Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಸುಹಾಸ್ ಶೆಟ್ಟಿ ಹತ್ಯೆ ಕೇಸ್ : ಬುರ್ಖಾಧಾರಿ ಮಹಿಳೆಯರನ್ನ ಬಂಧಿಸಿಲ್ಲ ಯಾಕೆ ಎಂದಿದ್ದಕ್ಕೆ ಬಿತ್ತು ‘FIR’

18/05/2025 6:55 PM

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು: ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ ಸೇರಿ ಹಲವು ಗಣ್ಯರು

18/05/2025 6:53 PM

ರಾಜ್ಯದ ಸರ್ಕಾರಿ ನೌಕರರಿಗೆ ಮಧು ಬಂಗಾರಪ್ಪ ಗುಡ್ ನ್ಯೂಸ್: OPS ಜಾರಿಗೆ ಸರ್ಕಾರ ಬದ್ಧವೆಂದ ಸಚಿವರು

18/05/2025 6:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶೀಘ್ರವೇ ಯಲಹಂಕ ಬಳಿ 153 ಎಕರೆಯಲ್ಲಿ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನಕ್ಕೆ ಶಂಕುಸ್ಥಾಪನೆ: ಸಚಿವ ಈಶ್ವರ್ ಖಂಡ್ರೆ
KARNATAKA

ಶೀಘ್ರವೇ ಯಲಹಂಕ ಬಳಿ 153 ಎಕರೆಯಲ್ಲಿ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನಕ್ಕೆ ಶಂಕುಸ್ಥಾಪನೆ: ಸಚಿವ ಈಶ್ವರ್ ಖಂಡ್ರೆ

By kannadanewsnow0907/10/2024 3:38 PM

ಬೆಂಗಳೂರು : ಉತ್ತರ ಬೆಂಗಳೂರಲ್ಲಿ ಶ್ವಾಸತಾಣ ಅಂದರೆ ಲಂಗ್ ಸ್ಪೇಸ್ ಕೊರತೆ ಇದ್ದು, ಯಲಹಂಕ ಆರ್.ಟಿ.ಓ. ಬಳಿ ಇರುವ ಮಾದಪ್ಪನಹಳ್ಳಿಯ 153 ಎಕರೆ ಅರಣ್ಯ ಭೂಮಿಯಲ್ಲಿ ಕಬ್ಬನ್ ಪಾರ್ಕ್ ಮಾದರಿಯಲ್ಲಿ “ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ’ಕ್ಕೆ ಶೀಘ್ರ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಅರಣ್ಯ ಭವನದಲ್ಲಿಂದು ನಡೆದ ವನ್ಯಜೀವಿ ಸಪ್ತಾಹದ ಔಪಚಾರಿಕ ಸಮಾರೋಪ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, 153 ಎಕರೆ ಅರಣ್ಯ ಭೂಮಿಯನ್ನು, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತಕ್ಕೆ ಗುತ್ತಿಗೆ ನೀಡಲಾಗಿತ್ತು. ಈಗ ಗುತ್ತಿಗೆ ಅವಧಿ ಮುಗಿದಿದ್ದು, ಸಾಮಾಜಿಕ ಜವಾಬ್ದಾರಿ- ಇಲಾಖೆ ಮತ್ತು ಸಿ.ಎಸ್.ಆರ್ ನಿಧಿಯ ನೆರವಿನೊಂದಿಗೆ ಕಬ್ಬನ್ ಪಾರ್ಕ್ ಮಾದರಿಯಲ್ಲಿ ಒಂದು ಸಸ್ಯೋದ್ಯಾನ ಮಾಡಲಾಗುವುದು ಎಂದರು.

ಯಲಹಂಕ ಸುತ್ತುಮುತ್ತ ಬೆಂಗಳೂರು ವ್ಯಾಪಕವಾಗಿ ಬೆಳೆದಿದೆ. ಈ ಹಿನ್ನೆಯಲ್ಲಿ ಜನರಿಗೆ ಅನುಕೂಲವಾಗುವಂತೆ ಇಲ್ಲಿ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ ಸ್ಥಾಪಿಸಿದಲ್ಲಿ ಅದು ಅತ್ಯಂತ ಆಕರ್ಷಣೀಯ ತಾಣವಾಗುತ್ತದೆ ಎಂದರು.

