Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಯಾರೂ ಆತಂಕಕ್ಕೊಳಗಾಗಬೇಡಿ: ಪ್ರಧಾನಿ ಮೋದಿ ಕರೆಗೆ ತಪ್ಪು ಅರ್ಥ ಬೇಡ; ದೇಶದಲ್ಲಿ ಪೆಟ್ರೋಲ್, ಡೀಸೆಲ್ ದಾಸ್ತಾನು ಸಮೃದ್ಧವಾಗಿದೆ’ ಎಂದ ಕೇಂದ್ರ ಸರ್ಕಾರ

ಸಂಭ್ರಮಿಸಬೇಕಾದ ಹುಟ್ಟುಹಬ್ಬವೇ ಸಾವಿನ ದಿನವಾಯ್ತು; ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ

Papaya Eating Benefits: ಆರೋಗ್ಯದ ಖಜಾನೆ ಈ ಪಪ್ಪಾಯಿ: ಖಾಲಿ ಹೊಟ್ಟೆಯಲ್ಲಿ ತಿಂದರೆ ಸಿಗುತ್ತೆ ಐದು ಲಾಭ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡಲು RBI ಹೊಸ ಘೋಷಣೆ: ಮಾಜಿ ಶಾಸಕ ತೇಲ್ಕೂರ ಅಭಿನಂದನೆ
KARNATAKA

ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡಲು RBI ಹೊಸ ಘೋಷಣೆ: ಮಾಜಿ ಶಾಸಕ ತೇಲ್ಕೂರ ಅಭಿನಂದನೆ

By ವಸಂತ ಬಿ ಈಶ್ವರಗೆರೆ

ಕಲಬುರಗಿ: ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿ ಐ) ಹೊಸ ಘೋಷಣೆಯನ್ನು ಮಾಡಿದೆ. ಕೃಷಿ ಸಾಲದ ಮೇಲಿನ ಮಿತಿಯನ್ನು ಏರಿಕೆ ಮಾಡಲಾಗಿದ್ದು, 2025ರ ಜನವರಿ 1 ರಿಂದ ರೈತರು ಈ ಹೊಸ ಘೋಷಣೆಯ ಸಹಾಯವನ್ನು ಪಡೆಯಬಹುದು. ಆರ್ ಬಿ ಐ ನ ಈ ಘೋಷಣೆಯಿಂದ ದೇಶದ ಸುಮಾರು ಶೇ 86ರಷ್ಟು ಸಣ್ಣ ರೈತರಿಗೆ ಅನುಕೂಲವಾಗಲಿದೆ ಎಂದು ಅಂದಾಜಿಸಲಾಗಿದೆ. ಆರ್ ಬಿ ಐ ನ. ಈ ಘೊಷಣೆಗೆ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಆರ್ ಬಿ ಐ ಗೆ ಅಭಿನಂದನೆ ಸಲ್ಲಿಸಿದರು.

ಈ ಕುರಿತು ಪಾತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಆರ್ ಬಿ ಐ ನಹೊಸ ಗವರ್ನರ್ ಆಗಿ ಅಧಿಕಾರವಹಿಸಿಕೊಂಡ ಸಂಜಯ್ ಮಲ್ಲೊತ್ರಾ ಅವರು ಮಾಡಿದ ಮೊದಲ ಘೋಷಣೆ ಇದಾಗಿದೆ. ರೈತರಿಗೆ ಸುಲಭವಾಗಿ ಹೆಚ್ಚು ಮೊತ್ತದ ಕೃಷಿ ಸಾಲ ಲಭ್ಯವಾಗುವಂತೆ ಮಾಡುವ ಮೂಲಕ ಕೃಷಿ ಕ್ಷೇತ್ರದ ಉತ್ತೇಜನಕ್ಕೆ ಒತ್ತು ನೀಡಲಾಗುತ್ತದೆ , ಭಾರತೀಯ ರಿಸರ್ವ್ ಬ್ಯಾಂಕ್ ಅಡವು ರಹಿತ ಕೃಷಿ ಸಾಲದ ಮಿತಿಯನ್ನು 1.6 ಲಕ್ಷ ರೂ.ಗಳಿಂದ 2 ಲಕ್ಷ ರೂಪಾಯಿಗಳಿಗೆ ಏರಿಕೆ ಮಾಡಿದೆ. ಈ ಹೊಸ ಘೋಷಣೆ 2025ರ ಜನವರಿ 1 ರಿಂದ ಜಾರಿಗೆ ಬರಲಿದೆ.

ಈ ಘೋಷಣೆಯಿಂದಾಗಿ ರೈತರಿಗೆ ಅನುಕೂಲವಾಗಲಿದ್ದು, ಕಡಿಮೆ ಮೊತ್ತದ ಸಾಲಕ್ಕೆ ಮನೆ, ಜಮೀನು ಅಡವಿಡುವ ಪ್ರಶ್ನೆಯೇ ಬರುವುದಿಲ್ಲ. ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಈ ಘೋಷಣೆಯಿಂದ ಸಹಾಯಕವಾಗಲಿದೆ. ಇದರಿಂದಾಗಿ ಕೃಷಿ ಚಟುವಟಿಕೆಗಳಿಗೂ ಅನುಕೂಲವಾಗಿದೆ.

