Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಆ ಖಾಯಿಲೆಗಳಿಗೆ ಇದು ಬ್ರಹ್ಮಾಸ್ತ್ರ.! ಹಾಲಿನಲ್ಲಿ ನೆನೆಸಿ ತಿಂದ್ರೆ ಸಮಸ್ಯೆಗಳೆಲ್ಲ ಮಾಯ!

01/08/2025 10:08 PM

“ನಿರ್ಜನ ಪ್ರದೇಶಗಳನ್ನ ತಪ್ಪಿಸಿ” : ಜನಾಂಗೀಯ ದಾಳಿ ಹೆಚ್ಚಳದ ನಡುವೆ ಐರ್ಲೆಂಡ್’ನಲ್ಲಿರೋ ತನ್ನ ಪ್ರಜೆಗಳಿಗೆ ಭಾರತ ಸಲಹೆ

01/08/2025 9:41 PM

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ನಗರದಲ್ಲಿ ನೂತನವಾಗಿ ’52 ಇಂದಿರಾ ಕ್ಯಾಂಟೀನ್’ ಆರಂಭ

01/08/2025 9:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ `ಬಗರ್ ಹುಕುಂ ಸಾಗುವಳಿದಾರರಿಗೆ ಗುಡ್ ನ್ಯೂಸ್ : 8 ತಿಂಗಳಲ್ಲಿ ಅರ್ಹರಿಗೆ `ಭೂಮಿ’ ಮಂಜೂರು
KARNATAKA

ರಾಜ್ಯ ಸರ್ಕಾರದಿಂದ `ಬಗರ್ ಹುಕುಂ ಸಾಗುವಳಿದಾರರಿಗೆ ಗುಡ್ ನ್ಯೂಸ್ : 8 ತಿಂಗಳಲ್ಲಿ ಅರ್ಹರಿಗೆ `ಭೂಮಿ’ ಮಂಜೂರು

By kannadanewsnow5728/09/2024 7:26 AM

ಬೆಂಗಳೂರು: ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಾ, ಬಗರ್ ಹುಕುಂ ಸಾಗುವಳಿ ಚೀಟಿ ನಿರೀಕ್ಷೆಯಲ್ಲಿದ್ದಂತ ರೈತರಿಗೆ ಗುಡ್ ನ್ಯೂಸ್ ಒಂದು ಹೊರ ಬಿದ್ದಿದೆ. ಅದೇನೆಂದರೇ ಬಗರ್ ಹುಕುಂ ವಿಲೇ ಪ್ರಕ್ರಿಯೆ ಆರಂಭಗೊಳಿಸಲಾಗಿದೆ ಅಂತ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಬಗರ್ ಹುಕುಂ ನಮೂನೆ 57ರ ಅಡಿಯಲ್ಲಿ ಒಟ್ಟಾರೆ 9.80ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ ಅನರ್ಹ ಅರ್ಜಿಗಳೇ ಅಧಿಕ. ಈ ಅರ್ಜಿಗಳ ವಿಲೇವಾರಿಗೆ ಈಗಾಗಲೇ ರಾಜ್ಯಾದ್ಯಂತ 160 ಬಗರ್ ಹುಕುಂ ಸಮಿತಿಗಳನ್ನು ರಚಿಸಲಾಗಿದೆ. ಪ್ರತಿ ತಿಂಗಳೂ ಕನಿಷ್ಟ ಮಟ್ಟದ ಅರ್ಜಿ ವಿಲೇ ಆಗಬೇಕು, ಮುಂದಿನ ಎಂಟು ತಿಂಗಳಲ್ಲಿ ಎಲ್ಲಾ ಅರ್ಜಿಗಳನ್ನೂ ವಿಲೇಗೊಳಿಸಬೇಕು. ಅಲ್ಲದೆ, ಅರ್ಹರಿಗೆ ಭೂ ಮಂಜೂರು ಮಾಡಬೇಕು ಎಂದು ಈಗಾಗಲೇ ತಹಶೀಲ್ದಾರ್ ಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ರಾಜ್ಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳ ಮಟ್ಟದಲ್ಲಿ ಕನಿಷ್ಟ 4 ಲಕ್ಷ ರೈತರಿಗೆ ಸಂಬಂಧಿಸಿದ 69,437 ಸರ್ವೇ ನಂಬರ್ಗಳಲ್ಲಿ ನಮೂನೆ 1-5 ದಾಖಲೆಗಳನ್ನು ಪರಿಶೀಲಿಸಲಾಗಿದೆ. ಅಂದರೆ ಸಂಬಂಧ ಪಟ್ಟ ರೈತರ ಕಡತಗಳನ್ನು ತಯಾರು ಮಾಡುವ ಪ್ರಕ್ರಿಯೆ ಆರಂಭಿಸಲಾಗಿದೆ. ಈ ದಾಖಲೆಗಳನ್ನು ಒಂದುಗೂಡಿಸಿ ರೈತರು ಪೋಡಿಗೆ ಅರ್ಹರೇ ಎಂದು ಗುರುತಿಸಲಾಗುವುದು. ಆರ್ಐ, ಶಿರಸ್ತೇದಾರ್ ಹಾಗೂ ತಹಶೀಲ್ದಾರ್ ಈ ಬಗ್ಗೆ ಪರಿಗಣಿಸಿ ನಂತರ ನಮೂನೆ 6-10 ರ ಪ್ರಕ್ರಿಯೆಗೆ ಸರ್ವೇ ಇಲಾಖೆಗೆ ಪೋಡಿಗೆ ಶೀಫಾರಸು ಮಾಡುತ್ತಾರೆ. ತದನಂತರ ರೈತರಿಗೆ ಪೋಡಿ ಲಭ್ಯವಾಗುತ್ತದೆ” ಎಂದರು.

