Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜ.21ರಂದು ಸಾಗರದಲ್ಲಿ ‘ರಾಜ್ಯ ಸುರಭಿ ಶ್ರೀ ಪ್ರಶಸ್ತಿ’ ಪ್ರದಾನ: ಅಧ್ಯಕ್ಷ ಎಸ್.ಜಿ ರಾಮಚಂದ್ರ

17/01/2026 10:15 PM

SBI ಗ್ರಾಹಕರಿಗೆ ಬಿಗ್ ಶಾಕ್! ‘ATM’ ವಿತ್ ಡ್ರಾ ಈಗ ಹೆಚ್ಚು ದುಬಾರಿ, ಬ್ಯಾಲೆನ್ಸ್ ಚೆಕ್ ಮಾಡಲು ಕೂಡ ಶುಲ್ಕ!

17/01/2026 10:02 PM

ಏಪ್ರಿಲ್ ನಿಂದ ಪ್ಲಾಸ್ಟಿಕ್ ಸಂಗ್ರಹಕ್ಕೆ ಪ್ರತ್ಯೇಕ ವ್ಯವಸ್ಥೆ ಜಾರಿ: ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ

17/01/2026 9:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ರಾಜ್ಯದಲ್ಲಿ ಈ ವರ್ಷ 900 `ಕರ್ನಾಟಕ ಪಬ್ಲಿಕ್ ಶಾಲೆಗಳು’ ಆರಂಭ : CM ಸಿದ್ದರಾಮಯ್ಯ ಘೋಷಣೆ
KARNATAKA

GOOD NEWS : ರಾಜ್ಯದಲ್ಲಿ ಈ ವರ್ಷ 900 `ಕರ್ನಾಟಕ ಪಬ್ಲಿಕ್ ಶಾಲೆಗಳು’ ಆರಂಭ : CM ಸಿದ್ದರಾಮಯ್ಯ ಘೋಷಣೆ

By kannadanewsnow5715/11/2025 6:35 AM

ಬೆಂಗಳೂರು : ರಾಜ್ಯದಲ್ಲಿ ಈ ವರ್ಷ ಒಟ್ಟು 900 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಪಂಡಿತ್ ಜವಾಹರಲಾಲ್ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ “ರಾಜ್ಯ ಮಟ್ಟದ ಮಕ್ಕಳ ದಿನಾಚರಣೆ ಮತ್ತು ಪೋಷಕರ-ಶಿಕ್ಷಕರ ಮಹಾಸಭೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದೇಶದ ಭವಿಷ್ಯ ರೂಪಿತ ಆಗುವುದು ವೈಚಾರಿಕ – ವೈಜ್ಞಾನಿಕ ಮನೋಭಾವದ ಮಕ್ಕಳಿಂದ. ಆದ್ದರಿಂದ ಮಕ್ಕಳು ಪ್ರಾಥಮಿಕ‌ ಶಿಕ್ಷಣದಿಂದಲೇ ಮೌಢ್ಯ, ಕಂದಾಚಾರದಿಂದ ದೂರ ಉಳಿಯಬೇಕು ಎಂದರು.

ಮಕ್ಕಳೇ ಭಾರತದ ಭವಿಷ್ಯ ಎನ್ನುವ ದೂರದೃಷ್ಟಿ ನೆಹರೂ ಅವರಿಗೆ ಇತ್ತು. ಹೀಗಾಗಿ ಮಕ್ಕಳಲ್ಲಿ ವೈಜ್ಞಾನಿಕ ಮನೋಧರ್ಮ ರೂಪಿಸುವ ಶಿಕ್ಷಣಕ್ಕೆ ಒತ್ತು ನೀಡಿದ್ದರು. ನಮ್ಮ ಸರ್ಕಾರ ಕೂಡ ಶಿಕ್ಷಣಕ್ಕೆ ಪ್ರಥಮ ಆಧ್ಯತೆ ನೀಡಿದ್ದು, 65,000 ಕೋಟಿ ರೂಪಾಯಿಗಳನ್ನು ಶಿಕ್ಷಣಕ್ಕೆ ನೀಡುತ್ತಿದ್ದೇವೆ.

