Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಮ್ಯಾನ್ಮಾರ್ ನಲ್ಲಿ 3.3 ತೀವ್ರತೆಯ ಭೂಕಂಪ | Earthquake

10/11/2025 6:58 AM

ನೋಂದಣಿ ಇಲ್ಲದಿದ್ರು ಒಪ್ಪಂದ ಮಾನ್ಯವಾಗಿರುತ್ತೆ ; ಕುಟುಂಬದ ಆಸ್ತಿ ವಿಭಜನೆ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

10/11/2025 6:55 AM

ಸಾರ್ವಜನಿಕರೇ ಗಮನಿಸಿ : ನಿಮ್ಮ `ಮೊಬೈಲ್’ ನಲ್ಲಿ ತಪ್ಪದೇ ಈ `ಸರ್ಕಾರಿ ಅಪ್ಲಿಕೇಶನ್’ ಇಟ್ಟುಕೊಳ್ಳಿ, ಹ್ಯಾಕಿಂಗ್’ನಿಂದ ನಿಮ್ಮನ್ನು ರಕ್ಷಿಸುತ್ತೆ.!

10/11/2025 6:50 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ‘ಹೆಚ್.ಡಿ ರೇವಣ್ಣ’ಗೆ ಬಿಗ್ ಶಾಕ್: ಮೇ.8ರವರೆಗೆ ‘SIT ಕಸ್ಟಡಿಗೆ’ ನೀಡಿ ಕೋರ್ಟ್ ಆದೇಶ | Prajwal Revanna Case
KARNATAKA

BREAKING: ‘ಹೆಚ್.ಡಿ ರೇವಣ್ಣ’ಗೆ ಬಿಗ್ ಶಾಕ್: ಮೇ.8ರವರೆಗೆ ‘SIT ಕಸ್ಟಡಿಗೆ’ ನೀಡಿ ಕೋರ್ಟ್ ಆದೇಶ | Prajwal Revanna Case

By kannadanewsnow0905/05/2024 8:05 PM

ಬೆಂಗಳೂರು: ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಬಿಗ್ ಶಾಕ್ ಅನ್ನು ಕೋರ್ಟ್ ನೀಡಿದೆ. ಅವರನ್ನು ಮೇ.8ರವರೆಗೆ 3 ದಿನಗಳ ಕಾಲ ಎಸ್ಐಟಿ ವಶಕ್ಕೆ ಹೆಚ್ಚಿನ ವಿಚಾರಣೆ ನಡೆಸೋದಕ್ಕೆ ನೀಡಿ, ಕೋರ್ಟ್ ಆದೇಶಿಸಿದೆ.

ಇಂದು ಬೌರಿಂಗ್ ಆಸ್ಪತ್ರೆಯಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಆರೋಗ್ಯ ತಪಾಸಣೆ ನಡೆಸಿದ ಬಳಿಕ, ಕೋರಮಂಗಲದಲ್ಲಿರುವಂತ 17ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಧೀಶರ ಮುಂದೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಕಣ್ಣೀರಿಟ್ಟರು ಎನ್ನಲಾಗುತ್ತಿದೆ.

ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಪ್ರಕರಣದಲ್ಲಿ ಅವರನ್ನು ತಮ್ಮ ವಶಕ್ಕೆ ನೀಡುವಂತೆ ಎಸ್ಐಟಿ ಅಧಿಕಾರಿಗಳು ನ್ಯಾಯಾಧೀಶರ ಮುಂದೆ ಮನವಿ ಮಾಡಿದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ಬೆಂಗಳೂರಿನ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರಾದಂತ ರವೀಂದ್ರ ಕುಮಾರ್ ಬಿ ಕಟ್ಟೀಮನಿ ಅವರು, ಮಹಿಳೆ ಅಪರಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಬಿಗ್ ಶಾಕ್ ಎನ್ನುವಂತೆ, 3 ದಿನಗಳ ಕಾಲ ಹೆಚ್ಚಿನ ವಿಚಾರಣೆಗಾಗಿ ಎಸ್ಐಟಿ ವಶಕ್ಕೆ ನೀಡಿ ಆದೇಶಿಸಿದ್ದಾರೆ.

