Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ನಡೆಸಿದ ಸಾರಿಗೆ ಸಂಘಟನೆಗಳೊಂದಿಗಿನ ಸಭೆಯ ಪ್ರಮುಖ ಹೈಲೈಟ್ಸ್

04/08/2025 5:18 PM

ಮಳೆಗಾಲದಲ್ಲಿ ಈ ‘ಮುನ್ನೆಚ್ಚರಿಕೆ’ ಅನುಸರಿಸಿ! ಶೀತ, ಕೆಮ್ಮು ನಿಮ್ಮ ಹತ್ತಿರಕ್ಕೂ ಸುಳಿಯೋಲ್ಲ

04/08/2025 5:10 PM

BREAKING: ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ: ‘ದರೋಡೆಕೋರರ ಗ್ಯಾಂಗ್’ನಿಂದ ಯುವಕನ ಕೊಲೆ

04/08/2025 5:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸೆ.14, 15 ರಂದು ‘ಗಗನಚುಕ್ಕಿ ಜಲಪಾತೋತ್ಸವ’: ಶಾಸಕ ಪಿ.ಎಂ ನರೇಂದ್ರಸ್ವಾಮಿ
KARNATAKA

ಸೆ.14, 15 ರಂದು ‘ಗಗನಚುಕ್ಕಿ ಜಲಪಾತೋತ್ಸವ’: ಶಾಸಕ ಪಿ.ಎಂ ನರೇಂದ್ರಸ್ವಾಮಿ

By kannadanewsnow0905/09/2024 6:54 PM

ಮಂಡ್ಯ:  ಜಿಲ್ಲಾಡಳಿತದ ವತಿಯಿಂದ ಮಳವಳ್ಳಿ ತಾಲ್ಲೂಕಿನಲ್ಲಿ ಗಗನಚುಕ್ಕಿ ಜಲಪಾತೋತ್ಸವವನ್ನು ಸೆಪ್ಟೆಂಬರ್ 14 ಹಾಗೂ 15 ರಂದು ಆಯೋಜಿಸಲಾಗಿದೆ ಎಂದು ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಎಂ‌.ನರೇಂದ್ರಸ್ವಾಮಿ ಅವರು ತಿಳಿಸಿದರು.

ಅವರು ಇಂದು ಶಿವನಸಮುದ್ರದ ಲಕ್ಷದ್ವೀಪ ಹೋಟೆಲ್ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ.ಸೆಪ್ಟೆಂಬರ್ 14 ರಂದು ಮಾನ್ಯ ಮುಖ್ಯಮಂತ್ರಿಗಳು ಕಾರ್ಯಕ್ರಮ ಉದ್ಘಾಟಿಸಲಿದ್ದು, ಇದರೊಂದಿಗೆ ಲೇಜರ್ ಹಾಗೂ ಲೈಟಿಂಗ್ ಗಗಳನ್ನು ಸಹ ಉದ್ಘಾಟಿಸುವರು ಎಂದರು.

ಗಗನಚುಕ್ಕಿಯನ್ನು ಪ್ರಸಿದ್ಧ ಪ್ರವಾಸಿತಾಣವಾಗಿಸಲು ಹಾಗೂ ಹೆಚ್ಚಿನ ಯುವಜನರನ್ನು ಆಕರ್ಷಿಸಲು ಜಲಪಾತೋತ್ಸವದಂತಹ ಕಾರ್ಯಕ್ರಮ ಅವಶ್ಯಕವಾಗಿದೆ ಎಂದರು.

ಎರಡು ದಿನಗಳ ಕಾಲ ನಡೆಯುವ ಗಗನಚುಕ್ಕಿ ಜಲಪಾತೋತ್ಸವದ ಹಿನ್ನಲೆ ಆಗಮಿಸುವ ಸಾರ್ವಜನಿಕರಿಗೆ ಕಾರ್ಯಕ್ರಮದ ಜೊತೆಗೆ ಉಚಿತ ಉಪಹಾರ, ಮಧ್ಯಾಹ್ನದ ಊಟ ಹಾಗೂ ರಾತ್ರಿಊಟದ ವ್ಯವಸ್ಥೆ ಮಾಡಲಾಗಿದೆ. ಪರಿಸರದ ಸೌಂದರ್ಯ ಸವಿಯುವ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹ ಬೆಳಿಗ್ಗೆಯಿಂದ ರಾತ್ರಿಯವರೆಗೆ ಇರುತ್ತದೆ ಎಂದರು.

