Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದ ಸರ್ಕಾರಿ ಕಚೇರಿಗಳಿಗೆ ‘ಹಿರಿಯ ನಾಗರಿಕರು’ ಭೇಟಿ ನೀಡಿದ ವೇಳೆ ಗೌರವದಿಂದ ವರ್ತಿಸಿ : ಸರ್ಕಾರದಿಂದ ಮಹತ್ವದ ಆದೇಶ

02/08/2025 1:58 PM

BREAKING : ಧರ್ಮಸ್ಥಳ ಪ್ರಕರಣ : ಸಿಎಸ್ ಶಾಲಿನಿ ರಜನೀಶ್ ಭೇಟಿಯಾದ ‘SIT’ ಮುಖ್ಯಸ್ಥ ಪ್ರಣವ್ ಮೋಹಂತಿ

02/08/2025 1:52 PM

BIG NEWS : ಆ.5 ರಂದು ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ : ಕೊನೆಗೂ ಸಾರಿಗೆ ನೌಕರರ ಜೊತೆ ಸಭೆ ನಡೆಸಲು ಸಿಎಂ ನಿರ್ಧಾರ

02/08/2025 1:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘BMTC ನೌಕರ’ರಿಗೆ ಗುಡ್ ನ್ಯೂಸ್: 1.50 ಕೋಟಿ ‘ಅಪಘಾತ ವಿಮಾ ಪರಿಹಾರ’ಕ್ಕೆ ಸರ್ಕಾರ ಒಡಂಬಡಿಕೆ
KARNATAKA

‘BMTC ನೌಕರ’ರಿಗೆ ಗುಡ್ ನ್ಯೂಸ್: 1.50 ಕೋಟಿ ‘ಅಪಘಾತ ವಿಮಾ ಪರಿಹಾರ’ಕ್ಕೆ ಸರ್ಕಾರ ಒಡಂಬಡಿಕೆ

By kannadanewsnow0901/02/2025 3:06 PM

ಬೆಂಗಳೂರು: ಬಿಎಂಟಿಸಿ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ಕೆನರಾ ಬ್ಯಾಂಕ್ ನೊಂದಿಗೆ ರೂ.1.5೦ಕೋಟಿ ಅಪಘಾತ ಪರಿಹಾರ ವಿಮಾ ಯೋಜನೆಯ ಒಡಂಬಡಿಕೆಯನ್ನು ರಾಜ್ಯ ಸರ್ಕಾರ ಮಾಡಿಕೊಂಡಿದೆ. ಇದಲ್ಲದೇ ಮೃತಾವಲಂಬಿತರಿಗೆ ರೂ.1 ಕೋಟಿ ವಿಮಾ ಪರಿಹಾರ ಮೊತ್ತದ ಚೆಕ್ ವಿತರಣೆಯನ್ನು ಮಾಡಲಾಯಿತು.

ಬೆಂ.ಮ.ಸಾ.ಸಂಸ್ಥೆಯು ಒಟ್ಟು 51 ಘಟಕಗಳನ್ನು ಹೊಂದಿದೆ. ಪ್ರತಿದಿನ 5861 ಅನುಸೂಚಿಗಳಿಂದ 61536 ಸುತ್ತುವಳಿಗಳನ್ನು 12.04 ಲಕ್ಷ ಕಿ.ಮೀ.ಗಳಲ್ಲಿ ಆಚರಣೆಗೊಳಿಸಲಾಗುತ್ತಿದೆ. ಪ್ರತಿ ದಿನ ಸರಾಸರಿ 40 ಲಕ್ಷ ಪ್ರಯಾಣಿಕರು ಸಂಸ್ಥೆಯ ಸಾರಿಗೆಗಳ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರೆ. ನಗರದಲ್ಲಿ ವಾಯುಮಾಲಿನ್ಯ ತಗ್ಗಿಸುವ ನಿಟ್ಟಿನಲ್ಲಿ ಪ್ರಸ್ತುತ 1279 ಎಲೆಕ್ನಿಕ್ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ ಹಾಗೂ ಮುಂದಿನ ದಿನಗಳಲ್ಲಿ 352 ಎಲೆಕ್ನಿಕ್ ಬಸ್ಸುಗಳನ್ನು ಸೇರ್ಪಡೆಗೊಳಿಸಲು ಯೋಜಿಸಲಾಗಿದೆ.

