Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಾತ್ರೆ ಬೇಡ, ಕೆಮಿಕಲ್ ಬೇಡ; ಲೈಂಗಿಕ ಸಾಮರ್ಥ್ಯ ಮತ್ತು ಸ್ಟ್ಯಾಮಿನಾ ಹೆಚ್ಚಿಸಬಲ್ಲ ಸೂಪರ್ ಫುಡ್ಸ್ ಇವು! | Sexual Stamina

ದಿನವೂ ಧರಿಸುವ ನೈಟಿ, ಲುಂಗಿಗಳನ್ನು ಎಷ್ಟು ದಿನಗಳಿಗೊಮ್ಮೆ ತೊಳೆಯಬೇಕು? ಇಲ್ಲಿದೆ ಆರೋಗ್ಯದ ರಹಸ್ಯ!

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇನ್ಮುಂದೆ ‘SSLC ಪರೀಕ್ಷೆ’ಯಲ್ಲಿ 35 ಅಲ್ಲ, 33 ಅಂಕ ತೆಗೆದ್ರೂ ಪಾಸ್: ಶಾಲಾ ಶಿಕ್ಷಣ ಇಲಾಖೆ ಅಧಿಕೃತ ಆದೇಶ
KARNATAKA

ಇನ್ಮುಂದೆ ‘SSLC ಪರೀಕ್ಷೆ’ಯಲ್ಲಿ 35 ಅಲ್ಲ, 33 ಅಂಕ ತೆಗೆದ್ರೂ ಪಾಸ್: ಶಾಲಾ ಶಿಕ್ಷಣ ಇಲಾಖೆ ಅಧಿಕೃತ ಆದೇಶ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯದ SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಇನ್ಮುಂದೆ ಆಂತರೀಕ ಮೌಲ್ಯಮಾಪನ ಮತ್ತು ಬಾಹ್ಯ ಪರೀಕ್ಷೆ ಎರಡೂ ಸೇರಿ ಒಟ್ಟಾರೆ ಶೇ.33% ಅಂಕಗಳನ್ನು ಪಡೆದರೇ ಪಾಸ್ ಮಾಡಲಿದೆ. ಅಂದರೇ ಆಂತರೀಕ ಮೌಲ್ಯ ಮಾಪನದಲ್ಲಿ 20 ಅಂಕದಲ್ಲಿ 20 ಪಡೆದು, ವಾರ್ಷಿಕ ಪರೀಕ್ಷೆಯಲ್ಲಿ 13 ಅಂಕವನ್ನು ಪಡೆದರೂ ಒಟ್ಟು 33 ಅಂಕ ತಗೆದೆರೂ ಎಸ್ ಎಸ್ ಎಲ್ ಸಿ ಪರೀಕ್ಷೆಯ ಆಯಾ ವಿಷಯದಲ್ಲಿ ಪಾಸ್ ಆಗಲಿದ್ದಾರೆ. 

ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಾಯ್ದೆ, 1966 (1966ರ ಕರ್ನಾಟಕ ಅಧಿನಿಯಮ ಸಂಖ್ಯೆ 16) ಸೆಕ್ಷನ್ 26 ಮತ್ತು ಸೆಕ್ಷನ್ 27 ರ ಮೂಲಕ ಪದವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು, ಕರ್ನಾಟಕ ಸರ್ಕಾರದ ಅನುಮೋದನೆ ಮೇರೆಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಮೊದಲ ನಿಯಮಾವಳಿಗಳು, 1966ಗೆ ಕರ್ನಾಟಕ ಸರ್ಕಾರವು ಪ್ರಸ್ತಾಪಿಸಿರುವ ಅಧಿಸೂಚನೆ ಸಂಖ್ಯೆ:ಇಪಿ 211 ಎಸ್‌ಎಲ್‌ಬಿ 2025, ದಿನಾಂಕ:24.07.2025 ರಲ್ಲಿ ಪಕಟಿಸಿರುವ ಕರಡು ಅಧಿಸೂಚನೆಯನ್ನು ಕರ್ನಾಟಕ ರಾಜ್ಯಪತ್ರದ ಭಾಗ 4 (ಎ) ರಲ್ಲಿ ಪ್ರಕಟಿಸಿದ ದಿನಾಂಕದಿಂದ 15 ದಿನಗಳೊಳಗಾಗಿ ಇದರಿಂದ ಬಾಧಿತರಾಗುವ, ಸಂಭವವಿರುವ ಎಲ್ಲಾ ವ್ಯಕ್ತಿಗಳಿಂದ ಆಕ್ಷೇಪಣೆ ಮತ್ತು ಸಲಹೆಗಳನ್ನು ಆಹ್ವಾನಿಸಲು, ಕರ್ನಾಟಕ ರಾಜ್ಯಪತ್ರದಲ್ಲಿ ಪುಕಟಿಸಲಾಗಿರುತ್ತದೆ ಎಂದಿದ್ದಾರೆ.

