Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚಿತ್ರದುರ್ಗದ ‘ಹಿರಿಯ ಪತ್ರಕರ್ತ ಡಿ.ಕುಮಾರಸ್ವಾಮಿ’ ಅವರಿಗೆ ‘ಕರ್ನಾಟಕ ಮಾಧ್ಯಮ ಅಕಾಡೆಮಿ’ ಪ್ರಶಸ್ತಿ

09/01/2026 9:53 PM

2024-25ನೇ ಸಾಲಿನ KAS ಪರೀಕ್ಷಾ ಪೂರ್ವ ತರಬೇತಿ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

09/01/2026 9:35 PM

ಸಾಗರದ ಮಾರಿಕಾಂಬ ಜಾತ್ರೆಗೆ ಭರ್ಜರಿ ಸಿದ್ಧತೆ: ನಾಳೆ ಶಾಸಕ ಗೋಪಾಲಕೃಷ್ಣ ಬೇಳೂರು ಪೋಸ್ಟರ್, ಕ್ಯಾಲೆಂಡರ್ ಬಿಡುಗಡೆ

09/01/2026 9:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಲೆಹರ್ ಸಿಂಗ್’ ಆರೋದ ಬಗ್ಗೆ ಈ ತಿರುಗೇಟು ಕೊಟ್ಟ ‘ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು’
KARNATAKA

‘ಲೆಹರ್ ಸಿಂಗ್’ ಆರೋದ ಬಗ್ಗೆ ಈ ತಿರುಗೇಟು ಕೊಟ್ಟ ‘ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು’

By kannadanewsnow0908/03/2025 6:30 PM

ಬೆಂಗಳೂರು: ರಾಜ್ಯಸಭಾ ಸದಸ್ಯರಾದ ರಾಜಸ್ಥಾನಿ ಲೆಹರ್ ಸಿಂಗ್ ಈ ದಿನ ಪತ್ರಿಕಾಗೋಷ್ಠಿ ಮೂಲಕ ಕಾಂಗ್ರೆಸ್ ಸರ್ಕಾರದ ಮೇಲೆ ಅನೇಕ ಆರೋಪಗಳನ್ನು ಮಾಡಿರುತ್ತಾರೆ. ತಾವೇ ಸ್ವತಃ ಅಲ್ಪಸಂಖ್ಯಾತ ಮಾರ್ವಾಡಿ ಸಮುದಾಯದವರೆಂದು ಹೇಳಿಕೊಂಡಿರುವ ಲೆಹರ್ ರವರು ಮುಸಲ್ಮಾನ್ ಸಮುದಾಯದ ಬಗ್ಗೆ ವಿಶೇಷವಾದ ಕಾಳಜಿಯನ್ನು ವ್ಯಕ್ತಪಡಿಸಿರುತ್ತಾರೆ. ಅವರ ಆರೋಪಗಳ ಬಗ್ಗೆ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಈ ಕೆಳಕಂಡಂತೆ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕರ್ನಾಟಕದ ಕಾಂಗ್ರೆಸ್ ಸರ್ಕಾರ ಜಸ್ಟಿಸ್ ಆನಂದ್ ಆಯೋಗದ ವಖ್ಫ್ ಆಸ್ತಿಗೆ ಸಂಬಂಧಪಟ್ಟಂತಹ ವರದಿಯನ್ನು ನಿಷ್ಕ್ರಿಯ ಗೊಳಿಸಿದೆ ಎಂದು ಆರೋಪಿಸಿರುವ ಇವರು, ಪ್ರಜ್ಞಾಪೂರ್ವಕವಾಗಿ ಕೇಂದ್ರ ಸರ್ಕಾರ ಸಾಚಾರ್ ಕಮಿಟಿಯ ವರದಿಯನ್ನು ಮೂಲೆಗೆ ತಳ್ಳಿರುವ ಕುರಿತು ಯಾವುದೇ ಅಭಿಪ್ರಾಯವನ್ನು ವ್ಯಕ್ತಪಡಿಸಿರುವುದಿಲ್ಲ. ಯಾವಾಗ ಈ ದೇಶದಲ್ಲಿ ಜಸ್ಟಿಸ್ ಸಾಚಾರ್ ಕಮಿಟಿ ವರದಿ ಲೋಕಸಭೆಯಲ್ಲಿ ಮಂಡನೆ ಆಯಿತು, ಯಾವ ಕಾರಣಕ್ಕಾಗಿ ಬಿಜೆಪಿ ಸರ್ಕಾರ ಇದುವರಿಗೆ ಜಸ್ಟಿಸ್ ಸಾಚಾರ್ ಕಮಿಟಿ ವರದಿಯನ್ನು ಯಾತವತ್ತಾಗಿ ಜಾರಿಗೆ ತರುವ ಪ್ರಾಮಾಣಿಕ ಪ್ರಯತ್ನವನ್ನು ಮಾಡಿರುವುದಿಲ್ಲ ಎಂಬುದನ್ನು ಹೇಳಲಿ. ಕರ್ನಾಟಕದಲ್ಲಿ ಕೇಂದ್ರ ಸರ್ಕಾರದ ಉದ್ದೇಶಿತ ವಖ್ಫ್ ಕಾಯ್ದೆಯನ್ನು ವಿರೋಧಿಸಿ ಸದನದಲ್ಲಿ ಗೊತ್ತುವಳಿಯನ್ನು ಅಂಗೀಕರಿಸುತ್ತಾರೆ ಎಂಬ ಕಾರಣದಿಂದ ಈ ದಿನ ಜಸ್ಟಿಸ್ ಆನಂದ್ ಅವರ ವರದಿಯನ್ನು ಇಟ್ಟುಕೊಂಡು ಲೆಹರ್ ಸಿಂಗ್ ರವರು ದೊಡ್ಡಮಟ್ಟದ ನಾಟಕ ಆಡಲು ಪ್ರಯತ್ನ ಪಡುತ್ತಿದ್ದಾರೆ ಎಂದಿದ್ದಾರೆ.

