Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಕಾಂಗ್ರೆಸ್ ಶಾಸಕರ ಮನಸ್ಸುಗಳು ಕದಲಿದರೆ ಸಿಎಂ ಬದಲಾವಣೆ ಖಚಿತ: ಮೈಲಾರಲಿಂಗೇಶ್ವರ ಕಾರ್ಣಿಕ ನುಡಿ

12/07/2025 2:40 PM

BIG NEWS : ಗಾಳಿ ಆಂಜನೇಯ ಸ್ವಾಮಿ ದೇಗುಲ ಮುಜರಾಯಿ ಇಲಾಖೆಗೆ : ಖಜಾನೆ, ಕಾಣಿಕೆ ಹುಂಡಿ ಸೀಜ್ ಮಾಡಿದ ಅಧಿಕಾರಿಗಳು

12/07/2025 2:10 PM

ಭಾರತದಲ್ಲಿ ಅಸಮಾನತೆ ವೇಗವಾಗಿ ಕಡಿಮೆಯಾಗುತ್ತಿದೆ: ರೋಜ್ಗಾರ್ ಮೇಳದಲ್ಲಿ ಪ್ರಧಾನಿ ಮೋದಿ

12/07/2025 1:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡುವಂತೆ ಮಾಜಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಆಗ್ರಹ
KARNATAKA

ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡುವಂತೆ ಮಾಜಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಆಗ್ರಹ

By kannadanewsnow0913/07/2024 3:14 PM

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯವರು ಹಗರಣಗಳಿಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಕೇಂದ್ರದ ಮಾಜಿ ಸಚಿವ ಎ.ನಾರಾಯಣಸ್ವಾಮಿ ಅವರು ಆಗ್ರಹಿಸಿದರು.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರದ ಅನಾವರಣ ಆಗಿದೆ. ರಾಜ್ಯದ ಮುಖ್ಯಮಂತ್ರಿ ಮತ್ತು ಸರಕಾರವು ದಲಿತವಿರೋಧಿ ನೀತಿಯನ್ನು ಅನುಸರಿಸುತ್ತಿದ್ದು, ಅದನ್ನು ಖಂಡಿಸುತ್ತೇವೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಸಮಾಜವಾದದ ಚಿಂತನೆಗಳು ಕಳಚಿ ಬಿದ್ದಿವೆ. ಸಮಾಜವಾದದ ಚಿಂತನೆ ಇದ್ದರೆ ಅವರು ಈ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಿರಲಿಲ್ಲ ಎಂದು ತಿಳಿಸಿದರು.

ರಾಜ್ಯದಲ್ಲಿ ಪರಿಶಿಷ್ಟ ಪಂಗಡದ 17 ಶಾಸಕರಿದ್ದಾರೆ. ಈ ಪೈಕಿ 16 ಜನರು ಕಾಂಗ್ರೆಸ್ಸಿನವರು ಎಂದು ಅವರು, 3 ಜನ ಲೋಕಸಭಾ ಸದಸ್ಯರು ಗೆದ್ದಿದ್ದಾರೆ. ವಾಲ್ಮೀಕಿ ನಿಗಮಕ್ಕೆ ಮಾರ್ಚ್ 21ರಂದು ರಾಜ್ಯ ಸರಕಾರವು 187 ಕೋಟಿ ಹಣವನ್ನು ವರ್ಗಾವಣೆ ಮಾಡಿತ್ತು. ಮೇ 26ರವರೆಗೆ ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಳ್ಳುವವರೆಗೆ ರಾಜ್ಯದ ಮುಖ್ಯಮಂತ್ರಿಗಳ ಗಮನಕ್ಕೆ ಹಗರಣ ಬಂದಿಲ್ಲವಾದರೆ ಆ ಎರಡು ತಿಂಗಳು ಕರ್ನಾಟಕದಲ್ಲಿ ಸರಕಾರ ಇತ್ತೇ ಎಂದು ಪ್ರಶ್ನಿಸಿದರು.

