ಗದಗ : ತುಂಗಭದ್ರಾ ನದಿ ಬತ್ತಿ ಹೋಗಿರುವ ಹಿನ್ನೆಲೆಯಲ್ಲಿ ಗದಗದ ಜಿಮ್ಸ್ ವೈದ್ಯಕೀಯ ಹಾಸ್ಟೆಲ್ ಹಾಗೂ ಸಿಬ್ಬಂದಿ ಕಾರ್ಟರ್ಸ್ ಗೆ ಸಮರ್ಪಕವಾಗಿ ನೀರು ಪೂರೈಕೆಯಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಒಂದು ವಾರ ರಜೆ ಘೋಷಿಸಲಾಗಿದೆ.
ತೀವ್ರ ಬರಗಾಲದ ಹಿನ್ನೆಲೆಯಲ್ಲಿ ತುಂಗಭದ್ರಾ ನದಿ ಬತ್ತಿ ಹೋಗಿದೆ. ಈ ಹಿನ್ನೆಲೆಯಲ್ಲಿ ಜಿಮ್ಸ್ ಆಡಳಿತ ಮಂಡಳಿ ಒಂದು ವಾರ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿದೆ.
ಗದಗ ನಗರದ ಹೊರ ವಲಯದಲ್ಲಿರುವ ಜಿಮ್ಸ್ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ಹಾಗೂ ಕ್ವಾರ್ಟರ್ಸ್ ಗಳಿಗೆ ನೀರು ಪೂರೈಕೆ ಆಗುತ್ತಿಲ್ಲ. ಸಮರ್ಪಕವಾಗಿ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಆಗ್ರಹಿಸಿದ್ದಾರೆ.