ಮುಸಲ್ಮಾನ್ ಜನಾಂಗದ ಮೇಲೆ ಅಷ್ಟೊಂದು ಪ್ರೀತಿ ಇದ್ದರೆ ಯಾವ ಕಾರಣಕ್ಕೆ ಒಬ್ಬ ರಾಜ್ಯಸಭಾ ಸದಸ್ಯರಾಗಿ ಸಾಚಾರ್ ಕಮಿಟಿಯ ವರದಿಯನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿಲ್ಲ ಮತ್ತು ಹಾಕುತ್ತಿಲ್ಲ ಎಂಬುದನ್ನು ಸ್ಪಷ್ಟಪಡಿಸಬೇಕು. ಕರ್ನಾಟಕದಲ್ಲಿ ಅವರದೇ ಪಕ್ಷದ ನಾಯಕರಾದ ಮಾನಪ್ಪಾಡಿರವರು ವಖ್ಫ್ ಆಸ್ತಿಗೆ ಸಂಬಂಧಪಟ್ಟಂತೆ ಕೊಟ್ಟ ವರದಿಯ ಬಗ್ಗೆ ಚಕಾರವನ್ನು ಎತ್ತುತ್ತಿಲ್ಲ. ಬಿಜೆಪಿಯ ಮಾನಪ್ಪಾಡಿರವರು ಸನ್ಮಾನ್ಯ ಬಿ.ಎಸ್ ಯೆಡಿಯೂರಪ್ಪ ನವರ ಮೇಲೆ ಸನ್ಮಾನ್ಯ ಬಿ.ವೈ.ವಿಜಯೇಂದ್ರರವರ ಮೇಲೆ ಗುರುತರವಾದ ಆರೋಪಗಳನ್ನು ಮಾಡಿ, ವಖ್ಫ್ ಆಸ್ತಿಯನ್ನು ಬಿಜೆಪಿ ನಾಯಕರು ಸಹ ಕಬಳಿಸಿರುತ್ತಾರೆ ಎನ್ನುವ ನೇರ ಆರೋಪವನ್ನು ಮಾಡಿರುತ್ತಾರೆ ಮತ್ತು ಈ ಸಂಬಂಧ ವಿಡಿಯೋಗಳನ್ನು ಬಿಡುಗಡೆ ಮಾಡಿರುತ್ತಾರೆ. ವ್ಯವಸ್ಥಿತವಾಗಿ ಪ್ರಜ್ಞಾಪೂರ್ವಕ ವಾಗಿ ತಮ್ಮ ಮರೆಗುಳಿತನವನ್ನು ಈ ವಿಚಾರದಲ್ಲಿ ಲೆಹರ್ ಸಿಂಗ್ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ವಖ್ಫ್ ಪ್ರಾಪರ್ಟಿಗೆ ಸಂಬಂಧಪಟ್ಟಂತೆ ಅಂದಿನ ಉಪ ಲೋಕಾಯುಕ್ತರಾದಂತಹ ಜಸ್ಟಿಸ್ ಆನಂದ್ ರವರು ನೀಡಿರುವ ವರದಿಯನ್ನು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಜಾರಿ ಮಾಡಲಿಲ್ಲ, ಈ ವರದಿಗೆ ಸಾರ್ವಜನಿಕರ ಹಣವನ್ನು ವ್ಯಯ ಮಾಡಲಾಗಿದೆ ಎನ್ನುವ ಲೆಹರ್ ಸಿಂಗ್ ರವರು ಅದೇ ಮಾನದಂಡವನ್ನು ಜಸ್ಟಿಸ್ ಸಾಚಾರ್ ವರದಿಗೆ ಸಂಬಂಧಪಟ್ಟಂತೆ ಹೇಳಲು ಬಯಸುತ್ತಾರೆಯೇ? ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕದಲ್ಲಿ ಲಾಟರಿ ಮುಖಾಂತರ ರಾಜಕೀಯ ಅಧಿಕಾರಗಳನ್ನು ಸಂಪಾದನೆ ಮಾಡಿದ ಅನೇಕ ರಾಜಕಾರಣಿಗಳನ್ನು ಕಾಣಬಹುದು. ಅಂತವರಲ್ಲಿ ಇವರು ಸಹ ಒಬ್ಬರು! ಇವರು ಬೆಂಗಳೂರಿನ ಸಿಟಿ ಮಾರ್ಕೆಟ್ ನಲ್ಲಿ ಯಾವ ರೀತಿಯ ವ್ಯಾಪಾರೋದ್ಯಮವನ್ನು ಮಾಡಿಕೊಂಡಿದ್ದರು ಎಂಬುದನ್ನು ಜನರಿಗೆ ಸ್ಪಷ್ಟ ಪಡಿಸಲಿ. ವಾಣಿವಿಲಾಸ ರಸ್ತೆಯಲ್ಲಿ ಇವರು ಒಂದು ಖಾಸಗಿ ವೈದ್ಯಕೀಯ ಉಪಕರಣಗಳ ಮಾರಾಟದ ಕಂಪನಿಯನ್ನು ಇಟ್ಟುಕೊಂಡು ಸರ್ಕಾರದ ಗುತ್ತಿಗೆಗಳನ್ನು ಪಡೆದಿದ್ದು ಸುಳ್ಳೇ? ಒಂದು ಕಂಪನಿಯ ಆರೋಪಗಳು ಇದ್ದು ಇದು ನಿಜವೇ ಸುಳ್ಳೇ? ಈ ಕಂಪನಿಯ ಮುಖಾಂತರ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಹಿಂದಿನ ಕುಮಾರಸ್ವಾಮಿ ರವರ ಸಮಿಶ್ರ ಸರ್ಕಾರದಲ್ಲಿ ವಸ್ತುಗಳನ್ನು ದಾಸ್ತಾನುಗಳನ್ನು ಸರಬರಾಜು ಮಾಡಿ ಅವ್ಯವಹಾರ ಮಾಡಿರುವ ಆರೋಪದ ಬಗ್ಗೆ ತನಿಖೆಗೆ ಒತ್ತಾಯಿಸುವರೇ? ಸದರಿ ಕಂಪನಿಯಲ್ಲಿ ಇವರ ಯಾವುದೇ ಹಿತಾಸಕ್ತಿ ಪಾಲುದಾರಿಕೆ ಇರಲಿಲ್ಲವೆಂಬುದನ್ನು ಸ್ಪಷ್ಟಪಡಿಸಿ ರಾಜ್ಯ ಸರ್ಕಾರಕ್ಕೆ ನ್ಯಾಯಾಂಗ ತನಿಖೆ ಮಾಡಲು ಒತ್ತಾಯಿಸುವರೇ? ಕೇಳಿದ್ದಾರೆ.

