Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

OMG : 70 ವರ್ಷದ ಲಿವ್ ಇನ್ ರಿಲೇಶನ್ಶಿಪ್ ; ಪುತ್ರರು, ಮೊಮ್ಮಕ್ಕಳ ಸಮ್ಮುಖದಲ್ಲಿ ಮದುವೆಯಾದ 95ರ ಅಜ್ಜ- ಅಜ್ಜಿ!

05/06/2025 5:17 PM

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ; ಮೃತರ ಕುಟುಂಬಕ್ಕೆ ‘RCB’ಯಿಂದ 10 ಲಕ್ಷ ಪರಿಹಾರ ಘೋಷಣೆ

05/06/2025 4:34 PM

ವಾಹ್.! ಪ್ರತಿದಿನ ಒಂದು ಗ್ಲಾಸ್ ‘ರೆಡ್ ವೈನ್’ ಕುಡಿಯೋದು ತುಂಬಾ ಪ್ರಯೋಜನಕಾರಿ ; ಅಧ್ಯಯನ

05/06/2025 4:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ರಾಜ್ಯದ ಪಿಯು ಕಾಲೇಜುಗಳಿಗೆ 4689 `ಅತಿಥಿ ಉಪನ್ಯಾಸಕರ’ ನೇಮಕ : ಮಾಸಿಕ 14,000 ರೂ. ವೇತನ.!
KARNATAKA

GOOD NEWS : ರಾಜ್ಯದ ಪಿಯು ಕಾಲೇಜುಗಳಿಗೆ 4689 `ಅತಿಥಿ ಉಪನ್ಯಾಸಕರ’ ನೇಮಕ : ಮಾಸಿಕ 14,000 ರೂ. ವೇತನ.!

By kannadanewsnow5705/06/2025 5:13 AM

ಬೆಂಗಳೂರು : 2025-26 ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ 4689 ಉಪನ್ಯಾಸಕರುಗಳ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರುಗಳನ್ನು ನೇಮಕ ಮಾಡಿಕೊಳ್ಳುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

 ಉಲ್ಲೇಖಿತ (01) ರ ಸರ್ಕಾರದ ಆದೇಶದಲ್ಲಿ 2025-26 ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಉಪನ್ಯಾಸಕರ ಹುದ್ದೆಗಳು, ಬಡ್ತಿ, ವಯೋನಿವೃತ್ತಿ. ನಿಧನ ಹಾಗೂ ಇತರೆ ಕಾರಣಗಳಿಂದ ತೆರವಾಗಬಹುದಾದ ಉಪನ್ಯಾಸಕರ ಹುದ್ದೆಗಳು ಹಾಗೂ ಹೊಸ ಸಂಯೋಜನೆಗಳಿಗೆ ಹುದ್ದೆ ಮಂಜೂರಾಗದ ವಿಷಯಗಳಿಗೆ ನೇಮಕ ಮಾಡಿಕೊಳ್ಳಬೇಕಾದ ಅತಿಥಿ ಉಪನ್ಯಾಸಕರು ಒಟ್ಟು 4689 ಉಪನ್ಯಾಸಕರ ಹುದ್ದೆಗಳಿಗೆ ಮಾಸಿಕ ರೂ. 14,000/- (ಹದಿನಾಲ್ಕು ಸಾವಿರ ಮಾತ್ರ) ರಂತೆ ಗೌರವಧನದ ಆಧಾರದಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕಾತಿ ಮಾಡಿಕೊಳ್ಳಲು ಆದೇಶಿಸಲಾಗಿದ್ದು, ಮಾರ್ಚ್-2026 ಅಂತ್ಯದವರೆಗೂ ಖಾಲಿಯಾಗುವ ಹುದ್ದೆಗಳಿಗೆ, ಕಾರ್ಯಭಾರ ಕಡಿಮೆ ಇರುವ ವಿವಿಧ ವಿಷಯಗಳ ಉಪನ್ಯಾಸಕರುಗಳನ್ನು ಸರಿದೂಗಿಸಿದ ನಂತರ ಲಭ್ಯವಾಗುವ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಲು ಅನುಮತಿಸಿದೆ.

ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ವಿವಿಧ ವಿಷಯಗಳ ಉಪನ್ಯಾಸಕರ ಹುದ್ದೆಗಳನ್ನು ಕಡಿಮೆ ಕಾರ್ಯಭಾರವಿರುವ ವಿಷಯಗಳ ಉಪನ್ಯಾಸಕರುಗಳಿಂದ ಸರಿದೂಗಿಸಿದ ನಂತರ ಉಳಿದ ಹುದ್ದೆಗಳಿಗೆ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಬೇಕಾದ ಸಂಖ್ಯೆ ಸಂಯೋಜನೆಯನ್ನು ಮಂಜೂರು ಮಾಡಿ ಹುದ್ದೆ ಮಂಜೂರು ಮಾಡದ ವಿಷಯಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಬೇಕಾದ ಸಂಖ್ಯೆಯನ್ನು ಹಾಗೂ ನೇಮಕ ಮಾಡಿಕೊಳ್ಳಬೇಕಾದ ಒಟ್ಟು ಅತಿಥಿ ಉಪನ್ಯಾಸಕರ ಸಂಖ್ಯೆ ಮಾಹಿತಿಯನ್ನು ಒದಗಿಸುವಂತೆ ಉಲ್ಲೇಖ (02) ರಲ್ಲಿ ಜಿಲ್ಲಾ ಉಪ ನಿರ್ದೇಶಕರುಗಳಿಗೆ ಕೋರಲಾಗಿತ್ತು. ಅದರಂತೆ ಉಲ್ಲೇಖ (03) ರ ಪತ್ರಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಉಪನಿರ್ದೇಶಕರುಗಳು ಮಾಹಿತಿ ಒದಗಿಸಿರುತ್ತಾರೆ.

ಸರ್ಕಾರದ ಆದೇಶ ಸಂಖ್ಯೆ ಇಡಿ 72 ಎಸ್‌ಟಿಬಿ 2016 ದಿನಾಂಕ: 04-07-2016 ರಲ್ಲಿ ನಿಗಧಿಪಡಿಸಿರುವ ಷರತ್ತಿಗೊಳಪಟ್ಟು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26 ನೇ ಶೈಕ್ಷಣಿಕ ಸಾಲಿನ ಅವಧಿಗೆ ಖಾಲಿಯಿರುವ ಬೋಧಕ ಹುದ್ದೆಗಳಿಗೆದುರಾಗಿ ಒಟ್ಟು 4689 ಅತಿಥಿ ಉಪನ್ಯಾಸಕರನ್ನು ಅನುಬಂಧದಲ್ಲಿ ಸೂಚಿಸಿರುವ ಸಂಖ್ಯೆಗೆ ಅನುಗುಣವಾಗಿ ನೇಮಕಾತಿ ಮಾಡಿಕೊಳ್ಳಲು ಅನುಮತಿ ನೀಡಿದೆ. 2025-26 ನೇ ಸಾಲಿನ ಆಯವ್ಯಯ ಲೆಕ್ಕಶೀರ್ಷಿಕೆ: 2202-02-109-0-13-324 Honorarium ರಡಿ ಗೌರವಧನ ಪಾವತಿಗಾಗಿ ಒದಗಿಸಿರುವ ಅನುದಾನದಿಂದ ಭರಿಸುವುದು. ಈಗ ಸರ್ಕಾರದಿಂದ ಅನುಮತಿ ನೀಡಲಾಗಿರುವ ಸಂಖ್ಯೆಗೆ ಅನುಗುಣವಾಗಿ ಮಾತ್ರ ನೇಮಕ ಮಾಡಿಕೊಳ್ಳತಕ್ಕದ್ದು. ಹೆಚ್ಚುವರಿ ನೇಮಕಾತಿಗೆ ಯಾವುದೇ ಪ್ರಸ್ತಾವನೆ ಸಲ್ಲಿಸತಕ್ಕದ್ದಲ್ಲ ಈ ಮೂಲಕ ತಿಳಿಸಿದೆ.

 ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವಾಗ ಈ ಕೆಳಕಂಡ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ನೇಮಕ ಮಾಡಿಕೊಳ್ಳಲು ಸೂಚಿಸಿದೆ.