ಅಪಹರಣ ಪ್ರಕರಣದಲ್ಲಿ ಬಂಧನ: ಈ ಬಗ್ಗೆ ಮೊದಲ ಬಾರಿಗೆ ಹೆಚ್.ಡಿ ರೇವಣ್ಣ ಏನು ಹೇಳಿದ್ರು ಗೊತ್ತಾ?

ಇಂದು ನ್ಯಾಯಾಧೀಶರ ಎದುರು ಹಾಜರುಪಡಿಸೋ ಮೊದಲು ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸೋದಕ್ಕಾಗಿ ಬೌರಿಂಗ್ ಆಸ್ಪತ್ರೆಗೆ ಎಸ್ಐಟಿ ಅಧಿಕಾರಿಗಳು ಕರೆದೊಯ್ದಿದ್ದರು. ಈ ವೇಳೆ ಮೊದಲಿಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು,  ನನ್ನ ಮೇಲೆ ಕಿಡ್ನ್ಯಾಪ್ ಕೇಸ್ ಹಾಕಿದ್ದಾರೆ. 40 ವರ್ಷ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ. ಯಾವುದೇ ರೀತಿಯ ಪುರಾವೆಗಳು ಇಲ್ಲದಿದ್ದರೂ ಅನಾವಶ್ಯಕವಾಗಿ ನನ್ನನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ. ನನ್ನ ವಿರುದ್ಧದ ಆರೋಪಗಳೆಲ್ಲವೂ ಸುಳ್ಳು. ಇದೊಂದು ದುರದ್ದೇಶಪೂರ್ವಕ ಬಂಧನವಾಗಿದೆ. ಯಾವುದೇ ಸಾಕ್ಷಿಗಳು ಸಹ ಇವರ ಬಳಿ ಇಲ್ಲ ಎಂದರು.

ಏಪ್ರಿಲ್‌.28ರಂದು ನಮ್ಮ ವಿರುದ್ಧ ಕೇಸ್‌ ದಾಖಲಿಸಿದರು. ಆಗ ನಮ್ಮ ಮೇಲೆ ಯಾವುದೇ ಸಾಕ್ಷಿಗಳು ಸಿಕ್ಕಿಲ್ಲವೆಂದು ಪುನಃ ಮೇ.2ರಂದು ನನ್ನ ಮೇಲೆ ಸಾಕ್ಷಿಗಳನ್ನು ಸೃಷ್ಟಿ ಮಾಡಿ ಸಿಕ್ಕಿ ಹಾಕಿಸಿದ್ದಾರೆ. ಇದರಲ್ಲಿ ಯಾವುದೇ ರೀತಿಯ ಪುರಾವೆಗಳು ಇಲ್ಲ. ಆದರೂ ನನ್ನನ್ನು ಸಿಕ್ಕಿ ಹಾಕಿಸಲಾಗಿದೆ. ಇದು ರಾಜಕೀಯ ಷಡ್ಯಂತ್ರವಾಗಿದೆ. ನನ್ನನ್ನು ರಾಜಕೀಯವಾಗಿ ಮುಗಿಸೋದಕ್ಕೆ ಹೀಗೆ ಮಾಡಲಾಗಿದೆ ಎಂಬುದಾಗಿ ವಾಗ್ಧಾಳಿ ನಡೆಸಿದರು.

ಅಪಹರಣ ಪ್ರಕರಣ: ಎಸ್ಐಟಿ ವಿಚಾರಣೆ ವೇಳೆ ಹೆಚ್.ಡಿ ರೇವಣ್ಣ ಹೇಳಿದ್ದೇನು ಗೊತ್ತಾ?

ನಿನ್ನೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ನಿನ್ನೆ ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಬಂಧಿಸಿದ ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ನಂತ್ರ, ಇಂದು ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.

