Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಯುದ್ಧ ಪರಿಸ್ಥಿತಿಯ ನಡುವೆಯೇ ಉತ್ತರ ಕೊರಿಯಾದಿಂದ ಕ್ಷಿಪಣಿ ಉಡಾವಣೆ : ದೃಢಿಕರಿಸಿದ ಜಪಾನ್

14/03/2026 11:29 AM

ಗ್ಯಾಸ್ ಸಿಲಿಂಡರ್ ಅಭಾವ: ಅಕ್ರಮ ತಡೆಗೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಖಡಕ್ ಎಚ್ಚರಿಕೆ

14/03/2026 11:29 AM

ಇಸ್ರೇಲ್-ಇರಾನ್ ಯುದ್ಧದ ಬಿಸಿ: ಭಾರತದಲ್ಲಿ 15ಕ್ಕೂ ಹೆಚ್ಚು ವಸ್ತುಗಳ ಬೆಲೆ ಏರಿಕೆ! ಆತಂಕ ಬೇಡ ಏಕೆ?

14/03/2026 11:28 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗ್ಯಾಸ್ ಸಿಲಿಂಡರ್ ಅಭಾವ: ಅಕ್ರಮ ತಡೆಗೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಖಡಕ್ ಎಚ್ಚರಿಕೆ
KARNATAKA

ಗ್ಯಾಸ್ ಸಿಲಿಂಡರ್ ಅಭಾವ: ಅಕ್ರಮ ತಡೆಗೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಖಡಕ್ ಎಚ್ಚರಿಕೆ

By kannadanewsnow0914/03/2026 11:29 AM

ಶಿವಮೊಗ್ಗ: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಪರಿಣಾಮವಾಗಿ ದೇಶಾದ್ಯಂತ ಎದುರಾಗಿರುವ ಅಡುಗೆ ಅನಿಲ (LPG) ಅಭಾವದ ಹಿನ್ನೆಲೆಯಲ್ಲಿ, ಸಾಗರ ಕ್ಷೇತ್ರದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ.

​ಈ ಕುರಿತು ಅಧಿಕಾರಿಗಳು ಹಾಗೂ ಗ್ಯಾಸ್ ಏಜೆನ್ಸಿ ಮಾಲೀಕರೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕೆಳಗಿನ ಪ್ರಮುಖ ಅಂಶಗಳನ್ನು ಹಂಚಿಕೊಂಡರು:

​ವಾಣಿಜ್ಯ ಬಳಕೆಯ ಸಿಲಿಂಡರ್ ಕೊರತೆ

​ಕಳೆದ ಒಂದು ವಾರದಿಂದ ವಾಣಿಜ್ಯ ಬಳಕೆಯ (Commercial) ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಆದರೆ ಗೃಹ ಬಳಕೆಯ (Domestic) ಸಿಲಿಂಡರ್‌ಗಳು ಸದ್ಯಕ್ಕೆ ಲಭ್ಯವಿವೆ. ಈ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಮನೆಗೆ ಬಳಸುವ ಸಿಲಿಂಡರ್‌ಗಳನ್ನು ಹೋಟೆಲ್ ಅಥವಾ ಇತರ ವಾಣಿಜ್ಯ ಉದ್ದೇಶಗಳಿಗೆ ಬಳಸಬಾರದು ಎಂದು ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

​ಕಠಿಣ ಕಾನೂನು ಕ್ರಮದ ಎಚ್ಚರಿಕೆ

​”ಮನೆ ಬಳಕೆಯ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸಿದರೆ ಅಥವಾ ಗ್ಯಾಸ್ ರೀಫಿಲ್ಲಿಂಗ್‌ನಂತಹ ಅಪಾಯಕಾರಿ ಕೃತ್ಯಗಳಲ್ಲಿ ತೊಡಗಿದರೆ ಅವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು. ಅಂತಹವರನ್ನು ಜೈಲಿಗೆ ಕಳುಹಿಸಲು ಹಿಂಜರಿಯುವುದಿಲ್ಲ” ಎಂದು ಶಾಸಕರು ಎಚ್ಚರಿಸಿದ್ದಾರೆ. ಈ ಬಗ್ಗೆ ನಿಗಾ ಇಡಲು ಎಸಿ, ತಹಶೀಲ್ದಾರ್ ಮತ್ತು ಗ್ರಾಮ ಆಡಳಿತಾಧಿಕಾರಿಗಳಿಗೆ (VA) ಸೂಚನೆ ನೀಡಲಾಗಿದೆ.