ಬೆಂಗಳೂರು ನಗರವು ವಿಶ್ವದಲ್ಲಿಯೇ ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು, ಭಾರತದ ಗಾರ್ಡನ್ ಸಿಟಿ ಎನ್ನುವ ಹೆಗ್ಗಳಿಕೆಯನ್ನು ಹೊಂದಿದೆ. ಭಾರತೀಯ ಅರಣ್ಯ ಸಮೀಕ್ಷಾ ವರದಿಯಂತೆ ಬೆಂಗಳೂರು ನಗರವು ಭಾರತದಲ್ಲಿ ಮೂರನೇ ಅತಿ ಹೆಚ್ಚು ಭೂ ಪ್ರದೇಶವನ್ನು ಹೊಂದಿರುವ ನಗರವಾಗಿದ್ದು, ಸುಮಾರು 89 ಚದರ ಕಿಲೋಮೀಟರ್‌ನಷ್ಟು ಅರಣ್ಯ ಪ್ರದೇಶವನ್ನು ಹೊಂದಿದೆ. ಬೆಂಗಳೂರಿನ ವೃಕ್ಷ ಹೊದಿಕೆ ಶೇ.6.81 ರಷ್ಟಿದೆ. ಕಳೆದ 10 ವರ್ಷಗಳಲ್ಲಿ ಬೆಂಗಳೂರು ನಗರದಲ್ಲಿ 5 ಚದರ ಕಿಲೋಮೀಟರ್‌ ನಷ್ಟು ಹಸಿರು ಹೊದಿಕೆ ಕಡಿಮೆಯಾಗಿದೆ ಎಂದರು.

ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದ ಉದ್ಯಾನ ನಗರಿ ಎನ್ನುವ ಹೆಗ್ಗಳಿಕೆಯನ್ನು ಮರುಸ್ಥಾಪಿಸಲು ಇಲಾಖೆಯು ಸಾರ್ವಜನಿಕರ ಸಹಭಾಗಿತ್ವದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಇನ್ನು ಹೆಚ್ಚು ಹೆಚ್ಚಾಗಿ ಮಾಡಬೇಕಾಗಿದೆ. ಜೊತೆಗೆ ರಾಜಧಾನಿಯಲ್ಲಿ ಒತ್ತುವರಿಯಾಗಿರುವ ಅರಣ್ಯಭೂಮಿಯನ್ನು ಮರಳಿ ವಶಕ್ಕೆ ಪಡೆಬೇಕಿದೆ ಎಂದು ಈಶ್ವರ ಖಂಡ್ರೆ ಹೇಳಿದರು.

ವಾರಾಂತ್ಯ ಮತ್ತು ರಜಾ ದಿನಗಳಲ್ಲಿ ವನ್ಯ ಜೀವಿಗಳನ್ನು ನೋಡಲೆಂದೇ ಅರಣ್ಯದಲ್ಲಿ ಸಫಾರಿಗೆ ಮತ್ತು ಮೃಗಾಲಯಗಳಿಗೆ ಜನರು ಹೋಗುತ್ತಾರೆ. ಸಫಾರಿಯಲ್ಲಿ ಹುಲಿ, ಚಿರತೆ, ಕರಡಿ, ಗರಿಬಿಚ್ಚಿ ನರ್ತಿಸುವ ನವಿಲು ಕಂಡರೆ ಮಂತ್ರಮುಗ್ಧರಾಗುತ್ತಾರೆ. ಅದೇ ವನ್ಯಜೀವಿಗಳು ಕಾಣದಿದ್ದರೆ ಬೇಸರಗೊಳ್ಳುತ್ತಾರೆ. ಮನಸ್ಸಿಗೆ ಇಷ್ಟು ಸಂತೋಷ, ಮುದ ನೀಡುವ ವನ್ಯ ಮೃಗಗಳನ್ನು ಸಂರಕ್ಷಿಸುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ ಎಂದರು.

ಈ ಹಿನ್ನೆಲೆಯಲ್ಲಿ ವನ್ಯ ಮೃಗಗಳ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ಜನರಲ್ಲಿ ಅರಿವು ಮೂಡಿಸಲು ಮುಂದಿನ ಪೀಳಿಗೆಗೆ ವನ್ಯ ಮೃಗಗಳ ಮಹತ್ವ ತಿಳಿಸಲು ಪ್ರತಿವರ್ಷ ಅಕ್ಟೋಬರ್ 2ರಿಂದ 8ರವರೆಗೆ ವನ್ಯಜೀವಿ ಸಪ್ತಾಹ ಆಚರಿಸಲಾಗುತ್ತದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಪ್ರಧಾನ ಮುಖ್ಯ ಅರಣ್ಯಸಂರಕ್ಷಣಾಧಿಕಾರಿ -ಅರಣ್ಯ ಕಾರ್ಯಪಡೆ ಮುಖ್ಯಸ್ಥ ಬ್ರಿಜೇಶ್ ಕುಮಾರ್ ದೀಕ್ಷಿತ್, ಮುಖ್ಯ ವನ್ಯ ಜೀವಿ ಪರಿಪಾಲಕರಾದ ಸುಭಾಷ್ ಮಾಲ್ಖಡೆ ಮತ್ತಿತರರು ಪಾಲ್ಗೊಂಡಿದ್ದರು.

ಇದೇ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ವನ್ಯಜೀವಿ ಛಾಯಾಚಿತ್ರ ಪ್ರದರ್ಶನ ಮತ್ತು ಅಂಚೆ ಚೀಟಿ ಪ್ರದರ್ಶನ ವೀಕ್ಷಿಸಿದರು.

