Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಫಾಹಲ್ಗಾಮ್ ಉಗ್ರರ ದಾಳಿಯ ಹಿಂದೆ ಪಾಕಿಸ್ತಾನದ ಕರಾಳ ಹಸ್ತ: ‘ಗೋಪ್ರೋ’ ಕ್ಯಾಮೆರಾ ಮತ್ತು 2024 ರ ದಾಳಿಯ ಲಿಂಕ್ ಬಿಚ್ಚಿಟ್ಟ ಎನ್‌ಐಎ!

JOB ALERT : ರೈಲ್ವೇ ಇಲಾಖೆಯಲ್ಲಿ ಬಂಪರ್ ಉದ್ಯೋಗಾವಕಾಶ: 6,500ಕ್ಕೂ ಹೆಚ್ಚು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

BIG NEWS : ಅಟಲ್ ಜೀ ಜನಸ್ನೇಹಿ ಕೇಂದ್ರಗಳ ಸೇವೆ ಇನ್ನಷ್ಟು ಚುರುಕು: ಕಂದಾಯ ಇಲಾಖೆಯಿಂದ ಹೊಸ ನಿಯಮ ಜಾರಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ `ದಿನಗೂಲಿ ನೌಕರ’ರಿಗೆ ಗುಡ್ ನ್ಯೂಸ್ : ‘ಕನಿಷ್ಠ ವೇತನ’ ನಿಗದಿಗೊಳಿಸಿ ಮಹತ್ವದ ಆದೇಶ
KARNATAKA

ರಾಜ್ಯ ಸರ್ಕಾರದಿಂದ `ದಿನಗೂಲಿ ನೌಕರ’ರಿಗೆ ಗುಡ್ ನ್ಯೂಸ್ : ‘ಕನಿಷ್ಠ ವೇತನ’ ನಿಗದಿಗೊಳಿಸಿ ಮಹತ್ವದ ಆದೇಶ

By kannadanewsnow57
vidhana soudha
vidhana soudha

ಬೆಂಗಳೂರು: ರಾಜ್ಯ ಸರ್ಕಾರದಿಂದ ದಿನಗೂಲಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ಕನಿಷ್ಠ ವೇತನ ನಿಗದಿಗೊಳಿಸಿ ಆದೇಶಿಸಿದೆ. ಅಲ್ಲದೇ ಅರ್ಹ ದಿನಗೂಲಿ ನೌಕರರಿಗೆ 2024ರ ಪರಿಷ್ಕೃತ ವೇತನ ಶ್ರೇಣಿಗಳನ್ವಯ ಆರ್ಥಿಕ ಸೌಲಭ್ಯಗಳನ್ನು ಮಂಜೂರು ಮಾಡಿ ಆದೇಶಿಸಲಾಗಿದೆ.

ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಾಳಿಯನ್ನು ಹೊರಡಿಸಿದ್ದು, ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012ನ್ನು ಜಾರಿಗೆ ತರಲಾಗಿದೆ ಎಂದಿದ್ದಾರೆ.

