Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ‘ಗಣೇಶ’ ಹಬ್ಬಕ್ಕೆ ‘ಗೃಹಲಕ್ಷ್ಮಿ’ ಬಾಕಿ ಹಣ ಜಮಾ

15/08/2025 6:12 AM

ರಾಜ್ಯ ಸರ್ಕಾರದಿಂದ ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : ಇನ್ಮುಂದೆ ಆಸ್ತಿ ನೋಂದಣಿಗೆ `ಡಿಜಿಟಲ್ ಸಹಿ’ ಕಡ್ಡಾಯ.!

15/08/2025 6:05 AM

ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಪದವಿ ಪೂರೈಸಿದವರಿಗೆ `GPT’ ಪದನ್ನೋತಿ.!

15/08/2025 5:49 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕದ ಅಭಿವೃದ್ಧಿಗೆ ಕೇಂದ್ರ ಸರ್ಕಾರವೇ ಅಡ್ಡಿ, ಕೆಟ್ಟ ಕೆಲಸ ಮಾಡೋದರಲ್ಲಿ ಬಿಜೆಪಿಯವರು ಎತ್ತಿದ ಕೈ: ಮಾಜಿ ಸಂಸದ ಡಿ.ಕೆ.ಸುರೇಶ್ ಕಿಡಿ
KARNATAKA

ಕರ್ನಾಟಕದ ಅಭಿವೃದ್ಧಿಗೆ ಕೇಂದ್ರ ಸರ್ಕಾರವೇ ಅಡ್ಡಿ, ಕೆಟ್ಟ ಕೆಲಸ ಮಾಡೋದರಲ್ಲಿ ಬಿಜೆಪಿಯವರು ಎತ್ತಿದ ಕೈ: ಮಾಜಿ ಸಂಸದ ಡಿ.ಕೆ.ಸುರೇಶ್ ಕಿಡಿ

By kannadanewsnow0914/02/2025 1:04 PM

ಬೆಂಗಳೂರು : “ಬಿಜೆಪಿಯವರು ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟನೆ ನಾಟಕ ಮಾಡುವ ಬದಲು ಕರ್ನಾಟಕದ ಪಾಲಿನ ತೆರಿಗೆ ಹಣ ಕೊಡಿಸಲಿ. ಒಳ್ಳೆಯ ಕೆಲಸ ಮಾಡದೇ ಇದ್ದರೂ ಕೆಟ್ಟ ಕೆಲಸ ಮಾಡುವುದರಲ್ಲಿ ಬಿಜೆಪಿಯವರು ಎತ್ತಿದ ಕೈ. ಕರ್ನಾಟಕದ ಅಭಿವೃದ್ದಿಗೆ ಕೇಂದ್ರ ಸರ್ಕಾರವೇ ಅಡ್ಡಿ” ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಕಿಡಿಕಾರಿದರು.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಸುರೇಶ್ ಅವರು ಶುಕ್ರವಾರ ಬೆಳಿಗ್ಗೆ ಮಾತನಾಡಿದರು.