​ಹಾಸ್ಟೆಲ್ ಮತ್ತು ಆಸ್ಪತ್ರೆಗಳಿಗೆ ಆದ್ಯತೆ

​ಪರೀಕ್ಷೆಗಳು ನಡೆಯುತ್ತಿರುವ ಕಾರಣ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಊಟದ ವ್ಯವಸ್ಥೆಗೆ ತೊಂದರೆಯಾಗದಂತೆ ಗ್ಯಾಸ್ ಪೂರೈಕೆಗೆ ಕ್ರಮ ವಹಿಸಲಾಗಿದೆ. ಆಸ್ಪತ್ರೆಗಳು, ಮೊರಾರ್ಜಿ ದೇಸಾಯಿ ಶಾಲೆಗಳು ಮತ್ತು ಮಧ್ಯಾಹ್ನದ ಬಿಸಿಯೂಟದ ವ್ಯವಸ್ಥೆಗೆ ಯಾವುದೇ ಅಡೆತಡೆಯಾಗದಂತೆ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಭರವಸೆ ನೀಡಿದರು.

​ಕಾರ್ಗಲ್ ವಾಂತಿ-ಭೇದಿ ಪ್ರಕರಣ: ಮುನ್ನೆಚ್ಚರಿಕೆ

​ಇದೇ ವೇಳೆ ಕಾರ್ಗಲ್‌ನಲ್ಲಿ ಸಂಭವಿಸಿದ ವಾಂತಿ-ಭೇದಿ ಪ್ರಕರಣದ ಬಗ್ಗೆಯೂ ಮಾಹಿತಿ ನೀಡಿದ ಶಾಸಕರು, “ಇದು ಕೇವಲ ನೀರಿನ ಸಮಸ್ಯೆಯಲ್ಲ, ಜಾತ್ರೆಯ ಸಂದರ್ಭದಲ್ಲಿ ಐಸ್‌ಕ್ರೀಂ ಅಥವಾ ಹೊರಗಿನ ಆಹಾರ ಸೇವನೆಯಿಂದ ಉಂಟಾಗಿರುವ ಸಾಧ್ಯತೆಯಿದೆ. ಈಗಾಗಲೇ ಅಲ್ಲಿ ತುರ್ತು ವೈದ್ಯಕೀಯ ಸೇವೆಗಾಗಿ ಅಂಬುಲೆನ್ಸ್ ಹಾಗೂ ವೈದ್ಯರ ತಂಡವನ್ನು ನಿಯೋಜಿಸಲಾಗಿದೆ. ಸಾರ್ವಜನಿಕರು ಬೇಸಿಗೆಯ ಈ ಸಂದರ್ಭದಲ್ಲಿ ಆಹಾರ ಸೇವನೆಯ ಬಗ್ಗೆ ಜಾಗರೂಕರಾಗಿರಬೇಕು” ಎಂದು ಮನವಿ ಮಾಡಿದರು.

​ಗ್ಯಾಸ್ ಅಭಾವದ ನಡುವೆ ಕಪ್ಪು ಮಾರುಕಟ್ಟೆ ಮತ್ತು ಅಕ್ರಮ ಬಳಕೆಯನ್ನು ತಡೆಯಲು ಆಡಳಿತ ಯಂತ್ರ ಸಜ್ಜಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಸ್ಪಷ್ಟಪಡಿಸಿದ್ದಾರೆ.

ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು…

Share. Facebook Twitter LinkedIn WhatsApp Email

Related Posts

BIG NEWS : `KSRTC’ಯಲ್ಲಿ ಅನುಕಂಪದ ಆಧಾರದ ನೇಮಕಾತಿ : ಸಾರಿಗೆ ಇಲಾಖೆ ಮಹತ್ವದ ಆದೇಶ

14/03/2026 11:13 AM1 Min Read

BREAKING : ರಾಜ್ಯದಲ್ಲಿ `ಒಳಮೀಸಲಾತಿ’ ತೀರ್ಮಾನದ ಬಳಿಕ 50 ಸಾವಿರ ಸರ್ಕಾರಿ ಹುದ್ದೆಗಳ ನೇಮಕಾತಿ : ಗೃಹ ಸಚಿವ ಪರಮೇಶ್ವರ್ !

