Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಷಕ್ಕೆ ಸಮಾನ.! ಈ ಸಮಸ್ಯೆ ಇರುವವರು ಮರೆತು ಕೂಡ ‘ಬೀಟ್ರೂಟ್’ ತಿನ್ನಬಾರದು.!

07/07/2025 10:09 PM

ನಿಮ್ಮ ಮಕ್ಕಳು ಊಟ ಮಾಡುವುಕ್ಕೆ ಹಟ ಮಾಡ್ತಿದ್ದಾರಾ.? ಈ ಬಾರಿ ಇದನ್ನ ಟ್ರೈ ಮಾಡಿ!

07/07/2025 9:42 PM

‘YouTube’ ಹೊಸ ರೂಲ್ಸ್ ; ಇನ್ಮುಂದೆ ‘AI- ರಚಿತ, ಪುನರಾವರ್ತಿತ ವಿಷಯ’ ಹಾಕಿದ್ರೆ ‘ಹಣ’ ಸಿಗೋದಿಲ್ಲ

07/07/2025 9:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ರಾಜ್ಯದ ‘ಬಗರ್ ಹುಕುಂ’ ಸಾಗುವಳಿದಾರರಿಗೆ ಸಿಹಿಸುದ್ದಿ: ಡಿಸೆಂಬರ್ ಮೊದಲ ವಾರ ‘ಭೂಮಿ ಮಂಜೂರು ಫಿಕ್ಸ್’
KARNATAKA

GOOD NEWS: ರಾಜ್ಯದ ‘ಬಗರ್ ಹುಕುಂ’ ಸಾಗುವಳಿದಾರರಿಗೆ ಸಿಹಿಸುದ್ದಿ: ಡಿಸೆಂಬರ್ ಮೊದಲ ವಾರ ‘ಭೂಮಿ ಮಂಜೂರು ಫಿಕ್ಸ್’

By kannadanewsnow0914/11/2024 3:48 PM

ಬೆಂಗಳೂರು : ಬಡವರಿಗೆ ಭೂ ಮಂಜೂರುಗೊಳಿಸುವ “ಬಗರ್ ಹುಕುಂ” ಅರ್ಜಿಗಳ ಪೈಕಿ ಅರ್ಹ-ಅನರ್ಹ ಅರ್ಜಿಗಳನ್ನು ರಾಜ್ಯದ ಎಲ್ಲಾ ತಹಶೀಲ್ದಾರರೂ ಈ ತಿಂಗಳ 25 ರ ಒಳಗೆ ವಿಂಗಡಿಸಿ ಜಿಲ್ಲಾಧಿಕಾರಿಗಳಿಗೆ ನೀಡಬೇಕು. ತಪ್ಪಿದರೆ ಎಲ್ಲರಿಗೂ ಶೋಕಾಸ್ ನೊಟೀಸ್ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳನ್ನು ಎಚ್ಚರಿಸಿದರು.

ಸಚಿವ ಕೃಷ್ಣ ಬೈರೇಗೌಡ ಅವರು ರಾಜ್ಯದ ಎಲ್ಲಾ ತಹಶೀಲ್ದಾರರ ಜೊತೆ ವಿಕಾಸಸೌಧದಿಂದ ಗುರುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಬಗರ್ ಹುಕುಂ ಅರ್ಜಿ ವಿಲೇ ಪ್ರಗತಿ ಪರಿಶೀಲನೆ ನಡೆಸಿದರು.

“ಬಗರ್ ಹುಕುಂ” ಬಡವರ ಕೆಲಸ. ಬಡ ರೈತರಿಗೆ ಶೀಘ್ರ ಭೂ ಮಂಜೂರು ಮಾಡಬೇಕು ಎಂದು ರೈತಪರ ಸಂಘಟನೆಗಳು ದಶಕಗಳಿಂದ ಹೋರಾಡುತ್ತಿವೆ. ಈ ಬಗ್ಗೆ ಸರ್ಕಾರಕ್ಕೂ ಬದ್ಧತೆ ಇದ್ದು, ರೈತ ಹೋರಾಟಗಾರರ ದ್ವನಿಗೆ ಕಿವಿಗೊಡುವ ಅವರ ಸಮಸ್ಯೆಯನ್ನು ಆಲಿಸಿ ಪರಿಹರಿಸುವ ಉತ್ತರದಾಯಿತ್ವ ನನ್ನ ಮೇಲೂ ಇದೆ” ಎಂದರು.

