Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸುಳ್ಳು, ಊಹಾ ಪತ್ರಿಕೋದ್ಯಮದಿಂದ ಮಾಧ್ಯಮ ಕ್ಷೇತ್ರಕ್ಕೆ ಹಾನಿ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

21/07/2025 11:02 PM

ಮೀನುಗಾರಿಕೆ ಫಲಾನುಭವಿ ಆಧಾರಿತ ಯೋಜನೆಗಳಿಗೆ ಅರ್ಜಿ ಆಹ್ವಾನ

21/07/2025 9:40 PM

ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಬಿಕ್ಕಟ್ಟು ಮುಂದುವರೆದಿದೆ, ಆಗಸ್ಟ್’ನಲ್ಲಿ ಮಾತುಕತೆ ಪುನರಾರಂಭ : ಮೂಲಗಳು

21/07/2025 9:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಆಯುಷ್ ಚಿಕಿತ್ಸಾಲಯಗಳಲ್ಲಿ ದಿನಕ್ಕೆ ಎರಡು ಬಾರಿ ಉಚಿತ ಯೋಗ ತರಬೇತಿ ಜಾರಿ : ದಿನೇಶ್ ಗುಂಡೂರಾವ್
KARNATAKA

ಆಯುಷ್ ಚಿಕಿತ್ಸಾಲಯಗಳಲ್ಲಿ ದಿನಕ್ಕೆ ಎರಡು ಬಾರಿ ಉಚಿತ ಯೋಗ ತರಬೇತಿ ಜಾರಿ : ದಿನೇಶ್ ಗುಂಡೂರಾವ್

By kannadanewsnow0718/02/2024 8:46 PM

ಬೆಂಗಳೂರು: ರಾಜ್ಯ ಸರ್ಕಾರವು ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಆಯುಷ್ ಚಿಕಿತ್ಸಾಲಯಗಳಲ್ಲಿ ಆಯುಷ್ಮಾನ್ ಮಂದಿರಗಳ ಮೂಲಕ ನುರಿತ ಯೋಗ ತರಬೇತುದಾರರಿಂದ ದಿನಕ್ಕೆ ಎರಡು ಬಾರಿ ಉಚಿತ ಯೋಗ ತರಬೇತಿ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದರು.

ಇಂದು ವಿಧಾನ ಸೌಧದ ಮುಂಭಾಗದಲ್ಲಿ ಆಯುμï ಇಲಾಖೆ ಮತ್ತು ಯೋಗ ಗಂಗೋತ್ರಿ ಟ್ರಸ್ಟ್ ಸಹಯೋಗದೊಂದಿಗೆ, ರಥಸಪ್ತಮಿ ಅಂಗವಾಗಿ ಆಯೋಜಿಸಲಾಗಿದ್ದ “ಯೋಗ ಮತ್ತು 108 ಸೂರ್ಯ ನಮಸ್ಕಾರ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸೂರ್ಯನಮಸ್ಕಾರ ಮಾಡುವುದರಿಂದ ಉತ್ತಮ ಶಾರೀರಿಕ ಆರೋಗ್ಯ ಮತ್ತು ಮಾನಸಿಕ ಆರೋಗ್ಯವನ್ನು ಸಮೃದ್ಧಿಸಿಕೊಳ್ಳಬಹುದು ಎಂದು ಹೇಳಿದರು.

ಸೂರ್ಯ ನಮಸ್ಕಾರದ ಅಭ್ಯಾಸದಿಂದ ಶರೀರ ಮತ್ತು ಮನಸ್ಸಿಗೆ ನವ ಚೈತನ್ಯ ಸಿಗುತ್ತದೆ. ಸೂರ್ಯ ನಮಸ್ಕಾರ, ಇನ್ನಿತರೆ ಆಸನಗಳು ಪ್ರಾಣಾಯಾಮ ಹಾಗೂ ಧ್ಯಾನ ಇನ್ನಿತರೆ ಅಭ್ಯಾಸಗಳಿಂದ ದೇಹ, ಮನಸ್ಸು ಚುರುಕುಗೊಳ್ಳುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಆಧುನಿಕ ಜಗತ್ತಿನ ಬದಲಾದ ಜೀವನ ಶೈಲಿಯಿಂದ ಉಂಟಾಗುವ ಮನುಷ್ಯನ ಶಾರೀರಿಕ ಮತ್ತು ಮಾನಸಿಕ ಸಮಸ್ಯೆಗಳಿಗೆ ಸೂರ್ಯ ನಮಸ್ಕಾರದಂತಹ ಯೋಗಾಭ್ಯಾಸಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಇಂದಿನ ದಿನದ ಪ್ರಮುಖ ಅಗತ್ಯಗಳಲ್ಲೊಂದಾಗಿರುತ್ತದೆ ಎಂದು ಸಲಹೆ ನೀಡಿದರು.