  1. ಉಪನ್ಯಾಸಕರ ನೇಮಕಾತಿ ಕುರಿತು ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳ ಅನುಸಾರ ಪರಿಶೀಲಿಸಿ ಅರ್ಹ ಅಭ್ಯರ್ಥಿಗಳನ್ನು ಮಾತ್ರ ಅತಿಥಿ ಉಪನ್ಯಾಸಕರಾಗಿ ನೇಮಕ ಮಾಡಿಕೊಳ್ಳುವುದು.

  1. ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕಡಿಮೆ ಕಾರ್ಯಭಾರ ಹೊಂದಿರುವ ವಿಷಯಗಳ ಉಪನ್ಯಾಸಕರನ್ನು ಜಿಲ್ಲೆಯ ಇತರೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನಿಯೋಜಿಸಿದ ನಂತರ ಉಳಿಕೆ ಹುದ್ದೆಗಳಿಗೆ ಮಾತ್ರ ಅತಿಥಿ ಉಪನ್ಯಾಸಕರನ್ನು ನೇಮಿಸುವುದು.

  1. ಉಪನ್ಯಾಸಕರೇ ಇಲ್ಲದಿರುವ ಕಡೆ ಹಾಗೂ ನಿಯೋಜನೆಯಂತಹ ಬದಲಿ ವ್ಯವಸ್ಥೆ ಮಾಡಲು ಸಾಧ್ಯವಿಲ್ಲದಿರುವ ಕಡೆ ಮಾತ್ರ ಅತಿಥಿ ಉಪನ್ಯಾಸಕರನ್ನು ಉಪಯೋಗಿಸಿಕೊಳ್ಳಬಹುದು.

  1. ಪ್ರತಿ ಅತಿಥಿ ಉಪನ್ಯಾಸಕರಿಗೆ ವಾರದಲ್ಲಿ ಗರಿಷ್ಠ 10 ಗಂಟೆಗಳ ಕಾರ್ಯಭಾರವನ್ನು ಮಾತ್ರ ನಿರ್ವಹಿಸಲು ಅನುಮತಿ ನೀಡಬಹುದು.

  1. ಯಾವುದೇ ಕಾಲೇಜಿನಲ್ಲಿ ಪ್ರತಿ ವಿಷಯದಲ್ಲಿ ವಾರದಲ್ಲಿ 10/12 ಗಂಟೆಗಳಿಗಿಂತ ಹೆಚ್ಚು ಕಾರ್ಯಭಾರವಿದ್ದಲ್ಲಿ ಇಬ್ಬರು ಅತಿಥಿ ಉಪನ್ಯಾಸಕರನ್ನು ಉಪಯೋಗಿಸಿಕೊಳ್ಳಬಹುದು.

  1. ಈ ಅತಿಥಿ ಉಪನ್ಯಾಸಕರ ಸೇವೆಯನ್ನು ಖಾಯಂ ಉಪನ್ಯಾಸಕರ ನೇಮಕಾತಿ/ವರ್ಗಾವಣೆ/ನಿಯೋಜನೆ ಆಗುವವರೆಗೆ ಅಥವಾ 2025-26 ನೇ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಇವೆರಡರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಮಾತ್ರ ಬಳಸಿಕೊಳ್ಳತಕ್ಕದ್ದು.

  1. ಸರ್ಕಾರದ ನಿಯಮಗಳಲ್ಲಿ ಈ ಅವಧಿಯಲ್ಲಿ ಖಾಯಂ ಉಪನ್ಯಾಸಕರು ನೇಮಕಾತಿ/ವರ್ಗಾವಣೆ/ನಿಯೋಜನೆ ಹೊಂದಿ ಕರ್ತವ್ಯಕ್ಕೆ ಹಾಜರಾದ ತಕ್ಷಣದಿಂದ ಅತಿಥಿ ಉಪನ್ಯಾಸಕರ ಕಾರ್ಯ ನಿರ್ವಹಣೆಯು ತಂತಾನೆ ರದ್ದಾಗುತ್ತದೆ.

  1. ಪ್ರಾಚಾರ್ಯರ ಬೋಧನಾ ವಿಷಯವೇ ಇರುವ ಹುದ್ದೆ ಖಾಲಿ ಇದ್ದಲ್ಲಿ, ಅಂತಹ ಹುದ್ದೆಯ ಕಾರ್ಯಭಾರವು ವಾರದಲ್ಲಿ 10 ಗಂಟೆಗೆ ಮೀರದಿದ್ದಲ್ಲಿ ಅತಿಥಿ ಉಪನ್ಯಾಸಕರ ಸೇವೆಯನ್ನು ಬಳಸುವಂತಿಲ್ಲ.

