Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಕುಡಿದು ವಾಹನ ಚಾಲನೆ: ಕ್ಯಾಲಿಫೋರ್ನಿಯಾದಲ್ಲಿ ಪಾಪ್ ತಾರೆ ಬ್ರಿಟ್ನಿ ಸ್ಪಿಯರ್ಸ್ ಅರೆಸ್ಟ್

05/03/2026 10:04 PM

‘ಆಧಾರ್ ಕಾರ್ಡ್’ನಲ್ಲಿ ಮತ್ತೊಂದು ಬಿಗ್ ಅಪ್ಡೇಟ್ ; ‘UIDAI’ ಮಹತ್ವದ ಘೋಷಣೆ!

05/03/2026 9:59 PM

​’ಪ್ರಜಾ ಸಮರ’ ಪತ್ರಿಕೆಯ ನೂತನ ಮುದ್ರಣಾಲಯಕ್ಕೆ ಚಾಲನೆ: ಅಕ್ಷರ ಲೋಕದ ಹೊಸ ಪಯಣಕ್ಕೆ ಮುನ್ನುಡಿ

05/03/2026 9:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಡವರಿಗೆ ಮರಳಿ ರೇಷನ್‌ ಕಾರ್ಡ್‌ ನೀಡಿ, ಇಲ್ಲದಿದ್ದರೆ ತೀವ್ರ ಹೋರಾಟ, ಸರ್ಕಾರಿ ಕಚೇರಿಗಳಿಗೆ ಬೀಗ: ಆರ್‌.ಅಶೋಕ್ ಎಚ್ಚರಿಕೆ
KARNATAKA

ಬಡವರಿಗೆ ಮರಳಿ ರೇಷನ್‌ ಕಾರ್ಡ್‌ ನೀಡಿ, ಇಲ್ಲದಿದ್ದರೆ ತೀವ್ರ ಹೋರಾಟ, ಸರ್ಕಾರಿ ಕಚೇರಿಗಳಿಗೆ ಬೀಗ: ಆರ್‌.ಅಶೋಕ್ ಎಚ್ಚರಿಕೆ

By kannadanewsnow0920/11/2024 2:49 PM

ಬೆಂಗಳೂರು : ರಾಜ್ಯ ಸರ್ಕಾರ ಬಡವರಿಗೆ ಮರಳಿ ಬಿಪಿಎಲ್‌ ಕಾರ್ಡ್‌ ನೀಡಬೇಕು. ಕಾರ್ಡ್‌ ರದ್ದು ಪ್ರಕ್ರಿಯೆ ನಿಲ್ಲಿಸದಿದ್ದರೆ ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳಿಗೆ ಬೀಗ ಹಾಕಿ ಪ್ರತಿಭಟಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಎಚ್ಚರಿಕೆ ನೀಡಿದ್ದಾರೆ.

ಮಹಾಲಕ್ಷ್ಮಿ ಲೇಔಟ್‌ ವಿಧಾನಸಭಾ ಕ್ಷೇತ್ರದ ವೃಷಭಾವತಿ ನಗರ, ನಂದಿನಿ ಲೇಔಟ್ ಗಳಲ್ಲಿ ಬಿಪಿಎಲ್‌ ಕಾರ್ಡ್‌ ರದ್ದುಗೊಂಡ ಕುಟುಂಬದವರನ್ನು ಶಾಸಕರಾದ ಡಾ. ಅಶ್ವತ್ಥನಾರಾಯಣ ಮತ್ತು ಕೆ. ಗೋಪಾಲಯ್ಯ ಅವರೊಂದಿಗೆ ಭೇಟಿ ಮಾಡಿ ಸಮಸ್ಯೆ ಆಲಿಸಿದರು.