ವಿಕ್ಟರ್ ಆಂಬ್ರೋಸ್ ಮತ್ತು ಗ್ಯಾರಿ ರುವ್ಕುನ್ 2024ರ ನೊಬೆಲ್ ವೈದ್ಯಕೀಯ ಪ್ರಶಸ್ತಿ | 2024 Nobel Medicine Prize

BREAKING : ಮಾಜಿ ಸಚಿವ ಬಿ. ಶ್ರೀರಾಮುಲು ಫೇಸ್ ಬುಕ್, ಇನ್ ಸ್ಟಾಗ್ರಾಂ’ ಖಾತೆ ಹ್ಯಾಕ್

Share. Facebook Twitter LinkedIn WhatsApp Email

Related Posts

BREAKING : ಸುಹಾಸ್ ಶೆಟ್ಟಿ ಹತ್ಯೆ ಕೇಸ್ : ಬುರ್ಖಾಧಾರಿ ಮಹಿಳೆಯರನ್ನ ಬಂಧಿಸಿಲ್ಲ ಯಾಕೆ ಎಂದಿದ್ದಕ್ಕೆ ಬಿತ್ತು ‘FIR’

18/05/2025 6:55 PM1 Min Read

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು: ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ ಸೇರಿ ಹಲವು ಗಣ್ಯರು

18/05/2025 6:53 PM3 Mins Read

ರಾಜ್ಯದ ಸರ್ಕಾರಿ ನೌಕರರಿಗೆ ಮಧು ಬಂಗಾರಪ್ಪ ಗುಡ್ ನ್ಯೂಸ್: OPS ಜಾರಿಗೆ ಸರ್ಕಾರ ಬದ್ಧವೆಂದ ಸಚಿವರು

18/05/2025 6:49 PM3 Mins Read
Recent News

BREAKING : ಸುಹಾಸ್ ಶೆಟ್ಟಿ ಹತ್ಯೆ ಕೇಸ್ : ಬುರ್ಖಾಧಾರಿ ಮಹಿಳೆಯರನ್ನ ಬಂಧಿಸಿಲ್ಲ ಯಾಕೆ ಎಂದಿದ್ದಕ್ಕೆ ಬಿತ್ತು ‘FIR’

18/05/2025 6:55 PM

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು: ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ ಸೇರಿ ಹಲವು ಗಣ್ಯರು

18/05/2025 6:53 PM

ರಾಜ್ಯದ ಸರ್ಕಾರಿ ನೌಕರರಿಗೆ ಮಧು ಬಂಗಾರಪ್ಪ ಗುಡ್ ನ್ಯೂಸ್: OPS ಜಾರಿಗೆ ಸರ್ಕಾರ ಬದ್ಧವೆಂದ ಸಚಿವರು

18/05/2025 6:49 PM

ಇಸ್ರೇಲ್ ಧ್ವಂಸ ಮಾಡಿದ ಗಾಜಾ ಸುರಂಗದಲ್ಲಿ ಹಮಾಸ್ ನಾಯಕ ಮುಹಮ್ಮದ್ ಸಿನ್ವಾರ್ ಮೃತದೇಹ ಪತ್ತೆ: ವರದಿ

18/05/2025 6:25 PM
State News
KARNATAKA

BREAKING : ಸುಹಾಸ್ ಶೆಟ್ಟಿ ಹತ್ಯೆ ಕೇಸ್ : ಬುರ್ಖಾಧಾರಿ ಮಹಿಳೆಯರನ್ನ ಬಂಧಿಸಿಲ್ಲ ಯಾಕೆ ಎಂದಿದ್ದಕ್ಕೆ ಬಿತ್ತು ‘FIR’

By kannadanewsnow0518/05/2025 6:55 PM KARNATAKA 1 Min Read

ಮಂಗಳೂರು : ಇತ್ತೀಚಿಗೆ ಮಂಗಳೂರಿನಲ್ಲಿ ನಡುರಸ್ತೆಯಲ್ಲಿಯೇ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ…

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು: ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ ಸೇರಿ ಹಲವು ಗಣ್ಯರು

18/05/2025 6:53 PM

ರಾಜ್ಯದ ಸರ್ಕಾರಿ ನೌಕರರಿಗೆ ಮಧು ಬಂಗಾರಪ್ಪ ಗುಡ್ ನ್ಯೂಸ್: OPS ಜಾರಿಗೆ ಸರ್ಕಾರ ಬದ್ಧವೆಂದ ಸಚಿವರು

18/05/2025 6:49 PM

ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ ಸೌಲಭ್ಯ ಪರಿಚಯಿಸಲು ಕ್ರಮ: ಸಚಿವ ದಿನೇಶ್‌ ಗುಂಡೂರಾವ್‌

18/05/2025 5:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.