿವಾರದ ಮೂಲಭೂತ ಸಿದ್ಧಾಂತಗಳಿಗೆ ಅನುಗುಣವಾಗಿ ನಮ್ಮ ದೇಶದ ಸಂವಿಧಾನವನ್ನು ಬದಲಾಯಿಸುವ ಹಿಡನ್ ಅಜೆಂಡ ಹೊಂದಿರುವ ಬಿಜೆಪಿ, ಸಮಯಕ್ಕೆ ಅನುಗುಣವಾಗಿ ತನ್ನ ಬಣ್ಣ ಬದಲಾಯಿಸಿಕೊಂಡು ರಾಜಕೀಯ ಹೇಳಿಕೆಗಳನ್ನು ನೀಡುತ್ತಿದೆ ಜನಸಂಘದ ಕಾಲದಿಂದಲೂ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿರುವ ಬಿಜೆಪಿ ಆಯಾ ಸಂದರ್ಭದಲ್ಲಿ ಸಂಘ ಪರಿವಾರದ ವೇದಿಕೆಗಳಲ್ಲಿ, ನಾಯಕರ ಹೇಳಿಕೆಗಳಲ್ಲಿ ನಿರಂತರವಾಗಿ ನಮ್ಮ ದೇಶದ ಸಂವಿಧಾನವನ್ನು ಮನುಸ್ಮೃತಿಗೆ ಅನುಗುಣವಾಗಿ ಮೂಲಭೂತವಾದಕ್ಕೆ ಪೂರಕವಾಗಿ ಬದಲಾವಣೆ ಮಾಡುವ ಹೇಳಿಕೆಗಳನ್ನು ನೀಡಿಕೊಂಡು ಬಂದಿರುತ್ತದೆ ಎಂದಿದ್ದಾರೆ.

ದೆಹಲಿಯ ಖಾಸಗಿ ಮಾಧ್ಯಮದಲ್ಲಿ ಸಂದರ್ಶನ ಒಂದರಲ್ಲಿ ಮಾತನಾಡಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಮತ್ತು ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರ ಸಂದರ್ಶನದ ಆಯ್ದ ಭಾಗವನ್ನು ತಿರುಚಿ ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಒಳಪಡಿಸುವ ವ್ಯರ್ಥ ಪ್ರಯತ್ನದ ಮೂಲಕ ಬಿಜೆಪಿ ಮತ್ತು ಬಿಜೆಪಿ ನಾಯಕರು ತಮ್ಮ ರಾಜಕೀಯ ಹತಾಶ ಭಾವನೆಯನ್ನು ಗೋಸುಂಬೆ ಬಣ್ಣದ ರೀತಿ ಸ್ಪರ್ಧೆಗೆ ಬಿದ್ದು ಹೊರಹಾಕಿದ್ದಾರೆ. ಕರ್ನಾಟಕದ ಸಂಸದರು ಈ ರಾಷ್ಟ್ರೀಯ ಬೆತ್ತಲೆ ನಾಟಕದಲ್ಲಿ ಬಹಳ ನಾಜೂಕಾಗಿ ಗೆಜ್ಜೆಗಳನ್ನು ಕಟ್ಟಿಕೊಂಡು ತಾಳಕ್ಕೆ ಅನುಗುಣವಾಗಿ ನೃತ್ಯ ಮಾಡುವ ನಾಟಕ ಮಾಡಿದ್ದಾರೆ. ಡಿ. ಕೆ.ಶಿವಕುಮಾರ್ ರವರನ್ನು ಒಳಗೊಂಡಂತೆ ಕಾಂಗ್ರೆಸ್ ಪಕ್ಷದ ಮತ್ತು ಕಾಂಗ್ರೆಸ್ ಪಕ್ಷದ ನಾಯಕರ ಸಂವಿಧಾನದ ಬದ್ಧತೆಯನ್ನು ಪ್ರಶ್ನಿಸುವ ನೈತಿಕತೆಯನ್ನು ಸಂಘ ಪರಿವಾರದ ಅಥವಾ ಬಿಜೆಪಿಯ ಯಾವೊಬ್ಬ ನಾಯಕರೂ ಉಳಿಸಿಕೊಂಡಿಲ್ಲ.