  1. ಆಯಾ ವಿಷಯದಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಲು ಒಬ್ಬರಿಗಿಂತ ಹೆಚ್ಚು ವ್ಯಕ್ತಿಗಳು ಮುಂದೆ ಬಂದಲ್ಲಿ ಅಂತಹವರ ಪೈಕಿ ಸ್ನಾತಕೋತ್ತರ ಪದವಿಯಲ್ಲಿ ಹೆಚ್ಚಿನ ಅಂಕ ಪಡೆದವರನ್ನು ಆಯಾ ಕಾಲೇಜಿನ ಪ್ರಾಚಾರ್ಯರು ಹಾಗೂ ಕಾಲೇಜಿನ ಹಿರಿಯ ಉಪನ್ಯಾಸಕರು ಇರುವ ಸಮಿತಿಯ ಮೂಲಕ ಆಯ್ಕೆ ಮಾಡತಕ್ಕದ್ದು.

  1. ಅತಿಥಿ ಉಪನ್ಯಾಸಕರಿಗೆ ನೀಡುವ ಗೌರವಧನವನ್ನು ಲೆಕ್ಕ ಶೀರ್ಷಿಕೆ “2202-02-109-0-13-324 (ಗೌರವಧನ)” ಇದರಡಿ ಭರಿಸುವುದು. ಯಾವುದೇ ಇತರೆ ಮೂಲಗಳಿಂದ ಅತಿಥಿ ಉಪನ್ಯಾಸಕರಿಗೆ ಗೌರವ ಸಂಭಾವನೆಯನ್ನು ಪಾವತಿಸಿ ಇಲಾಖೆಯಿಂದ ಬಿಡುಗಡೆ ಮಾಡಲಾಗುವ ಅನುದಾನವನ್ನು ಮರು ಹೊಂದಾಣಿಕೆ ಮಾಡಿರುವ ಕುರಿತು ಯಾವುದೇ ದೂರುಗಳು ಸ್ವೀಕೃತವಾದಲ್ಲಿ ಇಲಾಖೆಯು ಅಂತಹವರ ವಿರುದ್ಧ ನಿಯಮಾನುಸಾರ ಸೂಕ್ತ ಕ್ರಮಜರುಗಿಸಲಾಗುವುದು.

  1. ಆಯಾ ಶೈಕ್ಷಣಿಕ ವರ್ಷಗಳಲ್ಲಿ ಬಿಡುಗಡೆಯಾಗುವ ಅತಿಥಿ ಉಪನ್ಯಾಸಕರ ಗೌರವ ಸಂಭಾವನೆಯನ್ನು ಆಯಾ ಆರ್ಥಿಕ ವರ್ಷದೊಳಗೆ ಸೆಳೆಯುವಂತೆ ಸೂಚಿಸಿದೆ. ಆಯಾ ಆರ್ಥಿಕ ವರ್ಷದಲ್ಲಿ ಸೆಳೆಯದೇ ಅನುದಾನ ವ್ಯಾಪಗತವಾಗಿ ಮುಂದಿನ ಆರ್ಥಿಕ ವರ್ಷದಲ್ಲಿ ಹೆಚ್ಚುವರಿ ಅನುದಾನ ಕೋರಲು ಅವಕಾಶವಿರುವುದಿಲ್ಲ.

  1. ಅತಿಥಿ ಉಪನ್ಯಾಸಕರುಗಳ ಸೇವೆಯನ್ನು ಬಳಸಿಕೊಳ್ಳುವಾಗ ಅವರಿಗೆ ಸಕ್ಷಮ ಪ್ರಾಧಿಕಾರದ ಆದೇಶವಿಲ್ಲದೆ ಯಾವುದೇ ಆದೇಶವನ್ನು ನೀಡಬಾರದು. ಇವರ ಹೆಸರುಗಳನ್ನು ಖಾಯಂ ಸಿಬ್ಬಂದಿಯ ಹಾಜರಾತಿ ವಹಿಯಲ್ಲಿ ನಮೂದಿಸಬಾರದು. ಗೌರವಧನ ವಿತರಿಸಿದ್ದಕ್ಕೆ ಅವರಿಂದ ಸೂಕ್ತ ರಸೀದಿಯನ್ನು ಪಡೆದುಕೊಳ್ಳುವುದು.

