ಬೆಂಗಳೂರು: ರಾಜ್ಯದ SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಇನ್ಮುಂದೆ ಆಂತರೀಕ ಮೌಲ್ಯಮಾಪನ ಮತ್ತು ಬಾಹ್ಯ ಪರೀಕ್ಷೆ ಎರಡೂ ಸೇರಿ ಒಟ್ಟಾರೆ ಶೇ.33% ಅಂಕಗಳನ್ನು ಪಡೆದರೇ ಪಾಸ್ ಮಾಡಲಿದೆ. ಅಂದರೇ ಆಂತರೀಕ ಮೌಲ್ಯ ಮಾಪನದಲ್ಲಿ 20 ಅಂಕದಲ್ಲಿ 20 ಪಡೆದು, ವಾರ್ಷಿಕ ಪರೀಕ್ಷೆಯಲ್ಲಿ 13 ಅಂಕವನ್ನು ಪಡೆದರೂ ಒಟ್ಟು 33 ಅಂಕ ತಗೆದೆರೂ ಎಸ್ ಎಸ್ ಎಲ್ ಸಿ ಪರೀಕ್ಷೆಯ ಆಯಾ ವಿಷಯದಲ್ಲಿ ಪಾಸ್ ಆಗಲಿದ್ದಾರೆ.
ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಾಯ್ದೆ, 1966 (1966ರ ಕರ್ನಾಟಕ ಅಧಿನಿಯಮ ಸಂಖ್ಯೆ 16) ಸೆಕ್ಷನ್ 26 ಮತ್ತು ಸೆಕ್ಷನ್ 27 ರ ಮೂಲಕ ಪದವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು, ಕರ್ನಾಟಕ ಸರ್ಕಾರದ ಅನುಮೋದನೆ ಮೇರೆಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಮೊದಲ ನಿಯಮಾವಳಿಗಳು, 1966ಗೆ ಕರ್ನಾಟಕ ಸರ್ಕಾರವು ಪ್ರಸ್ತಾಪಿಸಿರುವ ಅಧಿಸೂಚನೆ ಸಂಖ್ಯೆ:ಇಪಿ 211 ಎಸ್ಎಲ್ಬಿ 2025, ದಿನಾಂಕ:24.07.2025 ರಲ್ಲಿ ಪಕಟಿಸಿರುವ ಕರಡು ಅಧಿಸೂಚನೆಯನ್ನು ಕರ್ನಾಟಕ ರಾಜ್ಯಪತ್ರದ ಭಾಗ 4 (ಎ) ರಲ್ಲಿ ಪ್ರಕಟಿಸಿದ ದಿನಾಂಕದಿಂದ 15 ದಿನಗಳೊಳಗಾಗಿ ಇದರಿಂದ ಬಾಧಿತರಾಗುವ, ಸಂಭವವಿರುವ ಎಲ್ಲಾ ವ್ಯಕ್ತಿಗಳಿಂದ ಆಕ್ಷೇಪಣೆ ಮತ್ತು ಸಲಹೆಗಳನ್ನು ಆಹ್ವಾನಿಸಲು, ಕರ್ನಾಟಕ ರಾಜ್ಯಪತ್ರದಲ್ಲಿ ಪುಕಟಿಸಲಾಗಿರುತ್ತದೆ ಎಂದಿದ್ದಾರೆ.
ದಿನಾಂಕ:24.07.2025 ರಲ್ಲಿ ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಿರುವ ಸದರಿ ಕರಡು ನಿಯಮಗಳಿಗೆ ಸಾರ್ವಜನಿಕರಿಂದ ಆಕ್ಷೇಪಣೆ / ಸಲಹೆಗಳು ಸರ್ಕಾರದಲ್ಲಿ ಸ್ವೀಕೃತವಾಗಿರುತ್ತವೆ.
ಈಗ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಾಯ್ದೆ, 1966 (1966ರ ಕರ್ನಾಟಕ ಅಧಿನಿಯಮ ಸಂಖ್ಯೆ 16) ಸೆಕ್ಷನ್ 26 ಮತ್ತು ಸೆಕ್ಷನ್ 27 ರ ಮೂಲಕ ಪದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಈ ಕೆಳಕಂಡ ನಿಯಮಗಳನ್ನು ರಚಿಸಿರುತ್ತದೆ. ಎಂದರೆ:-
ನಿಯಮಗಳು
1. ಶೀರ್ಷಿಕೆ ಮತ್ತು ಪ್ರಾರಂಭ. ಈ ನಿಯಮಗಳನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಮೊದಲ ನಿಯಮಗಳು (ತಿದ್ದುಪಡಿ) 2025 ಎಂದು ಕರೆಯತಕ್ಕದ್ದು.
2. ಅನುಬಂಧ ||| ರ ತಿದ್ದುಪಡಿ, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಮೊದಲ ನಿಯಮಾವಳಿಗಳು, 1966, ಅನುಬಂಧ II ರಲ್ಲಿ-
(i) ನಿಯಮ 16 ಮತ್ತು ಅದಕ್ಕೆ ಸಂಬಂಧಿಸಿದ ನಮೂದುಗಳಿಗೆ, ಈ ಕೆಳಗಿನಂತೆ ಪ್ರತಿಯೋಜಿಸತಕ್ಕದ್ದು,
“16. ಅಭ್ಯರ್ಥಿಗಳು ಆಂತರಿಕ ಮೌಲ್ಯಮಾಪನ ಮತ್ತು ಬಾಹ್ಯ ಪರೀಕ್ಷೆ ಎರಡೂ ಸೇರಿ ಒಟ್ಟಾರೆ 33% ಅಂಕಗಳನ್ನು ಪಡೆದು, ಒಟ್ಟು 625 ಅಂಕಗಳಿಗೆ ಕನಿಷ್ಠ 206 ಅಂಕಗಳನ್ನು ಗಳಿಸಿದಲ್ಲಿ ಮತ್ತು ಆಯಾ ವಿಷಯದ ಒಟ್ಟು ಅಂಕಗಳಲ್ಲಿ ಕನಿಷ್ಠ 30% ಅಂಕಗಳನ್ನು ಪಡೆದಲ್ಲಿ ಅಂತಹ ಅಭ್ಯರ್ಥಿಯನ್ನು ಉತ್ತೀರ್ಣರೆಂದು ಘೋಷಿಸಲಾಗುತ್ತದೆ ಎಂಬುದಾಗಿ ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು
BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಸಿಹಿಸುದ್ದಿ: ತುಟ್ಟಿಭತ್ಯೆ(DA) ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ | DA Hike
BREAKING: ರಾಜ್ಯದ ‘ಪೊಲೀಸ್ ಇಲಾಖೆ’ಯಲ್ಲಿ ಖಾಲಿ ಇರುವ ‘2032 ಹುದ್ದೆ’ಗಳ ಭರ್ತಿಗೆ ಸರ್ಕಾರ ಆದೇಶ | JOB ALERT