ಅರಣ್ಯ ಪ್ರದೇಶದಲ್ಲಿ ವಾಸವಿರುವ ಜನಾಂಗದವರಿಗೂ ಈ ವಿಷಯದಲ್ಲಿ ರಾಜ್ಯದ ಮುಖ್ಯಮಂತ್ರಿಗಳ ಮೇಲೆ ಸಂದೇಹ ಉಂಟಾಗಿದೆ. ಹಗರಣದ ಚರ್ಚೆ ನಡೆದಾಗ ಸಚಿವರಿಗೂ ಹಗರಣಕ್ಕೂ ಸಂಬಂಧ ಇಲ್ಲ ಎಂದೇ ಮುಖ್ಯಮಂತ್ರಿಯವರು ಹೇಳಿದ್ದರು. ಎಸ್‍ಐಟಿ ರಚಿಸಿದ ಬಳಿಕ ಕೂಡ ಸಚಿವರು ನಿರಪರಾಧಿ ಎಂದೇ ಹೇಳಿದ್ದರು ಎಂದು ಗಮನ ಸೆಳೆದರು.

ಸಮಾಜವಾದಿ ಎಂಬ ಪದಕ್ಕೆ ಕಳಂಕ..

ನಾಗೇಂದ್ರರನ್ನು ಇ.ಡಿ. ಬಂಧಿಸಿದ ಬಳಿಕ ಖಾಸಗಿ, ನಕಲಿ ಖಾತೆಗಳಿಗೆ ಹಣ ವರ್ಗಾವಣೆ, ನಾಗೇಂದ್ರರ ಕೈವಾಡದ ಕುರಿತು ಮುಖ್ಯಮಂತ್ರಿಗಳನ್ನು ಮಾಧ್ಯಮದವರು ಪ್ರಶ್ನಿಸಿದ್ದರು. ಯಾವ ವರದಿ ಬಂದಿದೆ? ಎಂಬ ಅವರ ಪ್ರಶ್ನೆ, ಸಮಾಜವಾದಿ ಎಂಬ ಪದಕ್ಕೆ ಕಳಂಕ ತಂದಂತಿದೆ. ಪದೇಪದೇ ನಾನು ಹಿಂದುಳಿದ ವರ್ಗಗಳ ನಾಯಕ ಎನ್ನುವ ಸಿದ್ದರಾಮಯ್ಯನವರು ದಲಿತರಿಗೆ, ಶೋಷಿತರಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿಗೆ ವರ್ಗಾಯಿಸಿದ್ದಾರೆ. ಹಾಗಿದ್ದರೆ ಅವರು ಯಾವ ನೈತಿಕತೆಯಲ್ಲಿ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಎ.ನಾರಾಯಣಸ್ವಾಮಿ ಅವರು ಕೇಳಿದರು.

ವಿದ್ಯಾಸಿರಿ ನಿಲ್ಲಿಸಿದ್ದಾರೆ. ಶೂ ಕೊಡಲು ಯೋಗ್ಯತೆ ಇಲ್ಲ. ಮಕ್ಕಳಿಗೆ ಪುಸ್ತಕ ಕೊಡುತ್ತಿಲ್ಲ; ಹಾಸ್ಟೆಲ್‍ಗಳಲ್ಲಿ ಊಟವನ್ನೂ ನೀಡುತ್ತಿಲ್ಲ. ಹಲವು ಮಕ್ಕಳು ವಿದ್ಯಾಭ್ಯಾಸ ನಿಲ್ಲಿಸಿದ್ದಾರೆ ಎಂದು ಟೀಕಿಸಿದರು.