  1. ಈ ರೀತಿ ನೇಮಕ ಮಾಡಿಕೊಂಡ ಉಪನ್ಯಾಸಕರಿಗೆ ಯಾವುದೇ ರೀತಿಯ ಸೇವಾ ಪ್ರಮಾಣ ಪತ್ರ ನೀಡಬಾರದು ಹಾಗೂ ಸೇವಾ ಪುಸ್ತಕ ತೆರೆಯಬಾರದು. ಅಲ್ಲದೆ ಹಾಜರಾತಿಯನ್ನು ಪ್ರತ್ಯೇಕವಾಗಿ ಪ್ರಾಚಾರ್ಯರೇ ನಿರ್ವಹಿಸತಕ್ಕದ್ದು.

  1. ಯಾವುದೇ ಸರ್ಕಾರಿ/ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವವರನ್ನು ಅತಿಥಿ ಉಪನ್ಯಾಸಕರಾಗಿ ನೇಮಿಸಿಕೊಳ್ಳತಕ್ಕದ್ದಲ್ಲ. ಈ ರೀತಿ ಆಯ್ಕೆಯಾಗುವ ಅತಿಥಿ ಉಪನ್ಯಾಸಕರು, ಅತಿಥಿ ಉಪನ್ಯಾಸಕರಾಗಿ ಸಲ್ಲಿಸುವ ಸೇವೆಯು ಇತರೆ ಯಾವುದೇ ಸರ್ಕಾರಿ ಸೇವಾ ಸಕ್ರಮಾತಿಗೆ ಪರಿಗಣಿಸತಕ್ಕದ್ದಲ್ಲ.

  1. ದೀರ್ಘಾವಧಿ ರಜೆಯಿಂದ ಉಂಟಾಗುವ ಖಾಲಿ ಹುದ್ದೆಗೆ ಅಥವಾ ಅನಧಿಕೃತ ಗೈರು ಹಾಜರಿಯಿಂದ ಉಂಟಾಗುವ ಖಾಲಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಬಾರದು.

  1. ನೇಮಕ ಮಾಡಿಕೊಂಡ ಅತಿಥಿ ಉಪನ್ಯಾಸಕರ ವಿವರಗಳನ್ನು ಮಾತ್ರ ಕಡ್ಡಾಯವಾಗಿ ಜಿಲ್ಲಾ ಉಪನಿರ್ದೇಶಕರಿಗೆ ಕಳುಹಿಸತಕ್ಕದ್ದು. ಈ ಕಚೇರಿಗೆ ಯಾವುದೇ ಅಡಕಗಳನ್ನು ಕಳುಹಿಸಕೂಡದು.

  1. ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕಡಿಮೆ ಕಾರ್ಯಭಾರವಿರುವ ವಿಷಯಗಳ ಉಪನ್ಯಾಸಕರುಗಳನ್ನು ಜಿಲ್ಲೆಯ ಅವಶ್ಯಕ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯಭಾರ ಸರಿದೂಗಿಸಲು ತಿಳಿಸಿದೆ. ಸಂಬಂಧಿಸಿದ ಕಾಲೇಜಿನ ಪ್ರಾಂಶುಪಾಲರುಗಳು ಸದರಿ ಮಾಹಿತಿಯನ್ನು ಜಿಲ್ಲಾ ಉಪನಿರ್ದೇಶಕರುಗಳಿಗೆ ಒದಗಿಸತಕ್ಕದ್ದು.

  1. ಕಡಿಮೆ ಕಾರ್ಯಭಾರವಿರುವ ವಿಷಯಗಳ ಉಪನ್ಯಾಸಕರುಗಳನ್ನು ಬೇರೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಸರಿದೂಗಿಸಲು ಸಾಧ್ಯವಿಲ್ಲದ ಪಕ್ಷದಲ್ಲಿ ಅಂತಹ ಉಪನ್ಯಾಸಕರುಗಳ ಮಾಹಿತಿಯನ್ನು ಇಲಾಖೆಗೆ ತಪ್ಪದೇ ಸಲ್ಲಿಸತಕ್ಕದ್ದು.