ಮುಂದುವರೆದು, “ಬಗರ್ ಹುಕುಂ ಕೆಲಸಗಳಿಗೆ ಚುರುಕು ಮುಟ್ಟಿಸಬೇಕು ಎಂಬ ಕಾರಣದಿಂದಲೇ ನಾನು ಕಳೆದ ಒಂದು ವರ್ಷದಿಂದ ವ್ಯಯಕ್ತಿಕವಾಗಿ ಎಲ್ಲಾ ಜಿಲ್ಲೆಗಳಿಗೂ ಪ್ರವಾಸ ಕೈಗೊಂಡು ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿದ್ದೇನೆ. ರಾಜ್ಯದ ಎಲ್ಲಾ ತಹಶೀಲ್ದಾರರ ಜೊತೆ ಪ್ರತಿ ತಿಂಗಳೂ ವಿಡಿಯೋ ಕಾನ್ಫರೆನ್ಸ್ ಮೂಲಕವೂ ಸಭೆ ನಡೆಸಿ ಪ್ರಗತಿ ಪರಿಶೀಲಿಸುತ್ತಿದ್ದೇನೆ. ಆದರೂ ಕೆಲವು ತಹಶೀಲ್ದಾರರು ಬಡವರ ಕೆಲಸದ ಬಗ್ಗೆ ಅಸಡ್ಡೆ ಧೋರಣೆ ತೋರುತ್ತಿರುವುದು ವಿಷಾದನೀಯ” ಎಂದು ತೀವ್ರ ಅಸಾಮಾಧನ ಹೊರಹಾಕಿದರು.

“ಬಡವರ ಕೆಲಸದ ಬಗ್ಗೆ ಅಧಿಕಾರಿ ವರ್ಗದಿಂದ ಈ ಮಟ್ಟದ ಅಸಡ್ಡೆಯನ್ನು ನಾನು ನಿರೀಕ್ಷಿಸಿರಲಿಲ್ಲ. ರಾಜ್ಯದ ಒಟ್ಟಾರೆ 14 ಲಕ್ಷ ರೈತರು ಬಗರ್ ಹುಕುಂ ಅಡಿ ಭೂ ಮಂಜೂರಾತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈ ಅರ್ಜಿಗಳ ಪೈಕಿ ಅರ್ಹ ಅರ್ಜಿ ಯಾವುದು? ಅನರ್ಹ ಅರ್ಜಿ ಯಾವುದು? ಎಂದು ಪರಿಶೀಲಿಸಲು ಅಧಿಕಾರಿಗಳಿಗೆ ಒಂದೂವರೆ ವರ್ಷ ಬೇಕಾ?” ಎಂದು ಸಚಿವರು ಕಿಡಿಕಾರಿದರು.

ಮುಂದುವರೆದು, “ಇದೇ ನವೆಂಬರ್ ತಿಂಗಳ 25 ರ ಒಳಗೆ ತಹಶೀಲ್ದಾರರು ಅರ್ಹ-ಅನರ್ಹ ಅರ್ಜಿಗಳನ್ನು ವಿಂಗಡಿಸಿ ಪಟ್ಟಿ ಮಾಡಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬೇಕು. ಎಲ್ಲಾ ಜಿಲ್ಲಾಧಿಕಾರಿಗಳು ನವೆಂಬರ್.26 ರ ಬೆಳಗ್ಗೆಯೇ ಇಡೀ ಜಿಲ್ಲೆಯ ಪಟ್ಟಿಯನ್ನು ಒಂದುಗೂಡಿಸಿ ನನಗೆ ಸಲ್ಲಿಸಬೇಕು. ಡಿಸೆಂಬರ್ ಮೊದಲ ವಾರದಲ್ಲಿ ಶಾಸಕರ ನೇತೃತ್ವದಲ್ಲಿ ಸಭೆ ನಡೆಸಿ ಅರ್ಹರಿಗೆ ಡಿಜಿಟಲ್ ಭೂ ಸಾಗುವಳಿ ಚೀಟಿ ನೀಡಬೇಕು” ಎಂದು ಅವರು ತಾಕೀತು ಮಾಡಿದರು.

ಅರ್ಹ-ಅನರ್ಹ ವಿಂಗಡನೆಯ ಮಾನದಂಡವೇನು?