ದೇಶದ ರೈತರಿಗೆ ಅನುಕೂಲ ಮಾಡಿಕೊಡಲು ಕಾಲ ಕಾಲಕ್ಕೆ ಕೃಷಿ ಸಾಲದ ಮೇಲಿನ ಮಾರ್ಗಸೂಚಿಯನ್ನು ಪರಿಷ್ಕರಣೆ ಮಾಡಲಾಗುತ್ತದೆ. ಅಡವು ರಹಿತ ಕೃಷಿ ಸಾಲದ ಮಿತಿ ಏರಿಕೆಯಿಂದಾಗಿ ದೇಶದ ಶೇ 86ರಷ್ಟು ಸಣ್ಣ ರೈತರಿಗೆ ಅನುಕೂಲವಾಗಲಿದೆ ಎಂದು ಆರ್ ಬಿಐ ಹೇಳಿದ್ದು.

ಈಗಾಗಲೇ ಬ್ಯಾಂಕುಗಳಿಗೆ ಆರ್ ಬಿ ಐ ಕೃಷಿ ಸಾಲದ ವಿಚಾರದಲ್ಲಿ ಮಾರ್ಗಸೂಚಿ ಪರಿಷ್ಕರಣೆ ಮಾಡಿರುವ ಕುರಿತು ವ್ಯಾಪಕ ಪ್ರಚಾರ ನೀಡಬೇಕು. ದೇಶದ ಪ್ರತಿ ರೈತರಿಗೆ ಈ ಮಾಹಿತಿ ತಲುಪಬೇಕು. ಹೊಸ ಘೋಷಣೆಯ ಉಪಯೋಗವನ್ನು ಎಲ್ಲರೂ ಪಡೆಯುವಂತಾಗಬೇಕು ಎಂದು ಸೂಚನೆ ನೀಡಿದ್ದು, ಮುಂದಿನ ದಿನಗಳಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಮೇಲಿನ ಸಾಲದ ಮಿತಿಯನ್ನು ಸಹ ಏರಿಕೆ ಮಾಡುವ ಕುರಿತು ಆರ ಬಿ ಐ ಸುಳಿವು ನೀಡಿದ್ದು. ಈ ಮೂಲಕ ಕೃಷಿ ವಲಯದ ಮೇಲಿನ ಹೂಡಿಕೆಯನ್ನು ಸಹ ಉತ್ತೇಜಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಅಲ್ಲದೇ ಮಾರ್ಪಡಿಸಿದ ಬಡ್ಡಿ ಸಹಾಯಧನ ಯೋಜನೆಯಡಿ ರೈತರಿಗೆ 3 ಲಕ್ಷದ ತನಕ ಶೇ 4ರ ಬಡ್ಡಿದರದಲ್ಲಿ ಸಾಲ ಸಿಗಲಿದೆ. ಕೃಷಿಗೆ ಉತ್ತೇಜನ ನೀಡಿದರೆ ಗ್ರಾಮೀಣ ಪ್ರದೇಶದಲ್ಲಿ ಜನರ ಜೀವನ ಮಟ್ಟ ಉತ್ತಮವಾಗಲಿದೆ, ಇದಕ್ಕಾಗಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆರ್ ಬಿ ಐ ಹೇಳಿದ್ದು, 2022ರಲ್ಲಿ ಕೇಂದ್ರ ಸರ್ಕಾರ ರೈತರಿಗೆ ಅಗ್ಗದ ದರದಲ್ಲಿ ತೊಂದರೆಯಿಲ್ಲದ ಸಾಲದ ಲಭ್ಯತೆ ಖಚಿತಪಡಿಸಿಕೊಳ್ಳಲು ಆದ್ಯತೆಯನ್ನು ನೀಡಿತು. ಇದರ ಭಾಗವಾಗಿ ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲ ಯೋಜನೆ ಪರಿಚಯಿಸಿತು. ಸಾಲದ ಮೇಲೆ ಕೃಷಿ ಉತ್ಪನ್ನಗಳನ್ನು ಖರೀದಿಸಲು ರೈತರನ್ನು ಸಶಕ್ತರನ್ನಾಗಿ ಮಾಡಲಾಯಿತು.

ರೈತರು ಬ್ಯಾಂಕುಗಳಿಗೆ ಕನಿಷ್ಠ ಬಡ್ಡಿದರ ಪಾವತಿಯನ್ನು ಖಚಿತಪಡಿಸಲು ಸರ್ಕಾರವು ಬಡ್ಡಿ ಸಹಾಯಧನ ಯೋಜನೆ (ಐಎಸ್ಎಸ್) ಪರಿಚಯಿಸಿತು. ಬಳಿಕ ಅದನ್ನು ಮಾರ್ಪಡಿಸಿದ್ದು, ಬಡ್ಡಿ ಸಬ್ಸಿಡಿ ಯೋಜನೆ (ಎಂಐಎಸ್) ಎಂದು ಮರುನಾಮಕರಣ ಮಾಡಿತು. ಈ ಮೂಲಕ ರೈತರಿಗೆ ಸಬ್ಸಿಡಿ ಸಹಿತ ಬಡ್ಡಿ ದರಗಳಲ್ಲಿ ಅಲ್ಪಾವಧಿ ಸಾಲವನ್ನು ನೀಡಲಾಗುತ್ತಿದೆ ಎಂದು ತೇಲ್ಕೂರ ಹೇಳಿದರು.

