ಹೈದರಾಬಾದ್: ವಿದ್ಯುತ್ ತಂತಿ ಸ್ಪರ್ಶದಿಂದ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಕಾಮರೆಡ್ಡಿ ಜಿಲ್ಲೆಯ ದೇವನಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ಬೀಡಿ ಕಾಲೋನಿಯಲ್ಲಿ ಮಂಗಳವಾರ ನಡೆದಿದೆ.
ಇಬ್ಬರು ಮಕ್ಕಳು ತಮ್ಮ ಮನೆಯ ಬಳಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಂತಿಯ ಸ್ಪರ್ಶಕ್ಕೀಡಾಗಿದ್ದಾರೆ. ಪೋಷಕರು ತಮ್ಮ ಮಕ್ಕಳನ್ನು ರಕ್ಷಿಸಲು ಧಾವಿಸಿದಾಗ ಅವರಿಗೂ ಕೂಡ ವಿದ್ಯುತ್ ತಗುಲಿದ ಪರಿಣಾಮ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಅಹ್ಮದ್, ಪರ್ವೀನ್ ಮತ್ತು ಅವರ ಮಕ್ಕಳಾದ ಅದ್ನಾನ್ ಮತ್ತು ಮಹಿಮ್ ಎಂದು ಗುರುತಿಸಲಾಗಿದೆ. ವಿಷಯ ತಿಳಿದ ದೇವನಪಲ್ಲಿ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಮುಂದುವರೆಸಿದ್ದಾರೆ. ಹೆಚ್ಚಿನ ವಿವರಗಳಿಗಾಗಿ ನಿರೀಕ್ಷಿಸಲಾಗುತ್ತಿದೆ.