Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜಸ್ಥಾನದಲ್ಲಿ ‘ವಿರೋಶ್’ ಕಲ್ಯಾಣೋತ್ಸವ: ಇಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ರಶ್ಮಿಕಾ-ವಿಜಯ್ ದೇವರಕೊಂಡ!

26/02/2026 6:02 AM

BIG NEWS : ರಾಜ್ಯದಲ್ಲಿ ಸರ್ಕಾರಿ ಖಾಲಿ ಹುದ್ದೆಗಳ ಭರ್ತಿ ಬಗ್ಗೆ ಬಜೆಟ್ ನಲ್ಲಿ ಘೋಷಣೆ : CM ಸಿದ್ದರಾಮಯ್ಯ

26/02/2026 5:52 AM

ಗ್ರಾಮೀಣ ಯುವಕರಿಗೆ ಗುಡ್ ನ್ಯೂಸ್ : ‘ಗ್ರಾಮ ಒನ್’ಕೇಂದ್ರ ಆರಂಭಿಸಲು ಸುವರ್ಣಾವಕಾಶ, ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ

26/02/2026 5:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾಗರದಲ್ಲಿ ಯಶಸ್ವಿಯಾಗಿ ನಡೆದ ‘ಗಾಂಧಿ ಸ್ಮೃತಿ’ ಮತ್ತು ‘ವ್ಯಸನ ಮುಕ್ತ’ರ ಸಮಾವೇಶ
KARNATAKA

ಸಾಗರದಲ್ಲಿ ಯಶಸ್ವಿಯಾಗಿ ನಡೆದ ‘ಗಾಂಧಿ ಸ್ಮೃತಿ’ ಮತ್ತು ‘ವ್ಯಸನ ಮುಕ್ತ’ರ ಸಮಾವೇಶ

By kannadanewsnow0913/10/2025 6:12 PM

ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಬಿ ಸಿ ಟ್ರಸ್ಟ್ (ರಿ ), ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ )ಶಿರಸಿ ಜಿಲ್ಲೆ, ಸ್ವಸಹಾಯ ಸಂಘಗಳ ಒಕ್ಕೂಟ, ಸಾಗರ, ನವ ಜೀವನ ಸಮಿತಿ ಸಾಗರ ಇದರ ಸಹಯೋಗದೊಂದಿಗೆ ಗಾಂಧಿ ಸ್ಮರಣೆ ಹಾಗೂ ಬೃಹತ್ ವ್ಯಸನ ಮುಕ್ತ ಸಮಾವೇಶ ಯಶಸ್ವಿಯಾಗಿ ನಡೆಯಿತು.

ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಬೃಹತ್ ಜನಜಾಗೃತಿ ಜಾಥಾ ಗಾಂಧಿ ಸ್ಮರಣೆ, ಬ್ರಹತ್ ವ್ಯಸನ ಮುಕ್ತರ ಸಮಾವೇಶವನ್ನು ನಗರ ಸಭೆ ಸಾಗರ ಇದರ ಅಧ್ಯಕ್ಷರಾದ ಶ್ರೀಮತಿ ಮೈತ್ರಿ ಪಾಟೀಲ್ ಉದ್ಘಾಟಿಸಿದರು.

ಈ ಬಳಿಕ ಮಾತನಾಡಿದಂತ ಅವರು, ಈ ಯೋಜನೆಯ ಕಾರ್ಯಕ್ರಮಗಳ ಮೂಲಕ ಲಕ್ಷಾಂತರ ಕುಟುಂಬಗಳು ಬದುಕನ್ನು ಕಟ್ಟಿಕೊಂಡಿವೆ. ಗಾಂಧೀಜಿಯ ತತ್ವಗಳನ್ನು ಸುವಿಚಾರಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು. ಮದ್ಯ ವರ್ಜನಾ ಶಿಬಿರಗಳಲ್ಲಿ ಭಾಗವಹಿಸಿದ ಕುಟುಂಬಗಳು ಅಭಿವೃದ್ಧಿ ಹೊಂದಿವೆ. ನಮ್ಮ ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಎಲ್ಲರೂ ಪಣ ತೊಡಬೇಕು ಎಂದು ತಿಳಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶಿರಸಿ ವಿಭಾಗದ ಜಿಲ್ಲಾ ನಿರ್ದೇಶಕರಾದ ದಿನೇಶ್ ಎಂ.ಕೆ ಮಾತನಾಡಿ ಗಾಂಧೀಜಿಯವರು ಈ ದೇಶವನ್ನು ವ್ಯಸನ ಮುಕ್ತ ಆಗುವ ಬಗ್ಗೆ ಒಳ್ಳೆಯ ಸಂದೇಶ ನೀಡಿರುತ್ತಾರೆ. ಗಾಂಧೀಜಿಯು ವ್ಯಸನ ಮುಕ್ತ ಸಮಾಜ ನಿರ್ಮಾಣ ಆಗಬೇಕು ಎಂದು ಸಂಕಲ್ಪ ಮಾಡಿದ್ದರು. ಪರಮ ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಜನ ಜಾಗೃತಿ ವೇದಿಕೆಯ ಮೂಲಕ ವಿವಿಧ ಕಾರ್ಯಕ್ರಮಗಳನ್ನೂ ಜಾರಿಗೊಳಿಸಿದ್ದಾರೆ. ಆ ಮೂಲಕ ದುಶ್ಚಟ ದುರಭ್ಯಾಸಗಳನ್ನ ಹೋಗಲಾಡಿಸುವ ಕೆಲಸ ಮಾಡುತ್ತಿದ್ದಾರೆ. ಅಲ್ಲದೇ ಬಡವರ ಬದುಕಿನಲ್ಲಿ ಆಮೂಲಾಗ್ರ ಬದಲಾವಣೆ ತರುವಲ್ಲಿ ದಿಟ್ಟ ಹೆಜ್ಜೆಯನ್ನ ಇಟ್ಟಿದ್ದಾರೆ ಎಂದು ವಿವರಿಸಿದರು.