ಗಗನ ಚುಕ್ಕಿಯನ್ನು ಬೃಹತ್ ಆಕರ್ಷಣೀಯ ಕೇಂದ್ರವನ್ನಾಗಿಸಲು ವಿವಿಧ ಕ್ರೀಡಾ ಚಟುವಟಿಕೆಗಳು ಹಾಗೂ ಇಲ್ಲಿ ಸಿಗುವ ಸೌಲಭ್ಯದೊಂದಿಗೆ ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿಕೊಡಲಾಗಿದೆ. ಈ ಯೋಜನೆ ಅನುಷ್ಠಾನಗೊಂಡರೆ ಹಲವಾರು ಸ್ಥಳೀಯರಿಗೆ ಉದ್ಯೋಗ ದೊರೆಯಲಿದೆ ಎಂದರು.

ಏಷಿಯಾದಲ್ಲೇ ಮೊದಲು ಜಲ ವಿದ್ಯುತ್ ಉತ್ಪದಾನೆ ಮಾಡಿದ ಹೆಗ್ಗಳಿಕೆ ಶಿವನಸಮುದ್ರ ವಿದ್ಯುತ್ ಕೇಂದ್ರಕ್ಕೆ ಸಲ್ಲುತ್ತದೆ. ಮೈಸೂರು-ಮಂಡ್ಯ- ಚಾಮರಾಜನಗರ ಜಿಲ್ಲೆಗಳಲ್ಲಿ ಇರುವ ಪ್ರವಾಸಿ ಸ್ಥಳಗಳ ಪ್ರವಾಸಿ ಸರ್ಕೂಟ್ ರಚಿಸಬೇಕು. ಇದಲ್ಲದೇ ಸುತ್ತ ನೀರಿರುವ ಐಲ್ಯಾಂಡ್ ಪ್ರದೇಶ ಗಗನ ಚುಕ್ಕಿಯಲ್ಲಿದ್ದು, ಇಲ್ಲಿ ಸಾಕು ಪ್ರಣಿಗಳ ಪ್ರಾಣಿ ಸಂಗ್ರಾಹಲಯ, ಸುತ್ತ ವಾಕಿಂಗ್ ಪಾಥ್ ನಿರ್ಮಿಸಲು ಚಿಂತಿಸಲಾಗುತ್ತಿದ್ದು, ಈ ಬಗ್ಗೆ ಅರಣ್ಯ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದರು.

ಜಿಲ್ಲಾಧಿಕಾರಿ ಡಾ: ಕುಮಾರ ಅವರು ಮಾತನಾಡಿ ಗಗನಚುಕ್ಕಿ ಜಲಪಾತೋತ್ಸವ ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾವಿದರಿಗೂ ಆದ್ಯತೆ ನೀಡಲಾಗಿದ್ದು, ಬೆಳಗಿನ ಕಾರ್ಯಕ್ರಮವನ್ನು ಸ್ಥಳೀಯ ಕಲಾವಿದರಿಗೆ ನೀಡಲಾಗಿದೆ ಎಂದರು.

ಖ್ಯಾತ ಸಂಗೀತ ಸಂಯೋಜಕ ರವಿ ಬಸ್ರೂರು ಅವರು ಇದೇ ಮೊದಲ ಬಾರಿಗೆ ಲೈವ್ ಆಗಿ ಸೆ.15 ರಂದು ಕಾರ್ಯಕ್ರಮ ನೀಡುತ್ತಿದ್ದಾರೆ ಎಂದ ಅವರು ಕಾರ್ಯಕ್ರಮದ ವಿವರ ನೀಡಿದರು.