ಭಾರತೀಯ ಸಂಸ್ಕøತಿಯಲ್ಲಿ ಉತ್ತಮ ಆರೋಗ್ಯ, ಸುಖ-ಸಮೃದ್ಧಿಗಾಗಿ ನಿತ್ಯವು ಸೂರ್ಯನಿಗೆ ಪೂಜೆ ಸಲ್ಲಿಸಲಾಗುತ್ತದೆ. ಸೂರ್ಯನಿಲ್ಲದೆ ದಿನಗಳನ್ನು ಊಹಿಸಲು ಕೂಡ ಅಸಾಧ್ಯ. ಸೂರ್ಯನ ಕಿರಣಗಳು ಮನುಷ್ಯನ ಆರೋಗ್ಯಕ್ಕೆ ಎಷ್ಟು ಪ್ರಮುಖವಾದದು ಎಂಬುದು ವೈಜ್ಞಾನಿಕವಾಗಿ ಸಾಬೀತಾಗಿದೆ ಎಂದರು.

ಜನರ ಉತ್ತಮ ಆರೋಗ್ಯಕ್ಕಾಗಿ ಸರ್ಕಾರವು ಜಾರಿಗೊಳಿಸಿರುವ ಉಚಿತ ಯೋಗ ತರಬೇತಿಯ ಪ್ರಯೋಜನವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಂಡು ಆರೋಗ್ಯವಂತ ಜೀವನ ನಡೆಸಬೇಕೆಂದರು.

ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ ಅವರು ಮಾತನಾಡಿ, ಮನಸ್ಸು ಮತ್ತು ಆರೋಗ್ಯ ಚೆನ್ನಾಗಿರಬೇಕೆಂದರೆ ಯೋಗ ಅಭ್ಯಾಸ ಅತ್ಯವಶ್ಯಕವಾಗಿದೆ. ನಾನು ಸಹ ಕಳೆದ ವರ್ಷಗಳಿಂದ ಯೋಗಭ್ಯಾಸ ಮಾಡುತ್ತಿರುವುದರಿಂದ ಬಹಳಷ್ಟು ಬದಲಾವಣೆಯನ್ನು ಹೊಂದಿದ್ದೇನೆ. ಸೂರ್ಯ ನಮಸ್ಕಾರ ಮಾಡುವುದು ಸ್ವಲ್ಪ ಕಷ್ಟವಾದರೂ, ಇದರಿಂದ ಸದೃಢವಾದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಆದ್ದರಿಂದ ಎಲ್ಲರೂ ಯೋಗಭ್ಯಾಸ ಮತ್ತು ಸೂರ್ಯ ನಮಸ್ಕಾರ ಮಾಡುವುದನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದರು.

ಈ ಕಾರ್ಯಕ್ರಮದಲ್ಲಿ ಆಯುಷ್ ಇಲಾಖೆಯ ಆಯುಕ್ತರಾದ ಶ್ರೀನಿವಾಸಲು, ಯೋಗ ಗಂಗೋತ್ರಿ ಸಂಸ್ಥೆಯವರಾದ ಡಾ. ಆರಾಧ್ಯ ಗುರುರಾಜ, ಆಯುಷ್ ಇಲಾಖೆಯ ತರಬೇತುದಾರರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು

