ಬೆಂಗಳೂರು : ರಾಜ್ಯದ ಪಿಯುಸಿ ವಿದ್ಯಾರ್ಥಿಗಳಿಗೆ ಸಚಿವ ಮಧು ಬಂಗಾರಪ್ಪ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ರಾಜ್ಯದಲ್ಲಿ ಸರ್ಕಾರಿ ಹಾಗೂ ಅನುದಾನಿತ ಪದವಿ ಪೂರ್ವ ಕಾಲೇಜುಗಳಿಗೆ ಉಚಿತವಾಗಿ ಪಠ್ಯಪುಸ್ತಕ ವಿತರಿಸಲಾಗುವುದು ಎಂದು ಘೋಷಿಸಿದ್ದಾರೆ.
2026 -27ನೇ ಸಾಲಿನ ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ನೀಡುವ ರೀತಿಯಲ್ಲಿ ಇನ್ನೂ ಮುಂದೆ ಸರ್ಕಾರಿ ಹಾಗೂ ಅನುದಾನಿತ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯಪುಸ್ತಕಗಳನ್ನು ವಿತರಿಸಲಾಗುವುದು.
ಪ್ರಥಮ ಮತ್ತು ದ್ವಿತೀಯ ಪಿಯುಸಿಯಲ್ಲಿ ಓದುತ್ತಿರುವ ಸುಮಾರು 15 ಲಕ್ಷ ವಿದ್ಯಾರ್ಥಿಗಳಿಗೆ ಇದರಿಂದ ಅನುಕೂಲವಾಗುತ್ತದೆ. ಸರ್ಕಾರಿ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಳ, ಗುಣಮಟ್ಟದ ಶಿಕ್ಷಣ ನೀಡಲು ಶಾಲಾ ಶಿಕ್ಷಣ ಇಲಾಖೆಯಿಂದ ಅನೇಕ ಕ್ರಮ ಕೈಗೊಳ್ಳಲಾಗಿದೆ. ಇದುವರೆಗೆ 1-10 ತರಗತಿವರೆಗಿನ ಮಕ್ಕಳಿಗೆ ನೀಡಲಾಗುತ್ತಿದ್ದ ಉಚಿತ ಪಠ್ಯಪುಸ್ತಕ ಯೋಜನೆಯನ್ನು ದ್ವಿತೀಯ ಪಿಯುಸಿವರೆಗೂ ವಿಸ್ತರಿಸಲಾಗುವುದು ತಿಳಿಸಿದ್ದಾರೆ.