ಸೆಪ್ಟೆಂಬರ್ 14 ರಂದು ಶನಿವಾರ

ಬೆಳಿಗ್ಗೆ 11 ರಿಂದ ಮದ್ಯಾಹ್ನ 2 ಗಂಟೆಗೆ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ

ಮದ್ಯಾಹ್ನ 2 ಗಂಟೆಯಿಂದ ಸಂಜೆ 4.30 ಗಂಟೆವರೆಗೆ ನಾಗೇಶ್ ಕಂದೇಕಾಲ ಮತ್ತು (ಕಲಾವತಿ ದಯಾನಂದ್, ಅಜಯ್ ವಾರಿಯರ್, ಜೋಗಿ ಸುನಿತಾ, ಚಿಂತನ್ ವಿಕಾಸ್, ಸುಹನಾ ಸೈಯದ್) ಇವರಿಂದ ಭಾವಗೀತೆಗಳು.

ಸಂಜೆ 4.30 ರಿಂದ 6 ಗಂಟೆವರೆಗೆ ಪ್ರಖ್ಯಾತ ಕಾಮಿಡಿ ಕಿಲಾಡಿಗಳು ಕಲಾವಿದರಿಂದ ಹಾಸ್ಯ ಮನರಂಜನೆ.

ಸಂಜೆ 7 ಗಂಟೆಯಿಂದ ರಾತ್ರಿ 10.30 ರವರೆಗೆ ಮಣಿಕಾಂತ್ ಕದ್ರಿ, ಚಂದನ್ ಶೆಟ್ಟಿ, ಹಂಸಿಕಾ ಅಯ್ಯರ್ ತಂಡದವರಿಂದ ನೃತ್ಯ ಮತ್ತು ಸಂಗೀತ ಕಾರ್ಯಕ್ರಮ.

ಸೆ.15 ರಂದು ಭಾನುವಾರ

ಬೆಳಿಗ್ಗೆ 11 ಗಂಟೆಯಿಂದ ಮದ್ಯಾಹ್ನ 2 ಗಂಟೆವರೆಗೆ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು,

ಮದ್ಯಾಹ್ನ 2 ರಿಂದ ಸಂಜೆ 4.30 ಗಂಟೆವರೆಗೆ ಪ್ರಖ್ಯಾತ ಜಿ-ಸರಿಗಮಪ ತಂಡದವರಿಂದ ಸಂಗೀತ ಕಾರ್ಯಕ್ರಮ.

ಸಂಜೆ 4.30 ರಿಂದ 6 ಗಂಟೆವರೆಗೆ ಪ್ರಖ್ಯಾತ ಕಲರ್ಸ್-ಗಿಚ್ಚಿ ಗಿಲಿಗಿಲಿ ತಂಡದವರಿಂದ ಹಾಸ್ಯ ಕಾರ್ಯಕ್ರಮ.

6 ರಿಂದ ರಾತ್ರಿ 10.30 ಗಂಟೆವರೆಗೆ ರವಿ ಬಸ್ರೂರ್ ಮತ್ತು ತಂಡದವರಿಂದ ಸಂಗೀತ ರಸ ಸಂಜೆ ಕಾರ್ಯಕ್ರಮಗಳು ನಡೆಯಲಿದೆ.

ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಉಪವಿಭಾಗಾಧಿಕಾರಿ ಶಿವಮೂರ್ತಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಶಾಸಕರು ಗಗನಚುಕ್ಕಿ ಜಲಪಾತೋತ್ಸವದ ಲೋಗೋವನ್ನು ಶಾಸಕರು ಅನಾವರಣಗಳಿಸಿದರು.