ರಾಜ್ಯಾದ್ಯಂತ ಶೇ. 81.74 ರಷ್ಟು ಆಧಾರ್ ಸೀಡಿಂಗ್

ರಾಜ್ಯಾದ್ಯಂತ ಈವರೆಗೆ ಶೇ. 81.74 ರಷ್ಟು ಆಧಾರ್ ಸೀಡಿಂಗ್ ಕೆಲಸವನ್ನು ಪೂರ್ಣಗೊಳಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, “ರಾಜ್ಯಾದ್ಯಂತ 4,09,87,831 ರಷ್ಟು ಜಮೀನುಗಳ ಆಧಾರ್ ಸೀಡಿಂಗ್ ಮಾಡುವುದು ಇಲಾಖೆಯ ಗುರಿ. ಈ ಪೈಕಿ ಸುಮಾರು 61 ಲಕ್ಷ ಜಮೀನುಗಳು ಕೃಷಿಯೇತರ ಚಟುವಟಿಕೆಗೆ ಉಪಯೋಗವಾಗುತ್ತಿದೆ. ಇದನ್ನು ಆಧಾರ್ ಸೀಡಿಂಗ್ ಮಾಡುವುದು ಸಾಧ್ಯವಿಲ್ಲ. ಏಕೆಂದರೆ ಅಲ್ಲಿ ನಿವೇಶನಗಳು ಇರುತ್ತದೆ. ನಾವು ಕೃಷಿ ಭೂಮಿಯಲ್ಲಿ ಮಾತ್ರ ಸೀಡಿಂಗ್ ಮಾಡಲು ಸಾಧ್ಯ. ಈವರೆಗೆ 2.15 ಕೋಟಿ ಜಮೀನುಗಳಿಗೆ ಆಧಾರ್ ಅಥೆಂಟಿಫಿಕೇಷನ್ ಕೆಲಸ ಮುಗಿಸಲಾಗಿದ್ದು, ಆಧಾರ್ ಸೀಡಿಂಗ್ ವಿಚಾರದಲ್ಲಿ ಶೇ. 81.74 ರಷ್ಟು ಪ್ರಗತಿ ಸಾಧಿಸಲಾಗಿದೆ” ಎಂದು ಮಾಹಿತಿ ನೀಡಿದರು.

ಮುಂದುವರೆದು, “ರಾಜ್ಯಾದ್ಯಂತ 48,16,813 ಜಮೀನುಗಳ ಮಾಲೀಕರು ನಿಧನರಾಗಿದ್ದಾರೆ. ಆದರೆ, ಅವರ ಹೆಸರಲ್ಲೇ ಪಹಣಿ ಮುಂದುವರೆಯುತ್ತಿದೆ. ಈ ಎಲ್ಲರಿಗೂ ಶೀಘ್ರದಲ್ಲಿ ಫವತಿ ಖಾತೆ ಆಂದೋಲನದ ಅಡಿಯಲ್ಲಿ ಖಾತೆ ಬದಲಿಸಿಕೊಡಲಾಗುವುದು” ಎಂದು ಅವರು ತಿಳಿಸಿದರು.

