Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತ ಮತ್ತು ಜರ್ಮನಿ ನಡುವಿನ ನಿಕಟ ಸಹಯೋಗ ಇಡೀ ಜಗತ್ತಿಗೆ ಮುಖ್ಯ: ಪ್ರಧಾನಿ ಮೋದಿ

13/01/2026 7:15 AM

ರೈಲು ಪ್ರಯಾಣಿಕರಿಗೆ ಬಿಗ್ ರಿಲೀಫ್: ಆಧಾರ್ ಲಿಂಕ್ ಇದ್ದರೆ ಮಧ್ಯರಾತ್ರಿವರೆಗೂ `ಟಿಕೆಟ್ ಬುಕ್ಕಿಂಗ್’ ಲಭ್ಯ.!

13/01/2026 7:12 AM

ಭಾಷಾ ವೈವಿಧ್ಯಕ್ಕೆ AI ಸಾಥ್: 22 ಭಾಷೆಗಳಲ್ಲಿ ಲಭ್ಯವಾಗಲಿದೆ ಸಂಸತ್ತಿನ ಕಲಾಪ

13/01/2026 7:11 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » `ಗಾಂಧಿ ಜಯಂತಿ’ ಹಿನ್ನಲೆ: ಬೆಂಗಳೂರಲ್ಲಿ ಅ.2 ರಂದು ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ
KARNATAKA

`ಗಾಂಧಿ ಜಯಂತಿ’ ಹಿನ್ನಲೆ: ಬೆಂಗಳೂರಲ್ಲಿ ಅ.2 ರಂದು ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ

By kannadanewsnow5730/09/2025 6:46 AM

ಬೆಂಗಳೂರು: ಅಕ್ಟೋಬರ್.2ರಂದು ಗಾಂಧಿ ಜಯಂತಿ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆದೇಶಿಸಿದೆ.

ದಿನಾಂಕ: 02-10-2025 (ಗುರುವಾರ) ದಂದು “ಗಾಂಧಿ ಜಯಂತಿ” ಪ್ರಯುಕ್ತ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತರು(ಆರೋಗ್ಯ & ಶಿಕ್ಷಣ) ರವರು ತಿಳಿಸಿದ್ದಾರೆ.

ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತರಿಂದ ಜಾತಿಗಣತಿ ತರಬೇತಿ ಕಾರ್ಯಗಾರಕ್ಕೆ ಭೇಟಿ ಹಾಗೂ ಪರಿಶೀಲನೆ

ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತರಿಂದ ಸಾಮಾಜಿಕ ಶೈಕ್ಷಣಿಕ ಸಮೀಕ್ಷಾ ಕಾರ್ಯ 2025ರ ತರಬೇತಿ ಕಾರ್ಯಗಾರಕ್ಕೆ ಭೇಟಿ ಹಾಗೂ ಪರಿಶೀಲನೆ:

ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತರಾದ ಡಾ. ರಾಜೇಂದ್ರ ಕೆ. ವಿ. ರವರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯ 2025ರ ತರಬೇತಿ ಕಾರ್ಯಗಾರಕ್ಕೆ ಭೇಟಿ ನೀಡಿ ಗಣತಿದಾರರಿಗೆ ಹಾಗೂ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.

ಆಯುಕ್ತರು ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯದ ತರಬೇತಿ ಕಾರ್ಯಗಾರಕ್ಕೆ ಹಾಗೂ ಕೆ.ಎಲ್.ಇ. ಕಾಲೇಜಿನಲ್ಲಿ ಏರ್ಪಡಿಸಿದ್ದ ರಾಜಾಜಿನಗರ ಮತ್ತು ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರಗಳ ಸಾಮಾಜಿಕ ‌ಶೈಕ್ಷಣಿಕ ಸಮೀಕ್ಷಾ ಕಾರ್ಯದ ತರಬೇತಿ ಕಾರ್ಯಗಾರಕ್ಕೆ ಭೇಟಿ ನೀಡಿದರು.

ಈ ವೇಳೆ‌ ಆಯುಕ್ತರು ಗಣತಿದಾರರಾಗಿ ನೇಮಕವಾಗಿರುವ ಸಿಬ್ಬಂದಿಗಳಿಗೆ ಸಮೀಕ್ಷಾ ಕಾರ್ಯ ನಿರ್ವಹಣೆಯ ಸಂಬಂಧ ಸಂಕ್ಷಿಪ್ತವಾಗಿ ವಿವರಿಸಿದರು ಮತ್ತು ಸಿಬ್ಬಂದಿಗಳನ್ನು ಸಮೀಕ್ಷಾ ಕಾರ್ಯ ನಿರ್ವಹಿಸಲು ಹುರಿದುಂಬಿಸಿದರು.