ನೆಹರೂ ತಮ್ಮ ಯೌವ್ವನದ 3,200ಕ್ಕೂ ಹೆಚ್ಚು ದಿನಗಳನ್ನು ಜೈಲಿನಲ್ಲಿ ಕಳೆದ ಹೋರಾಟಗಾರ. ಅತೀ ಶ್ರೀಮಂತ ಕುಟುಂಬದಿಂದ ಬಂದಿದ್ದರೂ ದೇಶದ ಸ್ವಾತಂತ್ರ್ಯಕ್ಕಾಗಿ ಸೆರೆಮನೆ ಸೇರಿದರು. ದೇಶದ ಪ್ರಧಾನಿಯಾಗಿ ಕೃಷಿ, ವಿಜ್ಞಾನ, ನೀರಾವರಿ, ತಂತ್ರಜ್ಞಾನ ಸೇರಿ ದೇಶದ ಸಮಗ್ರ ಅಭಿವೃದ್ಧಿಗೆ ಅಡಿಪಾಯ ಹಾಕಿದರು. ಐಐಟಿ, ಏಮ್ಸ್ ಸೇರಿ ಅಣೆಕಟ್ಟು, ಕೈಗಾರಿಕೆಗಳನ್ನೆಲ್ಲಾ ಮಾಡಿದ್ದು ನೆಹರೂ.‌ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದೆ ಬ್ರಿಟಿಷರ ಜೊತೆ ಕೈಜೋಡಿಸಿದ್ದವರು ನೆಹರೂ ಮತ್ತು ಗಾಂಧಿಯನ್ನು ಟೀಕಿಸುತ್ತಾರೆ. ಇದನ್ನು ಮಕ್ಕಳಿಗೆ ಶಿಕ್ಷಕರು ಹಾಗೂ ಪೋಷಕರು ಅರ್ಥ ಮಾಡಿಸಬೇಕು ಎಂದರು.

ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವ ಇರುವ ಮಕ್ಕಳ ಮೇಲೆ ದೇಶದ ಅಭಿವೃದ್ಧಿ ಮತ್ತು ಭವಿಷ್ಯದ ಕನಸನ್ನು ನೆಹರೂ ಕಟ್ಟಿಕೊಂಡಿದ್ದರು. ಪ್ರತಿಭೆ ಯಾರ ಸ್ವತ್ತೂ ಅಲ್ಲ. ಈಗ ಈ ವೇದಿಕೆಯಲ್ಲಿ ಸನ್ಮಾನಿತರಾದ ವಿದ್ಯಾರ್ಥಿಗಳೆಲ್ಲರೂ ಬಡ ಕುಟುಂಬದಿಂದ ಬಂದು ಸರ್ಕಾರಿ ಶಾಲೆಗಳಲ್ಲಿ ಓದಿದವರು. ಆದ್ದರಿಂದ ಈ ವರ್ಷ ಒಟ್ಟು 900 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯುತ್ತಿದ್ದೇವೆ. ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಸರ್ಕಾರ ಶ್ರಮಿಸುತ್ತಿದೆ. ನಾನೂ ಸರ್ಕಾರಿ ಶಾಲೆಯಲ್ಲಿ ಓದಿಯೇ ಮುಖ್ಯಮಂತ್ರಿ ಆಗಿದ್ದೀನಿ ಎಂದು ಹೇಳಿದ್ದಾರೆ.

ಸರ್ಕಾರಿ ಶಾಲೆಗಳ ಮಕ್ಕಳು ಸ್ವಾಭಿಮಾನದಿಂದ ಸಮಾಜಮುಖಿಯಾಗಿ ಬೆಳೆಯಲು, ಉತ್ತಮ ಶಿಕ್ಷಣ ಪಡೆಯಲು ನಮ್ಮ ಸರ್ಕಾರ ಸಕಲ ಸವಲತ್ತುಗಳನ್ನೂ ನೀಡುತ್ತಿದೆ. ಇಂದಿರಾ ಕಿಟ್, ಶೂ, ಸಮವಸ್ತ್ರ, ಮೊಟ್ಟೆ, ಬಾಳೆಹಣ್ಣು, ಪಠ್ಯ ಪುಸ್ತಕ, ಸ್ಕಾಲರ್ಶಿಪ್ ಇವೆಲ್ಲವನ್ನೂ ಬಡವರ ಮಕ್ಕಳಿಗಾಗಿ ಸರ್ಕಾರ ಒದಗಿಸುತ್ತಿದೆ. ಇದರ ಅನುಕೂಲ ಪಡೆದು ಮಕ್ಕಳು ದೇಶದ ಆಸ್ತಿಯಾಗಿ ರೂಪುಗೊಳ್ಳಬೇಕು ಎಂದರು.

ದೇಶದ ಭವಿಷ್ಯ ರೂಪಿತ ಆಗುವುದು ವೈಚಾರಿಕ – ವೈಜ್ಞಾನಿಕ ಮನೋಭಾವದ ಮಕ್ಕಳಿಂದ. ಆದ್ದರಿಂದ ಮಕ್ಕಳು ಪ್ರಾಥಮಿಕ‌ ಶಿಕ್ಷಣದಿಂದಲೇ ಮೌಢ್ಯ, ಕಂದಾಚಾರದಿಂದ ದೂರ ಉಳಿಯಬೇಕು.