ರಾಜ್ಯಗಳು ಹೆಚ್ಚಿನ ತೆರಿಗೆ ಪಾಲು ಕೇಳುವುದು ಸಣ್ಣತನ ಎನ್ನುವ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ರಾಜ್ಯಗಳ ಸಣ್ಣತನ ಎನ್ನುವುದಕ್ಕಿಂತ ರಾಜ್ಯಗಳ ಆರ್ಥಿಕ ಸ್ಥಿತಿಯನ್ನು ಕೇಂದ್ರ ಸರ್ಕಾರ ಹಾಳು ಮಾಡುತ್ತಿದೆ. ಇತರೇ ರಾಜ್ಯಗಳಲ್ಲಿ ನಮ್ಮ ತೆರಿಗೆ ಹಣವನ್ನು ಕೇಂದ್ರ ಬಿಜೆಪಿ ಸರ್ಕಾರ ವೃಥಾ ವ್ಯಯ ಮಾಡುತ್ತಿದೆ. ದಕ್ಷಿಣ ಭಾರತದಲ್ಲಿ ಎಲ್ಲವೂ ಬಿಜೆಪಿಯೇತರ ಸರ್ಕಾರಗಳೇ ಇವೆ. ದಕ್ಷಿಣ ಭಾರತಕ್ಕೆ ಸದಾ ಅನ್ಯಾಯ ಮಾಡಲಾಗುತ್ತಿದೆ. ಜನ ಎಚ್ಚೆತ್ತುಕೊಳ್ಳಬೇಕಾಗಿದೆ. ಅಭಿವೃದ್ದಿಗೆ ಹಣ ನೀಡದೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿರುವ ಬೆಂಗಳೂರಿಗೆ ಕೆಟ್ಟ ಹೆಸರು ತರಬೇಕು ಎನ್ನುವುದು ಬಿಜೆಪಿಯ ಹುನ್ನಾರ” ಎಂದರು.

ಮೆಟ್ರೋ ದರ ಏರಿಕೆ ಕಾಂಗ್ರೆಸ್ ಸರ್ಕಾರದ ವಿಚಾರ ಎನ್ನುವ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ರಾಜ್ಯ ಮತ್ತು ಕೇಂದ್ರ ಸರ್ಕಾರಗಳು 10: 10 ಅನುಪಾತದಲ್ಲಿ ಅನುದಾನ ನೀಡಿವೆ. ಶೇ 80 ರಷ್ಟು ಅನುದಾನವನ್ನು ಕೇಂದ್ರ ಸರ್ಕಾರದ ಭದ್ರತೆ ಮೇಲೆ ಸಾಲ ನೀಡಲಾಗಿದೆ. ಇದರ ಭಾರವನ್ನು ರಾಜ್ಯ ಸರ್ಕಾರವೇ ಹೊರಬೇಕು. ಆದರೆ ಮೆಟ್ರೋ ನಿರ್ವಹಣೆ ಕೇಂದ್ರ ಸರ್ಕಾರ ಮಾಡುತ್ತದೆ” ಎಂದರು.

ರಾಜ್ಯದ ಮೇಲೆ ಪ್ರೀತಿ ಇದ್ದರೆ ಹೆಚ್ಚಿನ ಅನುದಾನ ನೀಡಿ:

“ಬೆಲೆ ಏರಿಕೆಯಲ್ಲಿ ರಾಜ್ಯ ಸರ್ಕಾರದ ಯಾವುದೇ ಕೈವಾಡವಿಲ್ಲ. ಕರ್ನಾಟಕದ ಮೇಲೆ ಪ್ರೀತಿ ಇದೆ ಎಂದಾದರೇ ಹೆಚ್ಚಿನ ಅನುದಾನ ನೀಡಿ ಕನ್ನಡಿಗರ ಮೇಲಿನ ಹೊರೆಯನ್ನು ಕಡಿಮೆ ಮಾಡಲಿ. ಶೇ10 ರಷ್ಟು ಅನುಪಾತದ ಬದಲು ಶೇ 40 ರಷ್ಟು ನೀಡಲಿ. ಅದರ ಬದಲು ಬಡ್ಡಿದರ ಕಟ್ಟಬೇಕು ಎಂದರೆ ಹೇಗೆ? ಇದನ್ನು ಎಲ್ಲಾ ನಿಗದಿ ಮಾಡಿರುವುದೇ ಕೇಂದ್ರ ಸರ್ಕಾರ. ಇದರ ಬಗ್ಗೆ ವಿರೋಧ ಮಾಡುತ್ತಿರುವ ಒಂದಷ್ಟು ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ಮುಂದೆ ಮಾತನಾಡಿ ಅನುದಾನ ಹೆಚ್ಚಿಸಲಿ” ಎಂದರು.