ರಾಜ್ಯಾದ್ಯಂತ ಬಗರ್ ಹುಕುಂ ಅಡಿ ಭೂ ಮಂಜೂರಾತಿ ಕೋರಿ 14ಲಕ್ಷಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೈಕಿ ಅನರ್ಹ ಅರ್ಜಿಗಳ ಸಂಖ್ಯೆಯೇ ಅಧಿಕವಾಗಿದೆ. ಹೀಗಾಗಿ ಅರ್ಜಿಗಳನ್ನು ಅನರ್ಹ ಎಂದು ನಿರ್ಧರಿಸಲು ಕೆಲವು ಮಾನದಂಡಗಳನ್ನು ನಿಗದಿಪಡಿಸಲಾಗಿದೆ.

ಅರ್ಜಿದಾರರು ನಿರ್ದಿಷ್ಟ ಪ್ರದೇಶದಲ್ಲಿ ಸಾಗುವಳಿ ಮಾಡುತ್ತಿಲ್ಲ, ನಿರ್ದಿಷ್ಟ ಪ್ರದೇಶದಲ್ಲಿ ಗೋಮಾಳ ಭೂಮಿ ಅಧಿಕ ಇಲ್ಲ, ಅರಣ್ಯ ಭೂಮಿಯನ್ನು ಕೋರಿ ಸಾಗುವಳಿಗೆ ಅರ್ಜಿ ಸಲ್ಲಿಸಿದ್ದರೆ, ಅರ್ಜಿದಾರರ ಹೆಸರಿನಲ್ಲಿ ಈಗಾಗಲೇ 4.38 ಎಕರೆಗೂ ಅಧಿಕ ಜಮೀನು ಇದ್ದರೆ, ಅರ್ಜಿದಾರರು ಭೂಮಿ ಕೋರಿ ಅರ್ಜಿ ಸಲ್ಲಿಸಿರುವ ಪ್ರದೇಶದಲ್ಲಿ ವಾಸ ಇಲ್ಲದಿದ್ದರೆ, ಅರ್ಜಿಯೇ ನಕಲು ಆಗಿದ್ದರೆ ಅಥವಾ ಅರ್ಜಿದಾರರು ಅಧಿಕಾರಿಗಳ ಕೈಗೆ ಸಿಗದಿದ್ದರೆ ಅಂತಹ ಅರ್ಜಿಗಳನ್ನು ಅನರ್ಹ ಎಂದು ಪರಿಗಣಿಸಲಾಗುವುದು. ಇದರ ಹೊರತಾಗಿ ಬೇರೆ ಸ್ವರೂಪದ ಸಮಸ್ಯೆಗಳು ಕಂಡುಬಂದರೆ ಅದನ್ನೂ ಸಹ ಪಟ್ಟಿಮಾಡಿ ಜಿಲ್ಲಾಧಿಕಾರಿಗಳಿಗೆ ನೀಡುವಂತೆ ಸಚಿವ ಕೃಷ್ಣ ಬೈರೇಗೌಡ ಅವರು ತಹಶೀಲ್ದಾರರಿಗೆ ಸೂಚಿಸಿದರು.

ಮಾಲೂರು ತಹಶೀಲ್ದಾರರಿಗೆ ನೊಟೀಸ್:

ಬಗರ್ ಹುಕುಂ ಅರ್ಜಿ ವಿಲೇ ಕೆಲಸದಲ್ಲಿ ಅಸಡ್ಡೆ ತೋರಿದ ಮಾಲೂರು ತಾಲೂಕು ತಹಶೀಲ್ದಾರ್ ರಮೇಶ್ ಅವರಿಗೆ ಶೋಕಾಸ್ ನೊಟೀಸ್ ನೀಡುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ ಅವರಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಇಂದಿನ ಸಭೆಯಲ್ಲಿ ಸೂಚಿಸಿದರು.

ಕೋಲಾರ ಜಿಲ್ಲೆ ಮಾಲೂರು ತಾಲೂಕಿನಲ್ಲಿ ಬಗರ್ ಹುಕುಂ ಅಡಿ ಭೂ ಮಂಜೂರಾತಿ ಕೋರಿ 10,771 ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ, ಈವರೆಗೆ ಸ್ಥಳ ಪರಿಶೀಲನೆಗೊಂಡಿರುವ ಅರ್ಜಿಗಳ ಸಂಖ್ಯೆ ಕೇವಲ 55 ಮಾತ್ರ. ಹೀಗಾಗಿ ವಿಡಿಯೋ ಕಾನ್ಫರೆನ್ಸ್ ಸಭೆ ಆರಂಭವಾಗುತ್ತಿದ್ದಂತೆ ಸಚಿವ ಕೃಷ್ಣ ಬೈರೇಗೌಡ ಅವರು ಮಾಲೂರು ತಹಶೀಲ್ದಾರ್ ರಮೇಶ್ ಅವರ ಬಳಿ ಮಾತನಾಡಲು ಯತ್ನಿಸಿದರು. ಆದರೆ, ಅವರು ಸಭೆಗೆ ಒಂದು ಗಂಟೆ ತಡವಾಗಿ ಬಂದರು. ಅಲ್ಲದೆ, ಸಚಿವರ ಪ್ರಶ್ನೆಗಳಿಗೆ ಉತ್ತರಿಸಲೂ ತಡವರಿಸಿದರು. ಹೀಗಾಗಿ ಅವರಿಗೆ ಕೂಡಲೇ ಶೋಕಾಸ್ ನೊಟೀಸ್ ನೀಡುವಂತೆ ಸಚಿವರು ಸೂಚಿಸಿದರು.