ಬ್ಯಾಂಕುಗಳ ಪ್ರತಿನಿಧಿಯಾಗಿ ಯೋಜನೆಯು ಕಾರ್ಯನಿರ್ವಹಿಸುತ್ತಿದೆ. ಪ್ರಗತಿ ಬಂಧು ಸ್ವ ಸಹಾಯ ಗುಂಪುಗಳನ್ನು ರಚನೆ ಮಾಡುವುದರ ಮೂಲಕ ಗುಂಪಿನ ಸದಸ್ಯರಿಗೆ ಆರ್ಥಿಕ ಚೈತನ್ಯ ಸಿಕ್ಕಿದೆ. ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಾದ್ಯ ಆಗಿದೆ ಎಂದರು.

ಜಿಲ್ಲಾ ಜನ ಜಾಗೃತಿ ವೇದಿಕೆಯ ಮಾಜಿ ಜಿಲ್ಲಾಧ್ಯಕ್ಷರು ಹಾಲಿ ಸದಸ್ಯರಾದ ಮಲ್ಲಿಕಾರ್ಜುನ ಹಕ್ರೆ ಮಾತನಾಡಿ, ಮದ್ಯ ವರ್ಜನಾ ಶಿಬಿರ ಆಯೋಜನೆ ಮಾಡುವುದರ ಮೂಲಕ ಸಾಕಷ್ಟು ಕುಟುಂಬಗಳು ಬಡತನದ ಬೇಗೆಯಿಂದ ಹೊರಬಂದಿವೆ. ನವಜೀವ ಸಮಿತಿಯ ಸದಸ್ಯರು ಯಾವುದೇ ಕಾರಣಕ್ಕೂ ತಪ್ಪು ಹೆಜ್ಜೆಗಳನ್ನು ಇಡದೇ ಸಮಾಜದಲ್ಲಿ ಗೌರವಯುತವಾಗಿ ಬಾಳಬೇಕು ಎಂದು ಕರೆ ನೀಡಿದರು.

ಪೂಜ್ಯರ ಕಾರ್ಯಕ್ರಮಗಳಿಂದಾಗಿ ಗ್ರಾಮೀಣ ಭಾಗದಲ್ಲಿ ಇರುವ ಜನರಲ್ಲಿ ಪರಿವರ್ತನೆ ಆಗಿದೆ. ಈ ಹಿಂದಿನ ನಡೆದು ಬಂದ ಹಾದಿಯನ್ನು ಯಾರು ಕೂಡ ಮರೆಯದೆ ಕಾರ್ಯಕ್ರಮಗಳಲ್ಲಿ ತೊಡಗಿಕೊಳ್ಳಬೇಕು ಎಂದು ಹೇಳಿದರು.

