Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

ನೈಸರ್ಗಿಕ ಪೋಷಕಾಂಶಗಳ ಗಣಿ: ಪ್ರತಿದಿನ ಮೊಳಕೆ ಕಾಳುಗಳನ್ನು ತಿನ್ನುವುದರಿಂದಾಗುವ 7 ಲಾಭಗಳು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪೌರಕಾರ್ಮಿಕರಿಗೆ ಗುಡ್ ನ್ಯೂಸ್ : ಆರೋಗ್ಯ ರಕ್ಷಣೆಗಾಗಿ`ಆರೋಗ್ಯ ವಿಮಾ ಯೋಜನೆ’ ಜಾರಿ.!
KARNATAKA

ಪೌರಕಾರ್ಮಿಕರಿಗೆ ಗುಡ್ ನ್ಯೂಸ್ : ಆರೋಗ್ಯ ರಕ್ಷಣೆಗಾಗಿ`ಆರೋಗ್ಯ ವಿಮಾ ಯೋಜನೆ’ ಜಾರಿ.!

By kannadanewsnow57

ಧೂಳು, ಗಲೀಜಿನಲ್ಲೇ ಕೆಲಸ ಮಾಡುವ ಪೌರ ಕಾರ್ಮಿಕರು ಆರೋಗ್ಯಕ್ಕಾಗಿ ಹೆಚ್ಚು ಖರ್ಚು ಮಾಡಬೇಕಾದ ಸಂದರ್ಭ ಬರುವ ಕಾರಣ ಒಂದು ಅದ್ಭುತ ನಗದುರಹಿತ ಆರೋಗ್ಯ ವಿಮಾ ಯೋಜನೆಯನ್ನು ಜಾರಿಗೆ ತರಲಾಗಿದ್ದು ಎಲ್ಲ ಪೌರ ಕಾರ್ಮಿಕರು ಇದರ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮುರಳಿ ಅಶೋಕ ಸಾಲಪ್ಪ ತಿಳಿಸಿದರು.

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಹಾಗೂ ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಬುಧವಾರ ಪಾಲಿಕೆ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ನೇರಪಾವತಿ ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ, ಅರಿವು ಮೂಡಿಸುವುದು ಹಾಗೂ ಆರೋಗ್ಯ ವಿಮಾ ಕಾರ್ಡ್ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ಆರೋಗ್ಯ ಯೋಜನೆಯಡಿ ಪೌರಕಾರ್ಮಿಕರಿಗೆ ರೂ. 5 ಲಕ್ಷದವರೆಗೆ ಸುಮಾರು ಮೂರು ಸಾವಿರ ಖಾಯಿಲೆಗಳಿಗೆ ಯಾವುದೇ ಆಸ್ಪತ್ರೆಯಲ್ಲಿ ನಗದುರಹಿತ ಚಿಕಿತ್ಸೆ ಪಡೆಯಬಹುದಾಗಿದ್ದು ರಾಜ್ಯದಲ್ಲಿಯೇ ಮೊದಲಿಗೆ ಶಿವಮೊಗ್ಗದಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗುತ್ತಿದೆ ಎಂದು ತಿಳಿಸಿದರು.

. ನಿವೃತ್ತಿ ಹೊಂದುವುದರೊಳಗೆ ಕಾರ್ಮಿಕರು ತಮ್ಮ ಆರೋಗ್ಯ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳಬೇಕು. ಕಣ್ಣಿನ ಪೊರೆ ಸಮಸ್ಯೆ ಇದ್ದಲ್ಲಿ ಇಂದೇ ಶಸ್ತ್ರಚಿಕಿತ್ಸೆ ಪಡೆಯಿರಿ. ನಿವೃತ್ತಿ ನಂತರ ಈ ಸೌಲಭ್ಯ ಪಡೆಯಲು ಬರುವುದಿಲ್ಲವೆಂದು ತಿಳಿಸಿದರು.