ರಾಜ್ಯ ಸರ್ಕಾರ ಪ್ರಧಾನಿಯವರಿಗೆ ಪತ್ರ ಬರೆದರೆ ಮೆಟ್ರೋ ದರ ಕಡಿಮೆಯಾಗುತ್ತದೆ ಎನ್ನುವ ಸಂಸದ ತೇಜಸ್ವಿ ಸೂರ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ರಾಜ್ಯ ಸರ್ಕಾರ ಪತ್ರ ಏಕೆ ಬರೆಯಬೇಕು?. ನಮ್ಮ ಪಾಲಿನ ತೆರಿಗೆ ಹಣ ಕೇಳಿದ್ದೇವೆ ಅದನ್ನು ಕೊಡಿಸಲಿ. ಅವರ ನೈಪುಣ್ಯತೆ, ಬದ್ಧತೆಯನ್ನು ಈ ವಿಚಾರದಲ್ಲಿ ತೋರಿಸಲಿ” ಎಂದು ತಿರುಗೇಟು ನೀಡಿದರು.

ಮುನಿರತ್ನ ತಲೆಗೆ ಮೊಟ್ಟೆ ಏಟು ಬಿದ್ದು ತಲೆಕೆಟ್ಟು ಹೋಗಿದೆ

ಶಾಸಕ ಮುನಿರತ್ನ ಅವರು ಬೆಂಗಳೂರು ಅಭಿವೃದ್ಧಿಯಾಗುತ್ತಿಲ್ಲ. ಸುಮಾರು 20 ವರ್ಷಗಳ ಹಿಂದಕ್ಕೆ ಹೋಗಿದೆ. ಶೇ.35 ರಷ್ಟು ಲಂಚ ಕೇಳುತ್ತಿದ್ದಾರೆ ಎನ್ನುವ ಆರೋಪದ ಬಗ್ಗೆ ಕೇಳಿದಾಗ, “ಲೋಕಸಭಾ ಸದಸ್ಯರಾದ ತಜ್ಞ ವೈದ್ಯರೊಬ್ಬರು ಮುನಿರತ್ನ ಅವರ ತಲೆಗೆ ಮೊಟ್ಟೆ ಏಟು ಬಿದ್ದು, ಆಸಿಡ್ ದಾಳಿಯಾಗಿ ಪೆಟ್ಟು ಬಿದ್ದಿದೆ. ತಲೆಗೆ ಏಟಾಗಿ ಒಂದೆರಡು ಇಂಚು ಒಳಗೆ ಹೋಗಿದೆ, ಹೀಗಾಗಿ ತಲೆಕೆಟ್ಟು ಹೋಗಿದೆ ಎಂದು ಹೇಳಿದ್ದರು. ಮತ್ತೊಮ್ಮೆ ಪರಿಶೀಲಿಸಿಕೊಳ್ಳಬೇಕು” ಎಂದು ವ್ಯಂಗ್ಯವಾಡಿದರು.

ಬೆಂಗಳೂರು ಹೈದರಾಬಾದ್ ಗಿಂತ ಹಿಂದಕ್ಕೆ ಉಳಿದಿದೆ, ಈ ಆರೋಪಗಳನ್ನು ಮಾಡಿರುವ ನನ್ನ ಮೇಲೆ ಮತ್ತೆ ಪ್ರಕರಣ ದಾಖಲಿಸಬಹುದು ಎನ್ನುವ ಮುನಿರತ್ನ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಮೊದಲೇ ಮಾಡಿಟ್ಟುಕೊಂಡಿರುವ ಕುತಂತ್ರಗಳನ್ನು ಈ ರೀತಿ ಸಾರ್ವಜನಿಕವಾಗಿ ತಿಳಿಸುತ್ತಿದ್ದಾರೆ. ಅವರು ನಡೆದು ಬಂದ ದಾರಿ ನೋಡಿದರೆ ಎಲ್ಲವೂ ತಿಳಿಯುತ್ತದೆ. ಅವರು ಯಾವ ಠಾಣೆಗಳಲ್ಲಿ ಇರುತ್ತಿದ್ದರು ಎನ್ನುವ ಇತಿಹಾಸವಿದೆ. ಈಗ ಪಲಾಯನ ಮಾಡಲು ಈ ರೀತಿಯ ಹೇಳಿಕೆಗಳನ್ನು ಮುಂಚಿತವಾಗಿಯೇ ನೀಡುತ್ತಿದ್ದಾರೆ” ಎಂದರು.