ಗ್ಯಾರಂಟಿಗಳ ಮೂಲಕ ನಿಗಮಗಳ ಕತ್ತನ್ನೇ ಹಿಸುಕಿದ್ದಾರೆ. ಜನಸಂದರ್ಶನದ ವೇಳೆ ಯುವಕರ ಕೊಟ್ಟ ಅರ್ಜಿಗಳನ್ನು ತಿಪ್ಪಗೆ ಎಸೆಯಲಾಗಿದೆ. ಇದು ಸಾಮಾಜಿಕ ಕಳಕಳಿಯನ್ನು ಅರ್ಥ ಮಾಡುವಂತಿದೆ ಎಂದು ವ್ಯಂಗ್ಯವಾಗಿ ನುಡಿದರು. ಖಜಾನೆ ಖಾಲಿ ಮಾಡಿಕೊಂಡು ಸರಕಾರ ನಡೆಸಲು ಯೋಗ್ಯತೆ ಇಲ್ಲದೆ ಇದ್ದರೆ, ದಲಿತರ ಹಣದಲ್ಲಿ ಸರಕಾರ ನಡೆಸುವುದಾದರೆ ದಯವಿಟ್ಟು ಕುರ್ಚಿ ಬಿಟ್ಟು ಮನೆ ಕಡೆ ಹೋಗಿ ಎಂದು ಸಲಹೆ ನೀಡಿದರು.

ರಾಜ್ಯದಲ್ಲಿ ಬೀದಿಗೊಂದು ದಲಿತ ಸಂಘಟನೆಗಳಿವೆ. ಅನೇಕ ಹೋರಾಟಗಾರರೂ ಇದ್ದಾರೆ. ದಲಿತ ವಿರೋಧಿ ಆಡಳಿತ ಕೊಡುತ್ತಿದ್ದರೂ ರಾಜ್ಯದ ದಲಿತ ನಾಯಕರು ಮಾತನಾಡಿಲ್ಲ. ಎಲ್ಲ ಪ್ರಾಮಾಣಿಕ ದಲಿತ ನಾಯಕರು ದಲಿತರ ಹಣ ದುರುಪಯೋಗದ ಬಗ್ಗೆ ಧ್ವನಿ ಆಗಬೇಕು; ನ್ಯಾಯ ಕೊಡಿಸಬೇಕು ಎಂದು ಪ್ರಾರ್ಥಿಸಿದರು.

ನಾಳೆಯ ಬೆಂಗಳೂರಿನ ‘ಬಿಜೆಪಿ ಪ್ರತಿಭಟನೆ’ಗೆ ಪೊಲೀಸರಿಂದ ಅನುಮತಿ ನಿರಾಕರಣೆ | BJP Protest

GOOD NEWS: ಕಾಂಗ್ರೆಸ್ ಕಚೇರಿಯಲ್ಲಿ ಕೆಲಸ ಮಾಡುವ ಪೌರ ಕಾರ್ಮಿಕರರಿಗೆ ‘ಮನೆ ಭಾಗ್ಯ’

Share. Facebook Twitter LinkedIn WhatsApp Email

Related Posts

BREAKING: ಕಾಂಗ್ರೆಸ್ ಶಾಸಕರ ಮನಸ್ಸುಗಳು ಕದಲಿದರೆ ಸಿಎಂ ಬದಲಾವಣೆ ಖಚಿತ: ಮೈಲಾರಲಿಂಗೇಶ್ವರ ಕಾರ್ಣಿಕ ನುಡಿ

12/07/2025 2:40 PM1 Min Read

BIG NEWS : ಗಾಳಿ ಆಂಜನೇಯ ಸ್ವಾಮಿ ದೇಗುಲ ಮುಜರಾಯಿ ಇಲಾಖೆಗೆ : ಖಜಾನೆ, ಕಾಣಿಕೆ ಹುಂಡಿ ಸೀಜ್ ಮಾಡಿದ ಅಧಿಕಾರಿಗಳು

12/07/2025 2:10 PM1 Min Read

BREAKING : ಬೆಳಗಾವಿಯಲ್ಲಿ ವೈದ್ಯನ ಅಪಹರಣ ಮಾಡಿ ಮಾರಣಾಂತಿಕ ಹಲ್ಲೆ : 25 ಜನರ ವಿರುದ್ಧ ಕೇಸ್ ದಾಖಲು!

