ಬೆಂಗಳೂರು : ರಾಜ್ಯ ಸರ್ಕಾರವು ಕ್ಯಾನ್ಸರ್ ರೋಗಿಗಳಿಗೆ ಸಿಹಿಸುದ್ದಿ ನೀಡಿದ್ದು, ಮುಂದಿನ ತಿಂಗಳಿನಿಂದ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಕ್ಯಾನ್ಸರ್ ಗೆ ನೀಡುವ ಕಿಮೋಥೆರಪಿ ಡೇ ಕೇರ್ ಸೆಂಟರ್ ಪ್ರಾರಂಭಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವರು, ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಸೆಪ್ಟೆಂಬರ್ ನಿಂದ ಕ್ಯಾನ್ಸರ್ ಗೆ ನೀಡುವ ಕಿಮೋತಥೆರಪಿ ಡೇ ಕೇರ್ ಸೆಂಟರ್ ಆರಂಭಿಸಲಾಗುವುದು. ಕಿಮೋಥೆರಪಿಗೆ ಸಂಬಂಧಿಸಿದಂತೆ ದೊಡ್ಡ ಆಸ್ಪತ್ರೆಗೆ ತೆರಳವುದನ್ನು ತಪ್ಪಿಸಲು ಮುಂದಿನ ತಿಂಗಳಿನಿಂದ ಜಿಲ್ಲಾ ಆಸ್ಪತ್ರೆಗಳಲ್ಲಿಯೇ ಕಿಮೋಥೆರಪಿ ಡೇ ಕೇರ್ ಸೆಂಟರ್ ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ಅಪಘಾತಕ್ಕೆ ಒಳಗಾಗುವವರಿಗೆ ತುರ್ತು ಆರೋಗ್ಯ ಸೇವೆ ಒದಗಿಸಲು ಪ್ರತ್ಯೇಕ ಆಂಬುಲೆನ್ಸ್ ಸೇವೆಯನ್ನು ಶೀಘ್ರದಲ್ಲೆ ಪ್ರಾರಂಭಿಸಲಾಗುವುದು. ಈ ಸಂಬಂದ 60-70 ಹಾಟ್ ಸ್ಪಾಟ್ ಗುರುತಿಸಲಾಗಿದೆ ಎಂದು ಹೇಳಿದ್ದಾರೆ.