ಡಾ. ಅಂಬೇಡ್ಕರ್ ಅವರ ಅಧ್ಯಕ್ಷತೆಯಲ್ಲಿ ರಚಿಸಿ ಆತ್ಮಾರ್ಪಣೆ ಮಾಡಿಕೊಂಡ ನಮ್ಮ ದೇಶದ ಸಂವಿಧಾನವನ್ನು ಮತ್ತು ತ್ರಿವರ್ಣ ಧ್ವಜವನ್ನು ಸಾರಾಸಗಟಾಗಿ ವಿರೋಧಿಸಿದ ಸಂಘ ಪರಿವಾರದ ಮತ್ತು ಬಿಜೆಪಿಯ ಮೂಲ ಜನಸಂಘ ಅನೇಕ ಸಂದರ್ಭಗಳಲ್ಲಿ ಸಾರ್ವಜನಿಕವಾಗಿ ಅಂದಿನಿಂದಲೂ ಸಂವಿಧಾನವನ್ನು ವಿರೋಧಿಸಿ ನಮ್ಮ ದೇಶಕ್ಕೆ ಮನಸ್ಮೃತಿಯ ಕಾನೂನನ್ನು ಪ್ರತಿಪಾದಿಸಿಕೊಂಡು ಬಂದಿರುತ್ತಾರೆ. ಇದಕ್ಕೆ ಪೂರಕವಾಗಿ ಈ ಹೇಳಿಕೆಗಳನ್ನು ಗಮನಿಸಬಹುದು:

RSS Mouthpiece, the organizer in its issue dated November 30th 1949 stated: “The worst thing about the new constitution is that there is nothing Bharathiya can say about it. The constitution’s drafters have incorporated elements of British, American, Canadian, Swiss and sundry other Constitutions”

“But there is no trace of ancient Bharatiya constitutional laws, institutions, nomenclature and phraseology in it.. in our Constitution, there is not mention of the unique constitutional development in ancient Bharat. Manu’s Laws long pre-existed Lycurgus of Sparta or Solon of Persia…. But to our constitutional pundits that means nothing”

VD Savarkar made the following assertion : Manusmruti is that scripture which is most worship able after Vedas for our Hindu nation and which from ancient times has become the basic of our culture- customs thought and practice. This book for centuries has codified the spiritual and divine march of our nation.

“ Even today the rules followed by crores of Hindus in their lives and practice originate from Manusmruti is Hindu Law”

ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರವರ ಸಂಘಟನಾ ಸಾಮರ್ಥ್ಯದಿಂದ ಕಂಗೆಟ್ಟಿರುವ ರಾಜ್ಯದ ಮತ್ತು ರಾಷ್ಟ್ರದ ಬಿಜೆಪಿ ನಾಯಕರು ಅವರನ್ನು ಕಟ್ಟಿ ಹಾಕಲು ಹಲವಾರು ವಾಮ ಮಾರ್ಗಗಳನ್ನು ಮೊದಲಿನಿಂದಲೂ ಮಾಡಿಕೊಂಡು ಬಂದಿರುತ್ತಾರೆ. ಹಿಂದಿನ ಗುಜರಾತ್ ರಾಜ್ಯಸಭಾ ಚುನಾವಣೆಯಲ್ಲಿ ದಿವಂಗತ ಅಹಮದ್ ಪಟೇಲ್ ರವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆಲ್ಲಲು ಕಾರಣಕರ್ತರಾದ ಡಿ.ಕೆ. ಶಿವಕುಮಾರ್ ರವರ ಮೇಲೆ ಕೇಂದ್ರದ ತನಿಕಾ ಸಂಸ್ಥೆಗಳನ್ನು ಬಳಸಿಕೊಂಡು ತೊಂದರೆ ನೀಡಿ, ತಿಹಾರ್ ಜೈಲಿಗೆ ಕಳುಹಿಸಲಾಯಿತು. ಈಗ ಖಾಸಗಿ ಚಾನೆಲ್ ಕಾರ್ಯಕ್ರಮವನ್ನು ಬಳಸಿಕೊಂಡು ಅವರನ್ನು ಹಣಿಯುವ ವ್ಯರ್ಥ ಪ್ರಯತ್ನ ನಡೆಯುತ್ತಿದೆ.