ಪ್ರಸ್ತುತ ಒಟ್ಟು 6158 ವಾಹನಗಳನ್ನು ಹೊಂದಿದ್ದು, ಪರಿಸರಸ್ನೇಹಿ ಹಾಗೂ ವಾಯುಮಾಲಿನ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಎಲೆಕ್ನಿಕ್ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ಕೆನರಾ ಬ್ಯಾಂಕ್ ವೇತನ ಖಾತೆ ಯೋಜನೆ

ಸಂಸ್ಥೆಯು ಕೆನರಾ ಬ್ಯಾಂಕ್‌ನೊಂದಿಗೆ ಮೂರು ವರ್ಷಗಳ ಅವಧಿಗೆ ಒಡಂಬಡಿಕೆಯನ್ನು ಮಾಡಿಕೊಂಡಿದ್ದು, ಈ ಒಡಂಬಡಿಕೆಯನ್ವಯ ಬ್ಯಾಂಕ್ ನಲ್ಲಿ ವೇತನ ಖಾತೆ ಹೊಂದಿರುವ ಅಧಿಕಾರಿ/ನೌಕರರು ಅಪಘಾತ (ಕರ್ತವ್ಯ ನಿರತ ಅಥವಾ ವೈಯಕ್ತಿಕ ಅಪಘಾತ ಸೇರಿದಂತೆ) ಮೃತಪಟ್ಟಲ್ಲಿ, ಅವರ ನಾಮನಿರ್ದೇಶಿತರಿಗೆ ರೂ. 1.00 ಕೋಟಿ ವಿಮಾ ಪರಿಹಾರ ಮೊತ್ತವನ್ನು ಪಾವತಿಸುವ ಯೋಜನೆಯನ್ನು ಜಾರಿಗೆ ತರಲಾಗಿದೆ. ಅದರಂತೆ, ಸಂಸ್ಥೆಯು 50 ಲಕ್ಷ ರೂಪಾಯಿಗಳನ್ನು ಸಹ ನೀಡುತ್ತಿದ್ದು, ಒಟ್ಟು 1.50 ಲಕ್ಷ ರೂಪಾಯಿಗಳನ್ನು ಮೃತ ಸಿಬ್ಬಂದಿಗಳ ಕುಟುಂಬಕ್ಕೆ ನೀಡಲಾಗುವುದು. ದಿನಾಂಕ:01.02.2025 ರಂದು 4 ಜನ ಮೃತಾವಲಂಬಿತರಿಗೆ ಈ ದಿನ ರೂ.1 ಕೋಟಿ ಚೆಕ್ ವಿತರಿಸಲಾಯಿತು.

5 ಜನ ಮೃತಾವಲಂಬಿತರಿಗೆ ಸಂಸ್ಥೆಯ ಗುಂಪು ವಿಮಾ ಯೋಜನೆಯಡಿಯಲ್ಲಿ ತಲಾ ರೂ.10.00 ಲಕ್ಷಗಳನ್ನು ಈ ದಿನ ವಿತರಿಸುತ್ತಿದ್ದೇವೆ. ಸಂಸ್ಥೆಯ ಗುಂಪು ವಿಮಾ ಯೋಜನೆಯ ಮಾಹಿತಿ

* ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಜಾರಿಯಲ್ಲಿದ್ದ ಗುಂಪು ವಿಮಾ ಯೋಜನೆಯನ್ನು ಪರಿಷ್ಕರಿಸಿ, ಅಧಿಕಾರಿ/ನೌಕರರ ವಂತಿಗೆ ರೂ.350/- ಮತ್ತು ಸಂಸ್ಥೆಯ ವಂತಿಗೆ 150/- ಒಟ್ಟು ರೂ. 500/-ವಂತಿಗೆಯೊಂದಿಗೆ ಅಪಘಾತದಿಂದ (ಕರ್ತವ್ಯ ನಿರತ ಅಥವಾ ವೈಯಕ್ತಿಕ ಅಪಘಾತ ಸೇರಿದಂತೆ) ಮೃತಪಟ್ಟಲ್ಲಿ ರೂ.50.00 ಲಕ್ಷ ಮತ್ತು ಸ್ವಾಭಾವಿಕ ಹಾಗೂ ಇನ್ನಿತರೆ ಕಾರಣಗಳಿಂದ ಮೃತಪಟ್ಟಲ್ಲಿ, ರೂ.10.00 ಲಕ್ಷ ವಿಮಾ ಪರಿಹಾರ ಮೊತ್ತವನ್ನು ಪಾವತಿಸುವ ಯೋಜನೆಯನ್ನು ದಿನಾಂಕ:19.02.2024 ರಿಂದ ಜಾರಿಗೆ ತರಲಾಗಿರುತ್ತದೆ.

