Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Good News : ಆಪರೇಷನ್ ಸಿಂಧೂರ್ ರೀಚಾರ್ಜ್ ಆಫರ್ ; ‘ಕ್ಯಾಶ್ ಬ್ಯಾಕ್’ ಜೊತೆಗೆ ‘ರಾಷ್ಟ್ರ ಸೇವೆ’ ಸೌಭಾಗ್ಯ

07/06/2025 9:34 PM

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

07/06/2025 9:21 PM

ಪಹಲ್ಗಾಮ್ ಭಯೋತ್ಪಾದಕ ದಾಳಿ ಖಂಡಿಸಿದ ಜರ್ಮನಿ, ಉಗ್ರರ ವಿರುದ್ಧದ ಹೋರಾಟಕ್ಕೆ ಬೆಂಬಲ

07/06/2025 9:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಚಿವ ಜಮೀರ್ ಆಹಮ್ಮದ್ ಖಾನ್ ಸಚಿವ ಸಂಪುಟದಿಂದ ವಜಾಮಾಡಿ: ಮಾಜಿ ಸಚಿವ ಎಂಪಿ.ರೇಣುಕಾಚಾರ್ಯ ಆಗ್ರಹ
KARNATAKA

ಸಚಿವ ಜಮೀರ್ ಆಹಮ್ಮದ್ ಖಾನ್ ಸಚಿವ ಸಂಪುಟದಿಂದ ವಜಾಮಾಡಿ: ಮಾಜಿ ಸಚಿವ ಎಂಪಿ.ರೇಣುಕಾಚಾರ್ಯ ಆಗ್ರಹ

By kannadanewsnow0901/11/2024 6:51 PM

ದಾವಣಗೆರೆ: ಅಲ್ಪಸಂಖ್ಯಾತ ಹಾಗೂ ವಕ್ಪ್ ಖಾತೆಯ ಸಚಿವ ಜಮೀರ್ ಆಹಮ್ಮದ್ ಖಾನ್ ಓರ್ವ ಮತಾಂಧ.ಕೂಡಲೇ ಇವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು. ಇಲ್ಲವೇ ಪಾಕಿಸ್ತಾನಕ್ಕೆ ಓಡಿಸಬೇಕು ಎಂದು ಮಾಜಿ ಸಚಿವ ಎ.ಪಿ.ರೇಣುಕಾಚಾರ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಚಿವ ಜಮೀರ್ ಆಹಮ್ಮದ್ ಖಾನ್ ಅಂತಹವರನ್ನು ಯಾವುದೇ ಕಾರಣಕ್ಕೂ ಸಚಿವ ಸಂಪುಟದಲ್ಲಿ ಇಟ್ಟುಕೊಳ್ಳಬಾರದು. ಇಲ್ಲದಿದ್ದರೆ, ರಾಜ್ಯದ ಜನತೆ ಕಾಂಗ್ರೆಸ್ ಪಕ್ಷವನ್ನು ವಿಧಾನಸೌಧದ ಮೂರನೇ ಮಹಡಿಯಿಂದ ಜಾಗ ಖಾಲಿ ಮಾಡಿಸುತ್ತಾರೆ ಎಂದು ಎಚ್ಚರಿಕೆ ಕೊಟ್ಟರು.

ಅಧಿಕಾರಿಗಳ ಮೂಲಕ ನೋಟೀಸ್ ಕೊಡಲು ಜಮೀರ್ ಅವರಿಗೆ ಅಧಿಕಾರ ಕೊಟ್ಡಿದ್ದು ಯಾರು?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಅಧಿಕಾರಿಗಳು ನೋಟೀಸ್ ಜಾರಿ ಮಾಡಿದ್ದಾರೆ ಎಂದು ಹೇಳಿರುವ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ ಎಂದು ಕಿಡಿಕಾರಿದರು.

