ಚಿಕ್ಕಮಗಳೂರು: ಮಾಜಿ ಸಚಿವ ಮಾಧುಸ್ವಾಮಿ ಪ್ರಯಾಣ ಮಾಡುತ್ತಿದ್ದ ಕಾರು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕನಿಗೆ ಸಣ್ಣಪುಟ್ಟ ಗಾಯಾ ಆಗಿದ್ದಾವೆ ಎನ್ನಲಾಗಿದೆ. ಮಾಧುಸ್ವಾಮಿಯವರು ಎನ್‌ಡಿಎ ಅಭ್ಯರ್ಥಿ ಹಾಸನದ ಪ್ರಜ್ವಲ್‌ ರೇವಣ್ಣನವರ ಪರ ಪ್ರಚಾರ ಮಾಡಲು ತೆರಳುತ್ತಿದ್ದ ವೇಳೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಕಡೂರಿನ ಹೇಮಗಿರಿ ಬಳಿ ಈ ಘಟನೆ ನಡೆದಿದ್ದು, ಸದ್ಯ ಯಾವುದೇ ಅನಾಹುತ ಆಗಿಲ್ಲ ಎನ್ನಲಾಗಿದೆ. ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Share.
Exit mobile version