Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಈ ವಿಟಮಿನ್ ಕೊರತೆಯಿದ್ರೆ ನಿಮಗೆ ನಿದ್ದೆ ಬರುವುದಿಲ್ಲ ; ನೀವಿದನ್ನ ಈ ರೀತಿ ಭರ್ತಿ ಮಾಡಿ!

26/08/2025 10:05 PM

ಫೆ.3, 2026ರಂದು ಸಾಗರದ ‘ಮಾರಿಕಾಂಬಾ ದೇವಿ ಜಾತ್ರೆ’ ನಿಗದಿ: ಅಧ್ಯಕ್ಷ ಕೆ.ಎನ್ ನಾಗೇಂದ್ರ

26/08/2025 9:53 PM

ಶಿವಮೊಗ್ಗ: ಸಾಗರದ ಜೋಯಿಸ್ ಮನೆತನದಿಂದ ‘ಅರಮನೆ ಗೌರಿ’ ಪ್ರತಿಷ್ಠಾಪನೆ, ವಿಶೇಷ ಪೂಜೆ

26/08/2025 9:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗಾಂಧಿ ವಿಚಾರಧಾರೆಗಳು , ಮೌಲ್ಯಗಳು ಜಗತ್ತಿನಲ್ಲಿ ಇಂದಿಗೂ ಪ್ರಸ್ತುತ: ಮುಖ್ಯಮಂತ್ರಿ ಸಿದ್ದರಾಮಯ್ಯ
KARNATAKA

ಗಾಂಧಿ ವಿಚಾರಧಾರೆಗಳು , ಮೌಲ್ಯಗಳು ಜಗತ್ತಿನಲ್ಲಿ ಇಂದಿಗೂ ಪ್ರಸ್ತುತ: ಮುಖ್ಯಮಂತ್ರಿ ಸಿದ್ದರಾಮಯ್ಯ

By kannadanewsnow0930/01/2025 2:54 PM

ಬೆಂಗಳೂರು : ಮತಾಂಧ ನಾಥೂರಾಮ್ ಗೋಡ್ಸೆ ಮಹಾತ್ಮಾ ಗಾಂಧಿಯವರನ್ನು ಗುಂಡಿಟ್ಟು ಕೊಂದು, ಅವರು ಇಹಲೋಕ ತ್ಯಜಿಸಿರಬಹುದು. ಆದರೆ ಮಹಾತ್ಮಾ ಗಾಂಧೀಜಿಯವರ ಮೌಲ್ಯಗಳನ್ನು ಕೊಲ್ಲಲು ಗೋಡ್ಸೆಯಾಗಲಿ ಅಥವಾ ಇನ್ಯಾರಿಂದಾಗಲಿ ಕೊಲ್ಲಲು ಸಾಧ್ಯವಿಲ್ಲ. ಇಂದಿಗೂ ಅವರ ವಿಚಾರಧಾರೆಗಳು , ಮೌಲ್ಯಗಳು ಭಾರತದಲ್ಲಿ ಮಾತ್ರವಲ್ಲ ಜಗತ್ತಿನಲ್ಲಿಯೇ ಪ್ರಸ್ತುತವಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಹುತಾತ್ಮರ ದಿನಾಚರಣೆ ಅಂಗವಾಗಿ ವಿಧಾನಸೌಧದ ಮಹಾತ್ಮಾ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಜನವರಿ 30, 1948 ರಂದು ಮಹಾತ್ಮಾ ಗಾಂಧೀಜಿಯವರನ್ನು ಹತ್ಯೆ ಮಾಡಿದ ದಿನ. ಗಾಂಧೀಜಿಯವರು ನನ್ನ ಜೀವನವೇ ನನ್ನ ಸಂದೇಶ ಎಂದು ಹೇಳಿದ್ದರು. ಅವರ ಹೋರಾಟಡ ಬದುಕು, ಅಹಿಂಸೆ, ಸತ್ಯಾಗ್ರಹ, ಇವು ನಮಗೆ ಪ್ರೇರಣೆ. ಜಗತ್ತಿನಲ್ಲಿ ಸತ್ಯ, ಅಹಿಂಸೆ, ಸತ್ಯಾಗೃಹದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ದೇಶದಲ್ಲಿ ಬಹಳ ದೀರ್ಘ ಕಾಲ ನಡೆದ ಹೋರಾಟದ ನಾಯಕತ್ವವನ್ನು ಗಾಂಧೀಜಿ ವಹಿಸಿದ್ದರು. 1915 ರಲ್ಲಿ ದಕ್ಷಿಣ ಆಫ್ರಿಕಾ ದಿಂದ ಭಾರತಕ್ಕೆ ಬಂದು ಮೊದಲು ದೇಶ, ದೇಶದ ಜನ, ಸಮಾಜ, ಬದುಕನ್ನು ಅರ್ಥಆಡಿಕೊಳ್ಳುವ ಪ್ರಯತ್ನ ಮಾಡಿ, ನಂತರ ಹೋರಾಟವನ್ನು ಪ್ರಾರಂಭಿಸಿದರು. ಸತ್ಯ ಅಹಿಂಸೆಗಳಿಂದ ಕೂಡಿದ್ದ ಹೋರಾಟದಲ್ಲಿ ಸಾವಿರಾರು ಜನ ಪಾಲ್ಗೊಂಡರು. ಅವರ ಹೋರಾಟದ ಫಲವಾಗಿ ನಮಗೆ ಸ್ವಾತಂತ್ರ್ಯ ದೊರೆತು, ಬ್ರಿಟಿಷರ ದಾಸ್ಯದಿಂದ ಬಿಡುಗಡೆ ದೊರೆಯಿತು ಎಂದು ವಿವರಿಸಿದರು.