ನಮ್ಮ ಸಂವಿಧಾನದ ಅಡಿಯಲ್ಲಿ ಸ್ವತಂತ್ರ ನ್ಯಾಯಾಂಗ ವ್ಯವಸ್ಥೆಯನ್ನು ನಿರ್ಮಾಣ ಮಾಡಲಾಗಿರುತ್ತದೆ. ನ್ಯಾಯಾಂಗ ವ್ಯವಸ್ಥೆ ಗಟ್ಟಿಯಾಗಿರುವವರೆಗೆ ಪ್ರಜಾಪ್ರಭುತ್ವದ ರಕ್ಷಣೆ ಸಾಧ್ಯವಾಗುತ್ತದೆ. ದೆಹಲಿ ಹೈ ಕೋರ್ಟ್ ನ ನ್ಯಾಯಮೂರ್ತಿ ಒಬ್ಬರ ಅಧಿಕೃತ ನಿವಾಸದಲ್ಲಿ ಕಂತೆ ಕಂತೆ ನೋಟುಗಳು ಪತ್ತೆಯಾಗಿರುತ್ತದೆ. ಕೇಂದ್ರದ ಬಿಜೆಪಿ ಸರ್ಕಾರವು ನ್ಯಾಯಾಂಗದಲ್ಲೂ ಹಸ್ತಕ್ಷೇಪ ಮಾಡುತ್ತಿದೆ ಎಂದು ಗುರುತರ ಆರೋಪಗಳು ಕೇಳಿಬರುತ್ತಿದ್ದು, ದೆಹಲಿ ಪ್ರಕರಣ ಸಾರ್ವಜನಿಕ ಟೀಕೆಗೆ ಗುರಿಯಾಗಿರುತ್ತದೆ.

ವಾಸ್ತವಗಳನ್ನು ತಿರುಚುವ ಪ್ರವೃತ್ತಿಯನ್ನು ಬೆಳೆಸಿಕೊಂಡಿರುವ ಕೇಂದ್ರದ ಬಿಜೆಪಿ ಸರ್ಕಾರ, ಡಿ. ಕೆ. ಶಿವಕುಮಾರ್ ರವರ ಖಾಸಗಿ ಚಾನೆಲ್ ಸಂದರ್ಶನವನ್ನು ಮುಂದೆ ಮಾಡಿಕೊಂಡು ದೆಹಲಿ ನ್ಯಾಯದೀಷರ ಪ್ರಕರಣವನ್ನು ಹತ್ತಿಕ್ಕುವ ವ್ಯವಸ್ಥಿತ ಪ್ರಯತ್ನ ಮಾಡುತ್ತಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷವು ಬಿಜೆಪಿಯ ಇಂತಹ ವ್ಯವಸ್ಥಿತ ಪಿತೂರಿಯನ್ನು ಖಂಡಿಸುತ್ತದೆ. ಬಿಜೆಪಿ ಮತ್ತು ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇದ್ದರೆ ಸಂವಿಧಾನ ಬದಲಾಯಿಸುವುದ್ದಿಲ್ಲ ಎಂಬ ಘೋಷಣೆಯನ್ನು ಅಂಬೇಡ್ಕರ್ ರವರ ಹೆಸರಿನಲ್ಲಿ ಪ್ರಮಾಣ ಮಾಡಿ ಹೇಳಲು ಕಾಂಗ್ರೆಸ್ ಪಕ್ಷವು ಒತ್ತಾಯಿಸುತ್ತದೆ ಎಂದಿದ್ದಾರೆ.

