ಹಾಸನ: ಜಿಲ್ಲೆಯಲ್ಲಿ ಅಡುಗೆ ಮಾಡುತ್ತಿದ್ದಂತ ಸಂದರ್ಭದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ, ಮೂವರು ಮಹಿಳೆಯರು ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ.
ಹಾಸನ ಜಿಲ್ಲೆಯ ಅರಕಲಗೋಡು ತಾಲ್ಲೂಕಿನ ಕೊಣನೂರಿನಲ್ಲಿ ಇಂದು ಈ ಘಟನೆ ನಡೆದಿದೆ. ಪಟೇಲ್ ರಾಮೇಗೌಡ ಎಂಬುವರ ಮನೆಯಲ್ಲಿ ತಿಥಿ ಕಾರ್ಯದ ನಿಮಿತ್ತ ಸಿಹಿ ತಿಂಡಿ ತಯಾರಿಕೆಯಲ್ಲಿ ತೊಡಿಗಿದ್ದಾಗ ಈ ದುರ್ಘಟನೆ ನಡೆದಿದೆ.
ಸಿಲಿಂಡರ್ ಸ್ಟೋಟದಲ್ಲಿ ಮೀನಾಕ್ಷಿ, ಮಂಗಳಾ, ರಾಧಾ ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇನ್ನೂ ಸ್ಪೋಟದ ತೀವ್ರತೆಯಿಂದಾಗಿ ಮನೆಯಲ್ಲಿದ್ದಂತ ವಸ್ತುಗಳಿಗೂ ಹಾನಿ ಉಂಟಾಗಿದೆ. ಅದೃಷ್ಟವಶಾತ್ ಭಾರಿ ಅನಾಹುತವೊಂದು ತಪ್ಪಿದೆ. ಈ ಸಂಬಂಧ ಅರಕಲಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BREAKING: 10 & 12 ನೇ ತರಗತಿಯ ಹೊಸ ಪಠ್ಯಕ್ರಮವನ್ನು ಬಿಡುಗಡೆ ಮಾಡಿದ CBSE | New Syllabus For 10th, 12th