Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹೊಸ ವರ್ಷದಲ್ಲಿ ಯಾವುದೇ ತೊಂದರೆ ಆಗಬಾರದು ಅಂದರೇ ನಾಳೆ ತಪ್ಪದೇ ಈ ಮಂತ್ರವನ್ನು ಪಠಿಸಿ

31/12/2025 9:40 AM

Personality test : ನಿಮ್ಮ ತುಟಿಗಳ ಆಕಾರದಿಂದಲೂ `ವ್ಯಕ್ತಿತ್ವ’ ತಿಳಿಯಬಹುದು.! ಹೇಗೆ ಗೊತ್ತಾ?

31/12/2025 9:30 AM

SHOCKING : ನಾಯಿ ಕಚ್ಚಿ ಎಮ್ಮೆಗೆ `ರೇಬಿಸ್’ ಸೋಂಕು : ಮೊಸರು ತಿಂದ 200 ಗ್ರಾಮಸ್ಥರಿಗೆ ಲಸಿಕೆ.!

31/12/2025 9:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಡವರಿಗೆ ಮರಳಿ ರೇಷನ್‌ ಕಾರ್ಡ್‌ ನೀಡಿ, ಇಲ್ಲದಿದ್ದರೆ ತೀವ್ರ ಹೋರಾಟ, ಸರ್ಕಾರಿ ಕಚೇರಿಗಳಿಗೆ ಬೀಗ: ಆರ್‌.ಅಶೋಕ್ ಎಚ್ಚರಿಕೆ
KARNATAKA

ಬಡವರಿಗೆ ಮರಳಿ ರೇಷನ್‌ ಕಾರ್ಡ್‌ ನೀಡಿ, ಇಲ್ಲದಿದ್ದರೆ ತೀವ್ರ ಹೋರಾಟ, ಸರ್ಕಾರಿ ಕಚೇರಿಗಳಿಗೆ ಬೀಗ: ಆರ್‌.ಅಶೋಕ್ ಎಚ್ಚರಿಕೆ

By kannadanewsnow0920/11/2024 2:49 PM

ಬೆಂಗಳೂರು : ರಾಜ್ಯ ಸರ್ಕಾರ ಬಡವರಿಗೆ ಮರಳಿ ಬಿಪಿಎಲ್‌ ಕಾರ್ಡ್‌ ನೀಡಬೇಕು. ಕಾರ್ಡ್‌ ರದ್ದು ಪ್ರಕ್ರಿಯೆ ನಿಲ್ಲಿಸದಿದ್ದರೆ ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳಿಗೆ ಬೀಗ ಹಾಕಿ ಪ್ರತಿಭಟಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಎಚ್ಚರಿಕೆ ನೀಡಿದ್ದಾರೆ.

ಮಹಾಲಕ್ಷ್ಮಿ ಲೇಔಟ್‌ ವಿಧಾನಸಭಾ ಕ್ಷೇತ್ರದ ವೃಷಭಾವತಿ ನಗರ, ನಂದಿನಿ ಲೇಔಟ್ ಗಳಲ್ಲಿ ಬಿಪಿಎಲ್‌ ಕಾರ್ಡ್‌ ರದ್ದುಗೊಂಡ ಕುಟುಂಬದವರನ್ನು ಶಾಸಕರಾದ ಡಾ. ಅಶ್ವತ್ಥನಾರಾಯಣ ಮತ್ತು ಕೆ. ಗೋಪಾಲಯ್ಯ ಅವರೊಂದಿಗೆ ಭೇಟಿ ಮಾಡಿ ಸಮಸ್ಯೆ ಆಲಿಸಿದರು.