ಮಹಾತ್ಮಾ ಗಾಂಧಿ ಅವರು ಒಮ್ಮೆ ಮಾತ್ರ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ಅವರ ಅಧ್ಯಕ್ಷತೆಯಲ್ಲಿ ಡಿಸೆಂಬರ್ 25,26,27 ರಂದು 1924 ನಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನ ನಡೆಯಿತು. ಅದರ ಸವಿನೆನಪಿಗಾಗಿ ಬೆಳಗಾವಿಯಲ್ಲಿ ಶತಮಾನೋತ್ಸವವನ್ನು ಆಚರಿಸಲಾಯಿತು. 26 ಮತ್ತು 27 ರಂದು ಕಾರ್ಯಕ್ರಮ ಜರುಗಿತು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

26 ರಂದು ನಡೆದ ರಾಷ್ಟ್ರೀಯ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಕಾರ್ಯಕಾರಿ ಸಮಿತಿ ಸದಸ್ಯರು, ಮುಖಂಡರು ಭಾಗವಹಿಸಿದ್ದರು. ಮೊದಲ ದಿನ ಮಹಾತ್ಮಾ ಗಾಂಧಿ ಅವರನ್ನು ನೆನಪುಾಡಿಕೊಳ್ಳಲಾಯಿತು. ಭಾರತದ ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ಅವರ ನಿಧನದಿಂದಾಗಿ ಕಾರ್ಯಕ್ರಮ ಮುಂದೂಡಲ್ಪಟ್ಟಿತು. 27 ರಂದು ಗಾಂಧಿ ಭಾರತ ಹೆಸರಿನಲ್ಲಿ ನಡೆದು, ಘೋಷವಾಕ್ಯ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಎಂದಾಗಿತ್ತು. ಅಂದೆ ಮಹಾತ್ಮಾ ಗಾಂಧಿ ಅವರ ಕಂಚಿನ ಪ್ರತಿಮೆಯನ್ನು ಸುವರ್ಣ ಸೌಧದಲ್ಲಿ ಅನಾವರಣ ಮಾಡಲಾಯಿತು. ವಿಧಾನ ಸಭಾ ಅಧ್ಯಕ್ಷರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಲ್ಲಾ ಮಂತ್ರಿ ಮಂಡಲದ ಸದಸ್ಯರು, ಭಾಗವಹಿಸಿದ್ದರು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಗಾಂಧಿ ಭಾರತ ಕಟ್ಟಲು ಪ್ರಾಮಾಣಿಕ ಪ್ರಯತ್ನ ಅಗತ್ಯ

