Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BSY, ವಿಜಯೇಂದ್ರ ಮತ್ತಿತರರ ವಿರುದ್ಧದ ಭ್ರಷ್ಟಾಚಾರ ಆರೋಪ: ಲೋಕಾಯುಕ್ತದಿಂದ ಕೋರ್ಟ್ ಗೆ ಬಿ-ರಿಪೋರ್ಟ್ ಸಲ್ಲಿಕೆ

18/09/2025 8:57 PM

ಶಿವಮೊಗ್ಗ: ಉಳ್ಳೂರಲ್ಲಿ KSRTC ಬಸ್ ನಿಲ್ಲಿಸುವಂತೆ ‘ಕರ್ನಾಟಕ ರಕ್ಷಣಾ ನವಶಕ್ತಿ ವೇದಿಕೆ’ ಮನವಿ

18/09/2025 8:50 PM

‘ಜಾತಿ ಗಣತಿ’ ಸಮೀಕ್ಷೆ : ಸಂಪುಟ ಸಭೆಯಲ್ಲಿ ಟೇಬಲ್ ಕುಟ್ಟಿ ಆಕ್ರೋಶ ಹೊರ ಹಾಕಿದ ಸಚಿವರು : CM ಸಿದ್ದರಾಮಯ್ಯ ಸಿಡಿಮಿಡಿ

18/09/2025 8:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸೆ.1ರಿಂದ ಅ.1ರವರೆಗೆ ರಾಜ್ಯಾದ್ಯಂತ `ಬಸವ ಸಂಸ್ಕೃತಿ ಅಭಿಯಾನ’: ಲಿಂಗಾಯತ ಮಠಾಧಿಪತಿಗಳ ಒಕ್ಕೂಟ
KARNATAKA

ಸೆ.1ರಿಂದ ಅ.1ರವರೆಗೆ ರಾಜ್ಯಾದ್ಯಂತ `ಬಸವ ಸಂಸ್ಕೃತಿ ಅಭಿಯಾನ’: ಲಿಂಗಾಯತ ಮಠಾಧಿಪತಿಗಳ ಒಕ್ಕೂಟ

By kannadanewsnow0912/07/2025 9:55 PM

ಬೆಂಗಳೂರು: ರಾಜ್ಯ ಸರಕಾರವು ಬಸವಣ್ಣನನ್ನು `ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿ ಒಂದು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟವು ಸೆಪ್ಟೆಂಬರ್ 1ರಿಂದ ಅಕ್ಟೋಬರ್ 1ರವರೆಗೆ ಒಂದು ತಿಂಗಳು ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ `ಬಸವ ಸಂಸ್ಕೃತಿ ಅಭಿಯಾನ’ ನಡೆಸಲು ತೀರ್ಮಾನಿಸಿದೆ.

ಈ ಸಂಬಂಧವಾಗಿ ಒಕ್ಕೂಟದಲ್ಲಿರುವ ಸ್ವಾಮೀಜಿಗಳು ಶನಿವಾರ ಲಿಂಗಾಯತ ಮುಖಂಡ ಮತ್ತು ಸಚಿವ ಎಂ ಬಿ ಪಾಟೀಲ ಅವರೊಂದಿಗೆ ಅವರ ಸದಾಶಿವನಗರದ ಮನೆಯಲ್ಲಿ ಚರ್ಚೆ ನಡೆಸಿದ್ದಾರೆ. ಒಕ್ಕೂಟದ ಪರವಾಗಿ ಭಾಲ್ಕಿ ಮಠದ ಶ್ರೀ ಬಸವಲಿಂಗ ಪಟ್ಟದ್ದೇವರು, ಅಥಣಿಯ ಶ್ರೀ ಚೆನ್ನಬಸವ ಸ್ವಾಮೀಜಿ, ನೆಲಮಂಗಲದ ಪವಾಡ ಶ್ರೀಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಗೊರವಣ್ಣ ದೇವರ ಮಠದ ನಂಜುಂಡ ಸ್ವಾಮೀಜಿ, ನಿಜಗುಣ ಮಠದ ಇಮ್ಮಡಿ ನಿಜಗುಣ ಶ್ರೀಗಳು, ಬಸವ ಧರ್ಮಪೀಠದ ಬಸವಯೋಗಿ ಸ್ವಾಮೀಜಿ, ಚನ್ನಪಟ್ಟಣದ ಬೇಗೂರು ಮಠದ ಮೃತ್ಯುಂಜಯ ಸ್ವಾಮೀಜಿ ಸಚಿವರ ಸದಾಶಿವನಗರದ ನಿವಾಸಕ್ಕೆ ಆಗಮಿಸಿದ್ದರು.