ನಂತರ ಮಾತನಾಡಿ, ಜನರಿಗೆ ಅನ್ನ ಕೊಡಬೇಕಿದ್ದ ಸರ್ಕಾರ ಅನ್ನಕ್ಕೆ ಕನ್ನ ಹಾಕುವ ಕೆಲಸ ಮಾಡುತ್ತಿದೆ. ಯಾರೂ ಹಸಿವಿನಿಂದ ಸಾಯಬಾರದು ಎಂಬ ಪ್ರಜ್ಞೆ ಸರ್ಕಾರಕ್ಕೆ ಇರಬೇಕು. ಬಿಪಿಎಲ್‌ ಕಾರ್ಡ್‌ ಕಳೆದುಕೊಂಡವರು ಯಾರೂ ಶ್ರೀಮಂತರಲ್ಲ, ಕಾರಿನಲ್ಲಿ ಓಡಾಡುವುದಿಲ್ಲ. 2 ವರ್ಷದ ಮಗು ಇರುವ ಮಹಿಳೆ ಗಾರ್ಮೆಂಟ್‌ ಕೆಲಸಕ್ಕೆ ಹೋಗಲು ಆಗುತ್ತಿಲ್ಲ. ಅಂಗವಿಕಲ ವ್ಯಕ್ತಿಯೊಬ್ಬರು ರಸ್ತೆ ಬದಿಯಲ್ಲಿ ಬಜ್ಜಿ ಮಾರಾಟ ಮಾಡುತ್ತಿದ್ದು, ಅನಾರೋಗ್ಯದಿಂದಾಗಿ ಕೆಲಸಕ್ಕೆ ಹೋಗುತ್ತಿಲ್ಲ. ಇಂತಹ ಬಡ ಕುಟುಂಬದ ಜನರ ಮನೆಗೆ ಸಿಎಂ ಸಿದ್ದರಾಮಯ್ಯ ಕನ್ನ ಹಾಕಿದ್ದಾರೆ ಎಂದು ದೂರಿದರು.

14 ಬಜೆಟ್‌ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಾಮಾನ್ಯ ಪ್ರಜ್ಞೆ ಇಲ್ಲ. ಬ್ಯಾಂಕಿನಲ್ಲಿ ಸಾಲ ಕೇಳಲು ಕೂಡ ಆದಾಯ ತೆರಿಗೆ ವಿವರ ಸಲ್ಲಿಸಬೇಕಾಗುತ್ತದೆ. ಇದನ್ನು ಅರಿಯದೆ ಕಾಂಗ್ರೆಸ್‌ ಸರ್ಕಾರ, ಮನೆಗೆ ಭೇಟಿ ನೀಡದೆ ರೇಷನ್‌ ಕಾರ್ಡ್‌ಗಳನ್ನು ರದ್ದುಪಡಿಸಿದೆ. ಈಗ 11 ಲಕ್ಷ ಕಾರ್ಡ್‌ ರದ್ದುಪಡಿಸಿದ್ದು, ಇನ್ನೂ 14 ಲಕ್ಷ ಕಾರ್ಡ್‌ಗಳನ್ನು ರದ್ದುಪಡಿಸಲಾಗುತ್ತದೆ. ಇದಕ್ಕೂ ಮುನ್ನ ಒಂದು ನೋಟಿಸ್‌ ನೀಡಿ, ಮಾಹಿತಿ ಪಡೆಯಬಹುದಿತ್ತು. ಎಲ್ಲರೂ ಆದಾಯ ತೆರಿಗೆ ಪಾವತಿಸುತ್ತಿದ್ದಾರೆ ಎಂದು ಕಣ್ಣಿಲ್ಲದ ಸರ್ಕಾರ ಹೇಳಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಭಿವೃದ್ಧಿಗೆ ದುಡ್ಡಿಲ್ಲ

ಕಾಂಗ್ರೆಸ್‌ ಸರ್ಕಾರದ ಬಳಿ ಅಭಿವೃದ್ಧಿಗೆ ಹಣವಿಲ್ಲ. ಇರುವ ಹಣವನ್ನು ಲಂಚಕ್ಕೆ ಬಳಸಲಾಗುತ್ತಿದೆ. ಶಾಸಕರು ಸರ್ಕಾರದ ಕತ್ತುಪಟ್ಟಿ ಹಿಡಿದಿದ್ದಾರೆ. ಅನುದಾನ ಸಿಗದ ಬಗ್ಗೆ ಕಾಂಗ್ರೆಸ್‌ ಶಾಸಕರೇ ದೂರು ಹೇಳುತ್ತಿದ್ದಾರೆ. 25 ಲಕ್ಷ ಕಾರ್ಡ್‌ ರದ್ದುಪಡಿಸಿದರೆ 20,000 ಕೋಟಿ ರೂ. ಬರಬಹುದು. ಆ ಹಣವನ್ನು ಶಾಸಕರಿಗೆ ಕೊಟ್ಟು ಸಮಾಧಾನ ಮಾಡಬಹುದು. ಇದು ಕಾರ್ಡ್‌ ರದ್ದು ಮಾಡುವುದರ ಹಿಂದಿನ ಉದ್ದೇಶ ಎಂದರು.