ಮಹಾತ್ಮಾ ಗಾಂಧೀಜಿಯವರು ಕೇವಲ ಸ್ವಾತಂತ್ರ್ಯ ಹೋರಾಟ ಮಾಡಲಿಲ್ಲ, ಈ ದೇಶಕ್ಕೆ ಸ್ವಾತಂತ್ರ್ಯ ದೊರೆತ ಮೇಲೆ ಹೇಗಿರಬೇಕೆಂದು ಪರಿಹಾರಗಳನ್ನು ನೀಡಿದ್ದರು. ಭಾರತ ದೇಶ ಗ್ರಾಮಗಳ ದೇಶ. ಗ್ರಾಮಗಳ ಅಭಿವೃದ್ಧಿಯಾಗದೆ ದೇಶ ಅಭಿವೃದ್ಧಿ ಆಗುವುದಿಲ್ಲ ಎಂದು ಹೇಳಿದ್ದರು. ಅದಕ್ಕಾಗಿಯೇ ಗ್ರಾಮ ಸ್ವರಾಜ್ಯ ಎಂಬಾ ಪರಿಕಲ್ಪನೆಯನ್ನು ಪ್ರತಿಪಾದಿಸಿದ್ದರು. ಗ್ರಾಮಗಳು ಸ್ವಾವಲಂಬಿಗಳಾಗಬೇಕು.ಆಗ ಮಾತ್ರ ಜನ, ದೇಶ ಸ್ವಾವಲಂಬಿಗಳಾಗಿ ಸಾಧ್ಯ. ಭಾರತದಲ್ಲಿ ಗುಡಿ ಕೈಗಾರಿಕೆಗಳು, ಅತಿ ಸಣ್ಣ ಕೈಗಾರಿಕೆಗಳು ಆರ್ಥಿಕತೆಯ ತಳಹದಿ. ಅದಕ್ಕೆ ಉತ್ತೇಜನ ನೀಡಬೇಕು ಎಂದು ಕರೆ ನೀಡಿದ್ದರು. ಗಾಂಧಿ ಭಾರತ ಕಟ್ಟುವ ಪ್ರಯತ್ನವನ್ನು ಪ್ರಾಮಾಣಿಕವಾಗಿ ಮಾಡಬೇಕು. ಅವರ ಮೌಲ್ಯಗಳನ್ನು ರೂಢಿಸಿಕೊಂಡು ಅದರಂತೆ ನಡೆಯುವ ಪ್ರಯತ್ನ ಮಾಡಬೇಕು.

ಪ್ರಯಾಗ್ ರಾಜ್ ನಲ್ಲಿ *ಕಾಲ್ತುಳಿತಕ್ಕೆ ಸಿಕ್ಕು ಮೃತಪಟ್ಟವರ ದೇಹಗಳನ್ನು ತರಲು ಏರ್ ಆಂಬ್ಯುಲೆನ್ಸ್

ಪ್ರಯಾಗ್ ರಾಜ್ ನಲ್ಲಿ ನಡೆದಿರುವ ಕಾಲ್ತುಳಿತದಲ್ಲಿ ಕರ್ನಾಟಕದ ನಾಲ್ವರು ಮೃತ ಪಟ್ಟಿದ್ದು, ಮೃತ ದೇಹಗಳನ್ನು ರಾಜ್ಯಕ್ಕೆ ತರಲು ಏರ್ ಆಂಬ್ಯುಲೆನ್ಸ್ ಕಳುಹಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಳಗಾವಿ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ವ್ಯವಸ್ಥೆ ಮಾಡಿದ್ದು, ಇನ್ನೂ ಎಂಟು ಜನ ನಾಪತ್ತೆಯಾಗಿರುವ ಬಗ್ಗೆ ಬಗ್ಗೆ ಮಾಹಿತಿಯಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಮೃತ ಪಟ್ಟವರ ಕುಟುಂಬಕ್ಕೆ ಪರಿಹಾರವನ್ನು ಘೋಷಣೆ ಮಾಡಲಿದ್ದಾರೆ ಎಂದರು.