*ದಿನಾಂಕ:19.02.2024 ರಿಂದ ಜನವರಿ-2025 ರವರೆಗೆ 86 ನೌಕರರುಗಳು ಮೃತಪಟ್ಟಿದ್ದು, ಅದರಲ್ಲಿ ಸ್ವಾಭಾವಿಕ ಹಾಗೂ ಇನ್ನಿತರೆ ಕಾರಣಗಳಿಂದ ಒಟ್ಟು 77 ನೌಕರರು ಮೃತಪಟ್ಟಿದ್ದು ಅದರಲ್ಲಿ 46 ಮೃತ ನೌಕರರುಗಳ ನಾಮನಿರ್ದೇಶಿತರಿಗೆ ಸಂಸ್ಥೆಯ ಗುಂಪು ವಿಮಾ ಯೋಜನೆಯಡಿಯಲ್ಲಿ ತಲಾ ರೂ.10.00 ಲಕ್ಷದಂತೆ ರೂ.4,60,00,000/- ಗಳನ್ನು ಪಾವತಿಸಲಾಗಿರುತ್ತದೆ. ಉಳಿದ 31 ಪ್ರಕರಣಗಳು ದಾಖಲಾತಿ ಪರಿಶೀಲನಾ ಹಂತದಲ್ಲಿರುತ್ತದೆ.

ಬೆಂ.ಮ.ಸಾ.ಸಂಸ್ಥೆಯು ಕೈಗೊಂಡಿರುವ ಕಾರ್ಮಿಕ ಕಲ್ಯಾಣ ಕಾರ್ಯಗಳು

> 45 ವರ್ಷ ಮೇಲ್ಪಟ್ಟ ನೌಕರರು ಮತ್ತು ಅಧಿಕಾರಿಗಳ ಹೃದಯ ಸಂಬಂಧಿ ತಪಾಸಣೆಗಳನ್ನು ನಡೆಸಲು ಶ್ರೀ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯೊಂದಿಗೆ 05 ವರ್ಷಗಳ ಒಪ್ಪಂದವನ್ನು ಮಾಡಿಕೊಳ್ಳಲಾಗಿರುತ್ತದೆ.

> ಸಂಸ್ಥೆಯು ಇಲ್ಲಿಯವರೆಗೆ 12751 ಉದ್ಯೋಗಿಗಳ ಹೃದಯ ಆರೋಗ್ಯ ತಪಾಸಣೆಗಾಗಿ ಪ್ರತಿಯೊಬ್ಬರಿಗೂ ರೂ.1200/- ರಂತೆ ಒಟ್ಟು ರೂ.1,53,01,200/-ಗಳನ್ನು ಶ್ರೀ ಜಯದೇವ ಆಸ್ಪತ್ರೆಗೆ ಪಾವತಿಸಲಾಗಿದೆ.

> ಪ್ರತಿ ವಾರ ಶನಿವಾರ ಮತ್ತು ಭಾನುವಾರದಂದು ಅಧಿಕಾರಿ/ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ವಾಯು ಮತ್ತು ಸ್ಟೀಪ್ ಕ್ಲಿನಿಕ್‌ನಲ್ಲಿ ಶ್ವಾಸಕೋಶಕ್ಕೆ ಸಂಬಂಧಿಸಿದಂತೆ ಉಚಿತವಾಗಿ ಇಲ್ಲಿಯವರೆವಿಗೂ 1853 ನೌಕರರು ತಪಾಸಣೆಗೆ ಒಳಪಟ್ಟಿರುತ್ತಾರೆ. ಸಮಸ್ಯೆ ಇದ್ದವರಿಗೆ ಚಿಕಿತ್ಸೆಯನ್ನು ತೆಗೆದುಕೊಂಡಿದ್ದಾರೆ.

> 2023-24 ನೇ ಸಾಲಿನಲ್ಲಿ ಸಂಸ್ಥೆಯ ಎಲ್ಲಾ ಘಟಕಗಳು/ಕಾರ್ಯಾಗಾರಗಳಲ್ಲಿ 117 ಉಚಿತ ವೈದ್ಯಕೀಯ ಶಿಬಿರಗಳನ್ನು ಆಯೋಜಿಸಲಾಗಿದೆ.

