ಬೆಂಗಳೂರು: ಇ-ಗ್ರಾಮ ಸ್ವರಾಜ್ ತಂತ್ರಾಂಶದ ತಾಂತ್ರಿಕ ಸಮಸ್ಯೆ ಪರಿಹಾರವಾಗಿದೆ. ಇದು ಗ್ರಾಮ ಪಂಚಾಯತಿಗಳ ಅನುದಾನ ಬಳಕೆಗೆ ಅನುಕೂಲಕಾರಿಯಾಗಿದೆ ಅಂತ ಗ್ರಾಮೀಣಾಭಿವೃದ್ಧಿ ಇಲಾಖೆ ತಿಳಿಸಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಇ-ಗ್ರಾಮ ಸ್ವರಾಜ್ ತಂತ್ರಾಂಶದೊಂದಿಗೆ ಇರುವ ಸಂಯೋಜನೆಯಲ್ಲಿನ ತಾಂತ್ರಿಕ ಸಮಸ್ಯೆಯಿಂದಾಗಿ 2024-25 ನೇ ಸಾಲಿನ 15ನೇ ಹಣಕಾಸು ಆಯೋಗದ ಅನಿರ್ಬಂಧಿತ ಮೋದಲನೇ ಕಂತಿನ ಅನುದಾನವನ್ನು ಬಳಕೆ ಮಾಡಿಕೊಳ್ಳಲು ಕೆಲವು ಗ್ರಾಮ ಪಂಚಾಯತಿಗಳಿಗೆ ಸಾಧ್ಯವಾಗಿರಲಿಲ್ಲ. ಎದುರಾಗಿದ್ದ ತಾಂತ್ರಿಕ ತೊಂದರೆಗಳನ್ನು ನಿವಾರಿಸಲಾಗಿರುವುದರಿಂದ ಅಂತಹ ಗ್ರಾಮ ಪಂಚಾಯತಿಗಳು ಈಗ ಇ-ಗ್ರಾಮ ಸ್ವರಾಜ್ ತಂತ್ರಾಂಶದ ಮೂಲಕ ಅನುದಾನ ಬಳಸಿಕೊಳ್ಳಬಹುದಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಕಟಣೆ ತಿಳಿಸಿದೆ.
BREAKING: ಮನಮೋಹನ್ ಸಿಂಗ್ ಪಂಚಭೂತಗಳಲ್ಲಿ ಲೀನ: ಆರ್ಥಿಕ ಕ್ರಾಂತಿಕಯ ಹರಿಕಾರ ಇನ್ನೂ ನೆನಪು ಮಾತ್ರ | Manmohan Singh
BREAKING: ಮನಮೋಹನ್ ಸಿಂಗ್ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