ಬೆಂಗಳೂರು : ರಾಜ್ಯದ ಯಜಮಾನರಿಗೆ ಇದೀಗ ರಾಜ್ಯ ಸರ್ಕಾರ ಮತ್ತೊಂದು ಸಿಹಿ ಸುದ್ದಿ ಒಂದನ್ನು ನೀಡಿದ್ದು, ಐದು ಗ್ಯಾರಂಟಿ ಯೋಜನೆಗಲ್ಲಿ ಪ್ರಮುಖ ಗ್ಯಾರಂಟಿ ಯೋಜನೆಯದ ಗ್ರಹಲಕ್ಷ್ಮಿ ಯೋಜನೆ ಅಡಿಯಲ್ಲಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಹೌದು ಷೇರು ಸಂಗ್ರಹಣೆಗೆ ಮಹಾಲಕ್ಷ್ಮಿ ಯೋಜನೆ ಅಡಿಯಲ್ಲಿ ಸಹಕಾರ ಸಂಘ ಸ್ಥಾಪನೆಗೆ ಸಹಕಾರ ಇಲಾಖೆ ಇದೀಗ ಅನುಮತಿ ನೀಡಿದೆ. ಸಹಕಾರ ಸಂಘ ಸ್ಥಾಪನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಮೂಲಕ ರಾಜ್ಯದ ಮಹಿಳೆಯರಿಗೆ ಈ ಒಂದು ಸಹಕಾರ ಸಂಘ ಸ್ಥಾಪನೆ ಮಾಡುವುದರಿಂದ ಮತ್ತಷ್ಟು ಹೆಚ್ಚಿನ ಅನುಕೂಲತೆಗಳು ಆಗಲಿವೆ ಎಂದು ಹೇಳಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಸಹಕಾರ ಸಂಘ ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಶೀಘ್ರದಲ್ಲಿ ಜಾರಿಗೆ ಬರುವ ಸಾಧ್ಯತೆ ಇದೆ
ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘ ಸ್ಥಾಪನೆಗೆ ಸಹಕಾರ ಸಂಘಗಳ ಅಪರ ನಿಬಂಧಕರು ಹಸಿರು ನಿಶಾನೆ ತೋರಿಸಿ ಕರ್ನಾಟಕದ ವ್ಯಾಪ್ತಿ ನಿಗದಿಪಡಿಸಿದ್ದಾರೆ. ನೋಂದಣಿ ಪೂರ್ವದಲ್ಲಿ ಸಹಕಾರ ಸಂಘದ ಕಾರ್ಯವ್ಯಾಪ್ತಿಯಲ್ಲಿನ ಕನಿಷ್ಠ ಒಂದು ಸಾವಿರ ಸದಸ್ಯರಿಂದ ಷೇರು ಹಣ 20 ಲಕ್ಷ ರೂ. ಸಂಗ್ರಹಿಸಲು ಮುಖ್ಯ ಪ್ರವರ್ತಕರಾದ ಬಿ.ವಿ. ನಾಗರತ್ನ ಅವರಿಗೆ 90 ದಿನಗಳ ಗಡುವು ವಿಧಿಸಿ, ಷರತ್ತು ಬದ್ಧ ಆದೇಶ ಹೊರಡಿಸಿದ್ದಾರೆ.
ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ’ ಸ್ಥಾಪಿಸುವುದಕ್ಕಾಗಿ 21 ಗೃಹಲಕ್ಷ್ಮಿ ಫಲಾನುಭವಿಗಳನ್ನು ಪ್ರವರ್ತಕರು ಎಂದು ಪರಿಗಣಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಭೆ ನಡೆಸಿ, ಮುಖ್ಯ ಪ್ರವರ್ತಕರ ಮುಖೇನ ಯೋಜನೆಯ ಪ್ರಸ್ತಾವನೆ ಸಲ್ಲಿಸಿತ್ತು. ಸಹಕಾರ ಸಂಘಗಳ ಸಹಾಯಕ ನಿರ್ದೇಶಕರು ಸ್ಥಳ ಪರಿಶೀಲನೆ, ಸಂಘದ ಸಾಧಕ-ಬಾಧಕಗಳ ಬಗ್ಗೆ ಪರಾಮರ್ಶಿಸಿದ್ದಾರೆ