BREAKING: ವಿಧಾನ ಪರಿಷತ್ತಿನಲ್ಲಿ ‘ಚಾಣಕ್ಯ ವಿವಿ ತಿದ್ದುಪಡಿ ವಿಧೇಯಕ’ ಅಂಗೀಕಾರ

ಇನ್ಮುಂದೆ ಆನ್‌ಲೈನ್‌ ಮೂಲಕ NEET ಪರೀಕ್ಷೆ.?: ಶೀಘ್ರ ನಿರ್ಧಾರವೆಂದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ | NEET exam

ರಾಜ್ಯದ ಸ್ವ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ವಿವಿಧ ಯೋಜನೆಯಡಿ ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ

Share. Facebook Twitter LinkedIn WhatsApp Email

Related Posts

ಸಂಭ್ರಮಿಸಬೇಕಾದ ಹುಟ್ಟುಹಬ್ಬವೇ ಸಾವಿನ ದಿನವಾಯ್ತು; ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ

1 Min Read

Scam Alert: ವಾಟ್ಸ್ ಆಪ್ ನಲ್ಲಿ ಬರೋ ಮದುವೆ ಆಮಂತ್ರಣ ಪತ್ರಿಕೆ ಕ್ಲಿಕ್ ಮಾಡೋ ಮುನ್ನಾ ಈ ಸುದ್ದಿ ಓದಿ! | Wedding Invitation APK Scam

2 Mins Read

ಈ ರೈಲುಗಳ ಸೇವೆ ಮರುಸ್ಥಾಪನೆ, ಪರಿಷ್ಕರಣೆ

1 Min Read
Recent News

‘ಯಾರೂ ಆತಂಕಕ್ಕೊಳಗಾಗಬೇಡಿ: ಪ್ರಧಾನಿ ಮೋದಿ ಕರೆಗೆ ತಪ್ಪು ಅರ್ಥ ಬೇಡ; ದೇಶದಲ್ಲಿ ಪೆಟ್ರೋಲ್, ಡೀಸೆಲ್ ದಾಸ್ತಾನು ಸಮೃದ್ಧವಾಗಿದೆ’ ಎಂದ ಕೇಂದ್ರ ಸರ್ಕಾರ

ಸಂಭ್ರಮಿಸಬೇಕಾದ ಹುಟ್ಟುಹಬ್ಬವೇ ಸಾವಿನ ದಿನವಾಯ್ತು; ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ

Papaya Eating Benefits: ಆರೋಗ್ಯದ ಖಜಾನೆ ಈ ಪಪ್ಪಾಯಿ: ಖಾಲಿ ಹೊಟ್ಟೆಯಲ್ಲಿ ತಿಂದರೆ ಸಿಗುತ್ತೆ ಐದು ಲಾಭ!

PM Modi: ಬಂಗಾರ ಖರೀದಿ ಸದ್ಯಕ್ಕೆ ಬೇಡ: ಇಂಧನ ಬಿಕ್ಕಟ್ಟಿನ ನಡುವೆ ದೇಶದ ಜನತೆಗೆ ಪ್ರಧಾನಿ ಮೋದಿ ಎಚ್ಚರಿಕೆ

State News
KARNATAKA

ಸಂಭ್ರಮಿಸಬೇಕಾದ ಹುಟ್ಟುಹಬ್ಬವೇ ಸಾವಿನ ದಿನವಾಯ್ತು; ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಳಗಾವಿ: ಇಲ್ಲಿನ ಅಜಂ ನಗರದ ವಿದ್ಯಾರ್ಥಿನಿಲಯದಲ್ಲಿ ಯುವತಿಯೊಬ್ಬಳು ತನ್ನ ಜನ್ಮದಿನದಂದೇ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ನಡೆದಿದೆ. ಮೃತ ಯುವತಿಯನ್ನು…

Scam Alert: ವಾಟ್ಸ್ ಆಪ್ ನಲ್ಲಿ ಬರೋ ಮದುವೆ ಆಮಂತ್ರಣ ಪತ್ರಿಕೆ ಕ್ಲಿಕ್ ಮಾಡೋ ಮುನ್ನಾ ಈ ಸುದ್ದಿ ಓದಿ! | Wedding Invitation APK Scam

ಈ ರೈಲುಗಳ ಸೇವೆ ಮರುಸ್ಥಾಪನೆ, ಪರಿಷ್ಕರಣೆ

BREAKING: ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಶಾಕ್: ‘ಭೂದಾಖಲೆ’ಗಳ ನಕಲು ಶುಲ್ಕ ಹೆಚ್ಚಳ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.