ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆಯಲ್ಲಿ ಶಿಕ್ಷನಿಗೆ ಪೋಷಕರು ಗೂಸಾ ಕೊಟ್ಟಿರುವ ಘಟನೆ ನಡೆದಿದೆ.

BIGG NEWS: ಭಾರತ್ ಜೋಡೋ ಯಾತ್ರೆಯಲ್ಲಿ PAYCM ಧ್ವಜ ಹಿಡಿದ ಕಾರ್ಯಕರ್ತನ ವಿರುದ್ಧ FIR

ತರಗತಿ ಮುಗಿದ ನಂತರ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬ ಆರೋಪದ ಮೇಲೆ ಸರ್ಕಾರಿ ಶಾಲೆಯ ಶಿಕ್ಷಕ ಲೋಕೇಶ್ ಹೊದಿಗೆರೆ ಎಂಬುವರನ್ನು ಪೋಷಕರು ಥಳಿಸಿದ್ದಾರೆ.ಕೆಲವು ದಿನಗಳಿಂದ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪ ಕೇಳಿಬಂದಿದೆ.

BIGG NEWS: ಭಾರತ್ ಜೋಡೋ ಯಾತ್ರೆಯಲ್ಲಿ PAYCM ಧ್ವಜ ಹಿಡಿದ ಕಾರ್ಯಕರ್ತನ ವಿರುದ್ಧ FIR

 

ಬಾಲಕಿಯು ಮನೆಗೆ ತೆರಳಿ ಕಾಮುಕ ಶಿಕ್ಷಕ ನೀಡುತ್ತಿದ್ದ ಕಿರುಕುಳವನ್ನು ಎಳೆ ಎಳೆಯಾಗಿ ಪೋಷಕರಿಗೆ ತಿಳಿದ್ದಾಳೆ.ವಿಷಯ ತಿಳಿದ ಪೋಷಕರು ಶಾಲೆಗೆ ಆಗಮಿಸಿ ಶಿಕ್ಷಕನ ಬಟ್ಟೆ ಬಿಚ್ಚಿಸಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಚನ್ನಗಿರಿ ಬಿಇಒ ಮಂಜುನಾಥ್ ಭೇಟಿ ನೀಡಿ ಘಟನೆ‌ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಬಳಿಕ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾದ ಶಿಕ್ಷಕ ಲೋಕೇಶ್ ಅವರನ್ನು ಅಮಾನತು ಮಾಡಿ ಆದೇಶಿಸಿದ್ದಾರೆ. ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ.

Share.
Exit mobile version