ಪೌರಕಾರ್ಮಿಕರಿಗೆ ಆರೋಗ್ಯ ವಿಮೆಯನ್ನು ನೀಡಬೇಕೆಂದು ಮೊದಲು ಪ್ರೇರೇಪಣೆ ನೀಡಿದ್ದು ರಾಹುಲ್ ಗಾಂಧಿಯವರು ಎಂದು ಸ್ಮರಿಸಿದ ಅವರು 1990 ರ ದಶಕದಲ್ಲಿ ಪೌರಕಾರ್ಮಿಕರ ಗುತ್ತಿಗೆ ಪದ್ದತಿ ಬಂದಿತು. ಗುತ್ತಿಗೆ ಮಹಾಮಾರಿ ವಿರುದ್ದ ನಾನು ಪ್ರಶ್ನೆ ಮಾಡಿದ್ದೆ, ಅದಕ್ಕೆ ಸ್ಪಂದಿಸಿದ ಪರಮೇಶ್ವರ್ ಸರ್ ರವರು ಚುನಾವಣಾ ಪ್ರಣಾಳಿಕೆಯಲ್ಲಿ ನೇರ ಪಾವತಿ ಕಾರ್ಮಿಕರನ್ನಾಗಿ ಘೋಷಿಸುವ ವಿಷಯವನ್ನು ಸೇರಿಸಿದರು.

ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು 2017 ರಲ್ಲಿ ನೇರ ಪಾವತಿ ಪೌರಕಾರ್ಮಿಕರೆಂದು ಘೋಷಿಸಿದರು. ಹಾಗೂ ಕಳೆದ ವರ್ಷ ಮೇ ಮಾಹೆಯಲ್ಲಿ 20 ಸಾವಿರ ಪೌರ ಕಾರ್ಮಿಕರನ್ನು ಖಾಯಂಗೊಳಿಸಲಾಯಿತು.

ಪೌರ ಕಾರ್ಮಿಕರಿಗೆ ವಸತಿ ಯೋಜನೆ, ಆರೋಗ್ಯ ವಿಮೆ ಜಾರಿಯಾಗಿದ್ದು ಮುಂದಿನ ದಿನಗಳಲ್ಲಿ ಕಸ ಗುಡಿಸುವ ಮೆಕ್ಯಾನೈಸ್ಡ್ ವ್ಯವಸ್ಥೆ ತರಲಾಗುವುದು. ಇದರಿಂದ ಧೂಳು, ಗಲೀಜಿನಿಂದ ರಕ್ಷಣೆ ಒದಗಲಿದೆ.

ರಿಸ್ಕ್ ಭತ್ಯೆ ನೀಡಲು ಸಹ ಸರ್ಕಾರಕ್ಕೆ ಬೇಡಿಕೆ ಇಡಲಾಗಿದೆ. ಹಾಗು ಬೆಂಗಳೂರಿನಲ್ಲಿ ಐಪಿಡಿ ಸಾಲಪ್ಪ ಸ್ಮಾರಕ ಭವನ ನಿರ್ಮಿಸಲಾಗುವುದು. ಪೌರ ಕಾರ್ಮಿಕರು ಬೆಂಗಳೂರಿಗೆ ಬಂದಾಗ ಇಲ್ಲಿ ತಂಗುವ ವ್ಯವಸ್ಥೆ ಇರಲಿದೆ ಎಂದು ತಿಳಿಸಿದರು.

ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಹಿಂದೆ ಸಾಲಪ್ಪನವರು ಹೋರಾಡಿದ್ದರು. ವಿವಿಧ ಹೆಸರುಗಳಿಂದ ಕರೆಯಲಾಗುತ್ತಿದ್ದ ಕಾರ್ಮಿಕರಿಗೆ ಸಾಲಪ್ಪನವರ ಸಮಿತಿ ಮೂಲಕ ಡಿ.ದೇವರಾಜ ಅರಸುರವರು ಪೌರ ಕಾರ್ಮಿಕರೆಂದು ನಾಮಕರಣ ಮಾಡಿದರು ಎಂದು ಸ್ಮರಿಸಿದರು.

