Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : `ATM-PF’ವರೆಗೆ ದೇಶಾದ್ಯಂತ ಇಂದಿನಿಂದ ಬದಲಾಗಲಿವೆ ಈ 10 ಪ್ರಮುಖ ನಿಯಮಗಳು| New Rules from June 1

01/06/2025 7:18 AM

BREAKING: ಭಾರತದಲ್ಲಿ ಸಕ್ರಿಯ ಕೋವಿಡ್-19 ಪ್ರಕರಣಗಳ ಸಂಖ್ಯೆ 3,000 ಕ್ಕೆ ಏರಿಕೆ | Covid in India

01/06/2025 7:08 AM

BIG NEWS : ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ಬೋಧಕೇತರ ನೌಕರರ ವರ್ಗಾವಣೆ : ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ.!

01/06/2025 7:06 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಪದವಿ, PG ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ‘ರಿಲಯನ್ಸ್ ಫೌಂಡೇಷನ್’ನಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
KARNATAKA

‘ಪದವಿ, PG ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ‘ರಿಲಯನ್ಸ್ ಫೌಂಡೇಷನ್’ನಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

By kannadanewsnow0914/08/2024 7:54 PM

ಬೆಂಗಳೂರು: ರಿಲಯನ್ಸ್ ಫೌಂಡೇಷನ್ ನಿಂದ 2024-25ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿ ವೇತನವನ್ನು ವಿತರಿಸುವುದಕ್ಕಾಗಿ ಅರ್ಜಿಗಳನ್ನು ಕರೆದಿರುವುದಾಗಿ ಘೋಷಣೆ ಮಾಡಿದೆ. ಈ ಮೂಲಕವಾಗಿ ಭಾರತದಾದ್ಯಂತ ಪದವಿ ಶಿಕ್ಷಣ ಮತ್ತು ಸ್ನಾತಕೋತ್ತರ ಪದವಿ ಅಭ್ಯಾಸ ಮಾಡುತ್ತಿರುವ 5,100 ಅತ್ಯುತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ, ಬೆಂಬಲಿಸಿ, ಮಾರ್ಗದರ್ಶನ ನೀಡಲಾಗುತ್ತದೆ. ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿ ವೇತನದ ಗುರಿ ಏನೆಂದರೆ, ಭಾರತ ಬೆಳವಣಿಗೆ ಗಾಥೆಯನ್ನು ಮುನ್ನಡೆಸುವುದರಲ್ಲಿ ಮುಂಚೂಣಿಯಲ್ಲಿ ಇರುವುದಕ್ಕೆ ಯುವ ಜನರನ್ನು ಸಬಲಗೊಳಿಸುವುದು, ಉತ್ಕೃಷ್ಟತೆಯನ್ನು ಪೋಷಿಸುವ ಗುರಿಯನ್ನು ಇರಿಸಿಕೊಂಡಿದೆ., ಆ ಮೂಲಕ ಆರ್ಥಿಕ ಹೊರೆಯಿಲ್ಲದೆ ತಮ್ಮ ಅಧ್ಯಯನವನ್ನು ಮುಂದುವರಿಸಲು ಸಬಲಗೊಳಿಸುತ್ತದೆ. 