ನಂತರ ಮಾತನಾಡಿ, ಜನರಿಗೆ ಅನ್ನ ಕೊಡಬೇಕಿದ್ದ ಸರ್ಕಾರ ಅನ್ನಕ್ಕೆ ಕನ್ನ ಹಾಕುವ ಕೆಲಸ ಮಾಡುತ್ತಿದೆ. ಯಾರೂ ಹಸಿವಿನಿಂದ ಸಾಯಬಾರದು ಎಂಬ ಪ್ರಜ್ಞೆ ಸರ್ಕಾರಕ್ಕೆ ಇರಬೇಕು. ಬಿಪಿಎಲ್‌ ಕಾರ್ಡ್‌ ಕಳೆದುಕೊಂಡವರು ಯಾರೂ ಶ್ರೀಮಂತರಲ್ಲ, ಕಾರಿನಲ್ಲಿ ಓಡಾಡುವುದಿಲ್ಲ. 2 ವರ್ಷದ ಮಗು ಇರುವ ಮಹಿಳೆ ಗಾರ್ಮೆಂಟ್‌ ಕೆಲಸಕ್ಕೆ ಹೋಗಲು ಆಗುತ್ತಿಲ್ಲ. ಅಂಗವಿಕಲ ವ್ಯಕ್ತಿಯೊಬ್ಬರು ರಸ್ತೆ ಬದಿಯಲ್ಲಿ ಬಜ್ಜಿ ಮಾರಾಟ ಮಾಡುತ್ತಿದ್ದು, ಅನಾರೋಗ್ಯದಿಂದಾಗಿ ಕೆಲಸಕ್ಕೆ ಹೋಗುತ್ತಿಲ್ಲ. ಇಂತಹ ಬಡ ಕುಟುಂಬದ ಜನರ ಮನೆಗೆ ಸಿಎಂ ಸಿದ್ದರಾಮಯ್ಯ ಕನ್ನ ಹಾಕಿದ್ದಾರೆ ಎಂದು ದೂರಿದರು.

14 ಬಜೆಟ್‌ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಾಮಾನ್ಯ ಪ್ರಜ್ಞೆ ಇಲ್ಲ. ಬ್ಯಾಂಕಿನಲ್ಲಿ ಸಾಲ ಕೇಳಲು ಕೂಡ ಆದಾಯ ತೆರಿಗೆ ವಿವರ ಸಲ್ಲಿಸಬೇಕಾಗುತ್ತದೆ. ಇದನ್ನು ಅರಿಯದೆ ಕಾಂಗ್ರೆಸ್‌ ಸರ್ಕಾರ, ಮನೆಗೆ ಭೇಟಿ ನೀಡದೆ ರೇಷನ್‌ ಕಾರ್ಡ್‌ಗಳನ್ನು ರದ್ದುಪಡಿಸಿದೆ. ಈಗ 11 ಲಕ್ಷ ಕಾರ್ಡ್‌ ರದ್ದುಪಡಿಸಿದ್ದು, ಇನ್ನೂ 14 ಲಕ್ಷ ಕಾರ್ಡ್‌ಗಳನ್ನು ರದ್ದುಪಡಿಸಲಾಗುತ್ತದೆ. ಇದಕ್ಕೂ ಮುನ್ನ ಒಂದು ನೋಟಿಸ್‌ ನೀಡಿ, ಮಾಹಿತಿ ಪಡೆಯಬಹುದಿತ್ತು. ಎಲ್ಲರೂ ಆದಾಯ ತೆರಿಗೆ ಪಾವತಿಸುತ್ತಿದ್ದಾರೆ ಎಂದು ಕಣ್ಣಿಲ್ಲದ ಸರ್ಕಾರ ಹೇಳಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಭಿವೃದ್ಧಿಗೆ ದುಡ್ಡಿಲ್ಲ

ಕಾಂಗ್ರೆಸ್‌ ಸರ್ಕಾರದ ಬಳಿ ಅಭಿವೃದ್ಧಿಗೆ ಹಣವಿಲ್ಲ. ಇರುವ ಹಣವನ್ನು ಲಂಚಕ್ಕೆ ಬಳಸಲಾಗುತ್ತಿದೆ. ಶಾಸಕರು ಸರ್ಕಾರದ ಕತ್ತುಪಟ್ಟಿ ಹಿಡಿದಿದ್ದಾರೆ. ಅನುದಾನ ಸಿಗದ ಬಗ್ಗೆ ಕಾಂಗ್ರೆಸ್‌ ಶಾಸಕರೇ ದೂರು ಹೇಳುತ್ತಿದ್ದಾರೆ. 25 ಲಕ್ಷ ಕಾರ್ಡ್‌ ರದ್ದುಪಡಿಸಿದರೆ 20,000 ಕೋಟಿ ರೂ. ಬರಬಹುದು. ಆ ಹಣವನ್ನು ಶಾಸಕರಿಗೆ ಕೊಟ್ಟು ಸಮಾಧಾನ ಮಾಡಬಹುದು. ಇದು ಕಾರ್ಡ್‌ ರದ್ದು ಮಾಡುವುದರ ಹಿಂದಿನ ಉದ್ದೇಶ ಎಂದರು.

