Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಲೆನಾಡು ಭಾಗದ ಜನರಿಗೆ ಉನ್ನತ ಶಿಕ್ಷಣ ಒದಗಿಸುವುದೇ ಎಂ.ಡಿ.ಎಫ್ ಗುರಿ: ಅಧ್ಯಕ್ಷ ಬಿ.ಆರ್.ಜಯಂತ್

ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿಯದ್ದು ಗೆಲುವಲ್ಲ, ಅದು ವ್ಯವಸ್ಥಿತ ಷಡ್ಯಂತ್ರ; ಸಾಗರದಲ್ಲಿ ಬಿ.ಕೆ. ಹರಿಪ್ರಸಾದ್ ಹೇಳಿಕೆ

ಅಂದು ನಿರ್ಲಕ್ಷ್ಯಕ್ಕೊಳಗಾಗಿದ್ದರು, ಇಂದು ತಮಿಳುನಾಡು ವಿಧಾನಸಭೆಯ ಹಂಗಾಮಿ ಸ್ಪೀಕರ್! ಯಾರು ಈ ಕರುಪ್ಪಯ್ಯ?

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ‘ದಿನಗೂಲಿ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ ‘ಕನಿಷ್ಠ ವೇತನ’ ನಿಗದಿಗೊಳಿಸಿ ಆದೇಶ
KARNATAKA

BREAKING: ‘ದಿನಗೂಲಿ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ ‘ಕನಿಷ್ಠ ವೇತನ’ ನಿಗದಿಗೊಳಿಸಿ ಆದೇಶ

By ವಸಂತ್‌ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ದಿನಗೂಲಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ಕನಿಷ್ಠ ವೇತನ ನಿಗದಿಗೊಳಿಸಿ ಆದೇಶಿಸಿದೆ. ಅಲ್ಲದೇ ಅರ್ಹ ದಿನಗೂಲಿ ನೌಕರರಿಗೆ 2024ರ ಪರಿಷ್ಕೃತ ವೇತನ ಶ್ರೇಣಿಗಳನ್ವಯ ಆರ್ಥಿಕ ಸೌಲಭ್ಯಗಳನ್ನು ಮಂಜೂರು ಮಾಡಿ ಆದೇಶಿಸಲಾಗಿದೆ.

ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಾಳಿಯನ್ನು ಹೊರಡಿಸಿದ್ದು, ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012ನ್ನು ಜಾರಿಗೆ ತರಲಾಗಿದೆ ಎಂದಿದ್ದಾರೆ.

ದಿನಾಂಕ: 19.09.2014ರ ಸರ್ಕಾರದ ಆದೇಶದಲ್ಲಿ ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012ರಡಿ ಸೇವಾ ಮುಂದುವರಿಕೆಗೆ ಅರ್ಹರಾದ ದಿನಗೂಲಿ ನೌಕರರಿಗೆ ಇವರುಗಳನ್ನು ಅಧಿಸೂಚಿಸಿದ ದಿನಾಂಕದಿಂದ ಅವರನ್ನು ಮುಂದುವರೆಸಿದ ಹುದ್ದೆಯ ಕಾಲಿಕ ವೇತನ ಶ್ರೇಣಿಯ ಕನಿಷ್ಠ ವೇತನ, ರಾಜ್ಯ ಸರ್ಕಾರಿ ನೌಕರರಿಗೆ ಕಾಲಕಾಲಕ್ಕೆ ನೀಡಲಾಗುವ ತುಟ್ಟಿಭತ್ಯೆಯ ಶೇಕಡ 75ರಷ್ಟು ರಾಜ್ಯ ಸರ್ಕಾರಿ ನೌಕರರಿಗೆ ಕಾಲಕಾಲಕ್ಕೆ ನೀಡಲಾಗುವ ಅವರುಗಳು ಕರ್ತವ್ಯ ನಿರ್ವಹಿಸುವ ಸ್ಥಳಕ್ಕೆ ಅನ್ವಯವಾಗುವ ಮನೆ ಬಾಡಿಗೆ ಭತ್ಯೆಯ ಸಾಮಾನ್ಯ ದರಗಳ ಶೇಕಡ 75ರಷ್ಟನ್ನು ಅರ್ಹ ದಿನಗೂಲಿ ನೌಕರರಿಗೆ, ಅವರನ್ನು ಮುಂದುವರೆಸುವ ಹುದ್ದೆಯ ಕಾಲಿಕ ವೇತನ ಶ್ರೇಣಿಯ ಕನಿಷ್ಠ ವೇತನದ ಮೇಲೆ ಮನೆ ಬಾಡಿಗೆ ಭತ್ಯೆಯಾಗಿ ಮಂಜೂರು ಮಾಡುವಂತೆ ಆದೇಶಿಸಲಾಗಿದೆ ಹಾಗೂ ಇವರುಗಳು ಅರ್ಹರಿರುವ ಇತರ ಸೌಲಭ್ಯಗಳ ಕುರಿತು ಆದೇಶ ಮಾಡಲಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012ರಡಿ ಅಧಿಸೂಚಿಸಲ್ಪಟ್ಟ ದಿನಗೂಲಿ ನೌಕರರಿಗೆ ದಿನಾಂಕ: 1.8.2018ರಿಂದ ಜಾರಿಗೆ ಬರುವಂತೆ 2018ರ ಪರಿಷ್ಕೃತ ವೇತನ ಶ್ರೇಣಿಗಳನ್ನಯ ಅವರುಗಳನ್ನು ಮುದುವರೆಸಿದ ಹುದ್ದೆಯ ಕಾಲಿಕ ವೇತನ ಶ್ರೇಣಿಯ ಕನಿಷ್ಠ ವೇತನವನ್ನು ದಿನಾಂಕ: 1.8.2018ರಿಂದ ಜಾರಿಗೆ ಬರುವಂತೆ ನಿಗದಿಗೊಳಿಸಿ ಆದೇಶಿಸಲಾಗಿದೆ ಎಂದಿದ್ದಾರೆ.

ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012ರಡಿ ಅಧಿಸೂಚಿಸಲ್ಪಟ್ಟ, ದಿನಗೂಲಿ ನೌಕರರಿಗೆ ದಿನಾಂಕ: 19.9.2014ರ ಆದೇಶದಂತೆ ನೀಡಲಾಗುತ್ತಿದ್ದ ಶೇಕಡ 75ರಷ್ಟು ತುಟ್ಟಿಭತ್ಯೆಯನ್ನು ಶೇಕಡ 90ಕ್ಕೆ ಹಾಗೂ ಶೇಕಡ 75ರಷ್ಟು ನೀಡುತ್ತಿದ್ದ ಮನೆ ಬಾಡಿಗೆ ಭತ್ಯೆಯನ್ನು ಶೇಕಡ 90ಕ್ಕೆ ನಿಗದಿಪಡಿಸಿ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.

7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಿ ರಾಜ್ಯ ಸರ್ಕಾರಿ ನೌಕರರಿಗೆ ಪರಿಷ್ಕೃತ ವೇತನ ಶ್ರೇಣಿಗಳನ್ನು ಸರ್ಕಾರವು ಮಂಜೂರು ಮಾಡಿರುತ್ತದೆ. ಮೇಲೆ (1) ಹಾಗೂ (2)ರಲ್ಲಿ ಓದಲಾದ ಅಧಿನಿಯಮ ಹಾಗೂ ಸರ್ಕಾರದ ಆದೇಶಗಳಲ್ಲಿ ಕಲ್ಪಿಸಲಾಗಿರುವ ಅವಕಾಶಗಳಂತೆ ಈ ಪರಿಷ್ಕೃತ ವೇತನಗಳನ್ವಯ ಅರ್ಹ ದಿನಗೂಲಿ ನೌಕರರ ಆರ್ಥಿಕ ಸೌಲಭ್ಯಗಳನ್ನು ಕೂಡ ಪರಿಷ್ಕರಿಸಿ ಮಂಜೂರು ಮಾಡಲು ಸರ್ಕಾರವು ತೀರ್ಮಾನಿಸಿ, ಈ ಕೆಳಕಂಡಂತೆ ಆದೇಶಿಸಿದೆ.

ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ, 2012ರನ್ವಯ ಅಧಿಸೂಚಿಸಲ್ಪಟ್ಟ ಅರ್ಹ ದಿನಗೂಲಿ ನೌಕರರಿಗೆ ದಿನಾಂಕ: 01.09.2024ರಿಂದ ಜಾರಿಗೆ ಬರುವಂತೆ ಈ ಕೆಳಕಂಡ ಸೌಲಭ್ಯಗಳನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

1. 2024ರ ಪರಿಷ್ಕೃತ ವೇತನ ಶ್ರೇಣಿಗಳನ್ವಯ ಅವರುಗಳನ್ನು ಸೇವೆಯಲ್ಲಿ ಮುಂದುವರೆಸಿದ ಹುದ್ದೆಯ ಕಾಲಿಕ ಶ್ರೇಣಿಯ ಕನಿಷ್ಠ ವೇತನವನ್ನು ನಿಗದಿಗೊಳಿಸತಕ್ಕದ್ದು,

2. ರಾಜ್ಯ ಸರ್ಕಾರಿ ನೌಕರರಿಗೆ ಕಾಲಕಾಲಕ್ಕೆ ನೀಡಲಾಗುವ ತುಟ್ಟಿಭತ್ಯೆಯ ಶೇಕಡ 90ರಷ್ಟು ಅರ್ಹ ದಿನಗೂಲಿ ನೌಕರರಿಗೆ ಅವರನ್ನು ಮುಂದುವರೆಸಿದ ಹುದ್ದೆಯ ಕಾಲಿಕ ವೇತನ ಶ್ರೇಣಿಯ ಕನಿಷ್ಠ ವೇತನದ ಮೇಲೆ ತುಟ್ಟಿ ಭತ್ಯೆಯಾಗಿ ಮಂಜೂರು ಮಾಡತಕ್ಕದ್ದು

3.ರಾಜ್ಯ ಸರ್ಕಾರಿ ನೌಕರರಿಗೆ ಕಾಲಕಾಲಕ್ಕೆ ನೀಡಲಾಗುವ, ಅವರುಗಳು ಕರ್ತವ್ಯ ನಿರ್ವಹಿಸುವ ಸ್ಥಳಕ್ಕೆ ಅನ್ವಯವಾಗುವ ಮನೆ ಬಾಡಿಗೆ ಭತ್ಯೆ ಸಾಮಾನ್ಯ ದರಗಳ ಶೇಕಡ 90ರಷ್ಟು ಅರ್ಹ ದಿನಗೂಲಿ ನೌಕರರಿಗೆ ಅವರನ್ನು ಮುಂದುವರೆಸಿದ ಹುದ್ದೆಯ ಕಾಲಿಕ ವೇತನ ಶ್ರೇಣಿಯ ಕನಿಷ್ಠ ವೇತನದ ಮೇಲೆ ಮನೆ ಬಾಡಿಗೆ ಭತ್ಯೆಯಾಗಿ ಮಂಜೂರು ಮಾಡತಕ್ಕದ್ದು. ಈ ಆದೇಶವನ್ನು ಆರ್ಥಿಕ ಇಲಾಖೆಯ ಹಿಂಬರಹ ಸಂಖ್ಯೆ: FD 598 Exp-12/2024, ದಿನಾಂಕ: 04.09.2024ರಲ್ಲಿ ನೀಡಿರುವ ಸಹಮತಿಯಂತೆ ಹೊರಡಿಸಲಾಗಿದೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

BREAKING: ಖ್ಯಾತ ಮಲಯಾಳಂ ನಟಿ ಕವಿಯೂರ್ ಪೊನ್ನಮ್ಮ ವಿಧಿವಶ | Malayalam Actor Kaviyoor Ponnamma No More

BREAKING: ರಾಜ್ಯ ಸರ್ಕಾರದಿಂದ ‘ಮುಜರಾಯಿ ಇಲಾಖೆ ದೇವಾಲಯ’ಗಳಲ್ಲಿ ಪ್ರಸಾದ ತಯಾರಿಕೆಗೆ ‘ನಂದಿನಿ ತುಪ್ಪ’ ಬಳಸಲು ಆದೇಶ

ಬೆಂಗಳೂರು ಜನತೆ ಗಮನಕ್ಕೆ: ಸೆ.21ರ ನಾಳೆ, ಸೆ.22ರ ನಾಡಿದ್ದು ನಗರದ ಈ ಏರಿಯಾಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