ರಿಲಯನ್ಸ್ ಫೌಂಡೇಷನ್ ಸ್ನಾತಕೋತ್ತರ ಸ್ಕಾಲರ್‌ಶಿಪ್‌ಗಳು ನವಭಾರತ ನಿರ್ಮಾಣಕ್ಕೆ ಕೊಡುಗೆ ನೀಡುವ ಸಾಮರ್ಥ್ಯ ಹೊಂದಿರುವ, ಭವಿಷ್ಯಕ್ಕೆ ಉಪಯುಕ್ತವಾದ ಎಂಜಿನಿಯರಿಂಗ್, ತಂತ್ರಜ್ಞಾನ, ಇಂಧನ ಮತ್ತು ಜೀವ ವಿಜ್ಞಾನ ಈ ವಿಷಯಗಳಲ್ಲಿ ವ್ಯಾಸಂಗ ಮಾಡುತ್ತಿರುವ 100 ಅಸಾಧಾರಣ- ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುತ್ತದೆ. ಎಲ್ಲ ವಿದ್ಯಾರ್ಥಿವೇತನಗಳನ್ನು ಶೈಕ್ಷಣಿಕ ಅರ್ಹತೆ ಮತ್ತು ಆರ್ಥಿಕ ಸ್ಥಿತಿಯ ಆಧಾರದ ಮೇಲೆ ನೀಡಲಾಗುತ್ತದೆ ಮತ್ತು ಪದವಿ ಕಾರ್ಯಕ್ರಮಗಳ ಅವಧಿಯನ್ನು ಒಳಗೊಂಡಿರುತ್ತದೆ. ಸಮಾಜದ ಪ್ರಯೋಜನಕ್ಕಾಗಿ ದೊಡ್ಡದಾಗಿ ಯೋಚಿಸುವ, ಹಸಿರು ಮತ್ತು ಡಿಜಿಟಲ್ ಚಿಂತನೆ ಮಾಡುವ ಅಸಾಧಾರಣ ಪ್ರತಿಭೆಗಳನ್ನು ಗುರುತಿಸಲು ಮತ್ತು ಬೆಳವಣಿಗೆಗೆ ನೆರವು ನೀಡುವುದಕ್ಕಾಗಿ ಈ ಉಪಕ್ರಮವನ್ನು ರೂಪಿಸಲಾಗಿದೆ.

ಸಮಗ್ರವಾದ ಬೆಂಬಲ ಹಾಗೂ ಉದಾರವಾದ ಹಣಕಾಸಿನ ಅನುದಾನದ ಮೂಲಕವಾಗಿ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಹಾಗೂ ವೃತ್ತಿಪರ ಆಕಾಂಕ್ಷೆಯನ್ನು ಈಡೇರಿಸಿಕೊಳ್ಳುವುದಕ್ಕೆ ಈ ವಿದ್ಯಾರ್ಥಿವೇತನವು ನೆರವು ನೀಡುತ್ತದೆ. ಮೊದಲ ವರ್ಷದ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಾಗಿದ್ದು, ಭಾರತದೊಳಗೆ ಇರುವಂಥ ಶಿಕ್ಷಣ ಸಂಸ್ಥೆಯಿಂದ ಪೂರ್ಣಾವಧಿಗೆ, ನಿಯಮಿತ ಶಿಕ್ಷಣ ಪಡೆಯುತ್ತಿರುವಂಥವರು ಅರ್ಜಿ ಸಲ್ಲಿಸುವುದಕ್ಕೆ ಅರ್ಹರಾಗಿರುತ್ತಾರೆ.

ಅಂಕ- ಆರ್ಥಿಕ ಸ್ಥಿತಿಯ ಮಾನದಂಡ

ರಿಲಯನ್ಸ್ ಫೌಂಡೇಷನ್ ಪದವಿ ಶಿಕ್ಷಣ ಪಡೆಯುತ್ತಿರುವವರಿಗೆ ನೀಡುವ ವಿದ್ಯಾರ್ಥಿ ವೇತನವು ಪ್ರತಿಭಾವಂತ ವಿದ್ಯಾರ್ಥಿಗಳು ಯಶಸ್ವಿ ವೃತ್ತಿಪರರಾಗುವ ತಮ್ಮ ಕನಸು ನನಸಾಗಿಸಿಕೊಳ್ಳುವುದಕ್ಕೆ ಮತ್ತು ಭಾರತದ ಭವಿಷ್ಯದ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡುವ ನಿಟ್ಟಿನಲ್ಲಿ ಅವರ ಸಾಮರ್ಥ್ಯವನ್ನು ಹೊರತರುವುದಕ್ಕೆ ಪ್ರಯತ್ನಿಸುತ್ತದೆ. ಪದವಿ ಕಾಲೇಜು ಶಿಕ್ಷಣಕ್ಕಾಗಿ ಅಂಕ- ಆರ್ಥಿಕ ಸ್ಥಿತಿಯ ಮಾನದಂಡದ ಆಧಾರದ ಮೇಲೆ 5,000 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುವುದು

ಪದವಿ ವಿದ್ಯಾರ್ಥಿಗಳಿಗೆ ರೂ. 2 ಲಕ್ಷ 

ಈ ಅನುದಾನದ ಜೊತೆಗೆ ರೂ. 2 ಲಕ್ಷ ಪದವಿ ವಿದ್ಯಾರ್ಥಿಗಳಿಗೆ ಮತ್ತು ರೂ. 6 ಲಕ್ಷ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ರಿಲಯನ್ಸ್ ಫೌಂಡೇಷನ್ ಸ್ಕಾಲರ್‌ಶಿಪ್‌ಗಳು ವಿದ್ಯಾರ್ಥಿಗಳು ಮಾರ್ಗದರ್ಶನ ಪಡೆಯುವುದಕ್ಕೆ, ವೃತ್ತಿಪರ ಬೆಳವಣಿಗೆ ಜೊತೆಗೆ ವೃತ್ತಿ ಸಲಹೆಗಾಗಿ ಉದ್ಯಮದ ನಾಯಕರು ಮತ್ತು ತಜ್ಞರ ಜೊತೆಗೆ ಸಂವಹನಕ್ಕೆ ಅವಕಾಶ ದೊರಕಿಸುತ್ತದೆ. ಕೌಶಲಗಳನ್ನು ಹೆಚ್ಚಿಸಲು ಕಾರ್ಯಾಗಾರಗಳು, ಸೆಮಿನಾರ್‌ಗಳು ಮತ್ತು ಕಾರ್ಯಕ್ರಮಗಳ ಮೂಲಕ ನಾಯಕತ್ವದ ಅಭಿವೃದ್ಧಿ ಅವಕಾಶಗಳು, ಜೊತೆಗೆ ಸಮುದಾಯದ ತೊಡಗಿಸಿಕೊಳ್ಳುವಿಕೆಯೊಂದಿಗೆ ಸೇವೆ ಹಾಗೂ ಪ್ರಚಾರ ಕಾರ್ಯಕ್ರಮಗಳ ಮೂಲಕ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡುತ್ತದೆ.

ಶಿಕ್ಷಣ ಎಂಬುದು ರಿಲಯನ್ಸ್ ಫೌಂಡೇಷನ್‌ನ ಮಾಡುತ್ತಿರುವುದರಲ್ಲಿಯೇ ಅತ್ಯಂತ ಪ್ರಮುಖ ಕೆಲಸವಾಗಿದೆ. 2022ರ ಡಿಸೆಂಬರ್ ನಲ್ಲಿ ರಿಲಯನ್ಸ್ ಸಂಸ್ಥಾಪಕ-ಅಧ್ಯಕ್ಷ ಧೀರೂಭಾಯಿ ಅಂಬಾನಿ ಅವರ 90ನೇ ಜನ್ಮ ವರ್ಷಾಚರಣೆ ಸಂದರ್ಭದಲ್ಲಿ ರಿಲಯನ್ಸ್ ಫೌಂಡೇಷನ್ ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಅಂಬಾನಿ ಅವರು ಮಾತನಾಡಿ, ಮುಂದಿನ 10 ವರ್ಷಗಳಲ್ಲಿ ರಿಲಯನ್ಸ್ ಫೌಂಡೇಷನ್‌ನ ಹೆಚ್ಚುವರಿ ಬದ್ಧತೆಯಾಗಿ 50,000 ಸ್ಕಾಲರ್‌ಶಿಪ್‌ಗಳನ್ನು ಘೋಷಿಸಿದರು, ಇದು ಭಾರತದ ಅತಿದೊಡ್ಡ ಖಾಸಗಿ ವಿದ್ಯಾರ್ಥಿವೇತನವಾಗಿದೆ. ಅಂದಿನಿಂದ, ಪ್ರತಿ ವರ್ಷ 5100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.