ಮಕ್ಕಳೇ ಭಾರತದ ಭವಿಷ್ಯ ಎನ್ನುವ ದೂರದೃಷ್ಟಿ ನೆಹರೂ ಅವರಿಗೆ ಇತ್ತು. ಹೀಗಾಗಿ ಮಕ್ಕಳಲ್ಲಿ ವೈಜ್ಞಾನಿಕ ಮನೋಧರ್ಮ ರೂಪಿಸುವ ಶಿಕ್ಷಣಕ್ಕೆ ಒತ್ತು ನೀಡಿದ್ದರು. ನಮ್ಮ ಸರ್ಕಾರ… pic.twitter.com/166Hip6SjP

— Siddaramaiah (@siddaramaiah) November 14, 2025

GOOD NEWS: 900 'Karnataka Public Schools' to start in the state this year: CM Siddaramaiah announces
Share. Facebook Twitter LinkedIn WhatsApp Email

Related Posts

ಜ.21ರಂದು ಸಾಗರದಲ್ಲಿ ‘ರಾಜ್ಯ ಸುರಭಿ ಶ್ರೀ ಪ್ರಶಸ್ತಿ’ ಪ್ರದಾನ: ಅಧ್ಯಕ್ಷ ಎಸ್.ಜಿ ರಾಮಚಂದ್ರ

17/01/2026 10:15 PM2 Mins Read

ಏಪ್ರಿಲ್ ನಿಂದ ಪ್ಲಾಸ್ಟಿಕ್ ಸಂಗ್ರಹಕ್ಕೆ ಪ್ರತ್ಯೇಕ ವ್ಯವಸ್ಥೆ ಜಾರಿ: ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ

17/01/2026 9:54 PM2 Mins Read

ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಮೈತ್ರಿಕೂಟ ಕ್ಲೀನ್ ಸ್ವೀಪ್: ಶಾಸಕ ಆನಂದ್, ಮಾಜಿ MLA ಕುಮಾರಸ್ವಾಮಿ ಸೋಲು

17/01/2026 9:46 PM1 Min Read
Recent News

ಜ.21ರಂದು ಸಾಗರದಲ್ಲಿ ‘ರಾಜ್ಯ ಸುರಭಿ ಶ್ರೀ ಪ್ರಶಸ್ತಿ’ ಪ್ರದಾನ: ಅಧ್ಯಕ್ಷ ಎಸ್.ಜಿ ರಾಮಚಂದ್ರ

17/01/2026 10:15 PM

SBI ಗ್ರಾಹಕರಿಗೆ ಬಿಗ್ ಶಾಕ್! ‘ATM’ ವಿತ್ ಡ್ರಾ ಈಗ ಹೆಚ್ಚು ದುಬಾರಿ, ಬ್ಯಾಲೆನ್ಸ್ ಚೆಕ್ ಮಾಡಲು ಕೂಡ ಶುಲ್ಕ!

17/01/2026 10:02 PM

ಏಪ್ರಿಲ್ ನಿಂದ ಪ್ಲಾಸ್ಟಿಕ್ ಸಂಗ್ರಹಕ್ಕೆ ಪ್ರತ್ಯೇಕ ವ್ಯವಸ್ಥೆ ಜಾರಿ: ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ

17/01/2026 9:54 PM

ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಮೈತ್ರಿಕೂಟ ಕ್ಲೀನ್ ಸ್ವೀಪ್: ಶಾಸಕ ಆನಂದ್, ಮಾಜಿ MLA ಕುಮಾರಸ್ವಾಮಿ ಸೋಲು

17/01/2026 9:46 PM
State News
KARNATAKA

ಜ.21ರಂದು ಸಾಗರದಲ್ಲಿ ‘ರಾಜ್ಯ ಸುರಭಿ ಶ್ರೀ ಪ್ರಶಸ್ತಿ’ ಪ್ರದಾನ: ಅಧ್ಯಕ್ಷ ಎಸ್.ಜಿ ರಾಮಚಂದ್ರ

By kannadanewsnow0917/01/2026 10:15 PM KARNATAKA 2 Mins Read

ಶಿವಮೊಗ್ಗ : ಜನವರಿ.21, 2026ರಂದು ರಾಜ್ಯ ಸುರಭಿ ಶ್ರೀ ಪ್ರಶಸ್ತಿಯನ್ನು ಬೆಳಿಗ್ಗೆ 10-30ಕ್ಕೆ ಸಾಗರದ ಸಿಗಂದೂರು ರಸ್ತೆಯ ದೈವಜ್ಞ ಕಲ್ಯಾಣ…

ಏಪ್ರಿಲ್ ನಿಂದ ಪ್ಲಾಸ್ಟಿಕ್ ಸಂಗ್ರಹಕ್ಕೆ ಪ್ರತ್ಯೇಕ ವ್ಯವಸ್ಥೆ ಜಾರಿ: ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ

17/01/2026 9:54 PM

ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಮೈತ್ರಿಕೂಟ ಕ್ಲೀನ್ ಸ್ವೀಪ್: ಶಾಸಕ ಆನಂದ್, ಮಾಜಿ MLA ಕುಮಾರಸ್ವಾಮಿ ಸೋಲು

17/01/2026 9:46 PM

ಬೆಂಗಳೂರು ನಗರ ಜಿಲ್ಲಾ ಯೋಜನಾ ಸಮಿತಿಯ ಮೂರು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ವೇಳಾಪಟ್ಟಿ ಪ್ರಕಟ

17/01/2026 9:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.