ದಿನಾಂಕ: 19.09.2014ರ ಸರ್ಕಾರದ ಆದೇಶದಲ್ಲಿ ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012ರಡಿ ಸೇವಾ ಮುಂದುವರಿಕೆಗೆ ಅರ್ಹರಾದ ದಿನಗೂಲಿ ನೌಕರರಿಗೆ ಇವರುಗಳನ್ನು ಅಧಿಸೂಚಿಸಿದ ದಿನಾಂಕದಿಂದ ಅವರನ್ನು ಮುಂದುವರೆಸಿದ ಹುದ್ದೆಯ ಕಾಲಿಕ ವೇತನ ಶ್ರೇಣಿಯ ಕನಿಷ್ಠ ವೇತನ, ರಾಜ್ಯ ಸರ್ಕಾರಿ ನೌಕರರಿಗೆ ಕಾಲಕಾಲಕ್ಕೆ ನೀಡಲಾಗುವ ತುಟ್ಟಿಭತ್ಯೆಯ ಶೇಕಡ 75ರಷ್ಟು ರಾಜ್ಯ ಸರ್ಕಾರಿ ನೌಕರರಿಗೆ ಕಾಲಕಾಲಕ್ಕೆ ನೀಡಲಾಗುವ ಅವರುಗಳು ಕರ್ತವ್ಯ ನಿರ್ವಹಿಸುವ ಸ್ಥಳಕ್ಕೆ ಅನ್ವಯವಾಗುವ ಮನೆ ಬಾಡಿಗೆ ಭತ್ಯೆಯ ಸಾಮಾನ್ಯ ದರಗಳ ಶೇಕಡ 75ರಷ್ಟನ್ನು ಅರ್ಹ ದಿನಗೂಲಿ ನೌಕರರಿಗೆ, ಅವರನ್ನು ಮುಂದುವರೆಸುವ ಹುದ್ದೆಯ ಕಾಲಿಕ ವೇತನ ಶ್ರೇಣಿಯ ಕನಿಷ್ಠ ವೇತನದ ಮೇಲೆ ಮನೆ ಬಾಡಿಗೆ ಭತ್ಯೆಯಾಗಿ ಮಂಜೂರು ಮಾಡುವಂತೆ ಆದೇಶಿಸಲಾಗಿದೆ ಹಾಗೂ ಇವರುಗಳು ಅರ್ಹರಿರುವ ಇತರ ಸೌಲಭ್ಯಗಳ ಕುರಿತು ಆದೇಶ ಮಾಡಲಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012ರಡಿ ಅಧಿಸೂಚಿಸಲ್ಪಟ್ಟ ದಿನಗೂಲಿ ನೌಕರರಿಗೆ ದಿನಾಂಕ: 1.8.2018ರಿಂದ ಜಾರಿಗೆ ಬರುವಂತೆ 2018ರ ಪರಿಷ್ಕೃತ ವೇತನ ಶ್ರೇಣಿಗಳನ್ನಯ ಅವರುಗಳನ್ನು ಮುದುವರೆಸಿದ ಹುದ್ದೆಯ ಕಾಲಿಕ ವೇತನ ಶ್ರೇಣಿಯ ಕನಿಷ್ಠ ವೇತನವನ್ನು ದಿನಾಂಕ: 1.8.2018ರಿಂದ ಜಾರಿಗೆ ಬರುವಂತೆ ನಿಗದಿಗೊಳಿಸಿ ಆದೇಶಿಸಲಾಗಿದೆ ಎಂದಿದ್ದಾರೆ.

ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012ರಡಿ ಅಧಿಸೂಚಿಸಲ್ಪಟ್ಟ, ದಿನಗೂಲಿ ನೌಕರರಿಗೆ ದಿನಾಂಕ: 19.9.2014ರ ಆದೇಶದಂತೆ ನೀಡಲಾಗುತ್ತಿದ್ದ ಶೇಕಡ 75ರಷ್ಟು ತುಟ್ಟಿಭತ್ಯೆಯನ್ನು ಶೇಕಡ 90ಕ್ಕೆ ಹಾಗೂ ಶೇಕಡ 75ರಷ್ಟು ನೀಡುತ್ತಿದ್ದ ಮನೆ ಬಾಡಿಗೆ ಭತ್ಯೆಯನ್ನು ಶೇಕಡ 90ಕ್ಕೆ ನಿಗದಿಪಡಿಸಿ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.

7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಿ ರಾಜ್ಯ ಸರ್ಕಾರಿ ನೌಕರರಿಗೆ ಪರಿಷ್ಕೃತ ವೇತನ ಶ್ರೇಣಿಗಳನ್ನು ಸರ್ಕಾರವು ಮಂಜೂರು ಮಾಡಿರುತ್ತದೆ. ಮೇಲೆ (1) ಹಾಗೂ (2)ರಲ್ಲಿ ಓದಲಾದ ಅಧಿನಿಯಮ ಹಾಗೂ ಸರ್ಕಾರದ ಆದೇಶಗಳಲ್ಲಿ ಕಲ್ಪಿಸಲಾಗಿರುವ ಅವಕಾಶಗಳಂತೆ ಈ ಪರಿಷ್ಕೃತ ವೇತನಗಳನ್ವಯ ಅರ್ಹ ದಿನಗೂಲಿ ನೌಕರರ ಆರ್ಥಿಕ ಸೌಲಭ್ಯಗಳನ್ನು ಕೂಡ ಪರಿಷ್ಕರಿಸಿ ಮಂಜೂರು ಮಾಡಲು ಸರ್ಕಾರವು ತೀರ್ಮಾನಿಸಿ, ಈ ಕೆಳಕಂಡಂತೆ ಆದೇಶಿಸಿದೆ.

ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ, 2012ರನ್ವಯ ಅಧಿಸೂಚಿಸಲ್ಪಟ್ಟ ಅರ್ಹ ದಿನಗೂಲಿ ನೌಕರರಿಗೆ ದಿನಾಂಕ: 01.09.2024ರಿಂದ ಜಾರಿಗೆ ಬರುವಂತೆ ಈ ಕೆಳಕಂಡ ಸೌಲಭ್ಯಗಳನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

1. 2024ರ ಪರಿಷ್ಕೃತ ವೇತನ ಶ್ರೇಣಿಗಳನ್ವಯ ಅವರುಗಳನ್ನು ಸೇವೆಯಲ್ಲಿ ಮುಂದುವರೆಸಿದ ಹುದ್ದೆಯ ಕಾಲಿಕ ಶ್ರೇಣಿಯ ಕನಿಷ್ಠ ವೇತನವನ್ನು ನಿಗದಿಗೊಳಿಸತಕ್ಕದ್ದು,

2. ರಾಜ್ಯ ಸರ್ಕಾರಿ ನೌಕರರಿಗೆ ಕಾಲಕಾಲಕ್ಕೆ ನೀಡಲಾಗುವ ತುಟ್ಟಿಭತ್ಯೆಯ ಶೇಕಡ 90ರಷ್ಟು ಅರ್ಹ ದಿನಗೂಲಿ ನೌಕರರಿಗೆ ಅವರನ್ನು ಮುಂದುವರೆಸಿದ ಹುದ್ದೆಯ ಕಾಲಿಕ ವೇತನ ಶ್ರೇಣಿಯ ಕನಿಷ್ಠ ವೇತನದ ಮೇಲೆ ತುಟ್ಟಿ ಭತ್ಯೆಯಾಗಿ ಮಂಜೂರು ಮಾಡತಕ್ಕದ್ದು

3.ರಾಜ್ಯ ಸರ್ಕಾರಿ ನೌಕರರಿಗೆ ಕಾಲಕಾಲಕ್ಕೆ ನೀಡಲಾಗುವ, ಅವರುಗಳು ಕರ್ತವ್ಯ ನಿರ್ವಹಿಸುವ ಸ್ಥಳಕ್ಕೆ ಅನ್ವಯವಾಗುವ ಮನೆ ಬಾಡಿಗೆ ಭತ್ಯೆ ಸಾಮಾನ್ಯ ದರಗಳ ಶೇಕಡ 90ರಷ್ಟು ಅರ್ಹ ದಿನಗೂಲಿ ನೌಕರರಿಗೆ ಅವರನ್ನು ಮುಂದುವರೆಸಿದ ಹುದ್ದೆಯ ಕಾಲಿಕ ವೇತನ ಶ್ರೇಣಿಯ ಕನಿಷ್ಠ ವೇತನದ ಮೇಲೆ ಮನೆ ಬಾಡಿಗೆ ಭತ್ಯೆಯಾಗಿ ಮಂಜೂರು ಮಾಡತಕ್ಕದ್ದು. ಈ ಆದೇಶವನ್ನು ಆರ್ಥಿಕ ಇಲಾಖೆಯ ಹಿಂಬರಹ ಸಂಖ್ಯೆ: FD 598 Exp-12/2024, ದಿನಾಂಕ: 04.09.2024ರಲ್ಲಿ ನೀಡಿರುವ ಸಹಮತಿಯಂತೆ ಹೊರಡಿಸಲಾಗಿದೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

Good news for 'daily wage workers': State govt orders fixing minimum wages ರಾಜ್ಯ ಸರ್ಕಾರದಿಂದ `ದಿನಗೂಲಿ ನೌಕರ'ರಿಗೆ ಗುಡ್ ನ್ಯೂಸ್ : 'ಕನಿಷ್ಠ ವೇತನ' ನಿಗದಿಗೊಳಿಸಿ ಮಹತ್ವದ ಆದೇಶ
Share. Facebook Twitter LinkedIn WhatsApp Email