> ಬೆಂ.ಮ.ಸಾ.ಸಂಸ್ಥೆಗೆ ಕೇಂದ್ರ ಸರ್ಕಾರದ ಪ್ರತಿಷ್ಠಿತ UMI ಮತ್ತು PRCI ನಂತಹ ಪ್ರತಿಷ್ಠಿತ ಪ್ರಶಸ್ತಿಗಳು ಬಂದಿದ್ದು, ಸಂಸ್ಥೆಗೆ ಒಟ್ಟು 144 ಪ್ರಶಸ್ತಿಗಳು ಲಭಿಸಿವೆ.

> ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ 2500 ನಿರ್ವಾಹಕ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿಗೊಳಿಸಲು ಕ್ರಮ ಜರುಗಿಸಲಾಗಿದ್ದು, ಮೊದಲ ಹಂತದಲ್ಲಿ 371(ಜೆ) ಮೀಸಲಾತಿಯಡಿಯಲ್ಲಿ ಆಯ್ಕೆಗೊಂಡ ಅರ್ಹ ಅಭ್ಯರ್ಥಿಗಳಿಗೂ ಈಗಾಗಲೆ ಭರ್ತಿ ಮಾಡಿಕೊಂಡಿದ್ದು, ಇನ್ನುಳಿದಂತೆ ಉಳಿಕೆ ಮೂಲ ವೃಂದದ ಹುದ್ದೆಗಳಿಗೆ 2286 ಅರ್ಹ ಅಭ್ಯರ್ಥಿಗಳನ್ನು ಆಯ್ಕೆಗೊಳಿಸಿ, ಈಗಾಗಲೆ ಸಂಭವನೀಯ ಆಯ್ಕೆ ಪಟ್ಟಿಯನ್ನು ಸಂಸ್ಥೆಯ ವೆಬ್‌ಸೈಟ್‌ ನಲ್ಲಿ ಬಿತ್ತರಿಸಲಾಗಿದೆ.

> ಸಂಸ್ಥೆಯಲ್ಲಿನ ఖాలి ಹುದ್ದೆಗಳ ಲಭ್ಯತೆಗನುಗುಣವಾಗಿ ಮೃತಾವಲಂಬಿತರುಗಳಿಗೆ ಅನುಕಂಪದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಉದ್ದೇಶಿಸಿ ಇಲ್ಲಿಯವರೆಗೆ 310 ಮೃತಾವಲಂಬಿತರುಗಳಿಗೆ ನೇಮಕಾತಿ ಆದೇಶವನ್ನು ನೀಡಿದ್ದೇವೆ.

2025-26ನೇ ಸಾಲಿನ ಬಜೆಟ್ ನಿರಾಶದಾಯಕವಾದ ಬಜೆಟ್, ಕರ್ನಾಟಕಕ್ಕೆ ಅನ್ಯಾಯ: ಸಚಿವ ಶಿವರಾಜ್ ತಂಡರಗಿ

BREAKING : `ಕ್ಯಾನ್ಸರ್’ ಸೇರಿ 36 ಜೀವರಕ್ಷಕ ಔಷಧಿಗಳಿಗೆ ಕಸ್ಟಮ್ಸ್ ಸುಂಕದಿಂದ ವಿನಾಯಿತಿ : ನಿರ್ಮಲಾ ಸೀತಾರಾಮನ್ ಘೋಷಣೆ.!

BREAKING : ಎಲೆಕ್ಟ್ರಿಕ್ ಕಾರುಗಳ ಬೆಲೆ ಇಳಿಕೆ : ಕೇಂದ್ರ ಸರ್ಕಾರದಿಂದ `ಆಟೋಮೊಬೈಲ್ ವಲಯ’ಕ್ಕೆ ವಿಶೇಷ ಘೋಷಣೆ.!

