Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

EXCLUSIVE: ಬೆಂಗಳೂರು ಕಾಲ್ತುಳಿತ ದುರಂತ: ವಿಧಾನಸೌಧದ ಮುಂದಿನ ಕಾರ್ಯಕ್ರಮ ರದ್ದುಗೊಳಿಸಲು ಮುಂದಾಗಿದ್ದ ಸಿಎಂ

07/06/2025 4:54 PM

“ತಪ್ಪು ಮಾಹಿತಿ ಹರಡಬೇಡಿ” : ‘ರಾಹುಲ್ ಗಾಂಧಿ’ ವಿರುದ್ಧ ಚುನಾವಣಾ ಆಯೋಗ ತೀವ್ರ ವಾಗ್ದಾಳಿ

07/06/2025 4:50 PM

ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

07/06/2025 4:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಮುಖ್ಯಮಂತ್ರಿ ಒಂದು ಲಕ್ಷ ಮನೆ ಯೋಜನೆ ಫಲಾನುಭವಿಗಳಿಗೆ ಸಿಹಿಸುದ್ದಿ
KARNATAKA

ರಾಜ್ಯದ ಮುಖ್ಯಮಂತ್ರಿ ಒಂದು ಲಕ್ಷ ಮನೆ ಯೋಜನೆ ಫಲಾನುಭವಿಗಳಿಗೆ ಸಿಹಿಸುದ್ದಿ

By kannadanewsnow0925/07/2024 6:26 PM

ಬೆಂಗಳೂರು: ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಆರ್ಥಿಕ ಹೊರೆ ತಗ್ಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ.

ಬಿಜೆಪಿ ಸರ್ಕಾರ ದಲ್ಲಿ ಯೂನಿಟ್ ವೆಚ್ಚ ಹೆಚ್ಚಳ ನಿರ್ಧಾರ ದಿಂದ ಆತಂಕ ಗೊಂಡಿದ್ದ 12,153 ಕುಟುಂಬಗಳಿಗೆ ಸಿಹಿ ಸುದ್ದಿ ನೀಡಿದ್ದು, ಪ್ರತಿ ಮನೆಗೆ ಒಂದು ಲಕ್ಷ ರೂ. ನಂತೆ 121 ಕೋಟಿ 53 ಲಕ್ಷ ರೂ.ಸರ್ಕಾರವೇ ಭರಿಸಲು ಒಪ್ಪಿಗೆ ನೀಡಿದ್ದಾರೆ.

ವಸತಿ ಸಚಿವ ಜಮೀರ್ ಅಹಮದ್ ಖಾನ್ ನೇತೃತ್ವದಲ್ಲಿ ಗುರುವಾರ ಸಂಜೆ ವಿಧಾನ ಸೌಧದ ಮುಖ್ಯಮಂತ್ರಿ ಯವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಗರದ ಕಾಂಗ್ರೆಸ್ ಮತ್ತು ಬಿಜೆಪಿ ಶಾಸಕರು ಮುಖ್ಯಮಂತ್ರಿ ಯವರ ಮನವೊಲಿಸುವಲ್ಲಿ ಯಶಸ್ವಿಯಾದರು.

ಮುಖ್ಯಮಂತ್ರಿ ಯವರ ಒಂದು ಲಕ್ಷ ಮನೆ ಯೋಜನೆ ಗೆ 2017, ಸೆಪ್ಟೆಂಬರ್ 23 ರಂದು ಅಧಿಸೂಚನೆ ಹೊರಡಿಸಿ ಘಟಕ ವೆಚ್ಚ 6 ಲಕ್ಷ ರೂ. ನಿಗದಿ ಮಾಡಲಾಗಿತ್ತು. ಕೇಂದ್ರ ಸರ್ಕಾರ 1.50 ಲಕ್ಷ, ರಾಜ್ಯ ಸರ್ಕಾರ ಸಾಮಾನ್ಯ ವರ್ಗಕ್ಕೆ 1.20 ಲಕ್ಷ, ಎಸ್ ಟಿ -ಎಸ್ ಸಿ ವರ್ಗಕ್ಕೆ 2 ಲಕ್ಷ ರೂ. ನಿಗದಿಯಾಗಿತ್ತು.