Free yoga training to be implemented twice a day in AYUSH clinics: Dinesh Gundu Rao ಆಯುಷ್ ಚಿಕಿತ್ಸಾಲಯಗಳಲ್ಲಿ ದಿನಕ್ಕೆ ಎರಡು ಬಾರಿ ಉಚಿತ ಯೋಗ ತರಬೇತಿ ಜಾರಿ : ದಿನೇಶ್ ಗುಂಡೂರಾವ್
Share. Facebook Twitter LinkedIn WhatsApp Email

Related Posts

ಸುಳ್ಳು, ಊಹಾ ಪತ್ರಿಕೋದ್ಯಮದಿಂದ ಮಾಧ್ಯಮ ಕ್ಷೇತ್ರಕ್ಕೆ ಹಾನಿ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

21/07/2025 11:02 PM2 Mins Read

ಮೀನುಗಾರಿಕೆ ಫಲಾನುಭವಿ ಆಧಾರಿತ ಯೋಜನೆಗಳಿಗೆ ಅರ್ಜಿ ಆಹ್ವಾನ

21/07/2025 9:40 PM1 Min Read

ಪಾವತಿ ಆಧಾರದ ಮೇಲೆ ಫಿಜಿಯೋಥೆರಪಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ

21/07/2025 9:38 PM1 Min Read
Recent News

ಸುಳ್ಳು, ಊಹಾ ಪತ್ರಿಕೋದ್ಯಮದಿಂದ ಮಾಧ್ಯಮ ಕ್ಷೇತ್ರಕ್ಕೆ ಹಾನಿ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

21/07/2025 11:02 PM

ಮೀನುಗಾರಿಕೆ ಫಲಾನುಭವಿ ಆಧಾರಿತ ಯೋಜನೆಗಳಿಗೆ ಅರ್ಜಿ ಆಹ್ವಾನ

21/07/2025 9:40 PM

ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಬಿಕ್ಕಟ್ಟು ಮುಂದುವರೆದಿದೆ, ಆಗಸ್ಟ್’ನಲ್ಲಿ ಮಾತುಕತೆ ಪುನರಾರಂಭ : ಮೂಲಗಳು

21/07/2025 9:40 PM

ಪಾವತಿ ಆಧಾರದ ಮೇಲೆ ಫಿಜಿಯೋಥೆರಪಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ

21/07/2025 9:38 PM
State News
KARNATAKA

ಸುಳ್ಳು, ಊಹಾ ಪತ್ರಿಕೋದ್ಯಮದಿಂದ ಮಾಧ್ಯಮ ಕ್ಷೇತ್ರಕ್ಕೆ ಹಾನಿ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

By kannadanewsnow0921/07/2025 11:02 PM KARNATAKA 2 Mins Read

ಚಿತ್ರದುರ್ಗ: ಸುಳ್ಳು ಹಾಗೂ ಊಹಾ ಪತ್ರಿಕೋದ್ಯಮದಿಂದ ಮಾಧ್ಯಮ ಕ್ಷೇತ್ರಕ್ಕೆ ಹಾನಿಯಾಗುತ್ತಿದೆ. ಪತ್ರಕರ್ತರು ಇಂದು ಗಾಳಿ ಸುದ್ಧಿಗಳಿಗೆ ಗವಾಕ್ಷಿಗಳಾಗುತ್ತಿದ್ದಾರೆ. ಸಾಮಾಜಿಕ ಮಾಧ್ಯಮ…

ಮೀನುಗಾರಿಕೆ ಫಲಾನುಭವಿ ಆಧಾರಿತ ಯೋಜನೆಗಳಿಗೆ ಅರ್ಜಿ ಆಹ್ವಾನ

21/07/2025 9:40 PM

ಪಾವತಿ ಆಧಾರದ ಮೇಲೆ ಫಿಜಿಯೋಥೆರಪಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ

21/07/2025 9:38 PM

‘ರಾಗಿ ಖರೀದಿ ಹಣ’ ಬಿಡುಗಡೆ ಮಾಡಿ ಸರ್ಕಾರಕ್ಕೆ ‘ಮದ್ದೂರು ರೈತ ಮುಖಂಡ’ರ ಆಗ್ರಹ

21/07/2025 8:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.