BREAKING NEWS: ನನ್ನ ಕೊಲೆಗೆ ಯತ್ನ ನಡೆದಿದೆ: ಡಿಜಿ-ಐಜಿಪಿಗೆ MLC ರಾಜೇಂದ್ರ ದೂರು

BREAKING : ಕೇರಳದ ಸೀತಾದೇವಿ ಲವ್ ಕುಶ ದೇವಸ್ಥಾನಕ್ಕೆ ಭೇಟಿ ನೀಡಿದ ಸಂಸದೆ ಪ್ರಿಯಾಂಕಾ ಗಾಂಧಿ | WATCH VIDEO

Share. Facebook Twitter LinkedIn WhatsApp Email

Related Posts

‘ಆಪರೇಷನ್ ಸಿಂಧೂರ್’: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 25ಕ್ಕೂ ಹೆಚ್ಚು ದೇವಾಲಯಗಳಲ್ಲಿ ವಿಶೇಷ ಪ್ರಾರ್ಥನೆ | Operation Sindoor

09/05/2025 12:10 PM1 Min Read

BREAKING : ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ : ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್

09/05/2025 11:46 AM1 Min Read

ಮಹಾಲಕ್ಷ್ಮಿಯನ್ನು ಈ ಮಂತ್ರಗಳನ್ನು ದಿನಕ್ಕೆ 108 ಬಾರಿ ಪಠಿಸಿದರೆ ಹಣ, ಸಂಪತ್ತು, ಸಮೃದ್ಧಿಯು ಹೆಚ್ಚಾಗುತ್ತದೆ. ಧನಾಗಮನ ಖಂಡಿತ..

09/05/2025 11:00 AM4 Mins Read
Recent News

BREAKING : ಪಾಕಿಸ್ತಾನದಲ್ಲಿ ಅವ್ಯವಸ್ಥೆ? ಬಲೂಚಿಸ್ತಾನದ ಮೂರನೇ ಒಂದು ಭಾಗವನ್ನು ವಶಪಡಿಸಿಕೊಂಡ BLA

09/05/2025 1:17 PM

ಚಿಕ್ಕಮ್ಮನ ಮದುವೆಗೆ ವೀಸಾ ವಿಸ್ತರಣೆ : ಪಾಕಿಸ್ತಾನದ ಮೂವರು ಮಕ್ಕಳು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್ | India -Pak war

09/05/2025 12:53 PM

BREAKING : ಜಮ್ಮು, ಉಧಂಪುರದಿಂದ ದೆಹಲಿಗೆ ವಿಶೇಷ ರೈಲು ಘೋಷಣೆ ಮಾಡಿದ ಭಾರತೀಯ ರೈಲ್ವೆ | India-Pak war

09/05/2025 12:47 PM

BREAKING : ಕಾಶ್ಮೀರದಲ್ಲಿ ಭಾರತದೊಳಗೆ ನುಸುಳಲು ಯತ್ನಿಸುತ್ತಿದ್ದ 7 ಉಗ್ರರನ್ನು ಹತ್ಯೆಗೈದ ‘BSF’ | Watch Video

09/05/2025 12:44 PM
State News
KARNATAKA

‘ಆಪರೇಷನ್ ಸಿಂಧೂರ್’: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 25ಕ್ಕೂ ಹೆಚ್ಚು ದೇವಾಲಯಗಳಲ್ಲಿ ವಿಶೇಷ ಪ್ರಾರ್ಥನೆ | Operation Sindoor

By kannadanewsnow8909/05/2025 12:10 PM KARNATAKA 1 Min Read

ಉಡುಪಿ: ಭಾರತೀಯ ಸಶಸ್ತ್ರ ಪಡೆಗಳ ಆಪರೇಷನ್ ಸಿಂಧೂರ ಯಶಸ್ವಿಯಾಗಲಿ ಎಂದು ಪ್ರಾರ್ಥಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 25ಕ್ಕೂ…

BREAKING : ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ : ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್

09/05/2025 11:46 AM

ಮಹಾಲಕ್ಷ್ಮಿಯನ್ನು ಈ ಮಂತ್ರಗಳನ್ನು ದಿನಕ್ಕೆ 108 ಬಾರಿ ಪಠಿಸಿದರೆ ಹಣ, ಸಂಪತ್ತು, ಸಮೃದ್ಧಿಯು ಹೆಚ್ಚಾಗುತ್ತದೆ. ಧನಾಗಮನ ಖಂಡಿತ..

09/05/2025 11:00 AM

BIG NEWS : ಇಂದು ನಡೆಯುವ ಸಂಪುಟ ಸಭೆಯಲ್ಲಿ ‘ಜಾತಿ ಗಣತಿ’ ವರದಿ ಭವಿಷ್ಯ ನಿರ್ಧಾರ

09/05/2025 10:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.