ನಂತರ ಬಿ. ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಬಿಜೆಪಿ ಸರ್ಕಾರದಲ್ಲಿ ಘಟಕ ವೆಚ್ಚ 10 ಲಕ್ಷದ 60 ಸಾವಿರ ರೂ. ನಿಗದಿ ಮಾಡಲಾಗಿತ್ತು. ಇದಕ್ಕೆ 60 ಸಾವಿರ ರೂ. ಜಿಎಸ್ ಟಿ ಸೇರಿ 11 ಲಕ್ಷದ 20 ಸಾವಿರ ರೂ. ಆಗಿತ್ತು. ಇಷ್ಟು ಮೊತ್ತ ಭರಿಸಲು ಕಷ್ಟ ಎಂದು ಫಲಾನುಭವಿಗಳು ಸಚಿವರ ಬಳಿ ಮನವಿ ಮಾಡಿಕೊಂಡಿದ್ದರು.

ಇದೀಗ ಸರ್ಕಾರದ ಮಹತ್ವದ ತೀರ್ಮಾನ ದಿಂದ ಸಬ್ಸಿಡಿ ಹೊರತು ಪಡಿಸಿ ಸಾಮಾನ್ಯ ವರ್ಗ 7.50 ಲಕ್ಷ, ಎಸ್ ಸಿ -ಎಸ್ ಟಿ ವರ್ಗ 6.70 ಲಕ್ಷರೂ.ಕಟ್ಟಬೇಕಾಗುತ್ತದೆ. ಇದರಿಂದ 12,153 ಕುಟುಂಬ ಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಂತಾಗಿದೆ. ಈ ಹಿಂದೆ ಕ್ರಮವಾಗಿ 8.50 ಲಕ್ಷ ಹಾಗೂ 7.70 ಲಕ್ಷ ರೂ. ಕಟ್ಟಬೇಕಿತ್ತು.

ಈ ತೀರ್ಮಾನ 2020 ರಲ್ಲಿ ಘಟಕ ವೆಚ್ಚ ಹೆಚ್ಚಳ ತೀರ್ಮಾನದ ಅಧಿಸೂಚನೆ ಹೊರಡಿಸಿದ ಸಂದರ್ಭದಲ್ಲಿ ಪ್ರಾರಂಭಿಕ ಠೇವಣಿ ಮೊತ್ತ ಪಾವತಿ ಮಾಡಿರುವ 12,153 ಮಂದಿಗೆ ಮಾತ್ರ ಅನ್ವಯವಾಗಲಿದೆ. ಪ್ರಾರಂಭಿಕ ಠೇವಣಿ ಮೊತ್ತ ಪಾವತಿ ಮಾಡದ ಆನ್ ಲೈನ್ ಅರ್ಜಿ ಗಳಿಗೆ ಅನ್ವಯ ಆಗದು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಸ್ಪಷ್ಟ ಪಡಿಸಿದ್ದಾರೆ.

ಇಂದಿನ ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ, ಶಾಸಕರಾದ ಎಸ್. ಟಿ. ಸೋಮಶೇಖರ್, ಎಸ್. ಆರ್. ವಿಶ್ವನಾಥ್, ಮಂಜುಳಾ ಲಿಂಬಾವಳಿ, ಎಂ. ಕೃಷ್ಣಪ್ಪ, ಮುನಿರಾಜು,ಶಿವಣ್ಣ ಪಾಲ್ಗೊಂಡಿದ್ದರು.

ಫಲಾನುಭವಿಗಳು ಸರ್ಕಾರ ನಿಗದಿಪಡಿಸಿದ ಘಟಕ ವೆಚ್ಚ ತಮಗೆ ಹೊರೆ ಯಾಗುತ್ತಿರುವ ಬಗ್ಗೆ ಸಚಿವ ಜಮೀರ್ ಅಹಮದ್ ಖಾನ್ ಅವರಲ್ಲಿ ಹಲವಾರು ಬಾರಿ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಈ ಸಂಬಂಧ ಶಾಸಕರ ಜತೆ ಮೂರು ಸಭೆ ನಡೆಸಿದ್ದ ಸಚಿವರು ಅಂತಿಮ ವಾಗಿ ಮುಖ್ಯಮಂತ್ರಿ ಯವರ ಬಳಿ ಶಾಸಕರನ್ನು ಕರೆದೊಯ್ದು ಸಮಸ್ಯೆಗೆ ಪರಿಹಾರ ಕಂಡು ಕೊಳ್ಳುವಲ್ಲಿಯಶಸ್ವಿಯಾಗಿದ್ದಾರೆ.

ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ರದ್ದು / ಮಾರ್ಗ ಬದಲಾವಣೆ | South Western Railway

ಇನ್ಮುಂದೆ ನಿಮ್ಮ ಭೂಮಿಗೂ ಸಿಗುತ್ತೆ ʻಆಧಾರ್‌ʼ : ʻಭೂ ಆಧಾರ್‌ʼ ಕುರಿತು ಇಲ್ಲಿದೆ ಮಾಹಿತಿ | Bhu Aadhar yojana

Share. Facebook Twitter LinkedIn WhatsApp Email

Related Posts

EXCLUSIVE: ಬೆಂಗಳೂರು ಕಾಲ್ತುಳಿತ ದುರಂತ: ವಿಧಾನಸೌಧದ ಮುಂದಿನ ಕಾರ್ಯಕ್ರಮ ರದ್ದುಗೊಳಿಸಲು ಮುಂದಾಗಿದ್ದ ಸಿಎಂ

07/06/2025 4:54 PM2 Mins Read

ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

07/06/2025 4:42 PM1 Min Read

RCB ಆಟಗಾರರನ್ನು ಸ್ವಾಗತಿಸಲು ನೀವ್ಯಾಕ್ರೀ ಹೋಗಿದ್ರಿ?: ಡಿಕೆಶಿ ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ಧರಾಮಯ್ಯ

07/06/2025 4:35 PM1 Min Read
Recent News

EXCLUSIVE: ಬೆಂಗಳೂರು ಕಾಲ್ತುಳಿತ ದುರಂತ: ವಿಧಾನಸೌಧದ ಮುಂದಿನ ಕಾರ್ಯಕ್ರಮ ರದ್ದುಗೊಳಿಸಲು ಮುಂದಾಗಿದ್ದ ಸಿಎಂ

07/06/2025 4:54 PM

“ತಪ್ಪು ಮಾಹಿತಿ ಹರಡಬೇಡಿ” : ‘ರಾಹುಲ್ ಗಾಂಧಿ’ ವಿರುದ್ಧ ಚುನಾವಣಾ ಆಯೋಗ ತೀವ್ರ ವಾಗ್ದಾಳಿ

07/06/2025 4:50 PM

ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

07/06/2025 4:42 PM

RCB ಆಟಗಾರರನ್ನು ಸ್ವಾಗತಿಸಲು ನೀವ್ಯಾಕ್ರೀ ಹೋಗಿದ್ರಿ?: ಡಿಕೆಶಿ ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ಧರಾಮಯ್ಯ

07/06/2025 4:35 PM
State News
KARNATAKA

EXCLUSIVE: ಬೆಂಗಳೂರು ಕಾಲ್ತುಳಿತ ದುರಂತ: ವಿಧಾನಸೌಧದ ಮುಂದಿನ ಕಾರ್ಯಕ್ರಮ ರದ್ದುಗೊಳಿಸಲು ಮುಂದಾಗಿದ್ದ ಸಿಎಂ

By kannadanewsnow0907/06/2025 4:54 PM KARNATAKA 2 Mins Read

ಬೆಂಗಳೂರು: ಆರ್ ಸಿ ಬಿ ವಿಜಯೋತ್ಸವ ಕಾರ್ಯಕ್ರಮದ ವೇಳೆಯಲ್ಲಿ ಕಾಲ್ತುಳಿತ ದುರಂತ ಉಂಟಾಗಿ 11 ಮಂದಿ ಸಾವನ್ನಪ್ಪಿದ್ದಾರೆ. ಇದಕ್ಕೂ ಮುನ್ನ…

ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

07/06/2025 4:42 PM

RCB ಆಟಗಾರರನ್ನು ಸ್ವಾಗತಿಸಲು ನೀವ್ಯಾಕ್ರೀ ಹೋಗಿದ್ರಿ?: ಡಿಕೆಶಿ ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ಧರಾಮಯ್ಯ

07/06/2025 4:35 PM

ಬಳ್ಳಾರಿ ಜಿಲ್ಲೆಯಲ್ಲಿ ಹೆಲ್ಮೆಟ್ ಬಳಕೆ ಕಡ್ಡಾಯ, ವಿನಾಯಿತಿ ಇಲ್ಲ: ಎಸ್ಪಿ ಡಾ.ಶೋಭಾರಾಣಿ

07/06/2025 4:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.