ಈ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಮ.ನಿ.ಪ್ರ ಅಭಿನವ ಚೆನ್ನ ಬಸವ ಮಹಾಸ್ವಾಮಿಗಳು ಸದಾನಂದ ಶಿವಯೋಗಶ್ರಮ ಮೂಲೆಗದೆ ಮಠ ಹೊಸನಗರ ಆಶೀರ್ವಚನ ಮಾಡುತ್ತಾ, ಬಸವಣ್ಣರ ತತ್ವ ಆದರ್ಶಗಳನ್ನು ಈ ಕಾಲದಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಆಚರಣೆ ಮಾಡಬೇಕು. ಮಠ ಮಂದಿರಗಳಿಂದ ಪರಿವರ್ತನೆ ಆಗುತ್ತದೆ. ಒಳ್ಳೆಯ ರೀತಿಯಲ್ಲಿ ಸಮಾಜದಲ್ಲಿ ಎಲ್ಲರೂ ಸಹ ಬಾಳ್ವೆಯಿಂದ ಬದುಕಬೇಕು ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಶೈಕ್ಷಣಿಕ ಹಾಗೂ ಸಾಮಾಜಿಕ ಪರಿವರ್ತನೆಗೆ ತಮ್ಮದೇ ಆದ ಕೊಡುಗೆಗಳನ್ನು ನೀಡುತ್ತಾ ಬಂದಿದೆ. ಅದರ ಸದ್ಬಳಕೆಯನ್ನ ಎಲ್ಲರೂ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ವೇದಿಕೆಯಲ್ಲಿ ಸಾಗರ ನಗರ ಸಭೆಯ ಉಪಾಧ್ಯಕ್ಷೆ ಸವಿತಾ ವಾಸು, ಸದಸ್ಯರಾದ ಅರವಿಂದ ರಾಯ್ಕರ್, ಮಾಜಿ ಅಧ್ಯಕ್ಷರು ಜಿಲ್ಲಾ ಜನ ಜಾಗೃತಿ ಹಾಲಿ ಸದಸ್ಯರಾದ ಪ್ರೇಮ್ ಕುಮಾರ್, ಉಪಾಧ್ಯಕ್ಷರಾದ ಗೌರಿ, ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ದೇವರಾಜ್ ಕುರುವರಿ, ಕಸ್ತೂರಿ ಸಾಗರ್, ಪ್ರಮೀಳಾ ಎಸ್. ಬಿ. ಎ ಸಿ ಚೆನ್ನವೀರಪ್ಪ, ದಿನಕರ್ ಭಾವೆ, ಸುಧಾ ಶಿವಪ್ರಸಾದ್, ಭರಮ ಗೌಡ ಪಾಟೀಲ, ಎಚ್ ಎಮ್ ಬಾಬು ಸಾಹೇಬ, ಚಂದ್ರ ಶೇಖರ್ ಎ ಮೊದಲಾದವರು ಉಪಸ್ಥಿತರಿದ್ದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನ ಶಿರಸಿ ವಿಭಾಗದ ಜಿಲ್ಲಾ ಜನ ಜಾಗೃತಿ ವೇದಿಕೆಯ ಅಧ್ಯಕ್ಷರಾದ ಕಾಳಿಂಗ ರಾಜ್ ಎಂ ಎಸ್ ವಹಿಸಿದ್ದರು. ಸಾದನೆ ಮಾಡಿದ ನವ ಜೀವನ ಸಮಿತಿ ಸದಸ್ಯರನ್ನು ವೇದಿಕೆಯಲ್ಲಿ ಗೌರವಿಸಲಾಯಿತು.

ತಾಲೂಕು ಯೋಜನಾಧಿಕಾರಿ ದಯಾನಂದ ಪೂಜಾರಿ ಪಿ ಸ್ವಾಗತಿಸಿದರು. ಕೃಷಿ ಮೇಲ್ವಿಚಾರಕರಾದ ಕೃಷ್ಣ ಮೂರ್ತಿ ನಿರೂಪಿಸಿದು. ಈ ಕಾರ್ಯಕ್ರಮದಲ್ಲಿ ಸಾಗರ ವಲಯ ಮೇಲ್ವಿಚಾರಕರಾದ ಕಮಲಾಕ್ಷಿ ವಂದಿಸಿದರು.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಬೇಡವೆಂದು ಮನೆಯಿಂದಲೇ ಪ್ರತಿಭಟನೆ ಧ್ವನಿ ಬರಬೇಕು: ಮಾಜಿ ಸಚಿವೆ ಬಿ.ಟಿ ಲಲಿತಾ ನಾಯಕ್

‘MBBS ವ್ಯಾಸಂಗ’ದ ನಿರೀಕ್ಷೆಯಲ್ಲಿದ್ದವರ ಗಮನಕ್ಕೆ: 3ನೇ ಸುತ್ತಿಗೆ ಹೆಚ್ಚುವರಿ ‘200 ವೈದ್ಯಕೀಯ ಸೀಟು’ ಲಭ್ಯ

Share. Facebook Twitter LinkedIn WhatsApp Email

Related Posts

ರಾಜಸ್ಥಾನದಲ್ಲಿ ‘ವಿರೋಶ್’ ಕಲ್ಯಾಣೋತ್ಸವ: ಇಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ರಶ್ಮಿಕಾ-ವಿಜಯ್ ದೇವರಕೊಂಡ!