Related Posts

BIG NEWS : ಅಟಲ್ ಜೀ ಜನಸ್ನೇಹಿ ಕೇಂದ್ರಗಳ ಸೇವೆ ಇನ್ನಷ್ಟು ಚುರುಕು: ಕಂದಾಯ ಇಲಾಖೆಯಿಂದ ಹೊಸ ನಿಯಮ ಜಾರಿ

2 Mins Read

BREAKING : ರಾಜ್ಯ ಸರ್ಕಾರದಿಂದ 29 ಮಂದಿ ‘PSI’ , 26 ‘ASI’ ಗಳ ವರ್ಗಾವಣೆ ಮಾಡಿ ಆದೇಶ |Transfer

3 Mins Read

BIG NEWS : ರಾಜ್ಯದಲ್ಲಿ ಜನಗಣತಿ ಮುಗಿಯುವವರೆಗೆ ಅಧಿಕಾರಿಗಳ ವರ್ಗಾವಣೆಗೆ ಬ್ರೇಕ್: ಸರ್ಕಾರದಿಂದ ಕಟ್ಟುನಿಟ್ಟಿನ ಆದೇಶ | Karnataka Government

2 Mins Read
Recent News

ಫಾಹಲ್ಗಾಮ್ ಉಗ್ರರ ದಾಳಿಯ ಹಿಂದೆ ಪಾಕಿಸ್ತಾನದ ಕರಾಳ ಹಸ್ತ: ‘ಗೋಪ್ರೋ’ ಕ್ಯಾಮೆರಾ ಮತ್ತು 2024 ರ ದಾಳಿಯ ಲಿಂಕ್ ಬಿಚ್ಚಿಟ್ಟ ಎನ್‌ಐಎ!

JOB ALERT : ರೈಲ್ವೇ ಇಲಾಖೆಯಲ್ಲಿ ಬಂಪರ್ ಉದ್ಯೋಗಾವಕಾಶ: 6,500ಕ್ಕೂ ಹೆಚ್ಚು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

BIG NEWS : ಅಟಲ್ ಜೀ ಜನಸ್ನೇಹಿ ಕೇಂದ್ರಗಳ ಸೇವೆ ಇನ್ನಷ್ಟು ಚುರುಕು: ಕಂದಾಯ ಇಲಾಖೆಯಿಂದ ಹೊಸ ನಿಯಮ ಜಾರಿ

BREAKING : ರಾಜ್ಯ ಸರ್ಕಾರದಿಂದ 29 ಮಂದಿ ‘PSI’ , 26 ‘ASI’ ಗಳ ವರ್ಗಾವಣೆ ಮಾಡಿ ಆದೇಶ |Transfer

State News
KARNATAKA

BIG NEWS : ಅಟಲ್ ಜೀ ಜನಸ್ನೇಹಿ ಕೇಂದ್ರಗಳ ಸೇವೆ ಇನ್ನಷ್ಟು ಚುರುಕು: ಕಂದಾಯ ಇಲಾಖೆಯಿಂದ ಹೊಸ ನಿಯಮ ಜಾರಿ

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯದ ಜನಸಾಮಾನ್ಯರಿಗೆ ನೆಮ್ಮದಿಯ ಸುದ್ದಿ ಸಿಕ್ಕಿದೆ. ಅಟಲ್ ಜೀ ಜನಸ್ನೇಹಿ ಕೇಂದ್ರಗಳ (AJSK) ಮೂಲಕ ನೀಡಲಾಗುವ ವಿವಿಧ ಸಾರ್ವಜನಿಕ…

BREAKING : ರಾಜ್ಯ ಸರ್ಕಾರದಿಂದ 29 ಮಂದಿ ‘PSI’ , 26 ‘ASI’ ಗಳ ವರ್ಗಾವಣೆ ಮಾಡಿ ಆದೇಶ |Transfer

BIG NEWS : ರಾಜ್ಯದಲ್ಲಿ ಜನಗಣತಿ ಮುಗಿಯುವವರೆಗೆ ಅಧಿಕಾರಿಗಳ ವರ್ಗಾವಣೆಗೆ ಬ್ರೇಕ್: ಸರ್ಕಾರದಿಂದ ಕಟ್ಟುನಿಟ್ಟಿನ ಆದೇಶ | Karnataka Government

GOOD NEWS : ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 5,910 ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಆದೇಶ | Guest Lecturers Jobs

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.