ಜಸ್ಟಿಸ್ ಆನಂದ್ ರವರ ವರದಿಯನ್ನು ಲೋಕಸಭಾ ಅಧ್ಯಕ್ಷರಿಗೆ ಮತ್ತು ಕೇಂದ್ರದ ಸಚಿವರಿಗೆ ಮತ್ತು ಜಾಯಿಂಟ್ ಪಾರ್ಲಿಮೆಂಟರಿ ಕಮಿಟಿಯ ಮುಂದೆ ಮಂಡಿಸುವುದಾಗಿ ಹೇಳಿರುತ್ತಾರೆ. ಅವರು ರಾಜ್ಯಸಭಾ ಸದಸ್ಯರಾಗಿರುವುದರಿಂದ ಸಾಚಾರ್ ಕಮಿಟಿಯ ವರದಿ ಉಚಿತವಾಗಿ ಅವರಿಗೆ ಸಿಗಬಹುದು. ಅದನ್ನು ಸಹ ಪಡೆದುಕೊಂಡು ಲೋಕಸಭಾ ಸ್ಪೀಕರ್ ಅವರಿಗೆ ಅವರ ಪಕ್ಷದ ಅಧ್ಯಕ್ಷರಿಗೆ ಮತ್ತು ಪ್ರಧಾನ ಮಂತ್ರಿಗಳಿಗೆ ವರದಿಯ ಪ್ರತಿಯನ್ನು ನೀಡಿ ಸಾರ್ವಜನಿಕರ ಮತ್ತು ಮುಸ್ಲಿಮರ ಹಿತಾಸಕ್ತಿಯ ಕಾರಣಕ್ಕಾಗಿ ಸಾಚಾರ್ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಲು ಕೋರಬೇಕಾಗಿ ನಾವು ಕಾಂಗ್ರೆಸ್ ಪಕ್ಷದ ಪರವಾಗಿ ವಿನಂತಿ ಮಾಡುತ್ತೇವೆ ಎಂದಿದ್ದಾರೆ.