26/02/2026 6:02 AM2 Mins Read

BIG NEWS : ರಾಜ್ಯದಲ್ಲಿ ಸರ್ಕಾರಿ ಖಾಲಿ ಹುದ್ದೆಗಳ ಭರ್ತಿ ಬಗ್ಗೆ ಬಜೆಟ್ ನಲ್ಲಿ ಘೋಷಣೆ : CM ಸಿದ್ದರಾಮಯ್ಯ

26/02/2026 5:52 AM1 Min Read

ಗ್ರಾಮೀಣ ಯುವಕರಿಗೆ ಗುಡ್ ನ್ಯೂಸ್ : ‘ಗ್ರಾಮ ಒನ್’ಕೇಂದ್ರ ಆರಂಭಿಸಲು ಸುವರ್ಣಾವಕಾಶ, ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ

26/02/2026 5:45 AM2 Mins Read
Recent News

ರಾಜಸ್ಥಾನದಲ್ಲಿ ‘ವಿರೋಶ್’ ಕಲ್ಯಾಣೋತ್ಸವ: ಇಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ರಶ್ಮಿಕಾ-ವಿಜಯ್ ದೇವರಕೊಂಡ!

26/02/2026 6:02 AM

BIG NEWS : ರಾಜ್ಯದಲ್ಲಿ ಸರ್ಕಾರಿ ಖಾಲಿ ಹುದ್ದೆಗಳ ಭರ್ತಿ ಬಗ್ಗೆ ಬಜೆಟ್ ನಲ್ಲಿ ಘೋಷಣೆ : CM ಸಿದ್ದರಾಮಯ್ಯ

26/02/2026 5:52 AM

ಗ್ರಾಮೀಣ ಯುವಕರಿಗೆ ಗುಡ್ ನ್ಯೂಸ್ : ‘ಗ್ರಾಮ ಒನ್’ಕೇಂದ್ರ ಆರಂಭಿಸಲು ಸುವರ್ಣಾವಕಾಶ, ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ

26/02/2026 5:45 AM

`ಗೃಹಲಕ್ಷ್ಮೀ ಫಲಾನುಭವಿ’ ಮರಣ ಹೊಂದಿದರೆ ಮನೆಯ ಮುಂದಿನ `ಯಜಮಾನಿ’ ಅರ್ಜಿ ಸಲ್ಲಿಸಲು ಅವಕಾಶ !

26/02/2026 5:25 AM
State News
KARNATAKA

ರಾಜಸ್ಥಾನದಲ್ಲಿ ‘ವಿರೋಶ್’ ಕಲ್ಯಾಣೋತ್ಸವ: ಇಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ರಶ್ಮಿಕಾ-ವಿಜಯ್ ದೇವರಕೊಂಡ!

By kannadanewsnow5726/02/2026 6:02 AM KARNATAKA 2 Mins Read

ಉದಯಪುರ: ದಕ್ಷಿಣ ಭಾರತದ ಮೋಸ್ಟ್ ಹ್ಯಾಪನಿಂಗ್ ಜೋಡಿ ಎಂದೇ ಖ್ಯಾತರಾಗಿರುವ ‘ನ್ಯಾಷನಲ್ ಕ್ರಷ್’ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ರೌಡಿ…

BIG NEWS : ರಾಜ್ಯದಲ್ಲಿ ಸರ್ಕಾರಿ ಖಾಲಿ ಹುದ್ದೆಗಳ ಭರ್ತಿ ಬಗ್ಗೆ ಬಜೆಟ್ ನಲ್ಲಿ ಘೋಷಣೆ : CM ಸಿದ್ದರಾಮಯ್ಯ

26/02/2026 5:52 AM

ಗ್ರಾಮೀಣ ಯುವಕರಿಗೆ ಗುಡ್ ನ್ಯೂಸ್ : ‘ಗ್ರಾಮ ಒನ್’ಕೇಂದ್ರ ಆರಂಭಿಸಲು ಸುವರ್ಣಾವಕಾಶ, ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ

26/02/2026 5:45 AM

`ಗೃಹಲಕ್ಷ್ಮೀ ಫಲಾನುಭವಿ’ ಮರಣ ಹೊಂದಿದರೆ ಮನೆಯ ಮುಂದಿನ `ಯಜಮಾನಿ’ ಅರ್ಜಿ ಸಲ್ಲಿಸಲು ಅವಕಾಶ !

26/02/2026 5:25 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.