ಶಿವಮೊಗ್ಗ: ನಾನು ನೈರುತ್ಯ ಪದವೀಧರ ಕ್ಷೇತ್ರದ ವ್ಯಾಪ್ತಿಯ ಎಲ್ಲಾ ಜಿಲ್ಲೆಗಳಲ್ಲಿ ಮತಯಾಚನೆ ಮಾಡಿದ್ದೇನೆ. ಬಹುತೇಕ ಮತದಾರರು ಸಕಾರಾತ್ಮಕವಾಗೇ ಪ್ರತಿಸ್ಪಂದಿಸಿದ್ದಾರೆ. ನಾನು ಮೊದಲ ಹಂತದಲ್ಲೇ ಗೆಲುವು ಸಾಧಿಸಲಿದ್ದೇನೆ ಎಂಬುದಾಗಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ್ ಸರ್ಜಿ ವಿಶ್ವಾಸ ವ್ಯಕ್ತ ಪಡಿಸಿದರು. ಅಲ್ಲದೇ ನಿಮ್ಮ ಧ್ವನಿಯಾಗಿ ಕೆಲಸ ಮಾಡಲು ಅವಕಾಶ ನೀಡುವಂತೆ ಮನವಿ ಮಾಡಿದರು.
ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ವಾಸವಿ ಕಲ್ಯಾಣ ಮಂಟಪದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ವೈದ್ಯಕೀಯ ಸೇವೆ ಸಲ್ಲಿಸುತ್ತಾ, 65 ಬಾರಿ ರಕ್ತದಾನ ಮಾಡಿದ್ದೇನೆ. ಈಗ ಪದವೀಧರ ಕ್ಷೇತ್ರದಲ್ಲಿ ಸೇವೆ ಸಲ್ಲಿಸೋದಕ್ಕೆ ಬಂದಿದ್ದೇನೆ ಎಂದರು.
ಮೆಗ್ಗಾನ್ ಆಸ್ಪತ್ರೆಯ ಮಕ್ಕಳ ತುರ್ತು ಚಿಕಿತ್ಸಾ ವಿಭಾಗದಲ್ಲಿ ಬೆಂಕಿ ಅವಘಡ ಸಂಭವಿಸಿದಂತ ವೇಳೆ, 33 ಮಕ್ಕಳನ್ನು ಆಸ್ಪತ್ರೆಯಿಂದ ಸರ್ಜಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. 13 ದಿನಗಳ ಕಾಲ ಆ ಎಲ್ಲಾ ಮಕ್ಕಳಿಗೆ ಉಚಿತವಾಗಿ ಚಿಕಿತ್ಸೆ ನೀಡಿದ್ದೇನೆ ಎಂಬುದಾಗಿ ತಮ್ಮ ಸಾಮಾಜಿಕ ಸೇವೆಯನ್ನು ವಿವರಿಸಿದರು.
ಒಳ್ಳೆಯ ಸೇವೆ ಮಾಡೋದಕ್ಕೆ ಬಂದಿದ್ದೇನೆ. ಆ ಸೇವೆ ಮಾಡಲು ಅವಕಾಶ ಮಾಡುವಂತೆ ಕೋರಿದಂತ ಅವರು, ನನಗೆ ವಿಶ್ವಾಸವಿದೆ. ಮೊದಲ ಹಂತದಲ್ಲೇ ಗೆಲುವನ್ನು ಸಾಧಿಸಲಿದ್ದೇನೆ ಎಂಬುದಾಗಿ ಹೇಳಿದರು.
OPS ಜಾರಿ ಮಾಡುತ್ತೇವೆ ಜಾರಿ ಮಾಡುತ್ತೇವೆ ಅಂತ ಹೇಳುತ್ತಲೇ ಈ ಕಾಂಗ್ರೆಸ್ ಸರ್ಕಾರ 1 ವರ್ಷ ಕಳೆಯುತ್ತಾ ಬಂತು. ಈವರೆಗೆ ಜಾರಿಗೊಳಿಸಲೇ ಇಲ್ಲ. ನಿಮ್ಮ ಧ್ವನಿಯಾಗಿ ನಾವು ಕೆಲಸ ಮಾಡುತ್ತೇವೆ. ಬಿಜೆಪಿಯ ಅಭ್ಯರ್ಥಿಯಾದ ನನ್ನನ್ನು ಗೆಲ್ಲಿಸುವಂತೆ ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಸ್ ಎಲ್ ಭೋಜೇಗೌಡ, ಮಾಜಿ ಸಚಿವ ಹರತಾಳು ಹಾಲಪ್ಪ, ಶಿವಮೊಗ್ಗ ಬಿಜೆಪಿ ಜಿಲ್ಲಾಧ್ಯಕ್ಷ ಟಿಡಿ ಮೇಘರಾಜ್, ಮಲ್ಲಿಕಾರ್ಜನ ಹಕ್ರೆ, ಮಧುರಾ ಶಿವಾನಂದ್ ಸೇರಿದಂತೆ ವಿವಿಧ ಮುಖಂಡರು ಉಪಸ್ಥಿತರಾಗಿದ್ದರು.
ಮೇ 31ರೊಳಗೆ ಪ್ಯಾನ್ ಅನ್ನು ಆಧಾರ್ ಕಾರ್ಡ್ನೊಂದಿಗೆ ಲಿಂಕ್ ಮಾಡಿ: ತೆರಿಗೆದಾರರಿಗೆ ಆದಾಯ ತೆರಿಗೆ ಇಲಾಖೆ ಸೂಚನೆ
ಚೆನ್ನಗಿರಿ ಪೊಲೀಸ್ ಠಾಣೆ ಲಾಕಪ್ ಡೆತ್ ಕೇಸ್: ಹೃದಯಾಘಾತದಿಂದ ಆದಿಲ್ ಸಾವು: ಮರಣೋತ್ತರ ಪರೀಕ್ಷಾ ವರದಿ