ಅಲ್ಪಸಂಖ್ಯಾತರಾದ ಲೆಹರ್ ಸಿಂಗ್ ರವರು ಇನ್ನೊಂದು ಅಲ್ಪಸಂಖ್ಯಾತರ ಸಮುದಾಯದ ಬಗ್ಗೆ ಇಟ್ಟಿರುವ ಕಾಳಜಿಯನ್ನು ನಾವು ಪ್ರಶಂಸಿರುತ್ತೇವೆ. ಆದರೆ ಈ ಕಾಳಜಿ ರಾಜಕೀಯ ಕಾರಣಕ್ಕೆ ಸೀಮಿತವಾಗದೆ ಸಾರ್ವಜನಿಕ ಹಿತಾಸಕ್ತಿಯಿಂದ ನಡೆಯಬೇಕಾಗಿರುವುದರಿಂದ ಇಂತಹ ತಂತ್ರಗಾರಿಕೆ ಮಾತುಗಳನ್ನು ಬಿಟ್ಟು ಅಥವಾ ಶಾಮೀಲುತನದ ಮಾತುಗಳನ್ನು ಬಿಟ್ಟು ಸಾರ್ವಜನಿಕ ಹಿತಾಸಕ್ತಿಗೆ ಅನುಗುಣವಾಗಿ ಕರ್ನಾಟಕ ರಾಜ್ಯದ ಹಿತಾಸಕ್ತಿಗೆ ಅನುಗುಣವಾಗಿ ಈ ನೆಲದ, ಈ ಮಣ್ಣಿನ, ಈ ಜಲದ ರಕ್ಷಣೆಗಾಗಿ ಕಿಂಚಿತ್ತಾದರು ಗೌರವ ಸಲ್ಲಿಸಬೇಕೆಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷವು ನಾಟಕಕಾರ ಸನ್ಮಾನ್ಯ ಲೆಹರ್ ಸಿಂಗ್ ರವರನ್ನು ಅಗ್ರಹ ಪೂರ್ವಕವಾಗಿ ಒತ್ತಾಯಿಸಿದ್ದಾರೆ.

SHOCKING NEWS: ‘ವಾಟ್ಸ್ ಆಪ್’ ಗ್ರೂಪಿನಿಂದ ತೆಗೆದು ಹಾಕಿದ್ದಕ್ಕೆ ಅಡ್ಮಿನ್ ಗುಂಡಿಕ್ಕಿ ಹತ್ಯೆ | WhatsApp group

ಮ್ಯೂಚುವಲ್ ಫಂಡ್ ಹೂಡಿಕೆಯಲ್ಲಿ ಪುರುಷರಿಗಿಂತ ಮಹಿಳಾ ಹೂಡಿಕೆದಾರರು ಮೇಲುಗೈ ಸಾಧಿಸಿದ್ದಾರೆ: ವರದಿ | Mutual fund

Share. Facebook Twitter LinkedIn WhatsApp Email

Related Posts

ಚಿತ್ರದುರ್ಗದ ‘ಹಿರಿಯ ಪತ್ರಕರ್ತ ಡಿ.ಕುಮಾರಸ್ವಾಮಿ’ ಅವರಿಗೆ ‘ಕರ್ನಾಟಕ ಮಾಧ್ಯಮ ಅಕಾಡೆಮಿ’ ಪ್ರಶಸ್ತಿ

