‘ಬಿಜೆಪಿ ಸರ್ಕಾರ’ದಂತೆಯೇ ರೈತರಿಗೆ ಪರಿಹಾರ ನೀಡಿ, ಇಲ್ಲ ‘ಕುರ್ಚಿ ಬಿಡಿ’ – ಆರ್‌.ಅಶೋಕ ಆಗ್ರಹ

ಕೋಲಾರ : ಬರ ಮತ್ತು ನೆರೆ ಸಂದರ್ಭದಲ್ಲಿ ಹಿಂದಿನ ಬಿಜೆಪಿ ಸರ್ಕಾರ ರೈತರಿಗೆ ಮೂರು, ನಾಲ್ಕು ಪಟ್ಟು ಅಧಿಕ ಪರಿಹಾರ ನೀಡಿತ್ತು. ಅದೇ ಮಾನದಂಡದಲ್ಲಿ ಸಿದ್ದರಾಮಯ್ಯ ಸರ್ಕಾರ ಪರಿಹಾರ ನೀಡಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ಕೋಲಾರದಲ್ಲಿ ಬಿಜೆಪಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮೊದಲು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸುದ್ದಿಗೋಷ್ಟಿ ಯಲ್ಲಿ ಆರ್‌.ಅಶೋಕ ಮಾತನಾಡಿದರು. ಬರಗಾಲ ಬಂದು ಏಳು ತಿಂಗಳಾದರೂ ರೈತರಿಗೆ ಪರಿಹಾರ ನೀಡಿಲ್ಲ. ಬೆಳಗಾವಿ ಅಧಿವೇಶನ ಕಳೆದು ತಿಂಗಳಾದರೂ ಪರಿಹಾರ … Continue reading ‘ಬಿಜೆಪಿ ಸರ್ಕಾರ’ದಂತೆಯೇ ರೈತರಿಗೆ ಪರಿಹಾರ ನೀಡಿ, ಇಲ್ಲ ‘ಕುರ್ಚಿ ಬಿಡಿ’ – ಆರ್‌.ಅಶೋಕ ಆಗ್ರಹ