ಜಮೀರ್ ಕೇವಲ ಮುಸ್ಲಿಂ ಸಮುದಾಯಕ್ಕೆ ಮಾತ್ರ ಸಚಿವರಲ್ಲ. ಅವರು ಇದನ್ನು ಮೊದಲು ಅರ್ಧಮಾಡಿಕೊಳ್ಳಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು
ಕೂಡಲೇ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು.ಇಲ್ಲದಿದ್ದರೆ, ಇದೇ 4 ರಂದು ಬಿಜೆಪಿ ಅಧ್ಯಕ್ಷರು ಕರೆಕೊಟ್ಟರುವ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಅತಿ ಹೆಚ್ಚು ಮುಸ್ಲಿಂರು ಇರುವ ರಾಷ್ಟ್ರಗಳಲ್ಲೇ ವಕ್ಪ್ ಬೋರ್ಡ್ ಇಲ್ಲ. ಜಾತ್ಯತೀತ ರಾಷ್ಟ್ರವಾಗಿರುವ ಭಾರತದಲ್ಲಿ ಒಂದು ಸಮುದಾಯಕ್ಕೆ ಪ್ರತ್ಯೇಕ ಬೋರ್ಡ್ ಅಗತ್ಯತೆ ಇದೆಯೇ ಎಂದು ಪ್ರಶ್ನೆ ಮಾಡಿದರು.

ಪಾಕಿಸ್ತಾನ, ಅಫ್ಘಾನಿಸ್ತಾನ, ಸಿರಿಯಾ, ಇರಾನ್, ಇರಾಕ್ ಅಂತಹ ದೇಶಗಳಲ್ಲೇ ವಕ್ಪ್ ಬೋರ್ಡ್ ಅಸ್ಥಿತ್ವದಲ್ಲಿ ಇಲ್ಲ. ಕೇವಲ ಆ ಸಮುದಾಯದ ಪು
ತುಷ್ಟೀಕರಣಕ್ಕಾಗಿ ಬ್ರಿಟಿಷರು ಜಾರಿಗೆ ತಂದಿದ್ಷ ಕಾಯ್ದೆಯನ್ನು ಹಿಂದಿನ ಪ್ರಧಾನಿಗಳು ಜಾರಿಗೆ ತಂದರು.

ದೇಶದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು, ಪಿ.ವಿ ನರಸಿಂಹ ರಾವ್ ಅವರುಗಳು ಮಾಡಿದ ಪ್ರಮಾಣದಿಂದ ಇಂತಹ ಸಮಸ್ಯೆ ಉಲ್ಭಣವಾಯಿತು ಎಂದು ವಾಗ್ದಾಳಿ ನಡೆಸಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತುಂಬಾ ಕಲಾವಿದರು. ಕೆಲವರು ಬಣ್ಷ ಹಚ್ಚಿಕೊಂಡು ನಟನೆ ಮಾಡಿದರೆ, ಇವರ ಮಾತ್ರ ಬಣ್ಣ ಇಲ್ಲದೆ, ನಟನೆ ಮಾಡುವ ಚತುರರು ಎಂದು ವ್ಯಂಗ್ಯವಾಡಿದರು.

ಗ್ಯಾರಂಟಿ ಯೋಜನೆಗಳನ್ನು ಹಂತಹಂತವಾಗಿ ನಿಲ್ಲಿಸಲು ಸರ್ಕಾರವೇ ಷಡ್ಯಂತ್ರ ನಡೆಸಿದೆ.ಶಕ್ತಿ ಯೋಜನೆಯನ್ನು ಪರಿಷ್ಕರಣೆ ಮಾಡುವುದಾಗಿ ಹೇಳಿರುವುದು ಇದರ ಮುನ್ಸೂಚನೆ ಎಂಬ ಎಂದು ಹೇಳಿದರು.

ಶಿವಕುಮಾರ್ ಅವರಿಗೆ ಯಾರು ಪತ್ರ ಬರೆದಿದ್ದಾರೆ ಎಂಬುದನ್ನು ಪತ್ರ ಬಿಡುಗಡೆ ಮಾಡಲಿ ಎಂದು ಬಹಿರಂಗ ಸವಾಲು ಹಾಕಿದರು.