ವರದಿ: ಗಿರೀಶ್ ರಾಜ್, ಮಂಡ್ಯ

ಬೆಂಗಳೂರಲ್ಲಿ ‘BBMP’ಯಿಂದ ‘ಗಣೇಶ ಮೂರ್ತಿ ವಿಸರ್ಜನೆ’ಗೆ 462 ‘ಮೊಬೈಲ್ ಟ್ಯಾಂಕ್’ ವ್ಯವಸ್ಥೆ

Shocking News: ಚೀನಾದ ತುಪ್ಪಳದ ಫಾರ್ಮ್ 100 ಪ್ರಾಣಿಗಳಲ್ಲಿ ‘ಅಪಾಯಕಾರಿ ವೈರಸ್’ಗಳು ಪತ್ತೆ: 40 ಮಾನವರಿಗೆ ಹಾನಿ | Dangerous Viruses

Share. Facebook Twitter LinkedIn WhatsApp Email

Related Posts

ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ನಡೆಸಿದ ಸಾರಿಗೆ ಸಂಘಟನೆಗಳೊಂದಿಗಿನ ಸಭೆಯ ಪ್ರಮುಖ ಹೈಲೈಟ್ಸ್

04/08/2025 5:18 PM2 Mins Read

BREAKING: ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ: ‘ದರೋಡೆಕೋರರ ಗ್ಯಾಂಗ್’ನಿಂದ ಯುವಕನ ಕೊಲೆ

04/08/2025 5:10 PM1 Min Read

ನೀವು ಶಿವನ ದೇವಸ್ಥಾನಕ್ಕೆ ಹೋದಾಗ ಹೀಗೆ ನಮಸ್ಕರಿಸಿ, ಅನುಗ್ರಹ ಖಂಡಿತ

04/08/2025 5:03 PM3 Mins Read
Recent News

ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ನಡೆಸಿದ ಸಾರಿಗೆ ಸಂಘಟನೆಗಳೊಂದಿಗಿನ ಸಭೆಯ ಪ್ರಮುಖ ಹೈಲೈಟ್ಸ್

04/08/2025 5:18 PM

ಮಳೆಗಾಲದಲ್ಲಿ ಈ ‘ಮುನ್ನೆಚ್ಚರಿಕೆ’ ಅನುಸರಿಸಿ! ಶೀತ, ಕೆಮ್ಮು ನಿಮ್ಮ ಹತ್ತಿರಕ್ಕೂ ಸುಳಿಯೋಲ್ಲ

04/08/2025 5:10 PM

BREAKING: ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ: ‘ದರೋಡೆಕೋರರ ಗ್ಯಾಂಗ್’ನಿಂದ ಯುವಕನ ಕೊಲೆ

04/08/2025 5:10 PM

ನೀವು ಶಿವನ ದೇವಸ್ಥಾನಕ್ಕೆ ಹೋದಾಗ ಹೀಗೆ ನಮಸ್ಕರಿಸಿ, ಅನುಗ್ರಹ ಖಂಡಿತ

04/08/2025 5:03 PM
State News
KARNATAKA

ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ನಡೆಸಿದ ಸಾರಿಗೆ ಸಂಘಟನೆಗಳೊಂದಿಗಿನ ಸಭೆಯ ಪ್ರಮುಖ ಹೈಲೈಟ್ಸ್

By kannadanewsnow0904/08/2025 5:18 PM KARNATAKA 2 Mins Read

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ…

BREAKING: ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ: ‘ದರೋಡೆಕೋರರ ಗ್ಯಾಂಗ್’ನಿಂದ ಯುವಕನ ಕೊಲೆ

04/08/2025 5:10 PM

ನೀವು ಶಿವನ ದೇವಸ್ಥಾನಕ್ಕೆ ಹೋದಾಗ ಹೀಗೆ ನಮಸ್ಕರಿಸಿ, ಅನುಗ್ರಹ ಖಂಡಿತ

04/08/2025 5:03 PM

ಅನುತ್ತಮ ಗುಣಮಟ್ಟದ ಔಷಧಿ ಮಾರುಕಟ್ಟೆಯಿಂದ 2 ದಿನಗಳಲ್ಲಿ ವಾಪಾಸ್: ಸಚಿವ ದಿನೇಶ್ ಗುಂಡೂರಾವ್

04/08/2025 5:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.