ದಿನಾಂಕ:24.07.2025 ರಲ್ಲಿ ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಿರುವ ಸದರಿ ಕರಡು ನಿಯಮಗಳಿಗೆ ಸಾರ್ವಜನಿಕರಿಂದ ಆಕ್ಷೇಪಣೆ / ಸಲಹೆಗಳು ಸರ್ಕಾರದಲ್ಲಿ ಸ್ವೀಕೃತವಾಗಿರುತ್ತವೆ.

ಈಗ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಾಯ್ದೆ, 1966 (1966ರ ಕರ್ನಾಟಕ ಅಧಿನಿಯಮ ಸಂಖ್ಯೆ 16) ಸೆಕ್ಷನ್ 26 ಮತ್ತು ಸೆಕ್ಷನ್ 27 ರ ಮೂಲಕ ಪದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಈ ಕೆಳಕಂಡ ನಿಯಮಗಳನ್ನು ರಚಿಸಿರುತ್ತದೆ. ಎಂದರೆ:-

ನಿಯಮಗಳು

1. ಶೀರ್ಷಿಕೆ ಮತ್ತು ಪ್ರಾರಂಭ. ಈ ನಿಯಮಗಳನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಮೊದಲ ನಿಯಮಗಳು (ತಿದ್ದುಪಡಿ) 2025 ಎಂದು ಕರೆಯತಕ್ಕದ್ದು.

2. ಅನುಬಂಧ ||| ರ ತಿದ್ದುಪಡಿ, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಮೊದಲ ನಿಯಮಾವಳಿಗಳು, 1966, ಅನುಬಂಧ II ರಲ್ಲಿ-

(i) ನಿಯಮ 16 ಮತ್ತು ಅದಕ್ಕೆ ಸಂಬಂಧಿಸಿದ ನಮೂದುಗಳಿಗೆ, ಈ ಕೆಳಗಿನಂತೆ ಪ್ರತಿಯೋಜಿಸತಕ್ಕದ್ದು,

“16. ಅಭ್ಯರ್ಥಿಗಳು ಆಂತರಿಕ ಮೌಲ್ಯಮಾಪನ ಮತ್ತು ಬಾಹ್ಯ ಪರೀಕ್ಷೆ ಎರಡೂ ಸೇರಿ ಒಟ್ಟಾರೆ 33% ಅಂಕಗಳನ್ನು ಪಡೆದು, ಒಟ್ಟು 625 ಅಂಕಗಳಿಗೆ ಕನಿಷ್ಠ 206 ಅಂಕಗಳನ್ನು ಗಳಿಸಿದಲ್ಲಿ ಮತ್ತು ಆಯಾ ವಿಷಯದ ಒಟ್ಟು ಅಂಕಗಳಲ್ಲಿ ಕನಿಷ್ಠ 30% ಅಂಕಗಳನ್ನು ಪಡೆದಲ್ಲಿ ಅಂತಹ ಅಭ್ಯರ್ಥಿಯನ್ನು ಉತ್ತೀರ್ಣರೆಂದು ಘೋಷಿಸಲಾಗುತ್ತದೆ ಎಂಬುದಾಗಿ ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಸಿಹಿಸುದ್ದಿ: ತುಟ್ಟಿಭತ್ಯೆ(DA) ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ | DA Hike