ಎಸ್ಐಟಿ ಅಧಿಕಾರಿಗಳು ಕೇಳಿದಂತ ಪ್ರಶ್ನೆಗಳಿಗೆ ಸೂಕ್ತ ರೀತಿಯಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರು ಉತ್ತರಿಸಿಲ್ಲ ಎನ್ನಲಾಗುತ್ತಿದೆ. ಎಸ್ಐಟಿ ಅಧಿಕಾರಿಗಳು ಸಂತ್ರಸ್ತೆಯ ಬಗ್ಗೆ ಕೇಳಿದಂತ ಪ್ರಶ್ನೆಗಳಿಗೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರು, ಸಂತ್ರಸ್ತೆಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ನಮ್ಮ ಮನೆಯಲ್ಲಿ ಸಾಕಷ್ಟು ಜನ ಕೆಲಸ ಮಾಡುತ್ತಿದ್ದಾರೆ ಎಂದಿದ್ದಾರೆ ಎನ್ನಲಾಗುತ್ತಿದೆ.

ಸಂತ್ರಸ್ತೆಯ ಮಗನ ಹೇಳಿಕೆಯನ್ನು ಹೇಗೆ ನಂಬಲು ಸಾಧ್ಯ? ನಾನೇ ಕರೆದುಕೊಂಡು ಬರಲು ಹೇಳಿದ್ದೇನೆಂದು ಸಾಕ್ಷಿ ಏನಿದೆ ಎಂಬುದಾಗಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರು ಎಸ್ಐಟಿ ಅಧಿಕಾರಿಗಳಿಗೆ ಪ್ರಶ್ನಿಸಿರೋದಾಗಿ ಹೇಳಲಾಗುತ್ತಿದೆ.

ಇದಲ್ಲದೇ ಸಂತ್ರಸ್ತೆ ಜೊತೆ ನಾನು ಮಾತಾಡಿಲ್ಲ. ನೋಡಿಯೂ ಇಲ್ಲ. ರೇವಣ್ಣ ಎಂಬ ಹೆಸರಿನವರು ನಾನು ಒಬ್ಬನೇ ಇರೋದಾ? ನನ್ನ ಹೆಸರಿನವರು ಬೇರೆಯವರೂ ಇರಬಹುದು ಅಲ್ವ? ನನಗೆ ಏನೂ ಗೊತ್ತಿಲ್ಲ ಎಂಬುದಾಗಿ ಅಪಹರಣ ಪ್ರಕರಣದಲ್ಲಿ ಹೆಚ್.ಡಿ ರೇವಣ್ಣ ಎಸ್ಐಟಿ ಅಧಿಕಾರಿಗಳು ಕೇಳಿದಂತ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸಿಲ್ಲ ಎನ್ನಲಾಗುತ್ತಿದೆ.

ವರದಿ: ವಸಂತ ಬಿ ಈಶ್ವರಗೆರೆ

ಅಂಬೇಡ್ಕರ್ ಅವರನ್ನು ಸೋಲಿಸಿ ಅವಮಾನ ಮಾಡಿದ್ದು ಕಾಂಗ್ರೆಸ್: ಬಸವರಾಜ ಬೊಮ್ಮಾಯಿ

‘ಪ್ರಜ್ವಲ್‌ ರೇವಣ್ಣ’ ಲೈಂಗಿಕ ದೌರ್ಜನ್ಯ ಕೇಸ್: ‘SIT’ಯಿಂದ ಸಂತ್ರಸ್ತೆಯರ ನೆರವಿಗೆ ‘ಸಹಾಯವಾಣಿ’ ಆರಂಭ | Prajwal Revanna Case

Share. Facebook Twitter LinkedIn WhatsApp Email

Related Posts

BIG NEWS: ಕಾನೂನು ಸಂಘರ್ಷಕ್ಕೆ ಒಳಪಟ್ಟ ಮಕ್ಕಳಿಗೆ ‘ಬಾಲಾಪರಾಧಿ’ ಎನ್ನುವಂತಿಲ್ಲ: ಮಕ್ಕಳ ರಕ್ಷಣಾ ನಿರ್ದೇಶನಾಲಯ

10/11/2025 6:48 AM1 Min Read

SHOCKING : ಪೋಷಕರೇ ಎಚ್ಚರ : ನೀರಿನ ತೊಟ್ಟಿಗೆ ಬಿದ್ದು 3 ವರ್ಷದ ಮಗು ಸಾವು.!