ಡಿಜಿಟಲ್ ಪಾವತಿ ವರ್ಷದಿಂದ ವರ್ಷಕ್ಕೆ ಎರಡಂಕಿ ಏರಿಕೆ: RBI | Digital Payments

BREAKING: ಇನ್ಮುಂದೆ ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಕಿರುಕುಳಕ್ಕೆ ಬ್ರೇಕ್: ಸುಗ್ರೀವಾಜ್ಞೆಗೆ ‘ಸಚಿವ ಸಂಪುಟ’ ಒಪ್ಪಿಗೆ

Share. Facebook Twitter LinkedIn WhatsApp Email

Related Posts

ಫೆ.3, 2026ರಂದು ಸಾಗರದ ‘ಮಾರಿಕಾಂಬಾ ದೇವಿ ಜಾತ್ರೆ’ ನಿಗದಿ: ಅಧ್ಯಕ್ಷ ಕೆ.ಎನ್ ನಾಗೇಂದ್ರ

26/08/2025 9:53 PM1 Min Read

ಶಿವಮೊಗ್ಗ: ಸಾಗರದ ಜೋಯಿಸ್ ಮನೆತನದಿಂದ ‘ಅರಮನೆ ಗೌರಿ’ ಪ್ರತಿಷ್ಠಾಪನೆ, ವಿಶೇಷ ಪೂಜೆ

26/08/2025 9:46 PM1 Min Read

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಸೆ.1ರಿಂದ ಪಹಣಿ ತಿದ್ದುಪಡಿ ವಿಶೇಷ ಅಭಿಯಾನ

26/08/2025 9:30 PM1 Min Read
Recent News

ಈ ವಿಟಮಿನ್ ಕೊರತೆಯಿದ್ರೆ ನಿಮಗೆ ನಿದ್ದೆ ಬರುವುದಿಲ್ಲ ; ನೀವಿದನ್ನ ಈ ರೀತಿ ಭರ್ತಿ ಮಾಡಿ!

26/08/2025 10:05 PM

ಫೆ.3, 2026ರಂದು ಸಾಗರದ ‘ಮಾರಿಕಾಂಬಾ ದೇವಿ ಜಾತ್ರೆ’ ನಿಗದಿ: ಅಧ್ಯಕ್ಷ ಕೆ.ಎನ್ ನಾಗೇಂದ್ರ

26/08/2025 9:53 PM

ಶಿವಮೊಗ್ಗ: ಸಾಗರದ ಜೋಯಿಸ್ ಮನೆತನದಿಂದ ‘ಅರಮನೆ ಗೌರಿ’ ಪ್ರತಿಷ್ಠಾಪನೆ, ವಿಶೇಷ ಪೂಜೆ

26/08/2025 9:46 PM

ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ, ಬೆಲ್ಲ ಒಟ್ಟಿಗೆ ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ.? ತಿಳಿದ್ರೆ, ನೀವಿದನ್ನ ಬಿಡೋದಿಲ್ಲ

26/08/2025 9:44 PM
State News
KARNATAKA

ಫೆ.3, 2026ರಂದು ಸಾಗರದ ‘ಮಾರಿಕಾಂಬಾ ದೇವಿ ಜಾತ್ರೆ’ ನಿಗದಿ: ಅಧ್ಯಕ್ಷ ಕೆ.ಎನ್ ನಾಗೇಂದ್ರ

By kannadanewsnow0926/08/2025 9:53 PM KARNATAKA 1 Min Read

ಶಿವಮೊಗ್ಗ : ಸಾಗರದ ಇತಿಹಾಸ ಪ್ರಸಿದ್ದವಾದ ಶ್ರೀ ಮಾರಿಕಾಂಬಾ ದೇವಿ ಜಾತ್ರೆಯು ಫೆಬ್ರವರಿ.3, 2026ರಂದು ನಡೆಯಲಿದೆ ಎಂದು ಮಾರಿಕಾಂಬಾ ದೇವಸ್ಥಾನ…

ಶಿವಮೊಗ್ಗ: ಸಾಗರದ ಜೋಯಿಸ್ ಮನೆತನದಿಂದ ‘ಅರಮನೆ ಗೌರಿ’ ಪ್ರತಿಷ್ಠಾಪನೆ, ವಿಶೇಷ ಪೂಜೆ

26/08/2025 9:46 PM

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಸೆ.1ರಿಂದ ಪಹಣಿ ತಿದ್ದುಪಡಿ ವಿಶೇಷ ಅಭಿಯಾನ

26/08/2025 9:30 PM

BREAKING: ಮಾಜಿ ಸಚಿವ ಮುರುಗೇಶ್ ನಿರಾಣಿ ಪುತ್ರನಿಗೆ ಸುಪ್ರೀಂ ಕೋರ್ಟ್ ಶಾಕ್: ವಿಜಯ್ ನಿರಾಣಿ ವಿರುದ್ಧ ತನಿಖೆಗೆ ಆದೇಶ

26/08/2025 9:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.