ಪ್ರಧಾನಿಗೆ ಪತ್ರ

ರಾಜ್ಯಾದ್ಯಂತ ರೈತರ ಹಾಗೂ ಹಿಂದೂ ದೇವಾಲಯಗಳಿಗೆ ನೋಟೀಸ್ ನೀಡುತ್ತಿರುವ ವಕ್ಪ್ ಬೋರ್ಡ್ ಅನ್ನು ತಕ್ಷಣವೇ ರದ್ದುಪಡುಸಬೇತು ಎಂದು ಕೋರಿ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಅವರು ಪ್ರಧಾನಿಗೆ ಪತ್ರ ಬರೆದಿದ್ದಾರೆ. ಈ ಸಂಬಂಧ ಕಳೆದ 27/ರಂದು ಪ್ರಧಾನಿ ನರೇಂದ್ರ ಮೋದಿ ಅವರ ಕಚೇರಿಗೆ ಈ ಮೇಲ್ ಮಾಡಿರುವ ಅವರು, ವಕ್ಪ್ ಬೋರ್ಡ್ ಏಕೆ ರದ್ದುಪಡಿಸಬೇಕು ಎಂಬುದನ್ನು ಪತ್ರದಲ್ಲಿ ಸವಿಸ್ತರವಾಗಿ ಮನರಿಕೆ ಮಾಡಿಕೊಡುವ ಪ್ರಯತ್ನ ಮಾಡಿದ್ದಾನೆ.
ಶುಕ್ರವಾರ ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳಲ್ಲಿ ಮುಂದೆಯೇ ಪ್ರಧಾನಿ ಗೆ ಬರೆದಿರುವ ಪತ್ರವನ್ನು ಬಿಡುಗಡೆ ಮಾಡಿದರು.

ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಕ್ಪ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆಯಲಾಗಿದೆ. ಕರ್ನಾಟಕದಲ್ಲಿ ವಕ್ಫ್ ಮಂಡಳಿ, ರೈತರು, ಮಠ, ದೇವಸ್ಥಾನದ ಭೂಮಿಯನ್ನು ತನ್ನದೆಂದು ಹೇಳಿ ನೋಟೀಸ್ ಕಳುಹಿಸುತ್ತಿದೆ. ಇದು ಸಂವಿಧಾನದಲ್ಲಿನ ಸಮಾನತೆಯ ತತ್ವಕ್ಕೆ ವಿರುದ್ಧವಾಗಿದೆ. ಹೀಗಾಗಿ ವಕ್ಫ್ ಆಸ್ತಿಯನ್ನು ರಾಷ್ಟ್ರೀಕರಣಗೊಳಿಸುವಂತೆ ತಮ್ಮಲ್ಲಿ ಕೋರುತ್ತೇನೆ ಎಂದು ಪತ್ರದಲ್ಲಿ ಮನವಿ ಮಾಡಿದ್ದೇವೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ವಕ್ಫ್ ಕಾಯ್ದೆಗೆ ತಿದ್ದುಪಡಿ ತರುವ ಮಸೂದೆ ಸಂಬಂಧ ಜಂಟಿ ಸದನ ಸಮಿತಿ ರಚಿಸಿದ ಬಳಿಕ ವಕ್ಫ್ ಮಂಡಳಿ ನೋಟೀಸ್ ಕಳುಹಿಸುವುದು, ಆರ್​ಟಿಸಿಯಲ್ಲಿ ಹೆಸರು ಬದಲಾಯಿಸುವ ಘಟನೆಗಳು ಹೆಚ್ಚಾಗಿವೆ. ಹೀಗಾಗಿ ವಕ್ಫ್ ಆಸ್ತಿಯ ರಾಷ್ಟ್ರೀಕರಣದಿಂದ ಭೂಮಿಯ ಸಮಾನ ಹಂಚಿಕೆಯಾಗಲಿದೆ ಮತ್ತು ಪಟ್ಟಬದ್ರ ಹಿತಾಸಕ್ತಿಗಳ ಬಳಿ ಭೂಮಿ ಕ್ರೋಢೀಕರಣವಾಗುವುದು ನಿಯಂತ್ರಣವಾಗುತ್ತದೆ. ಹೀಗಾಗಿ ಎಲ್ಲಾ ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸುವಂತೆ ಕೋರುತ್ತೇನೆ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಸಿ.ಪಿ.ಯೋಗೇಶ್ವರ್ ಕುಟುಂಬಕ್ಕೆ ಸಂಬಂಧಿಸಿದ ಯಾವುದೇ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ಆದೇಶ