ಸರ್ಕಾರದ ಈ ಕ್ರಮದಿಂದಾಗಿ ಬಡವರಿಗೆ ಯಾವುದೇ ಯೋಜನೆಗಳು ಸಿಗುವುದಿಲ್ಲ. ಸಹಾಯಧನ ಸಿಗುವುದಿಲ್ಲ. ಯಾವುದೇ ಕಾರಣಕ್ಕೂ ಇನ್ನು ಮುಂದೆ ರೇಷನ್‌ ಕಾರ್ಡ್‌ ರದ್ದು ಮಾಡಬಾರದು ಎಂದು ಬಿಜೆಪಿ ಆಗ್ರಹಿಸುತ್ತದೆ. ಇದರ ವಿರುದ್ಧ ಬಿಜೆಪಿ ತೀವ್ರ ಹೋರಾಟ ಮಾಡಲಿದೆ. ರಾಜ್ಯಾದ್ಯಂತ ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು. ರೇಷನ್‌ ಕಾರ್ಡ್‌ ನೀಡದಿದ್ದರೆ ಅಧಿಕಾರಿಗಳನ್ನು ಕೊಠಡಿಯಲ್ಲಿ ಹಾಕಿ ಕಚೇರಿಗೆ ಬೀಗ ಹಾಕುತ್ತೇವೆ. ಸರ್ಕಾರಕ್ಕೆ ನಿಜವಾಗಲೂ ತಾಕತ್ತಿದ್ದರೆ ಬೋಗಸ್‌ ಕಾರ್ಡ್‌ ಮಂಜೂರು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಉಚಿತ ಬಸ್‌ ಯೋಜನೆ ರದ್ದು ಮಾಡುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಮುಂದೆ ಉಚಿತ ವಿದ್ಯುತ್‌ ಯೋಜನೆ ಕೂಡ ರದ್ದಾಗಲಿದೆ. ಶಾಸಕರು ಅನುದಾನವಿಲ್ಲದೆ ದಂಗೆ ಏಳುವ ಸ್ಥಿತಿಗೆ ಹೋಗಿದ್ದಾರೆ. ಇದಕ್ಕಾಗಿ ಬಡವರ ಅನ್ನ ಕಿತ್ತಿರುವ ಕಾಂಗ್ರೆಸ್‌ ನರಕಕ್ಕೆ ಹೋಗುವುದು ಗ್ಯಾರಂಟಿ ಎಂದರು.

ಯಾವುದೇ ಅಧಿಕಾರಿಗಳು ಅಥವಾ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸದೆ ಕಚೇರಿಯಲ್ಲಿ ಕುಳಿತು ಬಿಪಿಎಲ್ ಕಾರ್ಡುಗಳನ್ನು ಕಡಿತಗೊಳಿಸಿದ್ದಾರೆ. 22 ಲಕ್ಷ ಕಾರ್ಡುಗಳನ್ನು ರದ್ದುಗೊಳಿಸಲು ಇಲಾಖೆಗೆ ಗುರಿ ನೀಡಲಾಗಿದೆ ಎಂಬ ಮಾಹಿತಿಯಿದೆ. ಒಮ್ಮೆ ಕೊಟ್ಟು ಮತ್ತೆ ಕಿತ್ತುಕೊಳ್ಳುತ್ತಿರುವ ಕಟುಕ ಸರಕಾರಕ್ಕೆ ಬಡವರ ಕಣ್ಣೀರು ಕಾಣಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅರ್ಹರ ‘BPL ಕಾರ್ಡ್’ ರದ್ದಾಗಿದ್ದರೇ ಮತ್ತೆ ನೀಡುತ್ತೇವೆ, ಯಾರೂ ಆತಂಕ ಪಡಬೇಡಿ: ಡಿಸಿಎಂ ಡಿ.ಕೆ ಶಿವಕುಮಾರ್

BREAKING : ಭಾರತವನ್ನು ‘ಹಿಂದೂ ರಾಷ್ಟ್ರ’ ವನ್ನಾಗಿ ಮಾಡಲು ನಾವು ಬಿಡಲ್ಲ : ಯತೀಂದ್ರ ಸಿದ್ದರಾಮಯ್ಯ ವಿವಾದ!

Share. Facebook Twitter LinkedIn WhatsApp Email

Related Posts

ಹೊಸ ವರ್ಷದಲ್ಲಿ ಯಾವುದೇ ತೊಂದರೆ ಆಗಬಾರದು ಅಂದರೇ ನಾಳೆ ತಪ್ಪದೇ ಈ ಮಂತ್ರವನ್ನು ಪಠಿಸಿ

31/12/2025 9:40 AM4 Mins Read

Personality test : ನಿಮ್ಮ ತುಟಿಗಳ ಆಕಾರದಿಂದಲೂ `ವ್ಯಕ್ತಿತ್ವ’ ತಿಳಿಯಬಹುದು.! ಹೇಗೆ ಗೊತ್ತಾ?