ಬಳಿಕ ಮಾತನಾಡಿದ ಸಚಿವರು, ಈ ಅಭಿಯಾನವು ಬಸವಣ್ಣನ ಜನ್ಮಸ್ಥಳವಾದ ಬಸವನ ಬಾಗೇವಾಡಿಯಲ್ಲಿ ಸೆ.1ರಂದು ಚಾಲನೆ ಕಾಣಲಿದೆ. ಬಸವರಥವು ಎಲ್ಲ ಜಿಲ್ಲೆಗಳಲ್ಲೂ ಸಂಚರಿಸಿ ಅ.1ರಂದು ಬೆಂಗಳೂರನ್ನು ತಲುಪಲಿದೆ. ಅ.5ರಂದು ಲಕ್ಷಾಂತರ ಲಿಂಗಾಯತ ಅನುಯಾಯಿಗಳನ್ನು ಸೇರಿಸಿ, ಬೆಂಗಳೂರಿನಲ್ಲಿ ಬೃಹತ್ ಸಮಾರೋಪ ಸಮಾರಂಭ ಏರ್ಪಡಿಸಲಾಗುವುದು. ಇಲ್ಲಿ ಬಸವಣ್ಣನನ್ನು ಸಾಂಸ್ಕೃತಿಕ ನಾಯಕನೆಂದು ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಲಾಗುವುದು. ಆದರೆ ಸಮಾರೋಪದ ಸ್ಥಳವಿನ್ನೂ ನಿಗದಿಯಾಗಿಲ್ಲ. ಮುಖ್ಯಮಂತ್ರಿಗಳ ಕಾಲಾವಕಾಶ ನೋಡಿಕೊಂಡು ಇದನ್ನು ನಿರ್ಧರಿಸಲಾಗುವುದು ಎಂದಿದ್ದಾರೆ.

ಅಭಿಯಾನದಲ್ಲಿ ಪ್ರತಿದಿನವೂ ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಜತೆ ಸಂವಾದ, ಸಂಜೆ ಪಾದಯಾತ್ರೆ, ವಚನ ಸಂಗೀತ, ಸ್ವಾಮೀಜಿಗಳು ಮತ್ತು ಆಹ್ವಾನಿತ ಉಪನ್ಯಾಸಕರ ಭಾಷಣ, ರಾತ್ರಿ ಹೊತ್ತು ಶ್ರೀ ಪಂಡಿತಾರಾಧ್ಯ ಶಿವಾಚಾರ್ಯರು ಬರೆದಿರುವ `ಜಂಗಮದೆಡೆಗೆ’ ನಾಟಕ ಪ್ರದರ್ಶನ ನಡೆಯಲಿವೆ. ಇದಕ್ಕೆ ಜಾಗತಿಕ ಲಿಂಗಾಯತ ಮಹಾಸಭಾ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ರಾಷ್ಟ್ರೀಯ ಬಸವದಳ, ಬಸವ ಸಮಿತಿ, ಬಸವ ಕೇಂದ್ರ, ಕದಳಿ ಮಹಿಳಾ ವೇದಿಕೆ ಮುಂತಾದ ಬಸವಪರ ಸಂಘಟನೆಗಳು ಕೈಜೋಡಿಸಿವೆ ಎಂದು ಒಕ್ಕೂಟದ ಅಧ್ಯಕ್ಷರಾಗಿರುವ ಶ್ರೀ ಬಸವಲಿಂಗ ಪಟ್ಟದ್ದೇವರು ತಿಳಿಸಿದ್ದಾರೆ.

ಸಮ ಸಮಾಜ ನಿರ್ಮಾಣ, ವ್ಯಸನಮುಕ್ತ ಸಮಾಜ, ಅಂಧಶ್ರದ್ಧೆ ಅಳಿಸಿ ಹಾಕುವುದು, ಸದೃಢ ಸಮಾಜ, ಮಕ್ಕಳಲ್ಲಿ ಅಧ್ಯಾತ್ಮದ ಅರಿವು, ಮಹಿಳೆಯರ ಘನತೆ ಮತ್ತು ವ್ಯಕ್ತಿತ್ವ ವಿಕಸನಗಳು ಅಭಿಯಾನದ ಪ್ರಮುಖ ಆಶಯಗಳಾಗಿವೆ ಎಂದು ಒಕ್ಕೂಟವು ತಿಳಿಸಿದೆ.