09/01/2026 9:53 PM2 Mins Read

2024-25ನೇ ಸಾಲಿನ KAS ಪರೀಕ್ಷಾ ಪೂರ್ವ ತರಬೇತಿ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

09/01/2026 9:35 PM1 Min Read

ಸಾಗರದ ಮಾರಿಕಾಂಬ ಜಾತ್ರೆಗೆ ಭರ್ಜರಿ ಸಿದ್ಧತೆ: ನಾಳೆ ಶಾಸಕ ಗೋಪಾಲಕೃಷ್ಣ ಬೇಳೂರು ಪೋಸ್ಟರ್, ಕ್ಯಾಲೆಂಡರ್ ಬಿಡುಗಡೆ

09/01/2026 9:20 PM1 Min Read
Recent News

ಚಿತ್ರದುರ್ಗದ ‘ಹಿರಿಯ ಪತ್ರಕರ್ತ ಡಿ.ಕುಮಾರಸ್ವಾಮಿ’ ಅವರಿಗೆ ‘ಕರ್ನಾಟಕ ಮಾಧ್ಯಮ ಅಕಾಡೆಮಿ’ ಪ್ರಶಸ್ತಿ

09/01/2026 9:53 PM

2024-25ನೇ ಸಾಲಿನ KAS ಪರೀಕ್ಷಾ ಪೂರ್ವ ತರಬೇತಿ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

09/01/2026 9:35 PM

ಸಾಗರದ ಮಾರಿಕಾಂಬ ಜಾತ್ರೆಗೆ ಭರ್ಜರಿ ಸಿದ್ಧತೆ: ನಾಳೆ ಶಾಸಕ ಗೋಪಾಲಕೃಷ್ಣ ಬೇಳೂರು ಪೋಸ್ಟರ್, ಕ್ಯಾಲೆಂಡರ್ ಬಿಡುಗಡೆ

09/01/2026 9:20 PM

ರಾತ್ರಿ ಸಮಯದಲ್ಲಿ ಮಾತ್ರ ತೆರೆದಿರುವ ಈ ದೇವಸ್ಥಾನಕ್ಕೆ ಭೇಟಿ ನೀಡಿದರೆ ನಿಮ್ಮ ಜೀವನದಲ್ಲಿನ ಕತ್ತಲು ಬೆಳಕಾಗುತ್ತೆ

09/01/2026 8:37 PM
State News
KARNATAKA

ಚಿತ್ರದುರ್ಗದ ‘ಹಿರಿಯ ಪತ್ರಕರ್ತ ಡಿ.ಕುಮಾರಸ್ವಾಮಿ’ ಅವರಿಗೆ ‘ಕರ್ನಾಟಕ ಮಾಧ್ಯಮ ಅಕಾಡೆಮಿ’ ಪ್ರಶಸ್ತಿ

By kannadanewsnow0909/01/2026 9:53 PM KARNATAKA 2 Mins Read

ಚಿತ್ರದುರ್ಗ: ಇಂದು ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ವಾರ್ಷಿಕ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. 2025ನೇ ಸಾಲಿನ ಮಾಧ್ಯಮ ಅಕಾಡೆಮಿ ಪ್ರಶಸ್ತಿಯು ಚಿತ್ರದುರ್ಗದ ಹಿರಿಯ…

2024-25ನೇ ಸಾಲಿನ KAS ಪರೀಕ್ಷಾ ಪೂರ್ವ ತರಬೇತಿ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

09/01/2026 9:35 PM

ಸಾಗರದ ಮಾರಿಕಾಂಬ ಜಾತ್ರೆಗೆ ಭರ್ಜರಿ ಸಿದ್ಧತೆ: ನಾಳೆ ಶಾಸಕ ಗೋಪಾಲಕೃಷ್ಣ ಬೇಳೂರು ಪೋಸ್ಟರ್, ಕ್ಯಾಲೆಂಡರ್ ಬಿಡುಗಡೆ

09/01/2026 9:20 PM

ರಾತ್ರಿ ಸಮಯದಲ್ಲಿ ಮಾತ್ರ ತೆರೆದಿರುವ ಈ ದೇವಸ್ಥಾನಕ್ಕೆ ಭೇಟಿ ನೀಡಿದರೆ ನಿಮ್ಮ ಜೀವನದಲ್ಲಿನ ಕತ್ತಲು ಬೆಳಕಾಗುತ್ತೆ

09/01/2026 8:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.