ಉತ್ತಮ ಕೆಲಸ ಮಾಡುವವರಿಗೆ ಸನ್ಮಾನದ ಭರವಸೆ:

ಬಗರ್ ಹುಕುಂ ಬಡವರ ಕೆಲಸವಾಗಿದ್ದು, ಅತ್ಯುತ್ತಮವಾಗಿ ಕೆಲಸ ನಿರ್ವಹಿಸುವ ತಹಶೀಲ್ದಾರರುಗಳಿಗೆ ಪ್ರಶಂಸನೀಯ ಪತ್ರ ನೀಡಿ ಸನ್ಮಾನಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಭರವಸೆ ನೀಡಿದರು.

ಇಂದಿನ ಸಭೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ತಹಶೀಲ್ದಾರ್ ಶ್ರೀಧರ್ ಶೇಖರ್ ಮುಂದಲಮನಿ ಹಾಗೂ ಮುಂಡಗೋಡು ತಾಲೂಕು ತಹಶೀಲ್ದಾರ್ ಮುಂಡಗೋಡು ಶಂಕರ್ ಗೌಡಿ ಅವರ ಪ್ರಶಂಸಿಸಿದ ಸಚಿವರು, “ಹಲವರು ಕೆಲಸ ಮಾಡಿ ಅಂದ್ರೆ ಬಗರ್ ಹುಕುಂ ಆ್ಯಪ್ ಸಹಕರಿಸುತ್ತಿಲ್ಲ, ನೆಟ್ವರ್ಕ್ ಇಲ್ಲ ಎಂದು ಇಲ್ಲ ಸಲ್ಲದ ಕಾರಣ ನೀಡುತ್ತಾರೆ. ಆದರೆ, ನೆಟ್ವರ್ಕೆ ಇಲ್ಲ ಗುಡ್ಡಗಾಡು ಅರಣ್ಯ ಪ್ರದೇಶದಲ್ಲಿ ಅಧಿಕಾರಿಗಳು ಹೇಗೆ ಶೇ.80ರಷ್ಟು ಬಗರ್ ಹುಕುಂ ಅರ್ಜಿ ವಿಲೇ ಮಾಡಲು ಸಾಧ್ಯವಾಯಿತು?

ಇಲ್ಲಿ ಸಾಧ್ಯವಾಗುವುದಾದರೆ ಬೇರೆ ತಾಲೂಕುಗಳಲ್ಲೂ ಏಕೆ ಸಾಧ್ಯವಿಲ್ಲ? ಎಂದು ಪ್ರಶ್ನೆ ಮಾಡಿದ ಸಚಿವರು ಬಗರ್ ಹುಕುಂ ವಿಚಾರದಲ್ಲಿ ಉತ್ತಮ ಸೇವೆ ಸಲ್ಲಿಸುವ ಕಾಲಮಿತಿಯೊಳಗೆ ಅರ್ಜಿ ವಿಲೇಗೊಳಿಸುವ ಅಧಿಕಾರಿಗಳನ್ನು ಬೆಂಗಳೂರಿಗೆ ಖುದ್ದಾಗಿ ಕರೆದು ಮುಂದಿನ ತಿಂಗಳ ಸಭೆಯಲ್ಲಿ ಪ್ರಶಂಸನಾ ಪತ್ರ ನೀಡಿ ಸನ್ಮಾನಿಸಲಾಗುವುದು” ಎಂದು ಭರವಸೆ ನೀಡಿದರು.