ಇಲ್ಲಿಯವರೆಗೆ, ರಿಲಯನ್ಸ್ 23,000 ಉನ್ನತ ಶಿಕ್ಷಣ ವಿದ್ಯಾರ್ಥಿವೇತನವನ್ನು ಒದಗಿಸಿದೆ. ರಿಲಯನ್ಸ್ ಫೌಂಡೇಷನ್ ನಿಂದ ಮಾರ್ಗದರ್ಶನ ಹಾಗೂ ವಿದ್ಯಾರ್ಥಿವೇತನ ಪಡೆದಂಥ ಪ್ರತಿಭಾವಂತರು ಲಾಭದಾಯಕ ವೃತ್ತಿಗಳು ಮತ್ತು ಶೈಕ್ಷಣಿಕ ಹಾಗೂ ವೃತ್ತಿಪರ ಪ್ರಯಾಣ ಪ್ರಾರಂಭಿಸಿದ್ದಾರೆ. ಈ ವರ್ಷದ ಅರ್ಜಿ ಆಹ್ವಾನವು ಪ್ರತಿಭಾವಂತ ವಿದ್ಯಾರ್ಥಿಗಳ ಮತ್ತೊಂದು ಸಮೂಹಕ್ಕೆ ಈ ಲಾಭದಾಯಕ ಪ್ರಯಾಣದಿಂದ ಪ್ರಯೋಜನ ಪಡೆಯುವ ಅವಕಾಶವನ್ನು ದೊರಕಿಸುತ್ತದೆ.

ಅರ್ಜಿ ಸಲ್ಲಿಕೆ ಹೇಗೆ?

ವಿದ್ಯಾರ್ಥಿಗಳು www.scholarships.reliancefoundation.org ಈ ವೆಬ್ ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಆಯ್ಕೆ ಪ್ರಕ್ರಿಯೆಯು ಪದವಿ ವಿದ್ಯಾರ್ಥಿಗೆ ಅರ್ಹತೆ ಮತ್ತು ಆರ್ಥಿಕ ಹಿನ್ನೆಲೆಯ ಮೌಲ್ಯಮಾಪನವನ್ನು ಒಳಗೊಂಡಿದೆ. ಸ್ನಾತಕೋತ್ತರ ಪದವಿ ವಿದ್ಯಾರ್ಥಿವೇತನಕ್ಕಾಗಿ, ಶೈಕ್ಷಣಿಕ ಸಾಧನೆಗಳು, ವೈಯಕ್ತಿಕ ಹೇಳಿಕೆಗಳು ಮತ್ತು ಸಂದರ್ಶನಗಳು ಈ ಎಲ್ಲವೂ ಭಾರತದಾದ್ಯಂತದ ಪ್ರತಿಭೆಗಳನ್ನು ಗುರುತಿಸಲು ಸ್ಪರ್ಧಾತ್ಮಕ ಆಯ್ಕೆ ಪ್ರಕ್ರಿಯೆಯ ಭಾಗವಾಗಿದೆ. ಅರ್ಜಿಗಳನ್ನು ಸಲ್ಲಿಸುವುದಕ್ಕೆ ಅಂತಿಮ ದಿನಾಂಕ 6ನೇ ಅಕ್ಟೋಬರ್ 2024 ಆಗಿದೆ.

‘ಶಿವಮೊಗ್ಗ ಹಾಲು ಒಕ್ಕೂಟದ ಚುನಾವಣೆ’ ಫಲಿತಾಂಶ ಪ್ರಕಟ: ಯಾರೆಲ್ಲ ಗೆಲುವು? ಇಲ್ಲಿದೆ ಲೀಸ್ಟ್ | SHIMUL Election 2024

BREAKING : ‘ದುಲೀಪ್ ಟ್ರೋಫಿ’ಗೆ ಟೀಂ ಇಂಡಿಯಾ ಪ್ರಕಟ ; ‘ಅಯ್ಯರ್, ಗಿಲ್, ಗಾಯಕ್ವಾಡ್’ ನಾಯಕರಾಗಿ ಆಯ್ಕೆ |Duleep Trophy

BREAKING: ರಾಜ್ಯ ಸರ್ಕಾರದಿಂದ ಕೂಡಲೇ SBI, PNB ಬ್ಯಾಂಕ್ ಖಾತೆ ಮುಚ್ಚುವಂತೆ ಎಲ್ಲಾ ಇಲಾಖೆಗಳಿಗೆ ಆದೇಶ

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ಬೋಧಕೇತರ ನೌಕರರ ವರ್ಗಾವಣೆ : ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ.!