ಪಂಚತಾರ ಹೋಟೆಲ್ ಬಿಜೆಪಿ ಸಂಸ್ಕೃತಿ

ಪಂಚತಾರ ಹೋಟೆಲ್ ಅಲ್ಲಿ ಕುಳಿತುಕೊಂಡು ಶಿವಕುಮಾರ್ ಅವರು ಶೇ 35 ರಷ್ಟು ಕಮಿಷನ್ ಕೇಳುತ್ತಾರೆ ಎನ್ನುವ ಬಗ್ಗೆ ಕೇಳಿದಾಗ, “ಶಿವಕುಮಾರ್ ಅವರು ಪಂಚತಾರ ಹೋಟೆಲ್ ಗಳಿಗೆ ಹೋಗುವುದಿಲ್ಲ. ಅದೇನಿದ್ದರು ಬಿಜೆಪಿಯವರ ಸಂಸ್ಕೃತಿ. ಮುನಿರತ್ನ ಮೊದಲು ಅವರ ಮೇಲಿರುವ ಎಲ್ಲಾ ಆರೋಪಗಳಿಂದ ಮುಕ್ತರಾಗಿ ಹೊರಬರಲಿ ಆನಂತರ ಮಿಕ್ಕ ವಿಚಾರಗಳನ್ನು ಮಾತನಾಡೋಣ” ಎಂದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆಯಾಗಿ ಆ ಸ್ಥಾನಕ್ಕೆ ಡಿ.ಕೆ.ಸುರೇಶ್ ಅವರು ಬರುತ್ತಾರೆ ಎನ್ನುವ ವಿಚಾರದ ಬಗ್ಗೆ ಕೇಳಿದಾಗ, “ನಾನು ಯಾವುದೇ ಸ್ಥಾನದ ಆಕಾಂಕ್ಷಿಯಲ್ಲ. ಅಧ್ಯಕ್ಷರ ಬದಲಾವಣೆ ಎನ್ನುವುದು ಪಕ್ಷದ ವರಿಷ್ಠರ ತೀರ್ಮಾನ. ಇದಕ್ಕೆ ಅಧ್ಯಕ್ಷರು ಬದ್ಧವಾಗಿದ್ದಾರೆ, ಬೇರೆಯವರೂ ಬದ್ಧರಾಗಿ ಇರುತ್ತಾರೆ. ಇದನ್ನು ಬೇರೆಯವರು ಚರ್ಚೆ ಮಾಡುವ ಅವಶ್ಯಕತೆಯಿಲ್ಲ. ನಾನು ಯಾವುದೇ ಸ್ಥಾನಗಳ ಆಕಾಂಕ್ಷಿಯಲ್ಲ. ಜನ ನನಗೆ ವಿಶ್ರಾಂತಿ ನೀಡಿದ್ದಾರೆ. ನಾನು ಈಗ ವಿಶ್ರಾಂತಿಯಲ್ಲಿದ್ದೇನೆ” ಎಂದರು.” ಎಂದರು.

ರಾಜ್ಯ ಉಸ್ತುವಾರಿಯೂ ಬದಲಾಗುತ್ತಿದ್ದಾರೆ ಎನ್ನುವ ಬಗ್ಗೆ ಕೇಳಿದಾಗ, “ಇದರ ಬಗ್ಗೆ ನನಗೆ ಮಾಹಿತಿಯಿಲ್ಲ. ಇದು ಎಐಸಿಸಿ ಮಟ್ಟದಲ್ಲಿ ತೀರ್ಮಾನವಾಗುವ ವಿಚಾರ” ಎಂದರು.