Share. Facebook Twitter LinkedIn WhatsApp Email

Related Posts

BSY, ವಿಜಯೇಂದ್ರ ಮತ್ತಿತರರ ವಿರುದ್ಧದ ಭ್ರಷ್ಟಾಚಾರ ಆರೋಪ: ಲೋಕಾಯುಕ್ತದಿಂದ ಕೋರ್ಟ್ ಗೆ ಬಿ-ರಿಪೋರ್ಟ್ ಸಲ್ಲಿಕೆ

18/09/2025 8:57 PM1 Min Read

ಶಿವಮೊಗ್ಗ: ಉಳ್ಳೂರಲ್ಲಿ KSRTC ಬಸ್ ನಿಲ್ಲಿಸುವಂತೆ ‘ಕರ್ನಾಟಕ ರಕ್ಷಣಾ ನವಶಕ್ತಿ ವೇದಿಕೆ’ ಮನವಿ

18/09/2025 8:50 PM2 Mins Read

‘ಜಾತಿ ಗಣತಿ’ ಸಮೀಕ್ಷೆ : ಸಂಪುಟ ಸಭೆಯಲ್ಲಿ ಟೇಬಲ್ ಕುಟ್ಟಿ ಆಕ್ರೋಶ ಹೊರ ಹಾಕಿದ ಸಚಿವರು : CM ಸಿದ್ದರಾಮಯ್ಯ ಸಿಡಿಮಿಡಿ

18/09/2025 8:49 PM1 Min Read
Recent News

BSY, ವಿಜಯೇಂದ್ರ ಮತ್ತಿತರರ ವಿರುದ್ಧದ ಭ್ರಷ್ಟಾಚಾರ ಆರೋಪ: ಲೋಕಾಯುಕ್ತದಿಂದ ಕೋರ್ಟ್ ಗೆ ಬಿ-ರಿಪೋರ್ಟ್ ಸಲ್ಲಿಕೆ

18/09/2025 8:57 PM

ಶಿವಮೊಗ್ಗ: ಉಳ್ಳೂರಲ್ಲಿ KSRTC ಬಸ್ ನಿಲ್ಲಿಸುವಂತೆ ‘ಕರ್ನಾಟಕ ರಕ್ಷಣಾ ನವಶಕ್ತಿ ವೇದಿಕೆ’ ಮನವಿ

18/09/2025 8:50 PM

‘ಜಾತಿ ಗಣತಿ’ ಸಮೀಕ್ಷೆ : ಸಂಪುಟ ಸಭೆಯಲ್ಲಿ ಟೇಬಲ್ ಕುಟ್ಟಿ ಆಕ್ರೋಶ ಹೊರ ಹಾಕಿದ ಸಚಿವರು : CM ಸಿದ್ದರಾಮಯ್ಯ ಸಿಡಿಮಿಡಿ

18/09/2025 8:49 PM

ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: ಒಂದು ಬಾರಿಗೆ ವಯೋಮಿತಿ 2 ವರ್ಷ ಸಡಿಲಿಸಿ ರಾಜ್ಯ ಸರ್ಕಾರ ಆದೇಶ

18/09/2025 8:39 PM
State News
KARNATAKA

BSY, ವಿಜಯೇಂದ್ರ ಮತ್ತಿತರರ ವಿರುದ್ಧದ ಭ್ರಷ್ಟಾಚಾರ ಆರೋಪ: ಲೋಕಾಯುಕ್ತದಿಂದ ಕೋರ್ಟ್ ಗೆ ಬಿ-ರಿಪೋರ್ಟ್ ಸಲ್ಲಿಕೆ

By kannadanewsnow0918/09/2025 8:57 PM KARNATAKA 1 Min Read

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸೇರಿದಂತೆ ಇತರರ ವಿರುದ್ಧ ಕೇಳಿ ಬಂದಿದ್ದಂತ ಭ್ರಷ್ಟಾಚಾರ…

ಶಿವಮೊಗ್ಗ: ಉಳ್ಳೂರಲ್ಲಿ KSRTC ಬಸ್ ನಿಲ್ಲಿಸುವಂತೆ ‘ಕರ್ನಾಟಕ ರಕ್ಷಣಾ ನವಶಕ್ತಿ ವೇದಿಕೆ’ ಮನವಿ

18/09/2025 8:50 PM

‘ಜಾತಿ ಗಣತಿ’ ಸಮೀಕ್ಷೆ : ಸಂಪುಟ ಸಭೆಯಲ್ಲಿ ಟೇಬಲ್ ಕುಟ್ಟಿ ಆಕ್ರೋಶ ಹೊರ ಹಾಕಿದ ಸಚಿವರು : CM ಸಿದ್ದರಾಮಯ್ಯ ಸಿಡಿಮಿಡಿ

18/09/2025 8:49 PM

ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: ಒಂದು ಬಾರಿಗೆ ವಯೋಮಿತಿ 2 ವರ್ಷ ಸಡಿಲಿಸಿ ರಾಜ್ಯ ಸರ್ಕಾರ ಆದೇಶ

18/09/2025 8:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.