ಶಾಸಕರನ್ನು ಖರೀದಿಸೋಕೇ ಅವರೇನು ಕುದುರೆಯೊ, ಕತ್ತೆಯೋ, ಅಥವಾ ದನಾನೋ? : MLC ಸಿಟಿ ರವಿ ಕಿಡಿ

ಬಾಬಾ ಸಿದ್ದಿಕಿ ಕೊಲೆ ಪ್ರಕರಣ: ಸಾವಿನ ಖಚಿತತೆಗಾಗಿ ಆಸ್ಪತ್ರೆಯ ಹೊರಗೆ 30 ನಿಮಿಷಗಳ ಕಾಲ ಕಾದಿದ್ದ ಶೂಟರ್

Share. Facebook Twitter LinkedIn WhatsApp Email

Related Posts

ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿ ಮಾಡಿ ವಂಚನೆ: ಪ್ರಿಯಕರನ ಮನೆ ಮುಂದೆ ಧರಣಿ ಕುಳಿತ ಮಹಿಳೆ

07/07/2025 8:29 PM1 Min Read

ರಾಜ್ಯದ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿ: ಸಿಇಒಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

07/07/2025 8:00 PM2 Mins Read

ವೈದ್ಯಕೀಯ ಸೀಟು ಕುರಿತಂತೆ KEAಯಿಂದ ಮಹತ್ವದ ಮಾಹಿತಿ

07/07/2025 7:48 PM1 Min Read
Recent News

ವಿಷಕ್ಕೆ ಸಮಾನ.! ಈ ಸಮಸ್ಯೆ ಇರುವವರು ಮರೆತು ಕೂಡ ‘ಬೀಟ್ರೂಟ್’ ತಿನ್ನಬಾರದು.!

07/07/2025 10:09 PM

ನಿಮ್ಮ ಮಕ್ಕಳು ಊಟ ಮಾಡುವುಕ್ಕೆ ಹಟ ಮಾಡ್ತಿದ್ದಾರಾ.? ಈ ಬಾರಿ ಇದನ್ನ ಟ್ರೈ ಮಾಡಿ!

07/07/2025 9:42 PM

‘YouTube’ ಹೊಸ ರೂಲ್ಸ್ ; ಇನ್ಮುಂದೆ ‘AI- ರಚಿತ, ಪುನರಾವರ್ತಿತ ವಿಷಯ’ ಹಾಕಿದ್ರೆ ‘ಹಣ’ ಸಿಗೋದಿಲ್ಲ

07/07/2025 9:33 PM

‘ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್’ನ್ನ ಹೊಸ ರೂಪದಲ್ಲಿ ವ್ಯಾಖ್ಯಾನಿಸಲಾಗುವುದು’ : ಬ್ರೆಜಿಲ್ ಸಭೆಯಲ್ಲಿ ಪ್ರಧಾನಿ ಮೋದಿ

07/07/2025 8:56 PM
State News
KARNATAKA

ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿ ಮಾಡಿ ವಂಚನೆ: ಪ್ರಿಯಕರನ ಮನೆ ಮುಂದೆ ಧರಣಿ ಕುಳಿತ ಮಹಿಳೆ

By kannadanewsnow0907/07/2025 8:29 PM KARNATAKA 1 Min Read

ಕೋಲಾರ: ವಿವಾಹಿತೆಯನ್ನು ಪ್ರೀತಿಸಿ ಮದುವೆ ಆಗುವುದಾಗಿ ನಂಬಿಸಿ ವಂಚನೆ ಮಾಡಿದ್ದಲ್ಲದೇ, ಗರ್ಭಿಣಿಯಾಗುತ್ತಿದ್ದಂತೆ ಮದುವೆಯಾಗಲು ನಿರಾಕರಿಸಿದಂತ ಪ್ರಿಯಕರನ ಮನೆ ಮುಂದೆ ಮಹಿಳೆ…

ರಾಜ್ಯದ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿ: ಸಿಇಒಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

07/07/2025 8:00 PM

ವೈದ್ಯಕೀಯ ಸೀಟು ಕುರಿತಂತೆ KEAಯಿಂದ ಮಹತ್ವದ ಮಾಹಿತಿ

07/07/2025 7:48 PM

BREAKING: ರಾಜ್ಯದಲ್ಲಿನ ಎಲ್ಲ ಹಠಾತ್ ಸಾವುಗಳನ್ನು ಅಧಿಸೂಚಿತ ಖಾಯಿಲೆಯೆಂದು ಪರಿಗಣಿಸಲು ನಿರ್ಧಾರ: ಸಚಿವ ದಿನೇಶ್ ಗುಂಡೂರಾವ್

07/07/2025 7:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.