ಈ ಸಂದರ್ಭದಲ್ಲಿ ಜಂಟಿ ಆಯುಕ್ತರಾದ ಸಂಗಪ್ಪ, ಕೆಎಎಸ್ ನೋಡಲ್ ಅಧಿಕಾರಿಗಳಾದ ಶ್ರೀನಿವಾಸ ಗೌಡ ಹಾಗೂ ಶ್ರೀನಿವಾಸ ರವರು ಹಾಜರಿದ್ದರು.

ಆಯುಕ್ತರಿಂದ ನಗರ ಪಾಲಿಕೆಯ ವ್ಯಾಪ್ತಿಯ ವಿವಿಧ ಸ್ಥಳಗಳಿಗೆ ಭೇಟಿ ಹಾಗೂ ಸಮಗ್ರ ಪರಿಶೀಲನೆ:

ಇಂದು ಬೆಳಿಗ್ಗೆ ನಗರ ಪಾಲಿಕೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಸಮಗ್ರ ಪರಿಶೀಲನೆ ನಡೆಸಿದ ಆಯುಕ್ತರು, ನಾಗರಿಕ ಸೌಲಭ್ಯಗಳಿಗೆ ಸಂಬಂಧಿಸಿದಂತೆ ಹಲವು ವಿಷಯಗಳಿಗೆ ಅಗತ್ಯ ಕ್ರಮ‌ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪರಿಶೀಲನೆಯ ವೇಳೆ ಮಲ್ಲೇಶ್ವರ ವಿಭಾಗದ ವಾರ್ಡ್ ಸಂಖ್ಯೆ 35, ಅರಮನೆ ನಗರ ವ್ಯಾಪ್ತಿಯ ನ್ಯೂ ಬಿಇಎಲ್ ರಸ್ತೆಯಿಂದ ಎಮ್.ಎಸ್.ಆರ್ ನಗರ, ಆರ್.ಕೆ ಗಾರ್ಡನ್, ಆರ್.ಎಮ್.ವಿ ಎರಡನೇ ಹಂತ ಅಶ್ವತ್ಥ ನಗರ, ವಾರ್ಡ್ 36ರ ಮತ್ತಿಕೆರೆಗೆ ತೆರಳಿ ಸ್ಥಳ ಪರಿಶೀಲನೆ ನಡೆಸಿದರು.

ವ್ಯವಸ್ಥಿತ ತ್ಯಾಜ್ಯ ನಿರ್ವಹಣೆಗೆ ಸೂಚನೆ:

ಪರಿಶೀಲನೆಯ ವೇಳೆ ಆಯುಕ್ತರು ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಿ ಸೂಕ್ತ ರೀತಿಯಲ್ಲಿ, ವ್ಯವಸ್ಥಿತವಾಗಿ ತ್ಯಾಜ್ಯ ನಿರ್ವಹಣೆಯ ಕಾರ್ಯವನ್ನು ನಿರ್ವಹಿಸಿ, ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಪಾದಚಾರಿ ಮಾರ್ಗ ಸೂಕ್ತ ನಿರ್ವಹಣೆಗೆ ಸೂಚನೆ:

ಪಾದಚಾರಿಗಳಿಗೆ ಅನುಕೂಲವಾಗುವಂತೆ ಅಡೆತಡೆಗಳಿಲ್ಲದಂತಹ ಪಾದಚಾರಿ ಮಾರ್ಗ ನಿರ್ಮಿಸಿ, ಒತ್ತುವರಿಗಳನ್ನು ತೆರವುಗೊಳಿಸಿ, ದುರಸ್ತಿಯ ಅಗತ್ಯವಿದ್ದಲ್ಲಿ ತ್ವರಿತವಾಗಿ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಕ್ಷಿಪ್ರ ಗತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಿ:

ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಕ್ಷಿಪ್ರ ಗತಿಯಲ್ಲಿ ಮುಚ್ಚುವಂತೆ ಹಾಗೂ ಗುಣಮಟ್ಟವನ್ನು ಕಾಯ್ದುಕೊಂಡು ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಆಯುಕ್ತರು ಅಧಿಕಾರಿಗಳಿಗೆ ಸೂಚಿಸಿದರು.

ಆಸ್ತಿ ತೆರಿಗೆ ಸಂಗ್ರಹದತ್ತ ಗಮನ ಹರಿಸಿ:

ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಅಧಿಕಾರಿಗಳು ಆಸ್ತಿ ತೆರಿಗೆ ಸಂಗ್ರಹದತ್ತ ಗಮನ ಹರಿಸಿ, ಸೂಕ್ತ ರೀತಿಯಲ್ಲಿ ತೆರಿಗೆ ಸಂಗ್ರಹ ಕಾರ್ಯವನ್ನು ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಪರಿಶೀಲನಾ ಭೇಟಿಯಲ್ಲಿ ಜಂಟಿ ಆಯುಕ್ತರಾದ ಸಂಗಪ್ಪ ಹಾಗೂ ವಿಭಾಗಕ್ಕೆ ಸಂಬಂಧಿಸಿದ ಎಲ್ಲ ಅಧಿಕಾರಿಗಳು ಉಪಸ್ಥಿತರಿದ್ದರು.