  1. ಕಡಿಮೆ ಕಾರ್ಯಭಾರವಿರುವ ವಿಷಯಗಳ ಉಪನ್ಯಾಸಕರುಗಳನ್ನು ಜಿಲ್ಲೆಯ ಅವಶ್ಯಕ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯಭಾರ ಸರಿದೂರಿಸಲು ಸಂಬಂಧಿಸಿದ ಕಾಲೇಜಿನ ಪ್ರಾಂಶುಪಾಲರುಗಳು ಮಾಹಿತಿಯನ್ನು ಜಿಲ್ಲಾ ಉಪನಿರ್ದೇಶಕರುಗಳಿಗೆ ಒದಗಿಸದಿದ್ದಲ್ಲಿ ಅಥವಾ ಅಂತಹ ವಿಷಯಗಳ ಉಪನ್ಯಾಸಕರನ್ನು ಜಿಲ್ಲಾ ಉಪನಿರ್ದೇಶಕರು ಸರಿದೂಗಿಸಲು ಬಳಸಿಕೊಳ್ಳದೇ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಂಡು, ಅತಿಥಿ ಉಪನ್ಯಾಸಕರ ಗೌರವಧನವನ್ನು ದುರುಪಯೋಗ ಪಡಿಸಿಕೊಳ್ಳುವುದು ಕಂಡುಬಂದಲ್ಲಿ, ಅಂತಹ ಅಧಿಕಾರಿಗಳ ಮೇಲೆ ನಿಯಮಾನುಸಾರ ಶಿಸ್ತುಕ್ರಮ ಜರುಗಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು.

  1. ಈ ಹಿಂದಿನ ಶೈಕ್ಷಣಿಕ ಸಾಲಿನಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕಾತಿ ಮಾಡಿಕೊಳ್ಳುವಾಗ ಸರ್ಕಾರದ ನಿಯಮಗಳನ್ನು ಹಾಗೂ ಇಲಾಖೆಯ ನಿರ್ದೇಶನವನ್ನು ಪಾಲಿಸದೇ, ಅಂದರೆ, ಕಾರ್ಯಭಾರವನ್ನು ಸರಿದೂಗಿಸದೇ ಅಥವಾ ಅವಶ್ಯಕತೆ ಇಲ್ಲದೇ ಇರುವ ಕಾಲೇಜುಗಳಿಗೂ ಸಹ ಅತಿಥಿ ಉಪನ್ಯಾಸಕರನ್ನು ನೇಮಕಾತಿ ಮಾಡಿ ಗೌರವಧನವನ್ನು ವಿತರಿಸಿರುವುದಾಗಿ ಗುರುತರವಾದ ಆಪಾದನೆಗಳನ್ನು/ದೂರುಗಳನ್ನು ಅನೇಕ ಜಿಲ್ಲಾ ಉಪನಿರ್ದೇಶಕರ ಮೇಲೆ ಇಲಾಖೆಯಲ್ಲಿ ಸ್ವೀಕೃತಗೊಂಡಿರುತ್ತದೆ. ಈ ಹಿನ್ನೆಲೆಯಲ್ಲಿ ಸದರಿ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರದ ನಿಯಮ ಹಾಗೂ ಇಲಾಖೆಯ ನಿರ್ದೇಶನಗಳನ್ನು ಪಾಲಿಸಲು ಆದೇಶಿಸಿದೆ. ತಪ್ಪಿದಲ್ಲಿ, ಅಂತಹ ಜಿಲ್ಲಾ ಉಪನಿರ್ದೇಶಕರು/ಪ್ರಾಂಶುಪಾಲರ ಮೇಲೆ ನಿಯಮಾನುಸಾರ ಸರ್ಕಾರಕ್ಕೆ ಶಿಸ್ತುಕ್ರಮ ಜರುಗಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು.