BIG NEWS : ಭಾರತದ ಮೊದಲ ಅನಲಾಗ್ ಬಾಹ್ಯಾಕಾಶ ಮಿಷನ್ ಆರಂಭಿಸಿದ `ಇಸ್ರೋ’ | ISRO

Share. Facebook Twitter LinkedIn WhatsApp Email

Related Posts

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

07/06/2025 9:21 PM1 Min Read

BREAKING: ಬೆಂಗಳೂರು ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ- ಸಿಎಂ ಸಿದ್ಧರಾಮಯ್ಯ ಘೋಷಣೆ

07/06/2025 9:13 PM1 Min Read

BREAKING: ಜಮೀನಿನ ವಿಚಾರಕ್ಕೆ ಅಣ್ಣನ ಮಗನನ್ನೇ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಚಿಕ್ಕಪ್ಪ

07/06/2025 9:08 PM1 Min Read
Recent News

Good News : ಆಪರೇಷನ್ ಸಿಂಧೂರ್ ರೀಚಾರ್ಜ್ ಆಫರ್ ; ‘ಕ್ಯಾಶ್ ಬ್ಯಾಕ್’ ಜೊತೆಗೆ ‘ರಾಷ್ಟ್ರ ಸೇವೆ’ ಸೌಭಾಗ್ಯ

07/06/2025 9:34 PM

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

07/06/2025 9:21 PM

ಪಹಲ್ಗಾಮ್ ಭಯೋತ್ಪಾದಕ ದಾಳಿ ಖಂಡಿಸಿದ ಜರ್ಮನಿ, ಉಗ್ರರ ವಿರುದ್ಧದ ಹೋರಾಟಕ್ಕೆ ಬೆಂಬಲ

07/06/2025 9:16 PM

BREAKING: ಬೆಂಗಳೂರು ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ- ಸಿಎಂ ಸಿದ್ಧರಾಮಯ್ಯ ಘೋಷಣೆ

07/06/2025 9:13 PM
State News
KARNATAKA

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

By kannadanewsnow0907/06/2025 9:21 PM KARNATAKA 1 Min Read

ಬೆಂಗಳೂರು: ಆರ್ ಸಿ ಬಿ ವಿಜಯೋತ್ಸವ ಕಾರ್ಯಕ್ರಮದ ವೇಳೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಅಭಿಮಾನಿಗಳು…

BREAKING: ಬೆಂಗಳೂರು ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ- ಸಿಎಂ ಸಿದ್ಧರಾಮಯ್ಯ ಘೋಷಣೆ

07/06/2025 9:13 PM

BREAKING: ಜಮೀನಿನ ವಿಚಾರಕ್ಕೆ ಅಣ್ಣನ ಮಗನನ್ನೇ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಚಿಕ್ಕಪ್ಪ

07/06/2025 9:08 PM

ರಾಜ್ಯದಲ್ಲಿಂದು 57 ಜನರಿಗೆ ಕೊರೋನಾ ಪಾಸಿಟೀವ್: ಸೋಂಕಿಗೆ ಇಬ್ಬರು ಬಲಿ | Covid19 Update

07/06/2025 9:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.