ದೇವರಾಜ ಅರಸು ಅವರ ದಾಖಲೆಯನ್ನು ಮುರಿಯಬೇಕು ಎನ್ನುವ ಸಿದ್ದರಾಮಯ್ಯ ಅವರ ಅಪೇಕ್ಷೆಯ ಬಗ್ಗೆ ಕೇಳಿದಾಗ, “ಅವರು ನಮ್ಮ ಶಾಸಕಾಂಗದ ನಾಯಕರು. ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆಯಿಲ್ಲ. ಆದರೆ ಬೇರೆಯವರು ಬೇರೆ ಬೇರೆ ರೀತಿ ವ್ಯಾಖ್ಯಾನಗಳನ್ನು ಮಾಡುತ್ತಿದ್ದಾರೆ. ಇದರ ಬಗ್ಗೆ ಯಾವುದೇ ಚರ್ಚೆಯಿಲ್ಲದೇ ಇರುವ ಕಾರಣ ಇದು ಅಪ್ರಸ್ತುತ ವಿಚಾರ” ಎಂದರು.

ದೇವೇಗೌಡರು ಮೋದಿಗೆ ಹತ್ತಿರವಿದ್ದಾರೆ

ಕಾವೇರಿ- ಗೋದಾವರಿ ಜೋಡಣೆ ಬಗ್ಗೆ ದೇವೇಗೌಡರ ಮಾತಿನ ಬಗ್ಗೆ ಕೇಳಿದಾಗ, “ಕಾವೇರಿ ಮತ್ತು ಗೋದಾವರಿ ನದಿ ಜೋಡಣೆ ಕನಸಿನ ಯೋಜನೆ. ಆದರೆ ಇಲ್ಲಿ ನಮ್ಮ ಕರ್ನಾಟಕ ರಾಜ್ಯದ ಪಾಲಿನ ನೀರು ಎಷ್ಟು ಎಂದು ಮೊದಲು ನಿಗದಿಯಾಗಲಿ. ಈ ಯೋಜನೆಯಿಂದ ಹೆಚ್ಚು ತಮಿಳುನಾಡು, ಆಂಧ್ರ, ತೆಲಂಗಾಣಕ್ಕೆ ಉಪಯೋಗವಾಗಲಿದೆ. ಇದು ಯಾವಾಗ ಅನುಷ್ಠಾನವಾಗುತ್ತದೆ ಎನ್ನುವ ಸ್ಪಷ್ಟತೆಯಿಲ್ಲ. ಈ ಎಲ್ಲಾ ವಿಚಾರಗಳ ಬಗ್ಗೆ ಮೊದಲು ಸ್ಪಷ್ಟತೆ ದೊರೆಯಲಿ. ದೇವೇಗೌಡರ ಕಾಳಜಿಯನ್ನು ಮೆಚ್ಚಬೇಕು. ಆದರೆ ಕರ್ನಾಟಕದ ಪಾಲಿನ ಬಗ್ಗೆ ಅವರು ಮಾತನಾಡಬೇಕಿತ್ತು. ಮೋದಿಯವರಿಗೆ ಹತ್ತಿರವಿರುವ ದೇವೇಗೌಡರು ನಮಗೆ ಹೆಚ್ಚಿನ ನೀರಿನ ಪಾಲನ್ನು ಕೊಡಿಸಬಹುದು” ಎಂದರು.