ಸರ್ಕಾರದ ಈ ಕ್ರಮದಿಂದಾಗಿ ಬಡವರಿಗೆ ಯಾವುದೇ ಯೋಜನೆಗಳು ಸಿಗುವುದಿಲ್ಲ. ಸಹಾಯಧನ ಸಿಗುವುದಿಲ್ಲ. ಯಾವುದೇ ಕಾರಣಕ್ಕೂ ಇನ್ನು ಮುಂದೆ ರೇಷನ್‌ ಕಾರ್ಡ್‌ ರದ್ದು ಮಾಡಬಾರದು ಎಂದು ಬಿಜೆಪಿ ಆಗ್ರಹಿಸುತ್ತದೆ. ಇದರ ವಿರುದ್ಧ ಬಿಜೆಪಿ ತೀವ್ರ ಹೋರಾಟ ಮಾಡಲಿದೆ. ರಾಜ್ಯಾದ್ಯಂತ ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು. ರೇಷನ್‌ ಕಾರ್ಡ್‌ ನೀಡದಿದ್ದರೆ ಅಧಿಕಾರಿಗಳನ್ನು ಕೊಠಡಿಯಲ್ಲಿ ಹಾಕಿ ಕಚೇರಿಗೆ ಬೀಗ ಹಾಕುತ್ತೇವೆ. ಸರ್ಕಾರಕ್ಕೆ ನಿಜವಾಗಲೂ ತಾಕತ್ತಿದ್ದರೆ ಬೋಗಸ್‌ ಕಾರ್ಡ್‌ ಮಂಜೂರು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಉಚಿತ ಬಸ್‌ ಯೋಜನೆ ರದ್ದು ಮಾಡುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಮುಂದೆ ಉಚಿತ ವಿದ್ಯುತ್‌ ಯೋಜನೆ ಕೂಡ ರದ್ದಾಗಲಿದೆ. ಶಾಸಕರು ಅನುದಾನವಿಲ್ಲದೆ ದಂಗೆ ಏಳುವ ಸ್ಥಿತಿಗೆ ಹೋಗಿದ್ದಾರೆ. ಇದಕ್ಕಾಗಿ ಬಡವರ ಅನ್ನ ಕಿತ್ತಿರುವ ಕಾಂಗ್ರೆಸ್‌ ನರಕಕ್ಕೆ ಹೋಗುವುದು ಗ್ಯಾರಂಟಿ ಎಂದರು.

ಯಾವುದೇ ಅಧಿಕಾರಿಗಳು ಅಥವಾ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸದೆ ಕಚೇರಿಯಲ್ಲಿ ಕುಳಿತು ಬಿಪಿಎಲ್ ಕಾರ್ಡುಗಳನ್ನು ಕಡಿತಗೊಳಿಸಿದ್ದಾರೆ. 22 ಲಕ್ಷ ಕಾರ್ಡುಗಳನ್ನು ರದ್ದುಗೊಳಿಸಲು ಇಲಾಖೆಗೆ ಗುರಿ ನೀಡಲಾಗಿದೆ ಎಂಬ ಮಾಹಿತಿಯಿದೆ. ಒಮ್ಮೆ ಕೊಟ್ಟು ಮತ್ತೆ ಕಿತ್ತುಕೊಳ್ಳುತ್ತಿರುವ ಕಟುಕ ಸರಕಾರಕ್ಕೆ ಬಡವರ ಕಣ್ಣೀರು ಕಾಣಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅರ್ಹರ ‘BPL ಕಾರ್ಡ್’ ರದ್ದಾಗಿದ್ದರೇ ಮತ್ತೆ ನೀಡುತ್ತೇವೆ, ಯಾರೂ ಆತಂಕ ಪಡಬೇಡಿ: ಡಿಸಿಎಂ ಡಿ.ಕೆ ಶಿವಕುಮಾರ್

BREAKING : ಭಾರತವನ್ನು ‘ಹಿಂದೂ ರಾಷ್ಟ್ರ’ ವನ್ನಾಗಿ ಮಾಡಲು ನಾವು ಬಿಡಲ್ಲ : ಯತೀಂದ್ರ ಸಿದ್ದರಾಮಯ್ಯ ವಿವಾದ!