12/07/2025 1:42 PM1 Min Read
Recent News

BREAKING: ಕಾಂಗ್ರೆಸ್ ಶಾಸಕರ ಮನಸ್ಸುಗಳು ಕದಲಿದರೆ ಸಿಎಂ ಬದಲಾವಣೆ ಖಚಿತ: ಮೈಲಾರಲಿಂಗೇಶ್ವರ ಕಾರ್ಣಿಕ ನುಡಿ

12/07/2025 2:40 PM

BIG NEWS : ಗಾಳಿ ಆಂಜನೇಯ ಸ್ವಾಮಿ ದೇಗುಲ ಮುಜರಾಯಿ ಇಲಾಖೆಗೆ : ಖಜಾನೆ, ಕಾಣಿಕೆ ಹುಂಡಿ ಸೀಜ್ ಮಾಡಿದ ಅಧಿಕಾರಿಗಳು

12/07/2025 2:10 PM

ಭಾರತದಲ್ಲಿ ಅಸಮಾನತೆ ವೇಗವಾಗಿ ಕಡಿಮೆಯಾಗುತ್ತಿದೆ: ರೋಜ್ಗಾರ್ ಮೇಳದಲ್ಲಿ ಪ್ರಧಾನಿ ಮೋದಿ

12/07/2025 1:43 PM

BREAKING : ಬೆಳಗಾವಿಯಲ್ಲಿ ವೈದ್ಯನ ಅಪಹರಣ ಮಾಡಿ ಮಾರಣಾಂತಿಕ ಹಲ್ಲೆ : 25 ಜನರ ವಿರುದ್ಧ ಕೇಸ್ ದಾಖಲು!

12/07/2025 1:42 PM
State News
KARNATAKA

BREAKING: ಕಾಂಗ್ರೆಸ್ ಶಾಸಕರ ಮನಸ್ಸುಗಳು ಕದಲಿದರೆ ಸಿಎಂ ಬದಲಾವಣೆ ಖಚಿತ: ಮೈಲಾರಲಿಂಗೇಶ್ವರ ಕಾರ್ಣಿಕ ನುಡಿ

By kannadanewsnow0912/07/2025 2:40 PM KARNATAKA 1 Min Read

ವಿಜಯನಗರ: ಕಾಂಗ್ರೆಸ್ ಶಾಸಕರ ಮನಸ್ಸುಗಳು ಕದಲಿದರೇ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುವುದು ಖಚಿತ ಎಂಬುದಾಗಿ ಮೈಲಾರಲಿಂಗೇಶ್ವರ ಕಾರ್ಣಿಕ ನುಡಿಯನ್ನು ನುಡಿಯಲಾಗಿದೆ.…

BIG NEWS : ಗಾಳಿ ಆಂಜನೇಯ ಸ್ವಾಮಿ ದೇಗುಲ ಮುಜರಾಯಿ ಇಲಾಖೆಗೆ : ಖಜಾನೆ, ಕಾಣಿಕೆ ಹುಂಡಿ ಸೀಜ್ ಮಾಡಿದ ಅಧಿಕಾರಿಗಳು

12/07/2025 2:10 PM

BREAKING : ಬೆಳಗಾವಿಯಲ್ಲಿ ವೈದ್ಯನ ಅಪಹರಣ ಮಾಡಿ ಮಾರಣಾಂತಿಕ ಹಲ್ಲೆ : 25 ಜನರ ವಿರುದ್ಧ ಕೇಸ್ ದಾಖಲು!

12/07/2025 1:42 PM

SHOCKING : ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಕೈದಿಯ ಹೊಟ್ಟೆಯಲ್ಲಿ ಮೊಬೈಲ್ ಪತ್ತೆ : ಶಾಕ್ ಆದ ವೈದ್ಯರು!

12/07/2025 1:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.