ಕೋಡಿಜಿಟ್ ವಿಮಾ ಕಂಪೆನಿಯ ಸಂಯೋಜಕರಾದ ಕೃಷ್ಣಮೂರ್ತಿ ಮಾತನಾಡಿ, ಪೌರ ಕಾರ್ಮಿಕರಿಗೆ, ಸಫಾಯಿ ಕರ್ಮಚಾರಿಗಳಿಗೆ ಒಂದು ಅದ್ಭುತವಾದ ಆರೋಗ್ಯ ವಿಮಾ ಪಾಲಿಸಿಯನ್ನು ವಿನ್ಯಾಸಗೊಳಿಸಲಾಗಿದ್ದು, ಭಾರತದಲ್ಲೇ ಈ ರೀತಿಯ ನಗದುರಹಿತ ಆರೋಗ್ಯ ವಿಮೆ ಇದೇ ಮೊದಲು ಎಂದು ಹೇಳಬಹುದು.

ಈ ಆರೋಗ್ಯ ಕಾರ್ಡ್ ಪಡೆದವರು ಯಾವುದೇ ಕಾಯಿಲೆ ಬಂದರೂ ರೂ. 5 ಲಕ್ಷದವರೆಗೆ ನಗದುರಹಿತ ಚಿಕಿತ್ಸೆ ಪಡೆಯಬಹುದು. ಶಿವಮೊಗ್ಗದ ಪ್ರತಿಯೊಂದು ಆಸ್ಪತ್ರೆಯಲ್ಲಿ ಈ ಸೌಲಭ್ಯ ಪಡೆಯಬಹುದಾಗಿದ್ದು 3000 ವಿವಿಧ ಖಾಯಿಲೆಗಳಿಗೆ ಈ ಯೋಜನೆಯಡಿ ನಗದುರಹಿತ ಚಿಕಿತ್ಸೆ ಲಭ್ಯವಿದೆ. ಈ ಆರೋಗ್ಯ ಕಾರ್ಡ್ ಇದ್ದರೆ, ನಿಮ್ಮ ಜೇಬಿನಲ್ಲಿ ರೂ. 5 ಲಕ್ಷ ಇದ್ದಂತೆ. ಕಾರ್ಮಿಕರು ಆರೋಗ್ಯದ ಕಡೆ ಹೆಚ್ಚಿನ ಗಮನ ನೀಡಿ, ಸಮಸ್ಯೆ ಚಿಕ್ಕದಿದ್ದಾಗಲೇ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಿರಿ ಎಂದರು.
ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಟಿ.ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಾಫ್ಟ್ವೇರ್ ಕಂಪೆನಿಗಳಲ್ಲಿ ಜಾರಿಗೊಳಿಸಿದಂತಹ ವೈಯಕ್ತಿಕ ಆರೋಗ್ಯ ವಿಮಾ ಯೋಜನೆಯನ್ನು ಪೌರಕಾರ್ಮಿಕರಿಗೆ ರೂಪಿಸಬೇಕೆಂದು ಅಧ್ಯಕ್ಷರು ಆಸಕ್ತಿ ತೋರಿ, ಸಾಕಷ್ಟು ಶ್ರಮಿಸಿ, ಅತಿ ಉಪಯುಕ್ತವಾದ ಯೋಜನೆಯನ್ನು ಜಾರಿಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ವಿಮೆಯಡಿ ಆರೋಗ್ಯ ಮತ್ತು ಅಪಘಾತ ವಿಮೆ ಎರಡೂ ಕವರ್ ಆಗುತ್ತದೆ. ಕಾರ್ಡ್ ನ್ನು ಸ್ಕ್ಯಾನ್ ಮಾಡಿದರೆ ಸಾಕು, ಎಲ್ಲ ವಿವರ ಇದರಲ್ಲಿ ಲಭ್ಯವಾಗುತ್ತದೆ. ಅತೀ ಸರಳವಾಗಿ ಇದನ್ನು ಬಳಸಬಹುದಾಗಿದ್ದು, ಭಾರತದಲ್ಲೇ ಪ್ರಥಮ ಬಾರಿಗೆ ಇಂತಹ ಅನನ್ಯವಾದ ಯೋಜನೆ ಅನುಷ್ಠಾನಗೊಳಿಸಲಾಗಿದೆ ಎಂದು ಯೋಜನೆ ಕುರಿತು ಮಾಹಿತಿ ನೀಡಿದರು.