GOOD NEWS : 4689 `guest lecturers’ appointed for PU colleges in the state : Rs 14000 per month Salary.!
Share. Facebook Twitter LinkedIn WhatsApp Email

Related Posts

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ; ಮೃತರ ಕುಟುಂಬಕ್ಕೆ ‘RCB’ಯಿಂದ 10 ಲಕ್ಷ ಪರಿಹಾರ ಘೋಷಣೆ

05/06/2025 4:34 PM1 Min Read

BREAKING: KSRTC ಚಾಲಕ ಕಂ ನಿರ್ವಾಹಕರ ಹುದ್ದೆಗೆ ಸಂಭವನೀಯ ಆಯ್ಕೆ ಪಟ್ಟಿ ಪ್ರಕಟ

05/06/2025 3:00 PM1 Min Read

ಸಾರ್ವಜನಿಕರೇ ಗಮನಿಸಿ : ನಿಮ್ಮ ಬಳಿ `ರೇಷನ್ ಕಾರ್ಡ್’ ಇದ್ರೆ `ಉಚಿತ ಹೊಲಿಗೆ ಯಂತ್ರ’ ಸೇರಿ ಸಿಗಲಿವೆ ಈ 8 ಸೌಲಭ್ಯಗಳು.!

05/06/2025 1:30 PM2 Mins Read
Recent News

OMG : 70 ವರ್ಷದ ಲಿವ್ ಇನ್ ರಿಲೇಶನ್ಶಿಪ್ ; ಪುತ್ರರು, ಮೊಮ್ಮಕ್ಕಳ ಸಮ್ಮುಖದಲ್ಲಿ ಮದುವೆಯಾದ 95ರ ಅಜ್ಜ- ಅಜ್ಜಿ!

05/06/2025 5:17 PM

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ; ಮೃತರ ಕುಟುಂಬಕ್ಕೆ ‘RCB’ಯಿಂದ 10 ಲಕ್ಷ ಪರಿಹಾರ ಘೋಷಣೆ

05/06/2025 4:34 PM

ವಾಹ್.! ಪ್ರತಿದಿನ ಒಂದು ಗ್ಲಾಸ್ ‘ರೆಡ್ ವೈನ್’ ಕುಡಿಯೋದು ತುಂಬಾ ಪ್ರಯೋಜನಕಾರಿ ; ಅಧ್ಯಯನ

05/06/2025 4:27 PM

ಮಹಿಳೆಯರ ದೀರ್ಘಾಯುಷ್ಯಕ್ಕೆ ಕಾರಣ ಕಂಡುಹಿಡಿದ ವಿಜ್ಞಾನಿಗಳು.! ಗುಟ್ಟೇನು ಗೊತ್ತಾ?

05/06/2025 4:18 PM
State News
KARNATAKA

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ; ಮೃತರ ಕುಟುಂಬಕ್ಕೆ ‘RCB’ಯಿಂದ 10 ಲಕ್ಷ ಪರಿಹಾರ ಘೋಷಣೆ

By KannadaNewsNow05/06/2025 4:34 PM KARNATAKA 1 Min Read

ಬೆಂಗಳೂರು : ಬುಧವಾರ ನಡೆದ ವಿಜಯೋತ್ಸವದ ಸಂದರ್ಭದಲ್ಲಿ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಪ್ರಾಣ ಕಳೆದುಕೊಂಡ 11 ಮಂದಿಗೆ ರಾಯಲ್…

BREAKING: KSRTC ಚಾಲಕ ಕಂ ನಿರ್ವಾಹಕರ ಹುದ್ದೆಗೆ ಸಂಭವನೀಯ ಆಯ್ಕೆ ಪಟ್ಟಿ ಪ್ರಕಟ

05/06/2025 3:00 PM

ಸಾರ್ವಜನಿಕರೇ ಗಮನಿಸಿ : ನಿಮ್ಮ ಬಳಿ `ರೇಷನ್ ಕಾರ್ಡ್’ ಇದ್ರೆ `ಉಚಿತ ಹೊಲಿಗೆ ಯಂತ್ರ’ ಸೇರಿ ಸಿಗಲಿವೆ ಈ 8 ಸೌಲಭ್ಯಗಳು.!

05/06/2025 1:30 PM

BIG NEWS : ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ : ಮೃತಪಟ್ಟವರ ವಿವರ ಬಹಿರಂಗ.!

05/06/2025 1:09 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.