ಬೆಂಗಳೂರು: ಇಂದು, ವಿಶ್ವ ಕಾನ್ಸರ್ ದಿನದ ಅಂಗವಾಗಿ HCG Cancer Care ರವರಿಂದ ಕ್ಯಾನ್ಸರ್ ಸ್ಕ್ರೀನಿಂಗ್ ತಪಾಸಣಾ ಕಾರ್ಯಕ್ರಮವನ್ನು ಕೆ.ಎಸ್.ಆರ್.ಟಿ.ಸಿಯ, ಬೆಂಗಳೂರು ಕೇಂದ್ರೀಯ ವಿಭಾಗ, ಘಟಕ-2 ರಲ್ಲಿ 1,000 ಕ್ಕೂ ಹೆಚ್ಚು ನೌಕರರಿಗೆ ಉಚಿತವಾಗಿ ORAL and BREAST ಕ್ಯಾನ್ಸರ್ ತಪಾಸಣೆ ಮತ್ತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಮಾತನಾಡಿದ ವಿ. ಅನ್ಬುಕುಮಾರ್, ಭಾಆಸೇ., ವ್ಯವಸ್ಥಾಪಕ ನಿರ್ದೇಶಕರು, ಕರಾರಸಾ ನಿಗಮ ರವರು ಕ್ಯಾನ್ಸರ್ ತಡೆಗಟ್ಟುವಿಕೆ, ಆರಂಭಿಕ ಪತ್ತೆ ಮತ್ತು ನಿಯಮಿತ ತಪಾಸಣೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಅವಶ್ಯಕವಾಗಿರುತ್ತದೆ. ನಿಗಮದ ಸಿಬ್ಬಂದಿಗಳು ಹಗಲಿರಳು ಎನ್ನದೆ, ಧೂಳು, ಮಾಲಿನ್ಯ ಮತ್ತು ಎಲ್ಲಾ ಸಂದರ್ಭಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಸಿಬ್ಬಂದಿಗಳು ಆರೋಗ್ಯವಾಗಿದಲ್ಲಿ ನಿಗಮವು ಆರೋಗ್ಯವಾಗಿರುತ್ತದೆ ಎಂಬ ಉದ್ದೇಶದಿಂದ ಆರೋಗ್ಯ ತಪಾಸಣಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಆದುದರಿಂದ, ಈ ವರ್ಷವನ್ನು “Healthy Employees, Healthy KSRTC” ಎಂದು ಘೋಷಿಸಲಾಗಿದೆ.
ಕ್ಯಾನ್ಸರ್ ಜಾಗೃತಿಯ ಮಹತ್ವವನ್ನು ತಿಳಿಸಿ ಮತ್ತು ಜೀವಗಳನ್ನು ಉಳಿಸುವಲ್ಲಿ ಆರಂಭಿಕ ಹಸ್ತಕ್ಷೇಪವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ಎಲ್ಲಾ ವಿಭಾಗಗಳಲ್ಲಿಯೂ ಸಹ ಕ್ಯಾನ್ಸ್ರ್ ಶಿಬಿರವನ್ನು ಆಯೋಜಿಸಲು ಸಂಬಂಧಪಟ್ಟವರಿಗೆ ಸೂಚಿಸಿದರು.
ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಆಡಳಿತಾಧಿಕಾರಿಗಳಾದ ಡಾ. ನವೀನ್ ಭಟ್ ಭಾಆಸೇ., ರವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ CERVICAL ಕ್ಯಾನ್ಸರ್ ಹೆಚ್ಚಾಗಿ ವರದಿಯಾಗುತ್ತಿದ್ದು, ಇಂತಹ ಖಾಯಿಲೆಗಳನ್ನು ಪ್ರಥಮ ಅಥವ ದ್ವಿತೀಯ ಹಂತದಲ್ಲಿಯೇ ಪತ್ತೆ ಮಾಡಿ, ಸೂಕ್ತ ಚಿಕಿತ್ಸೆಯನ್ನು ಪಡೆದುಕೊಂಡಲ್ಲಿ ಕ್ಯಾನ್ಸರ್ ಗುಣಪಡಿಸಬಹುದಾಗಿರುವುದರಿಂದ ಮಹಿಳೆಯರು ಯಾವುದೇ ಮುಜಗರಕ್ಕೆ ಒಳಗಾಗದೇ ಪ್ರತಿ ವರ್ಷಕೊಮ್ಮೆ PAP SMEAR TEST ಮಾಡಿಸಿಕೊಳ್ಳುವಂತೆ ತಿಳಿಸಿದರು.
HCG ಕ್ಯಾನ್ಸರ್ ಆಸ್ಪತ್ರೆಯ ಮುಖ್ಯಸ್ಥರಾದ ಮನಿಷಾ ಕುಮಾರ್, Chief Operating Officer ರವರು ಮಾತನಾಡಿ, CERVICAL ಕ್ಯಾನ್ಸರ್ ಖಾಯಿಲೆಯು ಪ್ರತಿ 09 ಜನರಲ್ಲಿ ಒಬ್ಬರಿಗೆ ಹರಡುತ್ತಿದ್ದು, ಪ್ರಾರಂಭಿಕ ಹಂತದಲ್ಲಿಯೇ ಪತ್ತೆ ಹೆಚ್ಚಿ ಚಿಕಿತ್ಸೆ ಪಡೆದುಕೊಳ್ಳುವಂತೆ ತಿಳಿಸಿದರು. ಕ್ಯಾನ್ಸರ್ ಆರಂಭಿಕ ಚಿಹ್ನೆಗಳನ್ನು ಪತ್ತೆಹಚ್ಚುವ ಗುರಿಯನ್ನು ಹೊಂದಿರುವ ಈ ಕಾರ್ಯಕ್ರಮವು ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಮತ್ತು ಅಗತ್ಯವಿದ್ದಾಗ ಸಕಾಲಿಕ ವೈದ್ಯಕೀಯ ಸೌಲಭ್ಯ ಪಡೆಯಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಡಾ. ನಂದಿನಿದೇವಿ ಕೆ. ಭಾಆಸೇ., ನಿರ್ದೇಶಕರು (ಸಿಬ್ಬಂದಿ &ಜಾಗೃತ), HCG ಆಸ್ಪತ್ರೆಯ ಡಾ. ಮಹೇಶ್ ಬಂಡೆಮೇಗಲ್, Surgical Oncologist, HCG ಆಸ್ಪತ್ರೆಯ ಸಿಬ್ಬಂದಿಗಳು ಮತ್ತು ನಿಗಮದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.
ಜಾಗತಿಕ ಹೂಡಿಕೆದಾರರ ಸಮಾವೇಶ: ಫೆ.13ರಂದು `ಕ್ವಿನ್ ಸಿಟಿ ಕುರಿತು ರೌಂಡ್ ಟೇಬಲ್’ ಚರ್ಚೆ- ಸಚಿವ ಎಂ.ಬಿ ಪಾಟೀಲ್