Share. Facebook Twitter LinkedIn WhatsApp Email

Related Posts

ಮಲೆನಾಡು ಭಾಗದ ಜನರಿಗೆ ಉನ್ನತ ಶಿಕ್ಷಣ ಒದಗಿಸುವುದೇ ಎಂ.ಡಿ.ಎಫ್ ಗುರಿ: ಅಧ್ಯಕ್ಷ ಬಿ.ಆರ್.ಜಯಂತ್

2 Mins Read

ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿಯದ್ದು ಗೆಲುವಲ್ಲ, ಅದು ವ್ಯವಸ್ಥಿತ ಷಡ್ಯಂತ್ರ; ಸಾಗರದಲ್ಲಿ ಬಿ.ಕೆ. ಹರಿಪ್ರಸಾದ್ ಹೇಳಿಕೆ

2 Mins Read

ಡಿ ಸುಧಾಕರ್ ಅವರ ಸ್ಮರಣೆಗೆ ನೀರಾವರಿ ಯೋಜನೆಗೆ ಅವರ ಹೆಸರಿಡಲು ಆಲೋಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

2 Mins Read
Recent News

ಮಲೆನಾಡು ಭಾಗದ ಜನರಿಗೆ ಉನ್ನತ ಶಿಕ್ಷಣ ಒದಗಿಸುವುದೇ ಎಂ.ಡಿ.ಎಫ್ ಗುರಿ: ಅಧ್ಯಕ್ಷ ಬಿ.ಆರ್.ಜಯಂತ್

ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿಯದ್ದು ಗೆಲುವಲ್ಲ, ಅದು ವ್ಯವಸ್ಥಿತ ಷಡ್ಯಂತ್ರ; ಸಾಗರದಲ್ಲಿ ಬಿ.ಕೆ. ಹರಿಪ್ರಸಾದ್ ಹೇಳಿಕೆ

ಅಂದು ನಿರ್ಲಕ್ಷ್ಯಕ್ಕೊಳಗಾಗಿದ್ದರು, ಇಂದು ತಮಿಳುನಾಡು ವಿಧಾನಸಭೆಯ ಹಂಗಾಮಿ ಸ್ಪೀಕರ್! ಯಾರು ಈ ಕರುಪ್ಪಯ್ಯ?

BIG NEWS: ಬಂಧನದ ಅಸಿಂಧುತ್ವಕ್ಕೆ “ಕುಟುಂಬಕ್ಕೆ ಮಾಹಿತಿ ನೀಡಿಲ್ಲ” ಎಂಬ ಕಾರಣ ಸಾಕಾಗದು: ಹೈಕೋರ್ಟ್ ಮಹತ್ವದ ತೀರ್ಪು

State News
KARNATAKA

ಮಲೆನಾಡು ಭಾಗದ ಜನರಿಗೆ ಉನ್ನತ ಶಿಕ್ಷಣ ಒದಗಿಸುವುದೇ ಎಂ.ಡಿ.ಎಫ್ ಗುರಿ: ಅಧ್ಯಕ್ಷ ಬಿ.ಆರ್.ಜಯಂತ್

By ವಸಂತ್‌ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಮಲೆನಾಡು ಭಾಗದ ಜನರಿಗೆ ಪದವಿ ಶಿಕ್ಷಣವು ಸುಲಭವಾಗಿ ಮತ್ತು ಕೈಗೆಟುಕುವ ದರದಲ್ಲಿ ಸಿಗಬೇಕು ಎಂಬ ಉದಾತ್ತ ಉದ್ದೇಶದಿಂದ ಸ್ಥಾಪನೆಯಾದ…

ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿಯದ್ದು ಗೆಲುವಲ್ಲ, ಅದು ವ್ಯವಸ್ಥಿತ ಷಡ್ಯಂತ್ರ; ಸಾಗರದಲ್ಲಿ ಬಿ.ಕೆ. ಹರಿಪ್ರಸಾದ್ ಹೇಳಿಕೆ

ಡಿ ಸುಧಾಕರ್ ಅವರ ಸ್ಮರಣೆಗೆ ನೀರಾವರಿ ಯೋಜನೆಗೆ ಅವರ ಹೆಸರಿಡಲು ಆಲೋಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

SHOCKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ: ಚಾಮರಾಜನಗರದಲ್ಲಿ ಪೋಷಕರ ಕಣ್ಣೆದುರೇ ಬಾಲಕಿ ಎಳೆದೊಯ್ದು ಕೊಂದ ಚಿರತೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.