10/11/2025 6:43 AM1 Min Read

ಪೋಷಕರೇ ಗಮನಿಸಿ : ನಿಮ್ಮ ಮಕ್ಕಳಿಗೆ ‘ಬ್ಲೂ ಆಧಾರ್ ಕಾರ್ಡ್’ ಮಾಡಿಸಲು ಜಸ್ಟ್ ಹೀಗೆ ಮಾಡಿ.!

10/11/2025 6:39 AM3 Mins Read
Recent News

BREAKING: ಮ್ಯಾನ್ಮಾರ್ ನಲ್ಲಿ 3.3 ತೀವ್ರತೆಯ ಭೂಕಂಪ | Earthquake

10/11/2025 6:58 AM

ನೋಂದಣಿ ಇಲ್ಲದಿದ್ರು ಒಪ್ಪಂದ ಮಾನ್ಯವಾಗಿರುತ್ತೆ ; ಕುಟುಂಬದ ಆಸ್ತಿ ವಿಭಜನೆ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

10/11/2025 6:55 AM

ಸಾರ್ವಜನಿಕರೇ ಗಮನಿಸಿ : ನಿಮ್ಮ `ಮೊಬೈಲ್’ ನಲ್ಲಿ ತಪ್ಪದೇ ಈ `ಸರ್ಕಾರಿ ಅಪ್ಲಿಕೇಶನ್’ ಇಟ್ಟುಕೊಳ್ಳಿ, ಹ್ಯಾಕಿಂಗ್’ನಿಂದ ನಿಮ್ಮನ್ನು ರಕ್ಷಿಸುತ್ತೆ.!

10/11/2025 6:50 AM

ಬಿಹಾರ ವಿಧಾನಸಭಾ ಚುನಾವಣೆ ಪ್ರಚಾರ ಮುಕ್ತಾಯ, ನಾಳೆ 122 ಸ್ಥಾನಗಳಿಗೆ ಕೊನೆಯ ಹಂತದಲ್ಲಿ ಮತದಾನ | Bihar Election

10/11/2025 6:50 AM
State News
KARNATAKA

BIG NEWS: ಕಾನೂನು ಸಂಘರ್ಷಕ್ಕೆ ಒಳಪಟ್ಟ ಮಕ್ಕಳಿಗೆ ‘ಬಾಲಾಪರಾಧಿ’ ಎನ್ನುವಂತಿಲ್ಲ: ಮಕ್ಕಳ ರಕ್ಷಣಾ ನಿರ್ದೇಶನಾಲಯ

By kannadanewsnow0910/11/2025 6:48 AM KARNATAKA 1 Min Read

ಬೆಂಗಳೂರು: ಕಾನೂನು ಸಂಘರ್ಷಕ್ಕೆ ಒಳಪಟ್ಟ ಮಕ್ಕಳಿಗೆ ಬಾಲಾಪರಾಧಿ ಎಂಬುದಾಗಿ ಕರೆಯುವುದು ಕಾನೂನು ಬಾಹಿರವಾಗಿದೆ. ಹಾಗೆ ಬಾಲಾಪರಾಧಿ ಎನ್ನುವಂತಿಲ್ಲ. ಇನ್ಮುಂದೆ ಅದರ…

SHOCKING : ಪೋಷಕರೇ ಎಚ್ಚರ : ನೀರಿನ ತೊಟ್ಟಿಗೆ ಬಿದ್ದು 3 ವರ್ಷದ ಮಗು ಸಾವು.!

10/11/2025 6:43 AM

ಪೋಷಕರೇ ಗಮನಿಸಿ : ನಿಮ್ಮ ಮಕ್ಕಳಿಗೆ ‘ಬ್ಲೂ ಆಧಾರ್ ಕಾರ್ಡ್’ ಮಾಡಿಸಲು ಜಸ್ಟ್ ಹೀಗೆ ಮಾಡಿ.!

10/11/2025 6:39 AM

GOOD NEWS : ರಾಜ್ಯದ 8 ಸರ್ಕಾರಿ ಜಿಲ್ಲಾಸ್ಪತ್ರೆಗಳಲ್ಲಿ `ಪಿಜಿ ವೈದ್ಯಕೀಯ ಕೋರ್ಸ್’ ಆರಂಭ : ಸರ್ಕಾರದಿಂದ ಮಹತ್ವದ ಆದೇಶ

10/11/2025 6:37 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.