01/06/2025 7:06 AM2 Mins Read

ಗಮನಿಸಿ : ವಯಸ್ಸಿಗೆ ತಕ್ಕಂತೆ ಯಾರು ಎಷ್ಟು ಗಂಟೆ `ನಿದ್ದೆ’ ಮಾಡಬೇಕು ಗೊತ್ತಾ? ಇಲ್ಲಿದೆ ಮಾಹಿತಿ

01/06/2025 7:02 AM1 Min Read
Nandini

ಇಂದು `ವಿಶ್ವ ಹಾಲು ದಿನಾಚರಣೆ’ : ಸ್ಪರ್ಧಾತ್ಮಕ ಬೆಲೆಗಳಲ್ಲಿ 18 ವಿವಿಧ ನಂದಿನಿ ಕೇಕ್ ಹಾಗೂ ಮಫಿನ್ ಗಳು ಮಾರುಕಟ್ಟೆಗೆ ಬಿಡುಗಡೆ.!

01/06/2025 6:44 AM2 Mins Read
Recent News

BIG NEWS : `ATM-PF’ವರೆಗೆ ದೇಶಾದ್ಯಂತ ಇಂದಿನಿಂದ ಬದಲಾಗಲಿವೆ ಈ 10 ಪ್ರಮುಖ ನಿಯಮಗಳು| New Rules from June 1

01/06/2025 7:18 AM

BREAKING: ಭಾರತದಲ್ಲಿ ಸಕ್ರಿಯ ಕೋವಿಡ್-19 ಪ್ರಕರಣಗಳ ಸಂಖ್ಯೆ 3,000 ಕ್ಕೆ ಏರಿಕೆ | Covid in India

01/06/2025 7:08 AM

BIG NEWS : ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ಬೋಧಕೇತರ ನೌಕರರ ವರ್ಗಾವಣೆ : ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ.!

01/06/2025 7:06 AM

ಗಮನಿಸಿ : ವಯಸ್ಸಿಗೆ ತಕ್ಕಂತೆ ಯಾರು ಎಷ್ಟು ಗಂಟೆ `ನಿದ್ದೆ’ ಮಾಡಬೇಕು ಗೊತ್ತಾ? ಇಲ್ಲಿದೆ ಮಾಹಿತಿ

01/06/2025 7:02 AM
State News
KARNATAKA

BIG NEWS : ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ಬೋಧಕೇತರ ನೌಕರರ ವರ್ಗಾವಣೆ : ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ.!

By kannadanewsnow5701/06/2025 7:06 AM KARNATAKA 2 Mins Read

ಬೆಂಗಳೂರು : ಶಾಲಾ ಶಿಕ್ಷಣ ಇಲಾಖೆಯ ಬೋಧಕೇತರ ನೌಕರರ ಸಾರ್ವತ್ರಿಕ ವರ್ಗಾವಣೆಗಳ ಬಗ್ಗೆ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರವು ಹೊರಡಿಸಿದೆ. ಸರ್ಕಾರದ…

ಗಮನಿಸಿ : ವಯಸ್ಸಿಗೆ ತಕ್ಕಂತೆ ಯಾರು ಎಷ್ಟು ಗಂಟೆ `ನಿದ್ದೆ’ ಮಾಡಬೇಕು ಗೊತ್ತಾ? ಇಲ್ಲಿದೆ ಮಾಹಿತಿ

01/06/2025 7:02 AM
Nandini

ಇಂದು `ವಿಶ್ವ ಹಾಲು ದಿನಾಚರಣೆ’ : ಸ್ಪರ್ಧಾತ್ಮಕ ಬೆಲೆಗಳಲ್ಲಿ 18 ವಿವಿಧ ನಂದಿನಿ ಕೇಕ್ ಹಾಗೂ ಮಫಿನ್ ಗಳು ಮಾರುಕಟ್ಟೆಗೆ ಬಿಡುಗಡೆ.!

01/06/2025 6:44 AM

BIG NEWS : ನಿಮ್ಮ ಬಳಿ ಈ `ರೇಷನ್ ಕಾರ್ಡ್’ ಇದ್ರೆ `ಉಚಿತ ಹೊಲಿಗೆ ಯಂತ್ರ’ ಸೇರಿ ಸಿಗಲಿವೆ ಈ 8 ಸೌಲಭ್ಯಗಳು.!

01/06/2025 6:40 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.