BREAKING: ರಾಜ್ಯದ ‘ಪೊಲೀಸ್ ಇಲಾಖೆ’ಯಲ್ಲಿ ಖಾಲಿ ಇರುವ ‘2032 ಹುದ್ದೆ’ಗಳ ಭರ್ತಿಗೆ ಸರ್ಕಾರ ಆದೇಶ | JOB ALERT

Share. Facebook Twitter LinkedIn WhatsApp Email

Related Posts

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

1 Min Read

ಮೇ.27ರಂದು ಬೆಂಗಳೂರಿನಲ್ಲಿ ದೇಶದ ಪ್ರಥಮ ‘ರಾಷ್ಟ್ರೀಯ ಎಐ ಮತ್ತು ಡಿಜಿಟಲ್ ವಾಟರ್ ಶೃಂಗಸಭೆ 2026’ ಆಯೋಜನೆ

2 Mins Read

BREAKING: ಬೆಂಗಳೂರಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಗೆ ₹24 ಕೋಟಿ ವಂಚಿಸಿದ್ದ ಆರು ಖತರ್ನಾಕ್ ಸೈಬರ್ ಕಳ್ಳರು ಅರೆಸ್ಟ್!

2 Mins Read
Recent News

ಮಾತ್ರೆ ಬೇಡ, ಕೆಮಿಕಲ್ ಬೇಡ; ಲೈಂಗಿಕ ಸಾಮರ್ಥ್ಯ ಮತ್ತು ಸ್ಟ್ಯಾಮಿನಾ ಹೆಚ್ಚಿಸಬಲ್ಲ ಸೂಪರ್ ಫುಡ್ಸ್ ಇವು! | Sexual Stamina

ದಿನವೂ ಧರಿಸುವ ನೈಟಿ, ಲುಂಗಿಗಳನ್ನು ಎಷ್ಟು ದಿನಗಳಿಗೊಮ್ಮೆ ತೊಳೆಯಬೇಕು? ಇಲ್ಲಿದೆ ಆರೋಗ್ಯದ ರಹಸ್ಯ!

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

‘ಶಾಲೆಗಳಲ್ಲಿ ಸ್ಯಾನಿಟರಿ ನ್ಯಾಪ್‌ಕಿನ್ ಇಲ್ಲ ಎಂಬ ಕಾರಣಕ್ಕೆ ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು!’: ಸುಪ್ರೀಂ ಕೋರ್ಟ್

State News
KARNATAKA

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

By ವಸಂತ ಬಿ ಈಶ್ವರಗೆರೆ KARNATAKA 1 Min Read

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಸಾಲಗುಂದ ಗ್ರಾಮದಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಕೊರತೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಸಿಲಿಂಡರ್‌ಗಾಗಿ ಸಾರ್ವಜನಿಕರು…

ಮೇ.27ರಂದು ಬೆಂಗಳೂರಿನಲ್ಲಿ ದೇಶದ ಪ್ರಥಮ ‘ರಾಷ್ಟ್ರೀಯ ಎಐ ಮತ್ತು ಡಿಜಿಟಲ್ ವಾಟರ್ ಶೃಂಗಸಭೆ 2026’ ಆಯೋಜನೆ

BREAKING: ಬೆಂಗಳೂರಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಗೆ ₹24 ಕೋಟಿ ವಂಚಿಸಿದ್ದ ಆರು ಖತರ್ನಾಕ್ ಸೈಬರ್ ಕಳ್ಳರು ಅರೆಸ್ಟ್!

ಜೂನ್.1ರಂದು ಶಿವಮೊಗ್ಗದಲ್ಲಿ ಸಿಎಂ ಸಿದ್ಧರಾಮಯ್ಯ ‘ಕರ್ನಾಟಕ ಪಬ್ಲಿಕ್ ಶಾಲೆ’ಗಳ ಶಂಕುಸ್ಥಾಪನೆ; ಸಚಿವ ಮಧು ಬಂಗಾರಪ್ಪ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.