Good news for 'Bagar Hukum cultivators' by state government: 'land' allotted to eligible people in 8 months ರಾಜ್ಯ ಸರ್ಕಾರದಿಂದ `ಬಗರ್ ಹುಕುಂ’ ಸಾಗುವಳಿದಾರರಿಗೆ ಗುಡ್ ನ್ಯೂಸ್!
Share. Facebook Twitter LinkedIn WhatsApp Email

Related Posts

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ನಗರದಲ್ಲಿ ನೂತನವಾಗಿ ’52 ಇಂದಿರಾ ಕ್ಯಾಂಟೀನ್’ ಆರಂಭ

01/08/2025 9:41 PM1 Min Read

BREAKING: ಕನ್ನಡದ ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆಗೆ ಶರಣು

01/08/2025 9:27 PM1 Min Read

ಮಂಡ್ಯದ ಮದ್ದೂರಿನ ಬನ್ನಹಳ್ಳಿ ಏತ ನೀರಾವರಿ ಯೋಜನೆಗೆ ಶೀಘ್ರದಲ್ಲೇ ಚಾಲನೆ – ಶಾಸಕ ಕೆ.ಎಂ.ಉದಯ್

01/08/2025 7:51 PM2 Mins Read
Recent News

ಆ ಖಾಯಿಲೆಗಳಿಗೆ ಇದು ಬ್ರಹ್ಮಾಸ್ತ್ರ.! ಹಾಲಿನಲ್ಲಿ ನೆನೆಸಿ ತಿಂದ್ರೆ ಸಮಸ್ಯೆಗಳೆಲ್ಲ ಮಾಯ!

01/08/2025 10:08 PM

“ನಿರ್ಜನ ಪ್ರದೇಶಗಳನ್ನ ತಪ್ಪಿಸಿ” : ಜನಾಂಗೀಯ ದಾಳಿ ಹೆಚ್ಚಳದ ನಡುವೆ ಐರ್ಲೆಂಡ್’ನಲ್ಲಿರೋ ತನ್ನ ಪ್ರಜೆಗಳಿಗೆ ಭಾರತ ಸಲಹೆ

01/08/2025 9:41 PM

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ನಗರದಲ್ಲಿ ನೂತನವಾಗಿ ’52 ಇಂದಿರಾ ಕ್ಯಾಂಟೀನ್’ ಆರಂಭ

01/08/2025 9:41 PM

BREAKING: ಜಮ್ಮು-ಕಾಶ್ಮೀರದ ಕುಲ್ಗಾಮ್‌ನಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್: ಇಬ್ಬರು ಭಯೋತ್ಪಾದಕರು ಸೆರೆ

01/08/2025 9:36 PM
State News
KARNATAKA

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ನಗರದಲ್ಲಿ ನೂತನವಾಗಿ ’52 ಇಂದಿರಾ ಕ್ಯಾಂಟೀನ್’ ಆರಂಭ

By kannadanewsnow0901/08/2025 9:41 PM KARNATAKA 1 Min Read

ಬೆಂಗಳೂರು: ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ನಗರದಲ್ಲಿ ನೂತನ 52 ಇಂದಿರಾ ಕ್ಯಾಂಟೀನ್ ಆರಂಭಿಸಲಾಗುತ್ತಿದೆ. ಈ ಮೂಲಕ ಹಸಿದವರಿಗೆ…

BREAKING: ಕನ್ನಡದ ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆಗೆ ಶರಣು

01/08/2025 9:27 PM

ಮಂಡ್ಯದ ಮದ್ದೂರಿನ ಬನ್ನಹಳ್ಳಿ ಏತ ನೀರಾವರಿ ಯೋಜನೆಗೆ ಶೀಘ್ರದಲ್ಲೇ ಚಾಲನೆ – ಶಾಸಕ ಕೆ.ಎಂ.ಉದಯ್

01/08/2025 7:51 PM

10 ದಿನದಲ್ಲಿ ಮದ್ದೂರು ಪುರಸಭಾ ವ್ಯಾಪ್ತಿಯ ಎ ಮತ್ತು ಬಿ ಖಾತಾ ವಿತರಿಸಿ: ಶಾಸಕ ಕೆ.ಎಂ.ಉದಯ್ ಸೂಚನೆ

01/08/2025 7:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.