KNN Special Story: ಭಾರತದ ಮೊದಲ ‘ವರ್ಟಿಕಲ್ ಲಿಫ್ಟಿಂಗ್ ಸೇತುವೆ’ ಉದ್ಘಾಟನೆಗೆ ಸಿದ್ಧ: ಹೀಗಿದೆ ವಿಶೇಷತೆ

ಬಂಕಾಪುರಧಾಮದಲ್ಲಿ 5 ಮರಿಗಳಿಗೆ ಜನ್ಮ ನೀಡಿದ ಮತ್ತೊಂದು ತೋಳ

Share. Facebook Twitter LinkedIn WhatsApp Email

Related Posts

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ‘ಗಣೇಶ’ ಹಬ್ಬಕ್ಕೆ ‘ಗೃಹಲಕ್ಷ್ಮಿ’ ಬಾಕಿ ಹಣ ಜಮಾ

15/08/2025 6:12 AM1 Min Read

ರಾಜ್ಯ ಸರ್ಕಾರದಿಂದ ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : ಇನ್ಮುಂದೆ ಆಸ್ತಿ ನೋಂದಣಿಗೆ `ಡಿಜಿಟಲ್ ಸಹಿ’ ಕಡ್ಡಾಯ.!

15/08/2025 6:05 AM1 Min Read

ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಪದವಿ ಪೂರೈಸಿದವರಿಗೆ `GPT’ ಪದನ್ನೋತಿ.!

15/08/2025 5:49 AM1 Min Read
Recent News

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ‘ಗಣೇಶ’ ಹಬ್ಬಕ್ಕೆ ‘ಗೃಹಲಕ್ಷ್ಮಿ’ ಬಾಕಿ ಹಣ ಜಮಾ

15/08/2025 6:12 AM

ರಾಜ್ಯ ಸರ್ಕಾರದಿಂದ ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : ಇನ್ಮುಂದೆ ಆಸ್ತಿ ನೋಂದಣಿಗೆ `ಡಿಜಿಟಲ್ ಸಹಿ’ ಕಡ್ಡಾಯ.!

15/08/2025 6:05 AM

ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಪದವಿ ಪೂರೈಸಿದವರಿಗೆ `GPT’ ಪದನ್ನೋತಿ.!

15/08/2025 5:49 AM

2024-25 ನೇ ಸಾಲಿನ ರಾಜ್ಯದ ಶಾಲಾ `ಶಿಕ್ಷಕರ ವರ್ಗಾವಣೆ; : `ಶಿಕ್ಷಣ ಇಲಾಖೆ’ಯಿಂದ ಮಹತ್ವದ ಆದೇಶ.!

15/08/2025 5:48 AM
State News
KARNATAKA

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ‘ಗಣೇಶ’ ಹಬ್ಬಕ್ಕೆ ‘ಗೃಹಲಕ್ಷ್ಮಿ’ ಬಾಕಿ ಹಣ ಜಮಾ

By kannadanewsnow5715/08/2025 6:12 AM KARNATAKA 1 Min Read

ಉಡುಪಿ: ರಾಜ್ಯದ ಮಹಿಳೆಯರಿಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಗಣೇಶ ಚತುರ್ಥಿಗೆ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಬಿಡುಗಡೆ ಮಾಡಲಾಗುವುದು ಎಂದು…

ರಾಜ್ಯ ಸರ್ಕಾರದಿಂದ ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : ಇನ್ಮುಂದೆ ಆಸ್ತಿ ನೋಂದಣಿಗೆ `ಡಿಜಿಟಲ್ ಸಹಿ’ ಕಡ್ಡಾಯ.!

15/08/2025 6:05 AM

ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಪದವಿ ಪೂರೈಸಿದವರಿಗೆ `GPT’ ಪದನ್ನೋತಿ.!

15/08/2025 5:49 AM

2024-25 ನೇ ಸಾಲಿನ ರಾಜ್ಯದ ಶಾಲಾ `ಶಿಕ್ಷಕರ ವರ್ಗಾವಣೆ; : `ಶಿಕ್ಷಣ ಇಲಾಖೆ’ಯಿಂದ ಮಹತ್ವದ ಆದೇಶ.!

15/08/2025 5:48 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.