ಪೌರಕಾರ್ಮಿಕರ ಸಂಘದ ಜಿಲ್ಲಾ ಅಧ್ಯಕ್ಷರಾದ ಗೋವಿಂದಪ್ಪ ಮಾತನಾಡಿ, ತಳಮಟ್ಟದ ಕಾರ್ಮಿಕರಿಗೆ ಇಂತಹ ಉತ್ತಮ ಆರೋಗ್ಯ ವಿಮೆ ಯೋಜನೆ ತಲುಪಿಸಿದ ಅಧ್ಯಕ್ಷರು ಹಾಗೂ ಇದಕ್ಕಾಗಿ ಶ್ರಮಿಸಿದ ಎಲ್ಲರಿಗೂ ಅಭಿನಂದನೆ ತಿಳಿಸಿದ ಅವರು ಲೋಡರ್ಸ್, ಕ್ಲೀನರ್ಸ್, ಸ್ವೀಪರ್ಸ್ಗಳಿಗೆ ಸಹ ಈ ಯೋಜನೆಯನ್ನು ವಿಸ್ತರಿಸಬೇಕೆಂದು ಮನವಿ ಮಾಡಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪನವರ ಸಂದೇಶ ಮತ್ತು ಅಭಿನಂದನೆಯನ್ನು ಅವರ ವಿಶೇಷ ಅಧಿಕಾರಿ ಶ್ರೀಪತಿ ಕಾರ್ಯಕ್ರಮದಲ್ಲಿ ತಿಳಿಸಿದರು.
ಇದೇ ವೇಳೆ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ ಮಾಡಲಾಯಿತು
ಕಾರ್ಯಕ್ರಮದಲ್ಲಿ ಪಾಲಿಕೆ ಆಯುಕ್ತರಾದ ಕೆ.ಮಾಯಣ್ಣ ಗೌಡ ಸ್ವಾಗತಿಸಿದರು. ಅಂಬೇಡ್ಕರ್ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ರಾಘವೇಂದ್ರ ಡಿ.ಎಂ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಪ್ರಭಾಕರ, ಗೋಪಾಲ್, ಅಧಿಕಾರಿಗಳು, ಪೌರ ಕಾರ್ಮಿಕರು ಹಾಜರಿದ್ದರು.

Good news for civil servants: `Health Insurance Scheme' launched for health protection!
Share. Facebook Twitter LinkedIn WhatsApp Email

Related Posts

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

1 Min Read

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

1 Min Read

BIG NEWS: ಸಾಗರದ ನಾಡಕಲಸೆಯಲ್ಲಿ ‘ಕಂದಾಯ ಭೂಮಿ’ ಒತ್ತುವರಿ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲು

2 Mins Read
Recent News

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

ನೈಸರ್ಗಿಕ ಪೋಷಕಾಂಶಗಳ ಗಣಿ: ಪ್ರತಿದಿನ ಮೊಳಕೆ ಕಾಳುಗಳನ್ನು ತಿನ್ನುವುದರಿಂದಾಗುವ 7 ಲಾಭಗಳು

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

State News
KARNATAKA

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ನವದೆಹಲಿ: “ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಂತೆ ಜನಿವಾರ ಧರಿಸಲೂ ಅನುಮತಿ ನೀಡಲಾಗಿದೆ ಎಂಬ ವಾದ ಕರ್ನಾಟಕ ಸರ್ಕಾರದ್ದು. ಸದ್ಯ ‘ಉಡದಾರ’ ಧರಿಸಲು…

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

BIG NEWS: ಸಾಗರದ ನಾಡಕಲಸೆಯಲ್ಲಿ ‘ಕಂದಾಯ ಭೂಮಿ’ ಒತ್ತುವರಿ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲು

ಇಎಲ್‌ಎಎಸ್‌ಐಎ 2026: ರಿನ್ಯೂವೆಬಲ್ ಏಷ್ಯಾ, ಇಂಧನ ಎಕ್ಸ್‌ಪೋ: ಕ್ರೆಡಲ್‌ನಿಂದ ನಾವೀನ್ಯತೆ ಪ್ರದರ್ಶನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.