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಸರ್ಕಾರಿ ಕಚೇರಿಗಳಿಗೆ ‘ಹಿರಿಯ ನಾಗರಿಕರು’ ಭೇಟಿ ನೀಡಿದ ವೇಳೆ ಗೌರವದಿಂದ ವರ್ತಿಸಿ : ಸರ್ಕಾರದಿಂದ ಮಹತ್ವದ ಆದೇಶ

02/08/2025 1:58 PM1 Min Read

BREAKING : ಧರ್ಮಸ್ಥಳ ಪ್ರಕರಣ : ಸಿಎಸ್ ಶಾಲಿನಿ ರಜನೀಶ್ ಭೇಟಿಯಾದ ‘SIT’ ಮುಖ್ಯಸ್ಥ ಪ್ರಣವ್ ಮೋಹಂತಿ

02/08/2025 1:52 PM1 Min Read

BIG NEWS : ಆ.5 ರಂದು ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ : ಕೊನೆಗೂ ಸಾರಿಗೆ ನೌಕರರ ಜೊತೆ ಸಭೆ ನಡೆಸಲು ಸಿಎಂ ನಿರ್ಧಾರ

02/08/2025 1:43 PM1 Min Read
Recent News

BIG NEWS : ರಾಜ್ಯದ ಸರ್ಕಾರಿ ಕಚೇರಿಗಳಿಗೆ ‘ಹಿರಿಯ ನಾಗರಿಕರು’ ಭೇಟಿ ನೀಡಿದ ವೇಳೆ ಗೌರವದಿಂದ ವರ್ತಿಸಿ : ಸರ್ಕಾರದಿಂದ ಮಹತ್ವದ ಆದೇಶ

02/08/2025 1:58 PM

BREAKING : ಧರ್ಮಸ್ಥಳ ಪ್ರಕರಣ : ಸಿಎಸ್ ಶಾಲಿನಿ ರಜನೀಶ್ ಭೇಟಿಯಾದ ‘SIT’ ಮುಖ್ಯಸ್ಥ ಪ್ರಣವ್ ಮೋಹಂತಿ

02/08/2025 1:52 PM

BIG NEWS : ಆ.5 ರಂದು ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ : ಕೊನೆಗೂ ಸಾರಿಗೆ ನೌಕರರ ಜೊತೆ ಸಭೆ ನಡೆಸಲು ಸಿಎಂ ನಿರ್ಧಾರ

02/08/2025 1:43 PM

ಅಗಲಿದ ಸ್ನೇಹಿತನ ಕೊನೆಯ ಆಸೆಯನ್ನು ಈಡೇರಿಸಲು ಅಂತ್ಯಕ್ರಿಯೆಯಲ್ಲಿ ನೃತ್ಯ ಮಾಡಿದ ವ್ಯಕ್ತಿ | Watch video

02/08/2025 1:34 PM
State News
KARNATAKA

BIG NEWS : ರಾಜ್ಯದ ಸರ್ಕಾರಿ ಕಚೇರಿಗಳಿಗೆ ‘ಹಿರಿಯ ನಾಗರಿಕರು’ ಭೇಟಿ ನೀಡಿದ ವೇಳೆ ಗೌರವದಿಂದ ವರ್ತಿಸಿ : ಸರ್ಕಾರದಿಂದ ಮಹತ್ವದ ಆದೇಶ

By kannadanewsnow0502/08/2025 1:58 PM KARNATAKA 1 Min Read

ಬೆಂಗಳೂರು : ಹಿರಿಯ ನಾಗರಿಕರು ಸರ್ಕಾರಿ ಕಛೇರಿಗಳಿಗೆ ತಮ್ಮ ಕೆಲಸದ ನಿಮಿತ್ತ ಭೇಟಿ ನೀಡಿದಾಗ ಅವರೊಂದಿಗೆ ಗೌರವದಿಂದ ವರ್ತಿಸಿ, ಆಸನದ…

BREAKING : ಧರ್ಮಸ್ಥಳ ಪ್ರಕರಣ : ಸಿಎಸ್ ಶಾಲಿನಿ ರಜನೀಶ್ ಭೇಟಿಯಾದ ‘SIT’ ಮುಖ್ಯಸ್ಥ ಪ್ರಣವ್ ಮೋಹಂತಿ

02/08/2025 1:52 PM

BIG NEWS : ಆ.5 ರಂದು ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ : ಕೊನೆಗೂ ಸಾರಿಗೆ ನೌಕರರ ಜೊತೆ ಸಭೆ ನಡೆಸಲು ಸಿಎಂ ನಿರ್ಧಾರ

02/08/2025 1:43 PM

BIG NEWS : ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಕೇಸ್ : 9ನೇ ಪಾಯಿಂಟ್ ನಲ್ಲೂ ಸಿಗದ ಯಾವುದೇ ಕುರುಹು!

02/08/2025 1:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.