31/12/2025 9:30 AM2 Mins Read

ಈ ಯೋಜನೆಯಲ್ಲಿ ಪ್ರತಿ ತಿಂಗಳು ಕೇವಲ 15 ಸಾವಿರ ರೂ.ಹೂಡಿಕೆ ಮಾಡಿದ್ರೆ ಸಿಗಲಿದೆ 25 ಲಕ್ಷ ರೂ.! ಇದು ಸರ್ಕಾರಿ ಗ್ಯಾರಂಟಿ.!

31/12/2025 8:45 AM2 Mins Read
Recent News

ಹೊಸ ವರ್ಷದಲ್ಲಿ ಯಾವುದೇ ತೊಂದರೆ ಆಗಬಾರದು ಅಂದರೇ ನಾಳೆ ತಪ್ಪದೇ ಈ ಮಂತ್ರವನ್ನು ಪಠಿಸಿ

31/12/2025 9:40 AM

Personality test : ನಿಮ್ಮ ತುಟಿಗಳ ಆಕಾರದಿಂದಲೂ `ವ್ಯಕ್ತಿತ್ವ’ ತಿಳಿಯಬಹುದು.! ಹೇಗೆ ಗೊತ್ತಾ?

31/12/2025 9:30 AM

SHOCKING : ನಾಯಿ ಕಚ್ಚಿ ಎಮ್ಮೆಗೆ `ರೇಬಿಸ್’ ಸೋಂಕು : ಮೊಸರು ತಿಂದ 200 ಗ್ರಾಮಸ್ಥರಿಗೆ ಲಸಿಕೆ.!

31/12/2025 9:15 AM

ಮನೆ ಖರೀದಿದಾರರಿಗೆ ಗುಡ್ ನ್ಯೂಸ್ : ಕಡಿಮೆ ಬಡ್ಡಿದರದಲ್ಲಿ `ಗೃಹ ಸಾಲ’ ನೀಡುವ ಬ್ಯಾಂಕುಗಳ ಪಟ್ಟಿ ಇಲ್ಲಿದೆ..!

31/12/2025 9:00 AM
State News
KARNATAKA

ಹೊಸ ವರ್ಷದಲ್ಲಿ ಯಾವುದೇ ತೊಂದರೆ ಆಗಬಾರದು ಅಂದರೇ ನಾಳೆ ತಪ್ಪದೇ ಈ ಮಂತ್ರವನ್ನು ಪಠಿಸಿ

By kannadanewsnow0931/12/2025 9:40 AM KARNATAKA 4 Mins Read

ಜನವರಿ 1 ರಂದು ಬೆಳಿಗ್ಗೆ ಎದ್ದಾಗ ಈ ಮಾತನ್ನು 3 ಬಾರಿ ಹೇಳಿದರೆ, ಮುಂದಿನ ವರ್ಷ ನಿಮಗೆ ಯಾವುದೇ ತೊಂದರೆಯಾಗದಂತೆ…

Personality test : ನಿಮ್ಮ ತುಟಿಗಳ ಆಕಾರದಿಂದಲೂ `ವ್ಯಕ್ತಿತ್ವ’ ತಿಳಿಯಬಹುದು.! ಹೇಗೆ ಗೊತ್ತಾ?

31/12/2025 9:30 AM

ಈ ಯೋಜನೆಯಲ್ಲಿ ಪ್ರತಿ ತಿಂಗಳು ಕೇವಲ 15 ಸಾವಿರ ರೂ.ಹೂಡಿಕೆ ಮಾಡಿದ್ರೆ ಸಿಗಲಿದೆ 25 ಲಕ್ಷ ರೂ.! ಇದು ಸರ್ಕಾರಿ ಗ್ಯಾರಂಟಿ.!

31/12/2025 8:45 AM

ಗಮನಿಸಿ : ನಿಮ್ಮ ದೇಹದ ಮೇಲಿರುವ `ನರುಳ್ಳೆ’ ತಾವಾಗಿಯೇ ಉದುರಿ ಹೋಗಲು ಜಸ್ಟ್ ಹೀಗೆ ಮಾಡಿ.!

31/12/2025 7:25 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.