Share. Facebook Twitter LinkedIn WhatsApp Email

Related Posts

​’ಪ್ರಜಾ ಸಮರ’ ಪತ್ರಿಕೆಯ ನೂತನ ಮುದ್ರಣಾಲಯಕ್ಕೆ ಚಾಲನೆ: ಅಕ್ಷರ ಲೋಕದ ಹೊಸ ಪಯಣಕ್ಕೆ ಮುನ್ನುಡಿ

05/03/2026 9:56 PM1 Min Read

BREAKING: ಗುವಾಟಿಯಲ್ಲಿ ರೇಡಾರ್ ಸಂಪರ್ಕ ಕಳೆದುಕೊಂಡು ಸುಖೋಯ್-30 MKI ಯುದ್ಧ ವಿಮಾನ ನಾಪತ್ತೆ | Su-30 MKI fighter aircraft

05/03/2026 9:32 PM1 Min Read

ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ನಿಮ್ಮ ‘ಮೊಬೈಲ್’ನಲ್ಲಿ ಈ ‘ತುರ್ತು ದೂರವಾಣಿ ಸಂಖ್ಯೆ’ಗಳು ಇರಲಿ

05/03/2026 9:25 PM2 Mins Read
Recent News

BREAKING: ಕುಡಿದು ವಾಹನ ಚಾಲನೆ: ಕ್ಯಾಲಿಫೋರ್ನಿಯಾದಲ್ಲಿ ಪಾಪ್ ತಾರೆ ಬ್ರಿಟ್ನಿ ಸ್ಪಿಯರ್ಸ್ ಅರೆಸ್ಟ್

05/03/2026 10:04 PM

‘ಆಧಾರ್ ಕಾರ್ಡ್’ನಲ್ಲಿ ಮತ್ತೊಂದು ಬಿಗ್ ಅಪ್ಡೇಟ್ ; ‘UIDAI’ ಮಹತ್ವದ ಘೋಷಣೆ!

05/03/2026 9:59 PM

​’ಪ್ರಜಾ ಸಮರ’ ಪತ್ರಿಕೆಯ ನೂತನ ಮುದ್ರಣಾಲಯಕ್ಕೆ ಚಾಲನೆ: ಅಕ್ಷರ ಲೋಕದ ಹೊಸ ಪಯಣಕ್ಕೆ ಮುನ್ನುಡಿ

05/03/2026 9:56 PM

ಇರಾನ್ ಯುದ್ಧ ನೌಕೆ ಮುಳುಗಡೆ ; ರಕ್ಷಣಾ ಕಾರ್ಯಾಚರಣೆಗೆ ಭಾರತೀಯ ವಿಮಾನ, 2 ಯುದ್ಧನೌಕೆಗಳ ನಿಯೋಜನೆ!

05/03/2026 9:45 PM
State News
KARNATAKA

​’ಪ್ರಜಾ ಸಮರ’ ಪತ್ರಿಕೆಯ ನೂತನ ಮುದ್ರಣಾಲಯಕ್ಕೆ ಚಾಲನೆ: ಅಕ್ಷರ ಲೋಕದ ಹೊಸ ಪಯಣಕ್ಕೆ ಮುನ್ನುಡಿ

By kannadanewsnow0905/03/2026 9:56 PM KARNATAKA 1 Min Read

​ರಾಯಚೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಹಾಗೂ ಜನಸಾಮಾನ್ಯರ ಧ್ವನಿಯಾಗಿ ಹೊರಹೊಮ್ಮುತ್ತಿರುವ ‘ಪ್ರಜಾ ಸಮರ’ ಪತ್ರಿಕೆಯು ಈಗ ತನ್ನದೇ ಆದ ನೂತನ…

BREAKING: ಗುವಾಟಿಯಲ್ಲಿ ರೇಡಾರ್ ಸಂಪರ್ಕ ಕಳೆದುಕೊಂಡು ಸುಖೋಯ್-30 MKI ಯುದ್ಧ ವಿಮಾನ ನಾಪತ್ತೆ | Su-30 MKI fighter aircraft

05/03/2026 9:32 PM

ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ನಿಮ್ಮ ‘ಮೊಬೈಲ್’ನಲ್ಲಿ ಈ ‘ತುರ್ತು ದೂರವಾಣಿ ಸಂಖ್ಯೆ’ಗಳು ಇರಲಿ

05/03/2026 9:25 PM

ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಕುರಿತ ಚರ್ಚೆ ಅಪೂರ್ಣ: ಮತ್ತೊಮ್ಮೆ ಚರ್ಚೆಗೆ ನಿರ್ಧಾರ

05/03/2026 9:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.