Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸಚಿವ ಸಂಪುಟ ಪುನಾರಚನೆ ವಿಚಾರ : ಈ ಪ್ರಮುಖ 4 ಅಂಶಗಳನ್ನು ಮುಂದಿಟ್ಟ ಕಾಂಗ್ರೆಸ್ ಹೈಕಮಾಂಡ್

16/11/2025 10:13 AM

BIG NEWS : ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಅನುಮತಿ ಸಿಕ್ಕರೆ ನಾಯಕತ್ವ ಬದಲಾವಣೆ ಇಲ್ಲ : ಗೃಹ ಸಚಿವ ಜಿ ಪರಮೇಶ್ವರ್

16/11/2025 10:06 AM

BREAKING : ರಾಜ್ಯ ಸಚಿವ ಸಂಪುಟ ಪುನಾರಚನೆ ವಿಚಾರ : ನಾಳೆ ಮತ್ತೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ

16/11/2025 10:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇನ್ಮುಂದೆ ಸರ್ಕಾರಿ ವೈದ್ಯರು, ಸಿಬ್ಬಂದಿಗಳಿಗೆ ಗ್ರಾಮೀಣ ಸೇವೆ ಕಡ್ಡಾಯ: ವಿಧಾನಪರಿಷತ್ತಿನಲ್ಲಿ ಮಸೂಧೆ ಅಂಗೀಕಾರ
KARNATAKA

ಇನ್ಮುಂದೆ ಸರ್ಕಾರಿ ವೈದ್ಯರು, ಸಿಬ್ಬಂದಿಗಳಿಗೆ ಗ್ರಾಮೀಣ ಸೇವೆ ಕಡ್ಡಾಯ: ವಿಧಾನಪರಿಷತ್ತಿನಲ್ಲಿ ಮಸೂಧೆ ಅಂಗೀಕಾರ

By kannadanewsnow0921/08/2025 6:14 AM

ಬೆಂಗಳೂರು: ವಿಧಾನ ಪರಿಷತ್ತಿನಲ್ಲಿ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದೆ. ಹೀಗಾಗಿ ಇನ್ಮುಂದೆ ಆರೋಗ್ಯ ಇಲಾಖೆಯ ವೈದ್ಯರು, ನರ್ಸ್ ಸೇರಿದಂತೆ ಇತರೆ ಸಿಬ್ಬಂದಿಗಳಿಗೆ ಗ್ರಾಮೀಣ ಭಾಗದಲ್ಲಿ ಕರ್ತವ್ಯ ನಿರ್ವಹಿಸುವುದು ಕಡ್ಡಾಯಗೊಂಡಂತೆ ಆಗಿದೆ.

ರಾಜ್ಯದ ನಗರ ಪ್ರದೇಶಗಳಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವಂತ ವೈದ್ಯರು, ನರ್ಸ್ ಗಳು ಸೇರಿದಂತೆ ಇತರೆ ಸಿಬ್ಬಂದಿಗಳು ಇನ್ಮುಂದೆ ಕಡ್ಡಾಯವಾಗಿ ಗ್ರಾಮೀಣ ಭಾಗದಲ್ಲಿ ಕರ್ತವ್ಯ ನಿರ್ವಹಿಸಬೇಕಿದೆ. ಇದರ ಸಂಬಂಧ ವಿಧಾನಪರಿಷತ್ತಿನಲ್ಲಿ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿ ವರ್ಗಾವಣೆ ನಿಯಂತ್ರಣ) ತಿದ್ದುಪಡಿ ಕಾಯ್ದೆ ವಿಧಾನ ಪರಿಷತ್ ನಲ್ಲಿ ಅಂಗೀಕಾರಗೊಂಡಿದೆ.

ಇಂದು ವಿಧಾನ ಪರಿಷತ್ತಿನಲ್ಲಿ ತಿದ್ದುಪಡಿ ವಿಧೇಯಕ ಮಂಡಿಸಿ ಮಾತನಾಡಿದಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ನಗರ ಪ್ರದೇಶಗಳ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವಂತ ವೈದ್ಯರು, ನರ್ಸ್ ಗಳು, ಡಿ ಗ್ರೂಪ್ ಸಿಬ್ಬಂದಿಗಳು ದೀರ್ಘಕಾಲದಿಂದ ಒಂದೇ ಕಡೆ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಕೆಲಸದಲ್ಲಿ ಪಾರದರ್ಶಕತೆ ತರುವ ಸಲುವಾಗಿ ಇವರನ್ನು ವರ್ಗಾವಣೆ ಮಾಡಿದರೇ ನ್ಯಾಯಾಲಯದ ಮೊರೆ ಹೋಗುತ್ತಿದ್ದರು. ಸರ್ಕಾರದ ವರ್ಗಾವಣೆಗೆ ತಡೆಯಾಜ್ಞೆ ತರುತ್ತಿದ್ದರು ಎಂದರು.

ನಗರ ಪ್ರದೇಶದಿಂದ ಗ್ರಾಮೀಣ ಭಾಗಕ್ಕೆ ಆರೋಗ್ಯ ಸೇವೆಗೆ ವೈದ್ಯರು ಸೇರಿದಂತೆ ಇತರೆ ಸಿಬ್ಬಂದಿ ಹೋಗದ ಕಾರಣದಿಂದಾಗಿ ಗ್ರಾಮೀಣ ಭಾಗದಲ್ಲಿ ವೈದ್ಯರು, ಇತರೆ ಸಿಬ್ಬಂದಿಗಳ ಕೊರತೆ ಉಂಟಾಗುತ್ತಿದೆ. ಹೀಗಾಗಿ ಇದನ್ನು ಸರಿ ಪಡಿಸೋ ಸಲುವಾಗಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ ಎಂಬುದಾಗಿ ತಿಳಿಸಿದರು.

