ಬೆಂಗಳೂರು: ರಾಜ್ಯ ಸರ್ಕಾರವು ರೈತರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಡಿಸೆಂಬರ್ನೊಳಗೆ 2 ಲಕ್ಷ ಜಮೀನುಗಳಿಗೆ ಪೋಡಿ ಮಾಡಿಕೊಡುವ ಗುರಿ ಹೊಂದಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ರೈತರಿಗೆ ನಮ್ಮ ಸರ್ಕಾರ ನೀಡಿದ ಸರಳೀಕೃತ ದರ್ಖಾಸ್ತು ಪೋಡಿ ʼನನ್ನ ಭೂಮಿʼ ಗ್ಯಾರಂಟಿ ಅಭಿಯಾನದಡಿ ಕೇವಲ 8 ತಿಂಗಳಲ್ಲಿ 1.09 ಲಕ್ಷ ಜಮೀನುಗಳನ್ನು ಅಳತೆಗೆ ತೆಗೆದುಕೊಳ್ಳಲಾಗಿದ್ದು, ಡಿಸೆಂಬರ್ನೊಳಗೆ 2 ಲಕ್ಷ ಜಮೀನುಗಳಿಗೆ ಪೋಡಿ ಮಾಡಿಕೊಡುವ ಗುರಿ ಹೊಂದಲಾಗಿದೆ. ಈ ಮೂಲಕ 30 ಲಕ್ಷ ರೈತರಿಗೆ ಅನುಕೂಲವಾಗಲಿದೆ ಅವರು ತಿಳಿಸಿದ್ದಾರೆ.