14/03/2026 11:00 AM1 Min Read

ALERT : `ಟೆನ್ಷನ್’ನಿಂದ ಬಿಪಿ ಹೆಚ್ಚಾಗಿ `ಬ್ರೈನ್ ಸ್ಟ್ರೋಕ್’ ಬರುತ್ತೆ ಎಚ್ಚರ !

14/03/2026 10:50 AM2 Mins Read
Recent News

BREAKING : ಯುದ್ಧ ಪರಿಸ್ಥಿತಿಯ ನಡುವೆಯೇ ಉತ್ತರ ಕೊರಿಯಾದಿಂದ ಕ್ಷಿಪಣಿ ಉಡಾವಣೆ : ದೃಢಿಕರಿಸಿದ ಜಪಾನ್

14/03/2026 11:29 AM

ಗ್ಯಾಸ್ ಸಿಲಿಂಡರ್ ಅಭಾವ: ಅಕ್ರಮ ತಡೆಗೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಖಡಕ್ ಎಚ್ಚರಿಕೆ

14/03/2026 11:29 AM

ಇಸ್ರೇಲ್-ಇರಾನ್ ಯುದ್ಧದ ಬಿಸಿ: ಭಾರತದಲ್ಲಿ 15ಕ್ಕೂ ಹೆಚ್ಚು ವಸ್ತುಗಳ ಬೆಲೆ ಏರಿಕೆ! ಆತಂಕ ಬೇಡ ಏಕೆ?

14/03/2026 11:28 AM

BREAKING: ಪಶ್ಚಿಮ ಏಷ್ಯಾ ಸಂಘರ್ಷ: ಭಾರತದಲ್ಲಿರುವ ವಿದೇಶಿಗರಿಗೆ 30 ದಿನಗಳ ವೀಸಾ ವಿಸ್ತರಣೆ; ದಂಡ ವಿಧಿಸದಿರಲು ಕೇಂದ್ರದ ನಿರ್ಧಾರ

14/03/2026 11:26 AM
State News
KARNATAKA

ಗ್ಯಾಸ್ ಸಿಲಿಂಡರ್ ಅಭಾವ: ಅಕ್ರಮ ತಡೆಗೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಖಡಕ್ ಎಚ್ಚರಿಕೆ

By kannadanewsnow0914/03/2026 11:29 AM KARNATAKA 2 Mins Read

ಶಿವಮೊಗ್ಗ: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಪರಿಣಾಮವಾಗಿ ದೇಶಾದ್ಯಂತ ಎದುರಾಗಿರುವ ಅಡುಗೆ ಅನಿಲ (LPG) ಅಭಾವದ ಹಿನ್ನೆಲೆಯಲ್ಲಿ, ಸಾಗರ…

BIG NEWS : `KSRTC’ಯಲ್ಲಿ ಅನುಕಂಪದ ಆಧಾರದ ನೇಮಕಾತಿ : ಸಾರಿಗೆ ಇಲಾಖೆ ಮಹತ್ವದ ಆದೇಶ

14/03/2026 11:13 AM

BREAKING : ರಾಜ್ಯದಲ್ಲಿ `ಒಳಮೀಸಲಾತಿ’ ತೀರ್ಮಾನದ ಬಳಿಕ 50 ಸಾವಿರ ಸರ್ಕಾರಿ ಹುದ್ದೆಗಳ ನೇಮಕಾತಿ : ಗೃಹ ಸಚಿವ ಪರಮೇಶ್ವರ್ !

14/03/2026 11:00 AM

ALERT : `ಟೆನ್ಷನ್’ನಿಂದ ಬಿಪಿ ಹೆಚ್ಚಾಗಿ `ಬ್ರೈನ್ ಸ್ಟ್ರೋಕ್’ ಬರುತ್ತೆ ಎಚ್ಚರ !

14/03/2026 10:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.