ನೂತನ ಕಾಯ್ದೆಯಂತೆ ಹಲವು ವರ್ಷಗಳ ಕಾಲ ಒಂದೇ ಕಡೆ ಕೆಲಸ ಮಾಡುತ್ತಿರುವಂತ ವೈದ್ಯರಿಗೆ ಬಡ್ತಿ ಸಂದರ್ಭದಲ್ಲಿ ಕಡ್ಡಾಯವಾಗಿ ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸಬೇಕಾಗಿದೆ. ಈಗಾಗಲೇ 500 ವೈದ್ಯರು ಹಾಗೂ ಇನ್ನಿತರರನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲಾಗಿದೆ ಎಂಬುದಾಗಿ ಹೇಳಿದರು.

Share. Facebook Twitter LinkedIn WhatsApp Email

Related Posts

ರಾಜ್ಯ ಸಚಿವ ಸಂಪುಟ ಪುನಾರಚನೆ ವಿಚಾರ : ಈ ಪ್ರಮುಖ 4 ಅಂಶಗಳನ್ನು ಮುಂದಿಟ್ಟ ಕಾಂಗ್ರೆಸ್ ಹೈಕಮಾಂಡ್

16/11/2025 10:13 AM1 Min Read

BIG NEWS : ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಅನುಮತಿ ಸಿಕ್ಕರೆ ನಾಯಕತ್ವ ಬದಲಾವಣೆ ಇಲ್ಲ : ಗೃಹ ಸಚಿವ ಜಿ ಪರಮೇಶ್ವರ್

16/11/2025 10:06 AM1 Min Read

BREAKING : ರಾಜ್ಯ ಸಚಿವ ಸಂಪುಟ ಪುನಾರಚನೆ ವಿಚಾರ : ನಾಳೆ ಮತ್ತೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ

16/11/2025 10:02 AM1 Min Read
Recent News

ರಾಜ್ಯ ಸಚಿವ ಸಂಪುಟ ಪುನಾರಚನೆ ವಿಚಾರ : ಈ ಪ್ರಮುಖ 4 ಅಂಶಗಳನ್ನು ಮುಂದಿಟ್ಟ ಕಾಂಗ್ರೆಸ್ ಹೈಕಮಾಂಡ್

16/11/2025 10:13 AM

BIG NEWS : ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಅನುಮತಿ ಸಿಕ್ಕರೆ ನಾಯಕತ್ವ ಬದಲಾವಣೆ ಇಲ್ಲ : ಗೃಹ ಸಚಿವ ಜಿ ಪರಮೇಶ್ವರ್

16/11/2025 10:06 AM

BREAKING : ರಾಜ್ಯ ಸಚಿವ ಸಂಪುಟ ಪುನಾರಚನೆ ವಿಚಾರ : ನಾಳೆ ಮತ್ತೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ

16/11/2025 10:02 AM

ಮೆಕ್ಸಿಕೋದಾದ್ಯಂತ ತೀವ್ರಗೊಂಡ ಜನರಲ್ ಝೆಡ್ ಪ್ರತಿಭಟನೆ, ಪೋಲಿಸರೊಂದಿಗೆ ಘರ್ಷಣೆ,120 ಮಂದಿಗೆ ಗಾಯ | Gen Z Protests

16/11/2025 10:01 AM
State News
KARNATAKA

ರಾಜ್ಯ ಸಚಿವ ಸಂಪುಟ ಪುನಾರಚನೆ ವಿಚಾರ : ಈ ಪ್ರಮುಖ 4 ಅಂಶಗಳನ್ನು ಮುಂದಿಟ್ಟ ಕಾಂಗ್ರೆಸ್ ಹೈಕಮಾಂಡ್

By kannadanewsnow0516/11/2025 10:13 AM KARNATAKA 1 Min Read

ಬೆಂಗಳೂರು : ರಾಜ್ಯ ಸಚಿವ ಸಂಪುಟ ಪುನಾರಸನಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದು…

BIG NEWS : ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಅನುಮತಿ ಸಿಕ್ಕರೆ ನಾಯಕತ್ವ ಬದಲಾವಣೆ ಇಲ್ಲ : ಗೃಹ ಸಚಿವ ಜಿ ಪರಮೇಶ್ವರ್

16/11/2025 10:06 AM

BREAKING : ರಾಜ್ಯ ಸಚಿವ ಸಂಪುಟ ಪುನಾರಚನೆ ವಿಚಾರ : ನಾಳೆ ಮತ್ತೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ

16/11/2025 10:02 AM

ಜನ್ಮ ನಕ್ಷತ್ರದಿಂದ ಅವರ ಕುಟುಂಬಕ್ಕೆ ಪೂರ್ವಜರ ಶಾಪವಿದೆಯೇ ಎಂದು ಕಂಡುಹಿಡಿಯಲು ಸರಳ ಮಾರ್ಗಗಳು

16/11/2025 9:36 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.