Gandhi Jayanti': Animal slaughter meat sale banned in Bengaluru on October 2
Share. Facebook Twitter LinkedIn WhatsApp Email

Related Posts

BREAKING: KEAಯಿಂದ ವಿವಿಧ ಇಲಾಖೆಗಳ ಖಾಲಿ ಹುದ್ದೆಗಳ ಭರ್ತಿಗೆ ನಡೆದ ನೇಮಕಾತಿ ಪರೀಕ್ಷೆಯ ಕೀ-ಉತ್ತರ ಪ್ರಕಟ | KEA Recruitment

13/01/2026 7:07 AM1 Min Read

BREAKING : ರಾಜ್ಯ ಸರ್ಕಾರದಿಂದ ಮತ್ತೆ 7 ಮಂದಿ ‘KAS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ |KAS Transfer

13/01/2026 6:54 AM1 Min Read

BIG NEWS : ರಾಜ್ಯ ಸರ್ಕಾರಿ ನೌಕರರಿಗೆ 15 ದಿನಗಳ `ಗಳಿಕೆ ರಜೆ’ : ಹಣ ಪಾವತಿಗೆ ಸರ್ಕಾರ ಮಹತ್ವದ ಆದೇಶ

13/01/2026 6:52 AM2 Mins Read
Recent News

ಭಾರತ ಮತ್ತು ಜರ್ಮನಿ ನಡುವಿನ ನಿಕಟ ಸಹಯೋಗ ಇಡೀ ಜಗತ್ತಿಗೆ ಮುಖ್ಯ: ಪ್ರಧಾನಿ ಮೋದಿ

13/01/2026 7:15 AM

ರೈಲು ಪ್ರಯಾಣಿಕರಿಗೆ ಬಿಗ್ ರಿಲೀಫ್: ಆಧಾರ್ ಲಿಂಕ್ ಇದ್ದರೆ ಮಧ್ಯರಾತ್ರಿವರೆಗೂ `ಟಿಕೆಟ್ ಬುಕ್ಕಿಂಗ್’ ಲಭ್ಯ.!

13/01/2026 7:12 AM

ಭಾಷಾ ವೈವಿಧ್ಯಕ್ಕೆ AI ಸಾಥ್: 22 ಭಾಷೆಗಳಲ್ಲಿ ಲಭ್ಯವಾಗಲಿದೆ ಸಂಸತ್ತಿನ ಕಲಾಪ

13/01/2026 7:11 AM

BREAKING: KEAಯಿಂದ ವಿವಿಧ ಇಲಾಖೆಗಳ ಖಾಲಿ ಹುದ್ದೆಗಳ ಭರ್ತಿಗೆ ನಡೆದ ನೇಮಕಾತಿ ಪರೀಕ್ಷೆಯ ಕೀ-ಉತ್ತರ ಪ್ರಕಟ | KEA Recruitment

13/01/2026 7:07 AM
State News
KARNATAKA

BREAKING: KEAಯಿಂದ ವಿವಿಧ ಇಲಾಖೆಗಳ ಖಾಲಿ ಹುದ್ದೆಗಳ ಭರ್ತಿಗೆ ನಡೆದ ನೇಮಕಾತಿ ಪರೀಕ್ಷೆಯ ಕೀ-ಉತ್ತರ ಪ್ರಕಟ | KEA Recruitment

By kannadanewsnow0913/01/2026 7:07 AM KARNATAKA 1 Min Read

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಇತ್ತೀಚೆಗೆ ನಡೆಸಲಾದಂತ ವಿವಿಧ ಇಲಾಖೆಗಳ ಖಾಲಿ ಹುದ್ದೆಗಳ ನೇಮಕಾತಿಗೆ ನಡೆದಂತ ಸ್ಪರ್ಧಾತ್ಮಕ ಪರೀಕ್ಷೆಯ ಕೀ-ಉತ್ತರವನ್ನು…

BREAKING : ರಾಜ್ಯ ಸರ್ಕಾರದಿಂದ ಮತ್ತೆ 7 ಮಂದಿ ‘KAS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ |KAS Transfer

13/01/2026 6:54 AM

BIG NEWS : ರಾಜ್ಯ ಸರ್ಕಾರಿ ನೌಕರರಿಗೆ 15 ದಿನಗಳ `ಗಳಿಕೆ ರಜೆ’ : ಹಣ ಪಾವತಿಗೆ ಸರ್ಕಾರ ಮಹತ್ವದ ಆದೇಶ

13/01/2026 6:52 AM

ಬ್ಯಾಂಕ್ `ಚೆಕ್‌’ ಹಿಂಭಾಗದಲ್ಲಿ ಸಹಿ ಹಾಕುವುದು ಏಕೆ ಗೊತ್ತಾ? ಇಲ್ಲಿದೆ ಮಾಹಿತಿ

13/01/2026 6:48 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.